Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆರೋಪ ಸಾಬೀತಾದರೆ ತಕ್ಷಣ ಪೀಠ ತ್ಯಾಗ:...

ಆರೋಪ ಸಾಬೀತಾದರೆ ತಕ್ಷಣ ಪೀಠ ತ್ಯಾಗ: ಪೇಜಾವರ ಶ್ರೀ

'ಶಿರೂರುಶ್ರೀಗಳ ಆಡಿಯೊ ಆರೋಪಗಳೆಲ್ಲವೂ ಸಂಪೂರ್ಣ ಸುಳ್ಳು'

ವಾರ್ತಾಭಾರತಿವಾರ್ತಾಭಾರತಿ23 July 2018 8:08 PM IST
share
ಆರೋಪ ಸಾಬೀತಾದರೆ ತಕ್ಷಣ ಪೀಠ ತ್ಯಾಗ: ಪೇಜಾವರ ಶ್ರೀ

ಉಡುಪಿ, ಜು.23: ಇತ್ತೀಚೆಗೆ ನಿಧನರಾದ ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥರ ಆಪ್ತವರ್ಗ ಬಹಿರಂಗಗೊಳಿಸಿದ ಆಡಿಯೊದಲ್ಲಿ ಶಿರೂರು ಶ್ರೀಗಳು ತಮ್ಮ ಬಗ್ಗೆ ಮಾಡಿದ ಆರೋಪಗಳೆಲ್ಲವೂ ಸಂಪೂರ್ಣ ಸುಳ್ಳು. ಆರೋಪ ಸಾಬೀತಾದರೆ ನಾನು ತಕ್ಷಣ ಪೀಠ ತ್ಯಾಗ ಮಾಡುತ್ತೇನೆ ಎಂದು ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥರು ತಿಳಿಸಿದ್ದಾರೆ.

ಪತ್ರಿಕೆಗಳಿಗೆ ಇಂದು ಬಿಡುಗಡೆಗೊಳಿಸಿದ ಹೇಳಿಕೆಯಲ್ಲಿ ಈ ವಿಷಯ ತಿಳಿಸಿರುವ ಪೇಜಾವರಶ್ರೀ, ಈ ಆಡಿಯೊದಲ್ಲಿ ತನಗೆ ತಾರುಣ್ಯದಲ್ಲಿ ಸ್ತ್ರೀಸಂಗ ವಿತ್ತು. ಪದ್ಮಾ ಎಂಬ ಹೆಣ್ಣು ಮಗಳು ತಮಿಳುನಾಡಿನಲ್ಲಿದ್ದಾಳೆಂಬ ಶುದ್ಧ ಸುಳ್ಳು ಸಂಗತಿಯನ್ನು ಉಲ್ಲೇಖಿಸಲಾಗಿದೆ. ಕಳೆದ ಡಿಸೆಂಬರ್ ತಿಂಗಳಲ್ಲಿ ಇವರೇ ಕಳುಹಿಸಿರಬಹುದಾದ ಪತ್ರದಲ್ಲಿ ಅವನು ಗಂಡು ಮಗನೆಂದು ಅವನ ಕುಲನಾಮವನ್ನು ಉಲ್ಲೇಖಿಸಲಾಗಿದೆ. ಈ ವ್ಯತ್ಯಾಸದಿಂದಲೇ ಇದು ಕಲ್ಪನೆಯೆಂದು ಗೊತ್ತಾಗುತ್ತದೆ ಎಂದು ಹೇಳಿದರು.

ದೇಶವೇ ನಂಬದು: ಆದುದರಿಂದ ಈ ಆರೋಪವನ್ನು ಈ ದೇಶದ ಯಾರೂ ನಂಬುವುದಿಲ್ಲವೆಂದು ನನಗೆ ಗೊತ್ತಿದೆ. ಈ ಬಗ್ಗೆ ವಿಚಾರಣೆ ಹಾಗೂ ಪರೀಕ್ಷೆಯನ್ನು ಎದುರಿಸಲು ನಾನು ಸಿದ್ಧನಿದ್ದೇನೆ. ಇದು ಬರೇ ಸುಳ್ಳು ಆರೋಪ. ಇದನ್ನು ಸಿದ್ಧಪಡಿಸಲು ಸಾಧ್ಯವೇ ಇಲ್ಲ. ಇದು ಸಿದ್ಧವಾದರೆ ನಾನು ತಕ್ಷಣ ಪೀಠ ತ್ಯಾಗ ಮಾಡುತ್ತೇನೆ ಎಂದವರು ಘೋಷಿಸಿದ್ದಾರೆ.

ನನ್ನ ಪಾತ್ರವಿಲ್ಲ: ಪಲಿಮಾರು ಮಠದ ಹಿಂದಿನ ಸ್ವಾಮೀಜಿಗಳಾದ ರಘುವಲ್ಲಭ ತೀರ್ಥರು, ಶಿರೂರು ಮಠದ ಹಿಂದಿನ ಯತಿಗಳಾದ ಮನೋಜ್ಞ ತೀರ್ಥರು ಹಾಗೂ ಸುಬ್ರಹ್ಮಣ್ಯ ಮಠದ ಸ್ವಾಮಿಗಳಾದ ವಿದ್ಯಾಭೂಷಣರು ಪೀಠ ತ್ಯಾಗ ಮಾಡಲು ನನ್ನ ಪಾತ್ರವೇನು ಇರಲಿಲ್ಲ. ಅವರನ್ನು ಪೀಠದಲ್ಲಿ ಉಳಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಿದ್ದೇನೆ. ಅವರಾಗಿ ಸ್ವಇಚ್ಚೆಯಿಂದ ಹೋಗಿದ್ದಾರೆ. ಅದಕ್ಕಾಗಿ ನನ್ನನ್ನು ಹಂತಕನನ್ನಾಗಿಸುವುದು ಸರ್ವಥಾ ತಪ್ಪು.

ರಘುವಲ್ಲಭರಿಗೆ ನಾನು ಐದು ಲಕ್ಷ ರೂ. ಕೊಟ್ಟಿರುವೆನೆಂದು ಆರೋಪಿಸಿರುವುದೂ ಸಂಪೂರ್ಣ ಸುಳ್ಳು. ಅವರಿಗೆ ಇದಕ್ಕಾಗಿ ಒಂದು ಪೈಸೆಯನ್ನು ಕೂಡಾ ಕೊಟ್ಟಿಲ್ಲ. ವಿಶ್ವವಿಜಯರನ್ನು ನಾನು ಕಳುಹಿಸಿಯೇ ಇಲ್ಲ. ಅವರಾಗಿಯೇ ಹೋಗಿದ್ದಾರೆ. ಹೋದರೆ ಅನೇಕ ಸಮಸ್ಯೆಗಳಾಗುವುದೆಂದು ನಾನು ಹೇಳಿದ್ದೆ. ಆದರೂ ಅವರು ಹೋದರು. ಬಂದ ಮೇಲೆ ಸೂಕ್ತ ವ್ಯವಸ್ಥೆ ಮಾಡುವುದಾಗಿ ಹೇಳಿದ್ದೆ. ಆದರೆ ಅವರು ನನಗೆ ತಿಳಿಸದೇ ಪೀಠ ತ್ಯಾಗ ಮಾಡಿದ್ದಾರೆ.
ಇನ್ನು ವ್ಯಾಸರಾಜ ಸ್ವಾಮಿಗಳ ಆಶ್ರಮ, ಸುವಿದ್ಯೇಂದ್ರದ ಆಶ್ರಮ ಸ್ವೀಕಾರ ಮತ್ತು ಪೀಠತ್ಯಾಗದಲ್ಲಿ ನನ್ನ ಪಾತ್ರ ಕಿಂಚಿತ್ತೂ ಇಲ್ಲ. ಆದರೂ ಇವೆಲ್ಲವುಗಳಿಗೂ ನಾನೇ ಕಾರಣವೆಂದು ದೂಷಿಸುವುದು ಸರ್ವಥಾ ಸರಿಯಲ್ಲ. ಶಿರೂರು ಸ್ವಾಮಿಗಳಿಂದ ನಾನು ಯಾವುದೇ ರೀತಿಯ ಹಣವನ್ನು ಅಪೇಕ್ಷಿಸಿಯೂ ಇಲ್ಲ, ಕೇಳಲೂ ಇಲ್ಲ. ಇವೆಲ್ಲದರ ಬಗ್ಗೆಯೂ ಬಹಿರಂಗ ವಿಚಾರಣೆಗೆ ನಾನು ಯಾವಾಗಲೂ ಸಿದ್ಧ ಎಂದು ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿಕೆಯಲ್ಲಿ ಸ್ಪಷ್ಟ ಪಡಿಸಿದ್ದಾರೆ.

ಅನಿವಾರ್ಯವಾಗಿ ವಿವರಣೆ

ಶಿರೂರುಶ್ರೀಗಳ ನಿಧನದ ನಂತರ ಅವರ ಅವ್ಯವಹಾರ ಕುರಿತು ಹೇಳಿಕೆ ಸರಿಯಲ್ಲವೆಂದು ಕೆಲವರು ಆಕ್ಷೇಪಿಸಿದ್ದಾರೆ. ಅಲ್ಲದೇ ಅವರಿಗೆ ಪಟ್ಟದ ವಿಠಲ ದೇವರನ್ನು ಯಾಕೆ ಕೊಟ್ಟಿಲ್ಲ ? ಅವರ ಅಂತ್ಯದರ್ಶನಕ್ಕೆ ಯಾಕೆ ಹೋಗಿಲ್ಲ ಮುಂತಾದ ಪ್ರಶ್ನೆ ಹಾಗೂ ಆಕ್ಷೇಪವನ್ನು ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರು ಮಾಡಿದ್ದರಿಂದ, ಅದಕ್ಕೆ ಉತ್ತರವಾಗಿ ಸನ್ಯಾಸ ಧರ್ಮವನ್ನು ಪೂರ್ಣವಾಗಿ ಉಲ್ಲಂಘಿಸಿದ್ದಾರೆಂಬುದನ್ನು ನಾನು ಅನಿವಾರ್ಯವಾಗಿ ವಿವರಿಸಬೇಕಾಯಿತು ಎಂದು ಪೇಜಾವರಶ್ರೀ ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X