Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಲ್ಲಿರುವ ರೊಹಿಂಗ್ಯಾಗಳ ಗಡಿಪಾರಿಗೆ...

ಭಾರತದಲ್ಲಿರುವ ರೊಹಿಂಗ್ಯಾಗಳ ಗಡಿಪಾರಿಗೆ ಬಾಂಗ್ಲಾ ಜೊತೆ ಮಾತುಕತೆ: ರಾಜ್ ನಾಥ್ ಸಿಂಗ್

ವಾರ್ತಾಭಾರತಿವಾರ್ತಾಭಾರತಿ25 July 2018 8:52 PM IST
share
ಭಾರತದಲ್ಲಿರುವ  ರೊಹಿಂಗ್ಯಾಗಳ ಗಡಿಪಾರಿಗೆ ಬಾಂಗ್ಲಾ ಜೊತೆ ಮಾತುಕತೆ: ರಾಜ್ ನಾಥ್ ಸಿಂಗ್

ಹೊಸದಿಲ್ಲಿ, ಜು.25: ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ರೊಹಿಂಗ್ಯಾಗಳ ಗಡಿಪಾರು ವಿಷಯಕ್ಕೆ ಕುರಿತಾಗಿ ಬಾಂಗ್ಲಾದೇಶದ ಜೊತೆ ಮಾತುಕತೆ ನಡೆಸಲಾಗುತ್ತಿದೆ ಎಂದು ಕೇಂದ್ರ ಗೃಹ ಸಚಿವ ರಾಜ್ ನಾಥ್ ಸಿಂಗ್ ಮಂಗಳವಾರ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.

ಜುಲೈ 30ರಂದು ಅಸ್ಸಾಂನಲ್ಲಿ ನೆಲೆಸಿರುವ 52 ಅಕ್ರಮ ಬಾಂಗ್ಲಾದೇಶಿಗಳನ್ನು ಗಡಿಪಾರು ಮಾಡಲಾಗುವುದು ಎಂದು ಸಹಾಯಕ ಗೃಹ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ. ಅಗತ್ಯ ಬಿದ್ದಲ್ಲಿ ರೊಹಿಂಗ್ಯಾ ಸಂತ್ರಸ್ತರ ಗಡಿಪಾರು ವಿಷಯದಲ್ಲಿ ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್ ಜೊತೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾತುಕತೆ ನಡೆಸಲಿದೆ ಎಂದು ಸಿಂಗ್ ತಿಳಿಸಿದ್ದಾರೆ. ಅಕ್ರಮ ವಲಸಿಗರನ್ನು ಗುರುತಿಸಿ ಅವರಿಂದ ಬಯೋಮೆಟ್ರಿಕ್‌ಗಳನ್ನು ಪಡೆದುಕೊಳ್ಳುವಂತೆ ಮತ್ತು ಭವಿಷ್ಯದಲ್ಲಿ ಅವರು ಭಾರತೀಯ ನಾಗರಿಕರು ಎಂದು ಘೊಷಿಸಿಕೊಳ್ಳಲು ಯಾವುದೇ ರೀತಿಯ ಆಧಾರಗಳು ಉಳಿಯದಂತೆ ನೋಡಿಕೊಳ್ಳುವಂತೆ ರಾಜ್ಯ ಸರಕಾರಗಳಿಗೆ ಸಲಹೆಯನ್ನು ನೀಡಿರುವುದಾಗಿ ಗೃಹ ಸಚಿವರು ತಿಳಿಸಿದ್ದಾರೆ. ರೊಹಿಂಗ್ಯಾ ಸಂತ್ರಸ್ತರ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶದ ಜೊತೆ ಮಾತುಕತೆ ನಡೆಸಿರುವುದಾಗಿ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ. ವಿದೇಶಿಗರು ಕಾಯ್ದೆಯಡಿಯಲ್ಲಿ ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ವ್ಯಕ್ತಿಗಳನ್ನು ಪತ್ತೆಮಾಡಿ ಅವರನ್ನು ಗಡಿಪಾರು ಮಾಡುವ ಹಕ್ಕು ಸರಕಾರಕ್ಕಿದೆ ಎಂದು ರಿಜಿಜು ತಿಳಿಸಿದ್ದಾರೆ. ರೊಂಹಿಗ್ಯಾಗಳು ಅಕ್ರಮವಾಗಿ ಭಾರತವನ್ನು ಪ್ರವೇಶಿಸಿದ್ದಾರೆ ಎಂದ ರಿಜಿಜು ಸದ್ಯ ಅವರು ವಿವಿಧ ರಾಜ್ಯಗಳಲ್ಲಿ ನೆಲೆಸಿದ್ದಾರೆ ಎಂದು ತಿಳಿಸಿದ್ದಾರೆ. ಭದ್ರತಾ ಸಂಸ್ಥೆಯ ವರದಿಯ ಪ್ರಕಾರ, ಸದ್ಯ ರೊಹಿಂಗ್ಯಾಗಳು ಜಮ್ಮು ಮತ್ತು ಕಾಶ್ಮೀರ, ಆಂಧ್ರ ಪ್ರದೇಶ, ತೆಲಂಗಾಣ, ಪಶ್ಚಿಮ ಉತ್ತರ ಪ್ರದೇಶ, ದಿಲ್ಲಿ ಮತ್ತು ಜೈಪುರದಲ್ಲಿ ನೆಲೆಸಿದ್ದಾರೆ. ಸದ್ಯ ಗಡಿಪಾರು ಮಾಡಲು ಉದ್ದೇಶಿಸಲಾಗಿರುವ 52 ಮಂದಿಯ ಗುರುತನ್ನು ಬಾಂಗ್ಲಾದೇಶ ಒಪ್ಪಿಕೊಂಡಿದ್ದು, ಅವರ ಗಡಿಪಾರಿಗೆ ಹಸಿರು ನಿಶಾನೆ ನೀಡಿದೆ. ಹಾಗಾಗಿ ಜುಲೈ 30ರ ಬೆಳಿಗ್ಗೆ 11 ಗಂಟೆಗೆ ಅಸ್ಸಾಂನ ಮಂಕಚರ್ ಐಪಿಸಿಯಿಂದ ಈ 52 ಮಂದಿಯನ್ನು ತಮ್ಮ ದೇಶಕ್ಕೆ ಮರಳಿ ಕಳುಹಿಸಿಕೊಡಲಾಗುವುದು ಎಂದು ರಿಜಿಜು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X