Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವೈವಿಧ್ಯ
  3. ಆರೋಗ್ಯ ಕರ್ನಾಟಕ ಕಾರ್ಡ್: ಒಂದಿಷ್ಟು...

ಆರೋಗ್ಯ ಕರ್ನಾಟಕ ಕಾರ್ಡ್: ಒಂದಿಷ್ಟು ಮಾಹಿತಿಗಳು

ಎಸ್. ಎ. ರಹಿಮಾನ್ ಮಿತ್ತೂರುಎಸ್. ಎ. ರಹಿಮಾನ್ ಮಿತ್ತೂರು23 July 2018 11:57 PM IST
share
ಆರೋಗ್ಯ ಕರ್ನಾಟಕ ಕಾರ್ಡ್: ಒಂದಿಷ್ಟು ಮಾಹಿತಿಗಳು

ಈ ಕಾರ್ಡ್‌ಗಾಗಿ ಸಾರ್ವಜನಿಕರಿಂದ ಕೇವಲ 10 ರೂಪಾಯಿ ಶುಲ್ಕ ಪಡೆಯಲಾಗುತ್ತದೆ. ಈ ಕಾರ್ಡ್ ಒಂದೊಮ್ಮೆ ಕಳೆದು ಹೋದಲ್ಲಿ 20 ರೂಪಾಯಿ ಹೆಚ್ಚುವರಿ ಶುಲ್ಕ ನೀಡಿ ಡೂಪ್ಲಿಕೇಟ್ ಕಾರ್ಡ್ ಪಡೆಯಬಹುದಾಗಿದೆ. 

ವಿಶ್ವಸಂಸ್ಥೆಯ ‘ಮಿಲೇನಿಯಂ ಡೆವಲಪ್‌ಮೆಂಟ್ ಗೋಲ್’ (MDG) ಆಶಯದಂತೆ ವಿಶ್ವದ ಎಲ್ಲಾ ವಯಸ್ಸಿನ ಜನರಿಗೆ ಆರೋಗ್ಯಕರ ಜೀವನವನ್ನು ಒದಗಿಸುವ ಗುರಿಯನ್ನಿಟ್ಟುಕೊಂಡು ಕರ್ನಾಟಕ ಸರಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ ‘ಆರೋಗ್ಯ ಕರ್ನಾಟಕ’ ಯೋಜನೆ. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ಅನುಷ್ಠಾನಗೊಳಿಸಲಾಗುವ ಈ ಯೋಜನೆಗಳ ಲಾಭ ಪಡೆದುಕೊಳ್ಳಲು ರಾಜ್ಯದ ಎಪಿಎಲ್ ಹಾಗೂ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಪ್ರತಿಯೊಬ್ಬರೂ ಅರ್ಹರಾಗಿರುತ್ತಾರೆ. ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ನೋಂದಣಿ ಮಾಡಿಸಿಕೊಳ್ಳುವವರು ಬೇರೆ ಯಾವುದೇ ಆರೋಗ್ಯ ವಿಮಾ ಯೋಜನೆಗಳನ್ನು ಹೊಂದಿಲ್ಲ ಎಂಬ ದೃಢೀಕರಣವನ್ನು ನೀಡಬೇಕಾಗುತ್ತದೆ.

ರಾಜ್ಯದಲ್ಲಿ ಈಗಾಗಲೇ ಅನುಷ್ಠಾನದಲ್ಲಿರುವ ರಾಜೀವ್ ಗಾಂಧಿ ಆರೋಗ್ಯ ಭಾಗ್ಯ, ವಾಜಪೇಯಿ ಆರೋಗ್ಯಶ್ರೀ, ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆ, ಯಶಸ್ವಿನಿ ಯೋಜನೆ, ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ, ಇಂದಿರಾ ಸುರಕ್ಷಾ ಯೋಜನೆ ಹಾಗೂ ಮುಖ್ಯಮಂತ್ರಿ ಹರೀಶ್ ಸಾಂತ್ವನ ಯೋಜನೆ ಮುಂತಾದ ಯೋಜನೆಗಳನ್ನು ಒಗ್ಗೂಡಿಸಿ ಎಲ್ಲಾ ಜನರಿಗೂ ಪರಿಪೂರ್ಣ ಆರೋಗ್ಯ ಒದಗಿಸುವ ಮಹತ್ವದ ಗುರಿ ಈ ಆರೋಗ್ಯ ಕರ್ನಾಟಕ ಯೋಜನೆಯ ಹಿಂದಿದೆ.

ಕರ್ನಾಟಕದ ಪ್ರತಿಯೊಬ್ಬ ಪ್ರಜೆಗೂ ಉತ್ತಮ ಗುಣಮಟ್ಟದ ಚಿಕಿತ್ಸೆಯ ಮೂಲಕ ಪರಿಪೂರ್ಣ ಆರೋಗ್ಯ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರವು ಜಾರಿಗೆ ತಂದಿರುವ ಮಹತ್ವಾಕಾಂಕ್ಷೆಯ ಯೋಜನೆಯಾದ ಆರೋಗ್ಯ ಕರ್ನಾಟಕ ಕಾರ್ಡ್ ಯೋಜನೆಗೆ ರಾಜ್ಯದಲ್ಲಿ ಈಗಾಗಲೇ ಚಾಲನೆ ದೊರೆತಿದ್ದು, ರಾಜ್ಯದ 11 ಆಸ್ಪತ್ರೆಗಳಲ್ಲಿ ಆರೋಗ್ಯ ಕರ್ನಾಟಕ ಕಾರ್ಡ್‌ಗಳನ್ನು ನೀಡಲಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಹಲವು ಸ್ಥಳೀಯ ಜಿಲ್ಲೆಗಳಿಗೆ ಮಂಗಳೂರಿನ ವೆನ್ಲಾಕ್ ಸರಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ಕರ್ನಾಟಕ ಕಾರ್ಡ್ ನೀಡುವ ಕಾರ್ಯವು ಭರದಿಂದ ಸಾಗುತ್ತಿದೆ. ದಿನಂಪ್ರತಿ 250 ಜನರಿಗೆ ವಿತರಿಸಲ್ಪಡುತ್ತಿದ್ದ ಆರೋಗ್ಯ ಕರ್ನಾಟಕ ಕಾರ್ಡ್, ಸದ್ಯ ಕೆಲವು ದಿನಗಳಿಂದ ಕಾರಣಾಂತರದಿಂದಾಗಿ ಕೇವಲ ಒಳ ಹಾಗೂ ಹೊರ ರೋಗಿಗಳಾಗಿ ದಾಖಲಾಗುವವರಿಗೆ ಮಾತ್ರ ವಿತರಿಸಲಾಗುತ್ತದೆ. ರೋಗಿಗಳಾಗಿ ದಾಖಲಾಗುವವರಿಗೆ ಈ ಕಾರ್ಡ್ ಅವಶ್ಯಕತೆಯಿರುವುದರಿಂದ ಸಾರ್ವಜನಿಕರಿಗೆ ಮುಂದೆ ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಆರೋಗ್ಯ ಕರ್ನಾಟಕ ಕಾರ್ಡ್ ವಿತರಿಸುವ ಯೋಜನೆ ಜಾರಿಗೆ ಬರಲಿದೆ. 2018ನೇ ಸೆಪ್ಟಂಬರ್‌ನಿಂದ ಪ್ರತೀ ತಾಲೂಕು ಆಸ್ಪತ್ರೆಗಳಲ್ಲಿಯೂ ಆರೋಗ್ಯ ಕರ್ನಾಟಕ ಕಾರ್ಡ್ ವಿತರಿಸುವ ಯೋಜನೆ ಜಾರಿಗೆ ಬರಲಿದೆ. ಈ ಆರೋಗ್ಯ ಕಾರ್ಡ್ ಮಾಡಿಸಲು ಯಾವುದೇ ಸಮಯದ ಮಿತಿ ಇರುವುದಿಲ್ಲ. ಇದು ನಿರಂತರ ಪ್ರಕ್ರಿಯೆಯಾಗಿದೆ. ಕರ್ನಾಟಕದ ಕೊನೆಯ ಪ್ರಜೆಯ ಕೈಗೆ ಆರೋಗ್ಯ ಕರ್ನಾಟಕ ಕಾರ್ಡ್ ದೊರೆಯುವವರೆಗೆ ಈ ಪ್ರಕ್ರಿಯೆ ಚಾಲನೆಯಲ್ಲಿರುತ್ತದೆ.
 
ಆರೋಗ್ಯ ಕರ್ನಾಟಕ ಕಾರ್ಡ್‌ನ ಫಲಾನುಭವಿಗಳ ಕುಟುಂಬವೊಂದಕ್ಕೆ ದ್ವಿತೀಯ ಹಂತದ ಸಂಕೀರ್ಣ ರೋಗಗಳಿಗೆ 30,000 ರೂಪಾಯಿವರೆಗೆ ಹಾಗೂ ತೃತೀಯ ಹಂತದ ರೋಗಗಳಿಗೆ 1,50,000 ರೂಪಾಯಿವರೆಗೆ ಚಿಕಿತ್ಸಾ ಸೌಲಭ್ಯ ದೊರೆಯಲಿದೆ. ಅಲ್ಲದೇ ವಿಶೇಷ ಪ್ರಕರಣಗಳಿಗೆ ಸಂಬಂಧಿಸಿದಂತೆ ರೋಗಿಗಳಿಗೆ ಕೆಲವು ನಿಬಂಧನೆಗಳೊಂದಿಗೆ ಹೆಚ್ಚುವರಿ 50,000 ರೂಪಾಯಿಗಳ ಚಿಕಿತ್ಸೆ ಪಡೆಯುವ ಅವಕಾಶ ಇರುತ್ತದೆ. ಅಂದರೆ ಒಂದೇ ಕುಟುಂಬದ ಸದಸ್ಯರೊಬ್ಬರು 1,50,000 ರೂಪಾಯಿಗಳ ವರೆಗಿನ ಪೂರ್ತಿ ಚಿಕಿತ್ಸಾ ಸೌಲಭ್ಯ ಪಡೆದಿದ್ದರೆ ಅದೇ ಕುಟುಂಬದ ಇನ್ನೊಬ್ಬರಿಗೆ ಕಾಯಿಲೆ ಬಂದರೆ 50,000 ರೂಪಾಯಿ ವರೆಗಿನ ಹೆಚ್ಚುವರಿ ಚಿಕಿತ್ಸೆ ಪಡೆಯುವ ಅವಕಾಶವಿರುತ್ತದೆ. ಆದರೆ ಈ ಹಂತಗಳಲ್ಲಿ ರೋಗಿಗಳು ಸರಕಾರಿ ಆಸ್ಪತ್ರೆಯಲ್ಲಿ ದೊರೆಯುವ ಚಿಕಿತ್ಸೆಗಳನ್ನು ಸರಕಾರಿ ಆಸ್ಪತ್ರೆಯಲ್ಲಿಯೇ ಮಾಡಿಸಬೇಕಾಗುತ್ತದೆ. ಒಂದು ವೇಳೆ ಈ ಹಂತದಲ್ಲಿ ರೋಗಿಯ ಚಿಕಿತ್ಸೆಯು ಸರಕಾರಿ ಆಸ್ಪತ್ರೆಯಲ್ಲಿ ಲಭ್ಯವಿಲ್ಲದಿದ್ದಲ್ಲಿ, ಸಾರ್ವಜನಿಕ ಆರೋಗ್ಯ ಸಂಸ್ಥೆಯ ಮುಖ್ಯಸ್ಥರ ರೆಫರೆನ್ಸ್‌ನೊಂದಿಗೆ ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಾಯಿತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯಬಹುದಾಗಿದೆ. ವಾಹನ ಅಪಘಾತ, ಹೃದಯಾಪಘಾತ ಮುಂತಾದ ತುರ್ತು ಸ್ಥಿತಿಯ ಸಂದರ್ಭಗಳಲ್ಲಿ ಸರಕಾರಿ ಆಸ್ಪತ್ರೆಯ ರೆಫರೆನ್ಸ್ ಪಡೆಯದೆ ನೇರವಾಗಿ ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ನೋಂದಾಯಿತ ಖಾಸಗಿ ಆಸ್ಪತ್ರೆಯಲ್ಲಿ ರೋಗಿಯು ಚಿಕಿತ್ಸೆ ಪಡೆಯಬಹುದಾಗಿದೆ. ಈ ಎಲ್ಲಾ ಚಿಕಿತ್ಸೆಯು ಬಿಪಿಎಲ್ ಕಾರ್ಡುದಾರರಿಗೆ ಉಚಿತವಾಗಿದ್ದು, ಎಪಿಎಲ್ ಕಾರ್ಡುದಾರರಿಗೆ ಚಿಕಿತ್ಸೆಯ ಶೇ. 30ರಷ್ಟು ಉಚಿತವಾಗಿದೆ. ಆರೋಗ್ಯ ಕರ್ನಾಟಕ ಕಾರ್ಡ್ ಪಡೆಯಲು ಪ್ರತಿಯೊಬ್ಬರು ತಮ್ಮ ಆಧಾರ್ ಕಾರ್ಡ್ ಹಾಗೂ ರೇಷನ್ ಕಾರ್ಡ್‌ನೊಂದಿಗೆ ಸ್ವತಃ ತಮ್ಮ ಬೆರಳಚ್ಚು ನೀಡಬೇಕಾಗುತ್ತದೆ. ಈ ಕಾರ್ಡ್‌ಗಾಗಿ ಸಾರ್ವಜನಿಕರಿಂದ ಕೇವಲ 10 ರೂಪಾಯಿ ಶುಲ್ಕ ಪಡೆಯಲಾಗುತ್ತದೆ. ಒಂದೊಮ್ಮೆ ಕಾರ್ಡ್ ಕಳೆದು ಹೋದಲ್ಲಿ 20 ರೂಪಾಯಿ ಹೆಚ್ಚುವರಿ ಶುಲ್ಕ ನೀಡಿ ಡೂಪ್ಲಿಕೇಟ್ ಕಾರ್ಡ್ ಪಡೆಯಬಹುದಾಗಿದೆ.
ತಮ್ಮ ದುಡಿಮೆಯ ಬಹುತೇಕ ಹಣವನ್ನು ಚಿಕಿತ್ಸೆಗಾಗಿ ಮೀಸಲಿಡಬೇಕಾದ ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಪ್ರತಿಯೊಬ್ಬರೂ ಈ ಆರೋಗ್ಯ ಕಾರ್ಡ್ ಪಡೆಯುವ ಮೂಲಕ ಈ ಮಹತ್ವಾಕಾಂಕ್ಷಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕಾಗಿದೆ.

share
ಎಸ್. ಎ. ರಹಿಮಾನ್ ಮಿತ್ತೂರು
ಎಸ್. ಎ. ರಹಿಮಾನ್ ಮಿತ್ತೂರು
Next Story
X