ಅಲ್ಪಸಂಖ್ಯಾತರ ವಿವಿಧ ವಿದ್ಯಾರ್ಥಿವೇತನಗಳಿಗೆ ಅರ್ಜಿ ಆಹ್ವಾನ
ಮಂಗಳೂರು, ಜು. 23: ಕೇಂದ್ರ ಮತ್ತು ರಾಜ್ಯ ಅಲ್ಪಸಂಖ್ಯಾತ ಇಲಾಖೆಯು ಅಲ್ಪಸಂಖ್ಯಾತ ಸಮುದಾಯಗಳ ವಿದ್ಯಾರ್ಥಿಗಳಿಂದ ವಿವಿಧ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಯನ್ನು ಆಹ್ವಾನಿಸಿವೆ.
1 ರಿಂದ 10 ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಿಮೆಟ್ರಿಕ್, ಪಿ.ಯು.ಸಿ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಪೋಸ್ಟ್ ಮೆಟ್ರಿಕ್, ವೃತ್ತಿಪರ ವಿದ್ಯಾರ್ಥಿಗಳಿಗೆ ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿವೇತನಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 31,
ತರಗತಿ 9 ರಿಂದ ದ್ವಿತೀಯ ಪಿಯುಸಿ ವರೆಗಿನ ಹೆಣ್ಮಕ್ಕಳಿಗೆ ಮಾತ್ರ ಬೇಗಂ ಹಝ್ರತ್ ಮಹಲ್ ನ್ಯಾಷನಲ್ ಸ್ಕಾಲರ್ಶಿಪ್ಗೆ (ಮೌಲಾನಾ ಆಝಾದ್) ಆನ್ಲೈನ್ ಮೂಲಕ ಅರ್ಜಿಯನ್ನು ಸಪ್ಟಂಬರ್ 15 ರೊಳಗೆ ಸಲ್ಲಿಸತಕ್ಕದ್ದು. ಎಸ್.ಎಸ್.ಎಲ್.ಸಿ ಯಲ್ಲಿ 95% ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ರೂ 10,000 ಹಾಗೂ ಪಿಯುಸಿಯಲ್ಲಿ 90% ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ರೂ 20,000 ಪ್ರೋತ್ಸಾಹ ಧನ ಸಿಗಲಿದ್ದು, ಆನ್ಲೈನ್ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 5.
ಎಲ್ಲಾ ಪದವಿ, ಸ್ನಾತಕೋತ್ತರ, ವೃತ್ತಿಪರ ಹಾಗೂ ಮೂರು ವರ್ಷಗಳ ಡಿಪ್ಲೊಮ ಕಲಿಯುವವರಿಗೆ ಅರಿವು ಶೈಕ್ಷಣಿಕ ಸಾಲ ಸೌಲಭ್ಯವಿದ್ದು, ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಅಂಕಪಟ್ಟಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಫೀಸ್ ರಿಷಿಪ್ಟ್ ಮೊದಲಾದ ದಾಖಲೆಗಳು ಅತ್ಯಗತ್ಯವಾಗಿರುತ್ತವೆ. ಬೇಗಂ ಹಝ್ರತ್ ಮಹಲ್ ನ್ಯಾಷನಲ್ ಸ್ಕಾಲರ್ಶಿಪ್ (ಮೌಲಾನಾ ಆಝಾದ್) ವಿದ್ಯಾರ್ಥಿವೇತನಕ್ಕೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಇಂಗ್ಲೀಷ್ನಲ್ಲಿ ಸಲ್ಲಿಸತಕ್ಕದ್ದು ಹಾಗೂ ಶಾಲಾ ಕಾಲೇಜಿನ ಡೈಸ್ ಕೋಡ್ ಮತ್ತು ದೂರವಾಣಿ ಸಂಖ್ಯೆಯನ್ನು ನಮೂದಿಸಬೇಕಾಗಿರುವುದರಿಂದ ಸದರಿ ಮಾಹಿತಿಯನ್ನು ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಸಂಸ್ಥೆಯಿಂದ ಪಡೆದುಕೊಳ್ಳತಕ್ಕದ್ದು. ಅಲ್ಲದೆ ಖಾಸಗಿ ಸಂಸ್ಥೆಯಾದ ಜಿಂದಾಲ್ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದು.
ಪಿ.ಯು.ಸಿ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ನಮ್ಮ ಸಂಸ್ಥೆಯಲ್ಲಿ ಉಚಿತವಾಗಿ ಆನ್ಲೈನ್ ಸೇವೆ ಕಛೇರಿ ಅವಧಿಯಲ್ಲಿ ಲಭ್ಯವಿದ್ದು, ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯುವಂತೆ ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ನ ಅಧ್ಯಕ್ಷ ರಿಯಾರ್ ಕಣ್ಣೂರು ಪತ್ರಿಕಾ ಪ್ರಕಟನೆಯಲ್ಲಿ ವಿನಂತಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್, ವಿಶ್ವಾಸ್ ಕ್ರೌನ್, ಕಂಕನಾಡಿ, ಮಂಗಳೂರು ದೂರವಾಣಿ-0824-4267883 ನ್ನು ಸಂಪರ್ಕಿಸಬಹುದು.