Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಮೋಲ್ ಕಾಳೆಯ ಡೈರಿಯ 2ನೆ...

ಅಮೋಲ್ ಕಾಳೆಯ ಡೈರಿಯ 2ನೆ ಸ್ಥಾನದಲ್ಲಿತ್ತು ಗೌರಿ ಲಂಕೇಶ್ ಹೆಸರು

ಮೊದಲ ಹೆಸರು ಯಾರದ್ದು?, 'ಹಿಟ್ ಲಿಸ್ಟ್'ನಲ್ಲಿದ್ದ ವಿಚಾರವಾದಿಗಳು ಯಾರ್ಯಾರು ಗೊತ್ತಾ?

ವಾರ್ತಾಭಾರತಿವಾರ್ತಾಭಾರತಿ25 July 2018 3:53 PM IST
share
ಅಮೋಲ್ ಕಾಳೆಯ ಡೈರಿಯ 2ನೆ ಸ್ಥಾನದಲ್ಲಿತ್ತು ಗೌರಿ ಲಂಕೇಶ್ ಹೆಸರು

ಬೆಂಗಳೂರು, ಜು.25: ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅಮೋಲ್ ಕಾಳೆಯಿಂದ ವಶಪಡಿಸಿಕೊಳ್ಳಲಾಗಿರುವ ಡೈರಿಯಲ್ಲಿ 34 ಹೆಸರುಗಳ ಎರಡು ಪಟ್ಟಿಗಳಿದ್ದು, ಗೌರಿ ಲಂಕೇಶ್ ಅವರ ಹೆಸರು ಒಂದು ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ ಎಂದು ವಿಶೇಷ ತನಿಖಾ ತಂಡ ಕಂಡುಕೊಂಡಿದೆ ಎಂದು indianexpress.com ವರದಿ ಮಾಡಿದೆ.

ಎರಡು ಪಟ್ಟಿಗಳಲ್ಲೊಂದರಲ್ಲಿ ರಂಗಕರ್ಮಿ ಗಿರೀಶ್ ಕಾರ್ನಾಡ್ ಅವರ ಹೆಸರು ಮೊದಲನೇ ಸ್ಥಾನದಲ್ಲಿದೆ. ಈ ಪಟ್ಟಿಗಳಲ್ಲಿರುವ ಎಲ್ಲರಿಗೂ ಭದ್ರತೆಯನ್ನು ಸರಕಾರದ ವತಿಯಿಂದ ಒದಗಿಸಲಾಗಿದ್ದು, ಈ ಪಟ್ಟಿಗಳಲ್ಲಿರುವ ಪ್ರಮುಖ ಹೆಸರುಗಳು ಕರ್ನಾಟಕ ಮತ್ತು ಮಹಾರಾಷ್ಟ್ರದವರದ್ದಾಗಿದೆ.

ಪುಣೆ ನಿವಾಸಿ ಹಾಗೂ ಹಿಂದೂ ಜನಜಾಗೃತಿ ಸಮಿತಿಯ ಮಾಜಿ ಸಂಚಾಲಕನಾಗಿರುವ ಅಮೋಲ್ ಕಾಳೆ ಗೌರಿ ಲಂಕೇಶ್ ಮತ್ತಿತರರ ಹೆಸರುಗಳಿರುವ ಪಟ್ಟಿಗಳನ್ನು ಆಗಸ್ಟ್ 2016ರಲ್ಲಿಯೇ ತಯಾರಿಸಿದ್ದನೆಂದು ಶಂಕಿಸಲಾಗಿದೆ.

ಬೆಂಗಳೂರಿನ ನ್ಯಾಯಾಲಯಕ್ಕೆ ವಿಶೇಷ ತನಿಖಾ ತಂಡ ಸಲ್ಲಿಸಿದ ದಾಖಲೆಗಳಲ್ಲಿ ತಿಳಿಸಲಾಗಿರುವಂತೆ ಕಾಳೆಯ ಹತ್ತಿರವಿದ್ದ ಡೈರಿಯ ಒಂದು ಪುಟದಲ್ಲಿದ್ದ ಹಾಗೂ ಇಂಗ್ಲಿಷಿನಲ್ಲಿ ಬರೆಯಲಾಗಿದ್ದ ಎಂಟು ಹೆಸರುಗಳಲ್ಲಿ ನಿಡುಮಾಮಿಡಿ ಸ್ವಾಮೀಜಿಯ ಹೆಸರು ಎಂಟನೇ ಸ್ಥಾನದಲ್ಲಿತ್ತು. 26 ಹೆಸರುಗಳಿದ್ದ ಇನ್ನೊಂದು ಪಟ್ಟಿ ಡೈರಿಯ ಇನ್ನೊಂದು ಪುಟದಲ್ಲಿದ್ದು, ಅದರಲ್ಲಿ ಆಗಸ್ಟ್ 22, 2016 ದಿನಾಂಕ ನಮೂದಿತವಾಗಿತ್ತು.

ಕೆಲವು ಮಂದಿ ಇತರರ ಸಲಹೆಯೊಂದಿಗೆ ಕಾಳೆ ಈ ಡೈರಿಯನ್ನು  ತಯಾರಿಸಿದ್ದನೆನ್ನಲಾಗಿದ್ದು, ಎಲ್ಲಾ 34 ಮಂದಿಯೂ ಸಂಘಪರಿವಾರದ ವಿರುದ್ಧವಾಗಿದ್ದವರು ಎಂಬುದು ಉಲ್ಲೇಖಾರ್ಹ. ಪಟ್ಟಿಯಲ್ಲಿ ಗೌರಿ ಲಂಕೇಶ್, ಗಿರೀಶ್ ಕಾರ್ನಾಡ್, ನಿಡುಮಾಮಿಡಿ ಸ್ವಾಮೀಜಿ ಸೇರಿದಂತೆ ಯೋಗೇಶ್ ಮಾಸ್ಟರ್, ಚಂದ್ರಶೇಖರ್ ಪಾಟೀಲ್, ಬಂಜಗೆರೆ ಜಯಪ್ರಕಾಶ್,  ಹಿಂದುಳಿದ ಜಾತಿಗಳ ಆಯೋಗದ ಮಾಜಿ ಅಧ್ಯಕ್ಷ ಸಿ ಎಸ್ ದ್ವಾರಕಾನಾಥ್ ಅವರ ಹೆಸರುಗಳೂ ಇವೆ ಎಂದು indianexpress.com ವರದಿ ಮಾಡಿದೆ.

ಇವರ ಹೊರತಾಗಿ ಸಾಹಿತಿಗಳಾದ ಬರಗೂರು ರಾಮಚಂದ್ರಪ್ಪ, ಪಾಟೀಲ ಪುಟ್ಟಪ್ಪ, ಚನ್ನವೀರ ಕಣವಿ, ವಿಚಾರವಾದಿಗಳಾದ ನಟರಾಜ್  ಹುಳಿಯಾರ್, ನರೇಂದ್ರ ನಾಯಕ್ ಹಾಗೂ ಮಾಜಿ ಐಎಎಸ್ ಅಧಿಕಾರಿ ಎಸ್ ಎಂ ಜಾಮ್ದರ್ ಅವರಿಗೂ ರಕ್ಷಣೆಯೊದಗಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X