Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆರೋಗ್ಯ ಕರ್ನಾಟಕ ಯೋಜನೆ ನೋಂದಣಿ ಕೇಂದ್ರ...

ಆರೋಗ್ಯ ಕರ್ನಾಟಕ ಯೋಜನೆ ನೋಂದಣಿ ಕೇಂದ್ರ ತೆರೆಯುವಂತೆ ಒತ್ತಾಯ

ಪುದು ಗ್ರಾಮ ಪಂಚಾಯತ್‌ನ ಪ್ರಥಮ ಹಂತದ ಗ್ರಾಮ ಸಭೆ

ವಾರ್ತಾಭಾರತಿವಾರ್ತಾಭಾರತಿ23 July 2018 8:43 PM IST
share
ಆರೋಗ್ಯ ಕರ್ನಾಟಕ ಯೋಜನೆ ನೋಂದಣಿ ಕೇಂದ್ರ ತೆರೆಯುವಂತೆ ಒತ್ತಾಯ

ಬಂಟ್ವಾಳ, ಜು. 23: ಪುದು ಗ್ರಾಮ ಪಂಚಾಯತ್‌ನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾಪಂ ಅಧ್ಯಕ್ಷ ರಮ್ಲಾನ್ ಅವರ ಅಧ್ಯಕ್ಷತೆಯಲ್ಲಿ ಸುಜೀರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆಯಿತು.

ಪುದು ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಅಸಮರ್ಪಕವಾಗಿದೆ. ಈ ಬಗ್ಗೆ ಪಂಚಾಯತ್‌ನಲ್ಲಿ ಯಾವ ರೀತಿಯಾದ ವ್ಯವಸ್ಥೆಯನ್ನು ರೂಪಿಸಲಾಗಿದೆ ಎನ್ನುವ ಬಗ್ಗೆ ಗ್ರಾಮಸ್ಥ ದಿನೇಶ್ ಅವರು ಸಭೆಯಲ್ಲಿ ಪ್ರಸ್ತಾಪಿಸಿದರು.

ಇದಕ್ಕೆ ಅಧ್ಯಕ್ಷ ರಮ್ಲಾನ್ ಅವರು ಪ್ರತಿಕ್ರಿಯಿಸಿ, ತುಂಬೆ ಹಾಗೂ ಇನ್ನಿತರ ಪ್ರದೇಶಗಳಿಂದ ತ್ಯಾಜ್ಯಗಳನ್ನು ತಂದು ಫರಂಗಿಪೇಟೆ, ಸುತ್ತಮುತ್ತಲಿನ ಪ್ರದೇಶಕ್ಕೆ ಎಸೆದು ಹೋಗುತ್ತಿದ್ದಾರೆ. ಈ ಬಗ್ಗೆ ಗ್ರಾಮಸ್ಥರಿಂದ ದೂರುಗಳು ಕೇಳಿಬರುತ್ತಿದ್ದು, ಇಲ್ಲಿಗೆ ವಾಹನಗಳಲ್ಲಿ ತ್ಯಾಜ್ಯಗಳನ್ನು ಎಸೆಯುವವರ ಪತ್ತೆಹಚ್ಚಿ ಪೊಲೀಸ್ ದೂರು ನೀಡಲಾಗುವುದು ಎಂದು ಹೇಳಿದರು.

ಮಾರಿಪಳ್ಳ ಮಸೀದಿಯ ಸಮೀಪದಲ್ಲಿಯೇ ಕಸಗಳನ್ನು ರಾಶಿ ಹಾಕಲಾಗುತ್ತಿದೆ ಎಂದು ಹುಸೈನ್ ಅವರು ದೂರಿಕೊಂಡರು. ಪುದು ಗ್ರಾಪಂ ವ್ಯಾಪ್ತಿಯಲ್ಲಿ ಡಂಪಿಂಗ್ ಯಾರ್ಡ್ ನಿರ್ಮಾಣ ಮಾಡಲು ಸ್ಥಳದ ಅಭಾವಿದೆ. ಮಸೀದಿ ಕೊಂಚ ದೂರದಲ್ಲಿಯೇ ಕಸ ವಿಲೇವಾರಿಗೆ ಜಾಗ ಕಾಯ್ದಿಸಲಾಗುವುದು ಎಂದು ಅಧ್ಯಕ್ಷರು ಸಭೆಗೆ ತಿಳಿಸಿದಾಗ, ಇದಕ್ಕೆ ಗ್ರಾಮಸ್ಥ ದಿನೇಶ್ ಅವರು ಆಕ್ಷೇಪಿಸಿ, ಮಸೀದಿಯ ಕೊಂಚ ದೂರದಲ್ಲಿ ದೇವರ ಗುಡಿಯೊಂದಿದ್ದು, ಅಲ್ಲಿಯೂ ಹಾಕುವುದು ಸರಿಯಲ್ಲ ಎಂದರು.

ಇದಕ್ಕೆ ಸದಸ್ಯ ಹಾಶಿರ್ ಪ್ರತಿಕ್ರಿಯಿಸಿ, ಈ ಪರಿಸರದಲ್ಲಿ ಕಸ ಹಾಕಲು ಸರಿಯಾದ ಸ್ಥಳವಕಾಶ ಇಲ್ಲದ ಕಾರಣ ಜನರು ರಸ್ತೆಯ ಬದಿಯಲ್ಲಿಯೇ ಎಸೆದು ಹೋಗುತ್ತಿದ್ದಾರೆ. ಇಲ್ಲಿಂದ ಮಂಗಳೂರಿನ ತ್ಯಾಜ್ಯ ಘಟಕ್ಕೆ ಸಾಗಿಸಲಾಗುತ್ತದೆ. ಸ್ವಚ್ಛಭಾರತ ಪರಿಕಲ್ಪನೆಯಡಿ ಗ್ರಾಪಂ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಇದಕ್ಕೆ ಗ್ರಾಮಸ್ಥರು ಕೈಜೋಡಿಸಬೇಕೆಂದರು.

ರಾಜ್ಯದಲ್ಲಿ ಈಗಾಗಲೇ ಅನುಷ್ಠಾನದಲ್ಲಿರುವ ರಾಜೀವ್ ಗಾಂಧಿ ಆರೋಗ್ಯ ಭಾಗ್ಯ, ವಾಜಪೇಯಿ ಆರೋಗ್ಯಶ್ರೀ, ರಾಷ್ಟ್ರೀಯ ಸ್ವಾಸ್ಥ್ಯ ಭೀಮಾ ಯೋಜನೆ, ಯಶಸ್ವಿನಿ ಯೋಜನೆ, ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ, ಇಂದಿರಾ ಸುರಕ್ಷಾ ಯೋಜನೆ ಹಾಗೂ ಮುಖ್ಯಮಂತ್ರಿ ಸಾಂತ್ವಾನ ಹರೀಶ್ ಯೋಜನೆ ಮುಂತಾದ ಯೋಜನೆಗಳನ್ನು ಒಗ್ಗೂಡಿಸಿ ಎಲ್ಲ ಜನರಿಗೂ ಪರಿಪೂರ್ಣ ಆರೋಗ್ಯ ಒದಗಿಸುವ ಮಹತ್ವದ ಗುರಿ ಈ ಆರೋಗ್ಯ ಕರ್ನಾಟಕ ಯೋಜನೆ ಹೊಂದಿದೆ. ಪಡಿತರ ಚೀಟಿ ತೋರಿಸಿ ಮಂಗಳೂರು ವೆನ್‌ಲಾಕ್ ಆಸ್ಪತ್ರೆಯಲ್ಲಿ ನೋದಣಿ ಮಾಡಿಕೊಳ್ಳಬಹುದ ಎಂದು ಆರೋಗ್ಯ ಅಧಿಕಾರಿ ಸುದರ್ಶನ್ ಅವರು ಮಾಹಿತಿ ನೀಡಿದರು.

ಇದಕ್ಕೆ ಹುಸೈನ್ ಅವರು ಪ್ರತಿಕ್ರಿಯಿಸಿ, ಈ ಮೊದಲು ತಾನು ಆರೋಗ್ಯ ಕರ್ನಾಟಕ ಯೋಜನೆಯ ನೋಂದಣಿಗೆ ಮಂಗಳೂರಿಗೆ ತೆರಳಿದ್ದು, ಅಲ್ಲಿಯ ಸಿಬ್ಬಂದಿ ಆಯಾ ತಾಲೂಕು ಆರೋಗ್ಯ ಕೇಂದ್ರಕ್ಕೆ ಹೋಗುವಂತೆ ತಿಳಿಸಿದ್ದು, ಇದರಿಂದ ಜನರಿಗೆ ಗೊಂದಲ ಉಂಟಾಗಿದೆ ಎಂದು ಸಭೆಯ ಗಮನ ಸೆಳೆದರು. ಯೋಜನೆಯಡಿಯಲ್ಲಿ ಹಲವಾರು ಜನರು ನೋಂದಣಿ ಮಾಡಿದ್ದು, ಇತ್ತೀಚಿನ ದಿನಗಳಲ್ಲಿ ವಿವಿಧೆಡೆ ಸರ್ವರ್ ಸಮಸ್ಯೆ ಉಂಟಾಗಿತ್ತು. ಅದಕ್ಕಾಗಿ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯಲ್ಲಿ ಮಾತ್ರ ನೋಂದಣಿ ಮಾಡಲಾಗುತ್ತಿದೆ. ಮುಂದಿನ ತಿಂಗಳುಗಳಲ್ಲಿ ಆಯಾ ತಾಲೂಕು ಆಸ್ಪತ್ರೆಗಳಲ್ಲಿ ನೋಂದಣಿ ಪ್ರಕ್ರಿಯೆ ಪ್ರಾರಂಭ ಮಾಡಲಾಗುವುದು ಎಂದು ಆರೋಗ್ಯ ಅಧಿಕಾರಿ ಅವರು ಮಾಹಿತಿ ನೀಡಿದರು.

ಆಧಾರ್‌ಕಾರ್ಡ್ ಕೇಂದ್ರವನ್ನು ಪುದು ಗ್ರಾಮ ಪಂಚಾಯತ್‌ನಲ್ಲಿ ಪ್ರಾರಂಭಿಸಬೇಕು. ಮತದಾರರ ಹೆಸರು ನೋಂದಣಿಯಲ್ಲಿ ಅಸಮರ್ಪಕತೆ, ಮೆಸ್ಕಾಂ ಸಮಸ್ಯೆ ಪರಿಹರಿಸುವ ಒತ್ತಾಯ, ರುದ್ರಭೂಮಿಯ ಸ್ವಚ್ಛತಾ ಕಾರ್ಯಕ್ರಮ, ಸುಜೀರು ಆರೋಗ್ಯ ಕೇಂದ್ರ ಹೀಗೆ ಮುಂತಾದ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರು ಸಭೆಯಲ್ಲಿ ಒತ್ತಾಯಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಅವರು ನೋಡೆಲ್ ಅಧಿಕಾರಿಯಾಗಿ ಸಭೆಯ ನೇತೃತ್ವ ವಹಿಸಿದ್ದರು. ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷೆ ಲೀಡಿಯೋ ಪಿಂಟೋ, ಸದಸ್ಯರಾದ ಇಕ್ಬಾಲ್ ಸುಜೀರು ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X