Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಐಜಿಪಿಯಿಂದ ಶಿರೂರು ಎರಡೂ ಮಠಗಳಲ್ಲಿ...

ಐಜಿಪಿಯಿಂದ ಶಿರೂರು ಎರಡೂ ಮಠಗಳಲ್ಲಿ ಪರಿಶೀಲನೆ

ಶಿರೂರು ಸ್ವಾಮೀಜಿ ನಿಗೂಢ ಸಾವು ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ24 July 2018 7:59 PM IST
share
ಐಜಿಪಿಯಿಂದ ಶಿರೂರು ಎರಡೂ ಮಠಗಳಲ್ಲಿ ಪರಿಶೀಲನೆ

ಉಡುಪಿ, ಜು.24: ಶಿರೂರು ಮಠಾಧೀಶ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿಯ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪಶ್ಚಿಮ ವಲಯ ಐಜಿಪಿ ಅರುಣ್ ಚಕ್ರವರ್ತಿ ಮಂಗಳವಾರ ಉಡುಪಿ ಎಸ್ಪಿ ಹಾಗೂ ಪ್ರಕರಣದ ತನಿಖಾ ತಂಡದ ಜೊತೆ ಹಿರಿಯಡ್ಕ ಸಮೀಪದ ಶಿರೂರಿನಲ್ಲಿರುವ ಮೂಲಮಠ ಹಾಗೂ ಉಡುಪಿ ರಥಬೀದಿಯಲ್ಲಿರುವ ಶಿರೂರು ಮಠಗಳಿಗೆ ತೆರಳಿ ಪರಿಶೀಲನೆ ನಡೆಸಿದರು.

ಬೆಳಗ್ಗೆ ಉಡುಪಿ ಎಸ್ಪಿ ಕಚೇರಿಯಲ್ಲಿ ಪ್ರಕರಣದ ತನಿಖಾ ತಂಡದ ಜೊತೆ ತನಿಖೆಯ ಪ್ರಗತಿ ಪರಿಶೀಲನೆ ನಡೆಸಿದ ಐಜಿಪಿ, ತನಿಖೆಯ ಪ್ರಗತಿಯ ಕುರಿತು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ್ ನಿಂಬರ್ಗಿ ಅವರಿಂದ ಮಾಹಿತಿ ಪಡೆದುಕೊಂಡರು. ಬಳಿಕ ಪ್ರಕರಣಕ್ಕೆ ಸಂಬಂಧಿಸಿ ಮುಂದೆ ತೆಗೆದುಕೊಳ್ಳ ಬೇಕಾದ ಹೆಜ್ಜೆಗಳ ಬಗ್ಗೆ ನಿರ್ದೇಶನ ನೀಡಿದರೆನ್ನಲಾಗಿದೆ.

ಈ ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ, ಉಡುಪಿ ಡಿವೈಎಸ್ಪಿ ಕುಮಾರ ಸ್ವಾಮಿ, ಕಾರ್ಕಳ ಪ್ರಭಾರ ಡಿವೈಎಸ್ಪಿ ಬೆಳ್ಳಿಯಪ್ಪ, ಪ್ರಕರಣದ ತನಿಖಾಧಿಕಾರಿಯಾಗಿರುವ ಬ್ರಹ್ಮಾವರ ವೃತ್ತ ನಿರೀಕ್ಷಕ ಶ್ರೀಕಾಂತ್, ವಿವಿಧ ತನಿಖಾ ತಂಡಗಳ ನೇತೃತ್ವ ವಹಿಸಿರುವ ಉಡುಪಿ ಡಿಸಿಐಬಿ ನಿರೀಕ್ಷಕ ಸಂಪತ್ ಕುಮಾರ್, ಕಾಪು ವೃತ್ತ ನಿರೀಕ್ಷಕ ವಿ.ಎಸ್. ಹಾಲಮೂರ್ತಿ ರಾವ್, ಕೋಟ ಉಪನಿರೀಕ್ಷಕ ಸಂತೋಷ್ ಎ.ಕಾಯ್ಕಿಣಿ ಹಾಜರಿದ್ದರು.

ಮೂಲ ಮಠಕ್ಕೆ ಭೇಟಿ: ಎಸ್ಪಿ ಕಚೇರಿಯಿಂದ ನೇರ ಹಿರಿಯಡ್ಕ ಸಮೀಪದಲ್ಲಿರುವ ಶಿರೂರು ಮೂಲ ಮಠಕ್ಕೆ ತೆರಳಿದ ಐಜಿಪಿ ಅರುಣ್ ಚಕ್ರವರ್ತಿ ಮಧ್ಯಾಹ್ನ ವೇಳೆ ಇಡೀ ಮಠವನ್ನು ಪರಿಶೀಲಿಸಿದರು.

ಮೊದಲು ಶಿರೂರು ಸ್ವಾಮೀಜಿಯ ವೃಂದಾವನ ಕೋಣೆಗೆ ತೆರಳಿದ ಐಜಿಪಿ, ನಂತರ ಶಿರೂರು ಸ್ವಾಮೀಜಿ ವಾಸವಾಗಿದ್ದ ಮೇಲ್ಛಾವಣಿಯ ಕೋಣೆ ಹಾಗೂ ಅಡುಗೆ ಕೋಣೆಗಳು ಸೇರಿದಂತೆ ಇಡೀ ಮಠವನ್ನು ಪರಿಶೀಲನೆ ನಡೆಸಿದರು. ಅಲ್ಲದೆ ಸಿಸಿಕ್ಯಾಮೆರಾ ಹಾಗೂ ಡಿವಿಆರ್ ಬಗ್ಗೆಯೂ ಅವರು, ಎಸ್ಪಿ ಲಕ್ಷ್ಮಣ್ ನಿಂಬರ್ಗಿ ಅವರಿಂದ ಮಾಹಿತಿ ಪಡೆದುಕೊಂಡರೆನ್ನಲಾಗಿದೆ.

ಸುಮಾರು ಒಂದೂವರೆ ಗಂಟೆಗಳ ಕಾಲ ಮೂಲಮಠದಲ್ಲಿದ್ದು ಮಾಹಿತಿ ಕಲೆ ಹಾಕಿದ ಐಜಿಪಿ, ನಂತರ ಎಸ್ಪಿ ಕಚೇರಿಗೆ ತೆರಳಿದರೆನ್ನಲಾಗಿದೆ. ಈ ಸಂದರ್ಭ ದಲ್ಲಿ ಐಜಿಪಿ ಜೊತೆ ಪ್ರಕರಣದ ತನಿಖಾ ತಂಡಗಳ ನೇತೃತ್ವ ವಹಿಸಿದ ಅಧಿಕಾರಿಗಳಿದ್ದರು.

ಉಡುಪಿ ಮಠದಲ್ಲೂ ಪರಿಶೀಲನೆ: ಬಳಿಕ ಉಡುಪಿ ರಥಬೀದಿಯಲ್ಲಿರುವ ಶಿರೂರು ಮಠಕ್ಕೆ ಸಂಜೆ ವೇಳೆ ಆಗಮಿಸಿದ ಐಜಿಪಿ ಅರುಣ್ ಚಕ್ರರ್ತಿ ಇಡೀ ಮಠವನ್ನು ಜಾಲಾಡಿದರು.

ಕೆಳಗಿನ ಎಲ್ಲ ಕೋಣೆಗಳಿಗೆ ತೆರಳಿದ ಅವರು, ನಂತರ ಮೊದಲ ಮಹಡಿಗೆ ತೆರಳುವ ಬಾಗಿಲಿನ ಬೀಗ ತೆಗೆಸಿ ಅಲ್ಲಿರುವ ಶಿರೂರು ಸ್ವಾಮೀಜಿಯ ಕೋಣೆ ಸೇರಿದಂತೆ ಇಡೀ ಮಠವನ್ನು ಸುತ್ತಾಡಿದರು. ಮಠದ ಮುಂದಿನ ಹಾಗೂ ಹಿಂದಿನ ಬಾಗಿಲಿನಲ್ಲಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು. ಮಠದೊಳಗೆ ಇತರರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಈ ವೇಳೆ ಐಜಿಪಿ ಮಠಕ್ಕೆ ಸಂಬಂಧಿಸಿದಂತೆ ಯಾರನ್ನು ಕೂಡ ವಿಚಾರಣೆ ಮಾಡಿಲ್ಲ ಎನ್ನಲಾಗಿದೆ. ಇಂದು ಮಠದ ಎದುರು ಹೆಚ್ಚುವರಿ ಭದ್ರತೆಯನ್ನು ಒದಗಿಸಲಾಗಿತ್ತು.

ಮಠದೊಳಗೆ ತನಿಖೆಗೆ ಸಂಬಂಧಿಸಿದಂತೆ ಯಾವುದಾದರೂ ವಸ್ತುಗಳು ಪತ್ತೆಯಾಗಿವೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಐಜಿಪಿ, ಯಾವುದೇ ವಸ್ತುಗಳು ಸಿಕ್ಕಿಲ್ಲ ಎಂದರು. ಉಳಿದಂತೆ ಎಲ್ಲ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡದೆ ತೆರಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X