Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಉತ್ಕೃಷ್ಟ ಶಿಕ್ಷಣ ಸಂಸ್ಥೆ’...

‘ಉತ್ಕೃಷ್ಟ ಶಿಕ್ಷಣ ಸಂಸ್ಥೆ’ ಸಂಭ್ರಮಾಚರಣೆಯಲ್ಲಿ ಡಾ.ವಿನೋದ್ ಭಟ್

ಶೀಘ್ರವೇ ಬೆಂಗಳೂರು, ಶ್ರೀಲಂಕಾದಲ್ಲಿ ಮಾಹೆ ಕ್ಯಾಂಪಸ್

ವಾರ್ತಾಭಾರತಿವಾರ್ತಾಭಾರತಿ24 July 2018 9:59 PM IST
share
‘ಉತ್ಕೃಷ್ಟ ಶಿಕ್ಷಣ ಸಂಸ್ಥೆ’ ಸಂಭ್ರಮಾಚರಣೆಯಲ್ಲಿ ಡಾ.ವಿನೋದ್ ಭಟ್

ಮಣಿಪಾಲ, ಜು.24: ಕೇಂದ್ರ ಸರಕಾರದಿಂದ ದೇಶದ ‘ಉತ್ಕೃಷ್ಟ ಶಿಕ್ಷಣ ಸಂಸ್ಥೆ’ (ಇನ್‌ಸ್ಟಿಟ್ಯೂಟ್ ಆಫ್ ಎಮಿನೆನ್ಸ್) ಮಾನ್ಯತೆಯನ್ನು ಪಡೆದಿರುವ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ಮುಂದಿನ ಎರಡು ವರ್ಷಗಳಲ್ಲಿ ಬೆಂಗಳೂರು, ಜೆಮ್‌ಷೆದ್‌ಪುರ ಹಾಗೂ ಶ್ರೀಲಂಕಾಗಳಲ್ಲಿ ಒಟ್ಟು ಮೂರು ಹೊಸ ಕ್ಯಾಂಪಸ್‌ಗಳನ್ನು ತೆರೆಯುವ ಯೋಜನೆಯನ್ನು ಹಾಕಿಕೊಂಡಿದೆ ಎಂದು ಮಾಹೆ ಕುಲಪತಿ ಡಾ.ವಿನೋದ್ ಭಟ್ ತಿಳಿಸಿದ್ದಾರೆ.

ಮಾಹೆಗೆ ಐಒಇ ಮಾನ್ಯತೆ ದೊರೆತ ಹಿನ್ನೆಲೆಯಲ್ಲಿ ಮಣಿಪಾಲದ ಫಾರ್ಚ್ಯೂನ್ ಇನ್ ವ್ಯಾಲಿವ್ಯೆ ಹೊಟೇಲ್‌ನಲ್ಲಿ ನಡೆದ ಸಂತೋಷ ಸಮಾರಂಭದಲ್ಲಿ ಅವರು ಮಾತನಾಡುತಿದ್ದರು.

ಮಾಹೆ ಸಾಧನೆಯ ಸಂಪೂರ್ಣ ಶ್ರೇಯಸ್ಸನ್ನು ಸ್ಥಾಪಕ ಡಾ.ಟಿ.ಎಂ.ಎ.ಪೈ ಹಾಗೂ ಮಾಹೆ ಚಾನ್ಸಲರ್ ಡಾ.ರಾಮದಾಸ ಪೈ ಅವರಿಗೆ ಅರ್ಪಿಸಿದ ಡಾ. ವಿನೋದ್ ಭಟ್, ಡಾ.ಟಿಎಂಎ ಪೈ ಹಾಗೂ ಡಾ.ರಾಮದಾಸ ಪೈ ಅವರು ಎದುರಿಸಿದ ಕಷ್ಟ, ಸಂಕಷ್ಟಗಳನ್ನು ನೆನಪಿಸಿಕೊಂಡು, ಅವರ ಅವಿರತ ಪ್ರಯತ್ನ ದಿಂದಾಗಿ ಸಂಸ್ಥೆ ಇಂದು ಇಂಥ ಸಾಧನೆ ಮಾಡಲು ಸಾಧ್ಯವಾಗಿದೆ ಎಂದರು.

ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ, ಮಾಹೆಯ ಕಳೆದ 25 ವರ್ಷಗಳ ನಿರಂತರ ಸಾಧನೆಗೆ ಸಂದ ಗೌರವ ಹಾಗೂ ಭವಿಷ್ಯದಲ್ಲಿ ವಿಶ್ವದ ಅಗ್ರ ರ್ಯಾಂಕಿಂಗ್ ವಿವಿಗಳಲ್ಲಿ ಒಂದಾಗುವ ಸಾಧ್ಯತೆಗೆ ನೀಡಿದ ಪ್ರೋತ್ಸಾಹವಾಗಿದೆ ಎಂದು ಅಭಿಪ್ರಾಯ ಪಟ್ಟರು.

ಈ ದಿಶೆಯಲ್ಲಿ ನಾವು ಸಾಗಿರುವುದು ಸ್ವಲ್ಪ ದೂರವನ್ನು. ಸಂಶೋಧನೆ, ಶೈಕ್ಷಣಿಕ ಉನ್ನತಿ, ದಕ್ಷ ಆಡಳಿತ, ವಿದ್ಯಾರ್ಥಿಗಳು ಹಾಗೂ ಉತ್ತಮ ಪ್ರಾಧ್ಯಾಪಕರ ಮೂಲಕ ಇನ್ನಷ್ಟನ್ನು ನಾವು ಸಾಧಿಸಬೇಕಾಗಿದೆ. ಗುಣಮಟ್ಟದ ಶಿಕ್ಷಣ ನಮ್ಮ ಪ್ರಧಾನ ಲಕ್ಷವಾಗಿರಬೇಕು ಎಂದವರು ನುಡಿದರು. ಅಧ್ಯಕ್ಷತೆ ವಹಿಸಿದ್ದ ಪ್ರೊ ಚಾನ್ಸಲರ್ ಡಾ.ಎಚ್.ಎಸ್.ಬಲ್ಲಾಳ್ ಮಾತನಾಡಿ, ಡಾ.ವಿನೋದ್ ಭಟ್ ತನ್ನ ತಂಡಕ್ಕೆ ನೀಡಿದ ಸಮರ್ಥ ಮುಂದಾಳತ್ವದಲ್ಲಿ ಮಾಹೆ ಈ ಸಾಧನೆಯನ್ನು ಮಾಡಲು ಸಾಧ್ಯವಾಗಿದೆ ಎಂದರು.

ಮಾಹೆಯ ಗುಣಮಟ್ಟ ಹಾಗೂ ಅಂಗೀಕಾರ ವಿಭಾಗದ ನಿರ್ದೇಶಕ ಡಾ.ಸಂದೀಪ್ ಶೆಣೈ ಅವರು ದೇಶದ ಮೂರು ಸರಕಾರಿ ಹಾಗೂ ಮೂರು ಖಾಸಗಿ ವಿದ್ಯಾ ಸಂಸ್ಥೆಗಳು ಮಾತ್ರ ಪಡೆಯಲು ಸಾಧ್ಯವಾದ ಐಒಇ ಮಾನ್ಯತೆಯನ್ನು ಮಾಹೆ ಪಡೆದ ಕುರಿತು ವಿವರಗಳನ್ನು ನೀಡಿದರು. ದೇಶದಲ್ಲಿ ಆಯ್ಕೆಯಾದ ಆರು ಸಂಸ್ಥೆಗಳಲ್ಲಿ ತಲಾ ಒಂದು ಸರಕಾರಿ (ಬೆಂಗಳೂರಿನ ಐಐಎಸ್ಸಿ) ಹಾಗೂ ಒಂದು ಖಾಸಗಿ (ಮಾಹೆ) ಕರ್ನಾಟಕದ ರಾಜ್ಯದ್ದೆನ್ನುವುದು ಹೆಮ್ಮೆ. ಇದಕ್ಕಾಗಿ 26,000 ಪುಟಗಳ ದಾಖಲೆಗಳನ್ನು ಇಲಾಖೆಗೆ ನಿಗದಿತ 90 ದಿನದೊಳಗೆ ನೀಡಲಾಗಿತ್ತು ಎಂದರು.

ಐಒಇ ಮಾನ್ಯತೆ ಪಡೆದ ಸಂಸ್ಥೆಗಳಿಗೆ ಎಂಎಚ್‌ಆರ್‌ಡಿ ನೀಡಿದ ಮಾರ್ಗ ದರ್ಶಿ ಸೂತ್ರಗಳಲ್ಲಿ ಈ ಸಂಸ್ಥೆ ಮುಂದಿನ 10 ವರ್ಷಗಳಲ್ಲಿ ವಿಶ್ವದ ಅಗ್ರಗಣ್ಯ 500 ವಿವಿಗಳಲ್ಲಿ ಸ್ಥಾನ ಪಡೆಯಬೇಕಾಗಿದೆ. ಮುಂದೆ ಅದು ವಿಶ್ವದ ಅಗ್ರ 100 ವಿವಿಗಳಲ್ಲಿ ಸ್ಥಾನ ಪಡೆಯಬೇಕೆಂದು ಅದರ ಉದ್ದೇಶವಾಗಿದೆ ಎಂದು ಡಾ.ಸಂದೀಪ್ ಶೆಣೈ ನುಡಿದರು.

ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜ್ಯುಕೇಶನ್‌ನ ರಿಜಿಸ್ಟ್ರಾರ್ ಹಾಗೂ ಎಂಇಎಂಜಿಯ ಅಧ್ಯಕ್ಷ ಡಾ.ರಂಜನ್ ಆರ್.ಪೈ, ಮಾಹೆಯ ಟ್ರಸ್ಟಿ ವಸಂತಿ ಆರ್.ಪೈ, ಮಾಹೆಯ ಪ್ರೊ ವೈಸ್ ಚಾನ್ಸಲರ್‌ಗಳಾದ ಡಾ.ವಿ.ಸುರೇಂದ್ರ ಶೆಟ್ಟಿ ಮತ್ತು ಡಾ.ಸಿ.ಎಸ್.ತಿಮ್ಮಯ್ಯ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಾಹೆಯ ಪ್ರೊ ವೈಸ್ ಚಾನ್ಸಲರ್ ಡಾ.ಪೂರ್ಣಿಮಾ ಬಾಳಿಗಾ ಸ್ವಾಗತಿಸಿದರೆ, ರಿಜಿಸ್ಟ್ರಾರ್ ಡಾ.ನಾರಾಯಣ ಸಭಾಹಿತ್ ವಂದಿಸಿದರು. ಟೆಡ್ಡಿ ಆಂಡ್ರೂ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X