Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸರ್ಕಾರ ಕಡೆಗಣಿಸಿದಲ್ಲಿ ಕುಟುಂಬ ಸಮೇತ...

ಸರ್ಕಾರ ಕಡೆಗಣಿಸಿದಲ್ಲಿ ಕುಟುಂಬ ಸಮೇತ ಬೀದಿಗಿಳಿದು ಹೋರಾಟ-ಕೆ.ಎ. ಸಿದ್ದೀಕ್

ಅವೈಜ್ಞಾನಿಕ ಸಾರಿಗೆ ನೀತಿ ವಿರೋಧಿಸಿ ಎಸ್‌ಡಿಎಯು ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ24 July 2018 11:07 PM IST
share
ಸರ್ಕಾರ ಕಡೆಗಣಿಸಿದಲ್ಲಿ ಕುಟುಂಬ ಸಮೇತ ಬೀದಿಗಿಳಿದು ಹೋರಾಟ-ಕೆ.ಎ. ಸಿದ್ದೀಕ್

ಪುತ್ತೂರು, ಜು. 24: ದೇಶ ಮತ್ತು ರಾಜ್ಯದಲ್ಲಿ ಆಡಳಿತ ನಡೆಸಿದ ಯಾವುದೇ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಅಟೋ ರಿಕ್ಷಾ ಚಾಲಕರ ಬಗ್ಗೆ ಪ್ರಸ್ತಾಪ ಕೂಡ ಮಾಡದೆ ಅಟೋ ರಿಕ್ಷಾ ಚಾಲಕ -ಮಾಲಕರಾಗಿ ದುಡಿಯುತ್ತಿರುವ ಕಾರ್ಮಿಕ ವರ್ಗವನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ಸರ್ಕಾರ ನಮ್ಮ ಬೇಡಿಕೆಯನ್ನು ಕಡೆಗಣಿಸಿದಲ್ಲಿ ಅಟೋ ರಿಕ್ಷಾ ಚಾಲಕರು ತಮ್ಮ ತಂದೆ, ತಾಯಿ, ಅವರ ಪತ್ನಿ ಮಕ್ಕಳ ಸಮೇತ ಇಡೀ ಕುಟುಂಬವನ್ನು ಬೀದಿಗಿಳಿಸಿ ಹೋರಾಟ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ಕೆ.ಎ. ಸಿದ್ದೀಕ್ ಹೇಳಿದರು.

ಅವರು ಅಟೋ ಚಾಲಕ ಮಾಲಕರಿಗೆ ಸಮಸ್ಯೆಯಾಗಿ ಕಾಡುತ್ತಿರುವ ಕೇಂದ್ರ ಸರ್ಕಾರದ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆ ನೀತಿ , ವಿಮಾ ಕಾನೂನು, ಅವೈಜ್ಞಾನಿಕ ಸಾರಿಗೆ ನೀತಿ ಮತ್ತಿತರ ಕಾನೂನು ನೀತಿಗಳನ್ನು ವಿರೋಧಿಸಿ ಪುತ್ತೂರಿನ ಸೋಷಿಯಲ್ ಡೆಮೊಕ್ರಟಿಕ್ ಅಟೋ ಯೂನಿಯನ್ (ಎಸ್‌ಡಿಎಯು) ಸಂಘಟನೆಯ ನೇತೃತ್ವದಲ್ಲಿ ಮಂಗಳವಾರ ಪುತ್ತೂರಿನಲ್ಲಿ ರಿಕ್ಷಾ ಚಾಲಕರಿಂದ ಅಟೋ ರ್ಯಾಲಿ ಮತ್ತು ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.

ಬಿಜೆಪಿಗೆ ದೇಣಿಗೆ ನೀಡುತ್ತಿರುವ ದೊಡ್ಡ ಉದ್ಯಮಿಗಳೇ ಇಂಧನ ಬೆಲೆ ಏರಿಕೆ ಮಾಡುತ್ತಿದ್ದು, ಬಿಜೆಪಿ ತನ್ನ ಲಾಭಕ್ಕಾಗಿ ಈ ರೀತಿ ಮಾಡಿಸುತ್ತಿದೆ. ರಾಜ್ಯ ಸರ್ಕಾರ ರೈತರ ಸಾಲಮನ್ನಾ ಮಾಡುತ್ತಿರುವುದು ಉತ್ತಮ ವಿಚಾರ ಆದರೆ ಅದನ್ನು ಸರಿದೂಗಿಸಲು ಪೆಟ್ರೋಲ್,ಡೀಸೆಲ್ ಬೆಲೆ ಏರಿಕೆ ಮಾಡುವ ಮೂಲಕ ಬಡ ಅಟೋ ರಿಕ್ಷಾ ಚಾಲಕರನ್ನು ಬಲಿಗೊಡುತ್ತಿದೆ. ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್‌ಗೆ ವಿಧಿಸುವಷ್ಟು ತೆರಿಗೆ ಬೇರಾವ ರಾಜ್ಯದಲ್ಲಿ ಇಲ್ಲ. ಶ್ರೀಮಂತರು ಅಟೋ ರಿಕ್ಷಾ ಚಾಲಕರಾಗಿ ದುಡಿಯುವುದಿಲ್ಲ. ಬಡವರು ಮಾತ್ರ ತಮ್ಮ ಬದುಕಿಗಾಗಿ ಈ ವೃತ್ತಿ ನಡೆಸುತ್ತಿರುವುದರಿಂದ ಬ್ಯಾಜ್ಡ್ ನೀಡಲು ಎಸ್ಸೆಸ್ಸೆಲ್ಸಿ ಕಲಿತಿರಬೇಕು ಎಂಬ ಶಿಕ್ಷಣ ಅರ್ಹತೆ ನೀತಿಯನ್ನು ಕೈಬಿಡಬೇಕು ಎಂದು ಆಗ್ರಹಿಸಿದರು. ಟ್ರೇಡ್ ಯೂನಿಯನ್ ಸಂಘಟನೆಯ ರಾಜ್ಯಾಧ್ಯಕ್ಷರಾದ ವಕೀಲ ಮಜೀದ್ ಖಾನ್ ಮಾತನಾಡಿದರು.

ಪ್ರತಿಭಟನಾ ಸಭೆಗೆ ಮೊದಲು ಪುತ್ತೂರಿನ ದರ್ಬೆ ಬೈಪಾಸ್ ಸರ್ಕಲ್ ಬಳಿಯಿಂದ ಅಟೋ ರ್ಯಾಲಿಯ ಮೂಲಕ ಇಲ್ಲಿನ ಮಿನಿ ವಿಧಾನ ಸೌಧದ ಬಳಿಗೆ ಆಗಮಿಸಿದ ರಿಕ್ಷಾ ಚಾಲಕರು ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಟೋ ಚಾಲಕ ವಿರೋಧಿ ನೀತಿಯನ್ನು ಖಂಡಿಸಿದರು.

ಸೋಷಿಯಲ್ ಡೆಮೊಕ್ರಟಿಕ್ ಅಟೋ ಯೂನಿಯನ್‌ನ ಪುತ್ತೂರು ತಾಲೂಕು ಅಧ್ಯಕ್ಷ ಮಹಮ್ಮದ್ ಕುಂಞಿ ಮಾಂತೂರು, ಜಿಲ್ಲಾ ಸಂಚಾಲಕ ಜಾಬೀರ್ ಅರಿಯಡ್ಕ, ತಾಲೂಕು ಸಂಚಾಲಕ ಅಶ್ರಫ್ ಬಾವು, ತಾಲೂಕು ಕಾರ್ಯದರ್ಶಿ ಹಂಝ ಮಣಿಯ, ಎಸ್‌ಡಿಪಿಐ ನಗರ ಸಮಿತಿ ಅಧ್ಯಕ್ಷ ಹಂಝ ಅಫ್ನಾನ್, ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ಎಂ.ಎ.ರಫೀಕ್ ಸವಣೂರು ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X