Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸದೆ ಗೋವು...

ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸದೆ ಗೋವು ಸಾಗಿಸಿ, ಚಹಾ ಕುಡಿಯಲು ವಾಹನ ನಿಲ್ಲಿಸಿದ್ದ ಪೊಲೀಸರು: ಆರೋಪ

ಗೋಕಳ್ಳತನ ಶಂಕೆಯಲ್ಲಿ ವ್ಯಕ್ತಿಯ ಹತ್ಯೆ

ವಾರ್ತಾಭಾರತಿವಾರ್ತಾಭಾರತಿ22 July 2018 9:46 PM IST
share
ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸದೆ ಗೋವು ಸಾಗಿಸಿ, ಚಹಾ ಕುಡಿಯಲು ವಾಹನ ನಿಲ್ಲಿಸಿದ್ದ ಪೊಲೀಸರು: ಆರೋಪ

#"ಪೊಲೀಸರೇ ಜೀಪಿನೊಳಗೆ ಥಳಿಸಿ, ನಿಂದಿಸುತ್ತಿದ್ದರು"

ಜೈಪುರ, ಜು.22: ಗೋಕಳ್ಳ ಸಾಗಣೆ ಶಂಕೆಯಲ್ಲಿ ಗುಂಪಿನಿಂದ ಥಳಿತಕ್ಕೊಳಗಾಗಿ ಸಾವನ್ನಪ್ಪಿದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸುವ ಮೊದಲು, ಸುಮಾರು 4 ಗಂಟೆಗಳ ಕಾಲ ಪೊಲೀಸರು ಕಸ್ಟಡಿಯಲ್ಲಿ ಇಟ್ಟಿದ್ದರು ಎಂದು ndtv.com ವರದಿ ಮಾಡಿದೆ. ವಶಪಡಿಸಿಕೊಂಡಿದ್ದ ಗೋವುಗಳನ್ನು ಗೋಶಾಲೆಗೆ ಕಳುಹಿಸಲು ವಾಹನ ವ್ಯವಸ್ಥೆ ಮಾಡಿದ ಪೊಲೀಸರು, ಚಹಾ ಕುಡಿಯಲೆಂದು ನಿಲ್ಲಿಸಿದ್ದು, ನಂತರ ಪೊಲೀಸ್ ಠಾಣೆಗೆ ತೆರಳಿದ್ದರು. ಆನಂತರವೇ ಗಂಭೀರವಾಗಿ ಗಾಯಗೊಂಡಿದ್ದ ಅಕ್ಬರ್ ಖಾನ್ ರನ್ನು ಆಸ್ಪತ್ರೆಗೆ ದಾಖಲಿಸಿದ್ದರು ಎಂದು ವರದಿಯಾಗಿದೆ.

ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆಯೇ ಅಕ್ಬರ್ ಖಾನ್ ಮೃತಪಟ್ಟಿದ್ದಾಗಿ ಪೊಲೀಸರು ಹೇಳಿದ್ದರು. ಘಟನೆಗೆ ಸಂಬಂಧಿಸಿ ಪೊಲೀಸರು ಈಗಾಗಲೇ ಮೂವರನ್ನು ಬಂಧಿಸಿದ್ದಾರೆ.

12:41ಕ್ಕೆ ಪೊಲೀಸರಿಗೆ ಮಾಹಿತಿ ಲಭಿಸಿದೆ ಎಂದು ಎಫ್ ಐಆರ್ ನಲ್ಲಿರುವುದಾಗಿ ಎನ್ ಡಿಟಿವಿ ಕಂಡುಕೊಂಡಿದೆ. ಪೊಲೀಸರು ಸ್ಥಳಕ್ಕೆ 1:20ಕ್ಕೆ ತಲುಪಿದ್ದರು ಎಂದು ಕರೆ ಮಾಡಿದ್ದ ವ್ಯಕ್ತಿ ತಿಳಿಸಿದ್ದಾರೆ. ಪೊಲೀಸರಿಗೆ  ಮಾಹಿತಿ ನೀಡಿದ್ದ ಕಿಶೋರ್ ಎಂಬಾತನ ಮನೆಗೆ ಮೊದಲು ಪೊಲೀಸರು ತೆರಳಿದ್ದರು. ಗೋವುಗಳನ್ನು ಸ್ಥಳೀಯ ಗೋಶಾಲೆಗೆ ಸಾಗಿಸಲು ವಾಹನದ ವ್ಯವಸ್ಥೆ ಮಾಡುವುದು ಅವರು ಉದ್ದೇಶವಾಗಿತ್ತು. "ನನಗೆ ಸದ್ದು ಕೇಳಿಸಿತು. ಜೀಪಿನೊಳಗಿದ್ದ ವ್ಯಕ್ತಿಯನ್ನು ಪೊಲೀಸ್ ಪೇದೆಯೊಬ್ಬ ಥಳಿಸುತ್ತಿದ್ದುದು ಹಾಗು ನಿಂದಿಸುತ್ತಿದ್ದುದು ನನಗೆ ಕೇಳಿಸಿತು" ಎಂದು ಕಿಶೋರ್ ನ ಸಂಬಂಧಿಯೊಬ್ಬರು ತಿಳಿಸಿದ್ದಾಗಿಯೂ, ಆ ವೇಳೆ ಜೀಪಿನಲ್ಲಿದ್ದ ವ್ಯಕ್ತಿ ಜೀವಂತವಿದ್ದರೆಂದು ಹೇಳಿದ್ದಾಗಿಯೂ ಎನ್ ಡಿಟಿವಿ ವರದಿ ಮಾಡಿದೆ.

ನಂತರ ಪೊಲೀಸರು ಚಹಾ ಕುಡಿಯಲು ವಾಹನ ನಿಲ್ಲಿಸಿದ್ದರು. ಗೋವುಗಳನ್ನು ವಾಹನದಲ್ಲಿ ಗೋಶಾಲೆಗೆ ಸಾಗಿಸುವವರೆಗೂ ಕಾದ ಅವರು ಚಹಾ ಕುಡಿಯುತ್ತಿದ್ದರು. ನಾಲ್ಕು ಚಹಾಗಳನ್ನು ತಾನು ನೀಡಿದ್ದಾಗಿ ಅಂಗಡಿಯವ ಹೇಳಿದ್ದಾನೆ.

ಗಾಯಾಳು ವ್ಯಕ್ತಿಯೊಂದಿಗೆ ನಂತರ ಪೊಲೀಸರು ಪೊಲೀಸ್ ಠಾಣೆಗೆ ತೆರಳಿದರು ಎಂದು ಕಿಶೋರ್ ಹೇಳಿದ್ದಾನೆ. 4 ಗಂಟೆಯ ಸುಮಾರಿಗೆ ಅಕ್ಬರ್ ಖಾನ್ ಮೃತಪಟ್ಟ ನಂತರ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ಬಗ್ಗೆ ವೈದ್ಯರೊಬ್ಬರು ದೃಢೀಕರಿಸಿದ್ದಾರೆ. ಮೆಡಿಕಲ್ ರಿಜಿಸ್ಟರ್ ಕೂಡ ಇದನ್ನೇ ಹೇಳುತ್ತಿದೆ ಎಂದು ಎನ್ ಡಿಟಿವಿ ವರದಿ ಮಾಡಿದೆ.

ಈ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸ್ ಅಧಿಕಾರಿ ರಾಜೇಂದ್ರ ಚೌಧರಿ, "ನಾನು ನಿನ್ನೆಯಷ್ಟೇ ಅಧಿಕಾರ ವಹಿಸಿಕೊಂಡಿದ್ದೇನೆ. ಈ ಪ್ರಕರಣದ ಬಗ್ಗೆ ನಾನು ಇನ್ನಷ್ಟೇ ಸಂಪೂರ್ಣವಾಗಿ ತಿಳಿದುಕೊಳ್ಳಬೇಕಿದೆ. ಆದರೆ ಈ ಪ್ರಕರಣದಲ್ಲಿ ಯಾರೆಲ್ಲಾ ಒಳಗೊಂಡಿದ್ದಾರೆ ಎನ್ನುವುದನ್ನು ನಾವು ತನಿಖೆ ನಡೆಸಲಿದ್ದೇವೆ ಎಂದು ನಾನು ನಿಮಗೆ ಭರವಸೆ ನೀಡುತ್ತಿದ್ದೇನೆ" ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X