Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೊಸ ಸಾಂಸ್ಕೃತಿಕ ನೀತಿ ಜಾರಿಯ ಬಗ್ಗೆ ಮರು...

ಹೊಸ ಸಾಂಸ್ಕೃತಿಕ ನೀತಿ ಜಾರಿಯ ಬಗ್ಗೆ ಮರು ಸಮಾಲೋಚನೆ: ಜಯಮಾಲ

ವಾರ್ತಾಭಾರತಿವಾರ್ತಾಭಾರತಿ23 July 2018 7:54 PM IST
share
ಹೊಸ ಸಾಂಸ್ಕೃತಿಕ ನೀತಿ ಜಾರಿಯ ಬಗ್ಗೆ ಮರು ಸಮಾಲೋಚನೆ: ಜಯಮಾಲ

ಮಂಗಳೂರು, ಜು. 23: ಹೊಸ ಸಾಂಸ್ಕೃತಿಕ ನೀತಿ ಜಾರಿಯ ಬಗ್ಗೆ ಎಲ್ಲರೊಂದಿಗೆ ಸೇರಿ ಮರು ಸಮಾಲೋಚನೆ ನಡೆಸಿ ತೀರ್ಮಾನಿಸಲಾಗುವುದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವೆ ಜಯಮಾಲ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಸರಕಾರ ಜಾರಿ ಮಾಡಲು ಉದ್ದೇಶಿಸಿರುವ ಹೊಸ ಸಾಂಸ್ಕೃತಿಕ ನೀತಿಯ ಬಗ್ಗೆ ಪರ-ವಿರೋಧ ಅಭಿಪ್ರಾಯಗಳಿವೆ ಈ ಹಿನ್ನೆಲೆಯಲ್ಲಿ ಈ ಬಗ್ಗೆ ಮತ್ತೊಮ್ಮೆ ಸಮಾಲೋಚನೆ ನಡೆಸುವ ಯೋಚನೆ ಇದೆ. ಈ ನೀತಿಯ ಮೂಲಕ ಯಾರನ್ನೂ ನೋಯಿಸುವ ಉದ್ದೇಶ ಹೊಂದಿಲ್ಲ ಎಂದು ಜಯಮಾಲ ತಿಳಿಸಿದರು.

ಮಹಿಳಾ ಶೋಷಣೆ ಮುಕ್ತ ಸಮಾಜ ನಿರ್ಮಾಣ ನಮ್ಮ ಗುರಿಯಾಗಿದೆ. ಯಾವ ಸರಕಾರವೇ ಆಗಲಿ ನೀತಿಯನ್ನು ರೂಪಿಸಿದರೆ, ಯೋಜನೆಯನ್ನು ಜಾರಿ ಮಾಡಿದರೆ ನಾವು ಸ್ವಾಗತಿಸುತ್ತೇವೆ. ನಾನು ರಾಜ್ಯದಲ್ಲಿ ಶೋಷಿತ ಧಮನಿತ ಮಹಿಳೆಯರ ಛಲದ ಬದುಕಿನ ಬಗ್ಗೆ ಕೇಳಿದ್ದೇನೆ. ಅವರ ಕಷ್ಟಗಳನ್ನು ನೋಡಿದ್ದೇನೆ. ಅವರ ಬಗ್ಗೆ ಗೌರವವಿದೆ. ಅವೆಲ್ಲವನ್ನು ಒಂದು ರಾತ್ರಿ ಹಗಲಿನಲ್ಲಿ ಬದಲಾಯಿಸಬೇಕು ಎಂದು ನಾನು ಭಾವಿಸುವುದಿಲ್ಲ. ರಾಜ್ಯ, ಕೇಂದ್ರ ಸರಕಾರದ ನೀತಿ ಎಂದು ಪ್ರತ್ಯೇಕಿಸಿ ನೋಡುವುದಿಲ್ಲ. ಜನರಿಗೆ ಒಳಿತಾಗಬೇಕು ಎನ್ನುವುದು ನಮ್ಮ ಅಂತಿಮ ಗುರಿಯಾಗಿದೆ ಎಂದು ಜಯಮಾಲ ತಿಳಿಸಿದ್ದಾರೆ.

ಶಬರಿ ಮಲೆಯ ಬಗ್ಗೆ ಸುಪ್ರೀಂ ಕೋರ್ಟ್‌ನ ನಿಲುವಿನ ಬಗ್ಗೆ ಸ್ವಾಗತವಿದೆ. ದೇವರಲ್ಲಿ ಯಾರೂ ಭೇದ ಬಾವ ಮಾಡಬಾರದು. ಹೆಣ್ಣಿಗೊಂದು ಗಂಡಿಗೊಂದು ದೇವರು ಎಂದು ಪ್ರತ್ಯೇಕಿಸಿಲ್ಲ, ಹಾಗೆ ಒಂದು ವೇಳೆ ತಾರತಮ್ಯ ಮಾಡಿದರೆ ಬದುಕು ನರಕವಾಗುತ್ತದೆ. ನಾನು ದೇವರ ಬಗ್ಗೆ ನಂಬಿಕೆ ಇರುವವಳು ಎಲ್ಲಾ ಧರ್ಮದ ದೇವರು ಒಂದೆ ಎಂದು ಭಾವಿಸುತ್ತೇನೆ. ದೇಶದ ಜಾತ್ಯತೀತ ನಂಬಿಕೆಯ ಬಗ್ಗೆ ನನಗೆ ಗೌರವವಿದೆ ಎಂದು ಜಯಮಾಲ ತಿಳಿಸಿದ್ದಾರೆ.

ರಾಜ್ಯದ ಭಾಷಾ ಅಕಾಡೆಮಿಗಳಿಗೆ ಹತ್ತು ಲಕ್ಷ ಅನುದಾನ ಹೆಚ್ಚಿಸಲಾಗಿದೆ. ಅಕಾಡೆಮಿಗಳ ಮೂಲಕ ಹಿಂದಿನ ಕೆಲಸಗಳ ದಾಖಲಾತಿ ಕೆಲಸ ಪೂರ್ಣಗೊಳಿ ಸಲಾಗುವುದು. ಅಕಾಡೆಮಿಗಳಿಗೆ ರಿಜಿಸ್ಟ್ರಾರ್‌ಗಳನ್ನು ನೇಮಕ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವೆ ಜಯಮಾಲ ತಿಳಿಸಿದ್ದಾರೆ. ಜಿಲ್ಲೆಯ ರಂಗ ಮಂದಿರ ನಿರ್ಮಾಣ ಪುರ್ಣಗೊಳಿಸಲು, ಕದ್ರಿಯಲ್ಲಿ ಪುಟಾಣಿ ರೈಲು ಓಡಿಸಲು ಕ್ರಮ ಕೈಗೊಳ್ಳಲಾಗುವುದು. ಸಮ್ಮಿಶ್ರ ಸರಕಾರದಲ್ಲಿ ಕೆಲಸ ಮಾಡಲು ಪಕ್ಷದ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ, ಮುಖ್ಯ ಮಂತ್ರಿ ಎಚ್.ಡಿ ಕುಮಾರ ಸ್ವಾಮಿ ಅವಕಾಶ ನೀಡಿದ್ದಾರೆ. ಎಲ್ಲರ ಸಹಕಾರದೊಂದಿಗೆ ಉತ್ತಮವಾಗಿ ಕಾರ್ಯನಿರ್ವಹಿಸಬೇಕು ಎನ್ನುವ ಗುರಿ ಇದೆ ಎಂದು ಜಯಮಾಲ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ, ಅಭಯ ಚಂದ್ರ ಜೈನ್, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಶಾಸಕ ಐವನ್ ಡಿ ಸೋಜ, ಪಕ್ಷದ ಇತರ ಮುಖಂಡರಾದ ಸುರೇಶ್ ಬಲ್ಲಾಳ್, ರಾಜಶೇಖರ ಕೋಟ್ಯಾನ್, ಸದಾಶಿವ ಉಳ್ಳಾಲ್, ರಕ್ಷಿತ್, ತುಳು ಅಕಾಡೆಮಿಯ ಅಧ್ಯಕ್ಷ ಎ.ಸಿ .ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X