ಅಲ್ಪಸಂಖ್ಯಾತ ವರ್ಗದ ಕಾೂನು ಪದವೀಧರರಿಗೆ ಶಿಷ್ಯವೇತನ
ಉಡುಪಿ, ಜು.24: 2018-19ನೇ ಸಾಲಿಗೆ ಅಲ್ಪಸಂಖ್ಯಾತರ ವರ್ಗಗಳಿಗೆ ಸೇರಿದ (ಮುಸ್ಲಿಂ, ಕ್ರಿಶ್ಚಿಯನ್,ಜೈನ್, ಬೌದ್ದರು ಮತ್ತು ಸಿಖ್ಖರು) ಕಾನೂನು ಪದವೀಧರರಿಗೆ ವಕೀಲಿ ವೃತ್ತಿಯಲ್ಲಿ ತರಬೇತಿ ನೀಡಿ ಶಿಷ್ಯವೇತನ ಮಂಜೂರು ಮಾಡಲು ಅರ್ಹ ಮತ್ತು ಆಸಕ್ತ ಕಾನೂನು ಪದವೀಧರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಕಾನೂನು ಪದವೀಧರರು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿರಬೇಕು. ಅಭ್ಯರ್ಥಿ ವಯಸ್ಸು 30 ವರ್ಷದೊಳಗಿರಬೇಕು. ಬಾರ್ ಕೌನ್ಸಿಲ್ ನಲ್ಲಿ ತನ್ನ ಹೆಸರನ್ನು ನೊಂದಾಯಿಸಿರಬೇಕು. ತರಬೇತಿಗೆ ಆಯ್ಕೆಯಾಗುವ ಅಭ್ಯರ್ಥಿ ಗಳಿಗೆ ಅನುಭವಿ ಹಾಗೂ ನುರಿತ ವಕೀಲರ ಅಧೀನದಲ್ಲಿ ವಕೀಲಿ ವೃತ್ತಿಯಲ್ಲಿ ತರಬೇತಿ ಕೊಡಿಸಿ ನಾಲ್ಕು ವರ್ಷಗಳವರೆಗೆ ತಿಂಗಳಿಗೆ 4,000ರೂ. ಶಿಷ್ಯವೇತನ ನೀಡಲಾಗುವುದು.
ಆಸಕ್ತ ಅಭ್ಯರ್ಥಿ ಗಳು ಅರ್ಜಿಯನ್ನು ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಉಡುಪಿ ಇಲ್ಲಿಂದ ಪಡೆದು ಭರ್ತಿ ಮಾಡಿ, ಜು.31ರೊಳಗೆ ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ರಜತಾದ್ರಿ, ಉಡುಪಿ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮಣಿಪಾಲ (ದೂರವಾಣಿ:0820-2574881) ಇವರನ್ನು ಸಂಪರ್ಕಿಸುವಂತೆ ಇಲಾಖೆ ಪ್ರಕಟಣೆ ತಿಳಿಸಿದೆ.





