Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಯಲಲಿತಾ ಎಂದೂ ಗರ್ಭಿಣಿಯಾಗಿರಲಿಲ್ಲ:...

ಜಯಲಲಿತಾ ಎಂದೂ ಗರ್ಭಿಣಿಯಾಗಿರಲಿಲ್ಲ: ಹೈಕೋರ್ಟ್‌ನಲ್ಲಿ ತಮಿಳು ನಾಡು ಸರಕಾರದ ನಿವೇದನೆ

ವಾರ್ತಾಭಾರತಿವಾರ್ತಾಭಾರತಿ25 July 2018 9:18 PM IST
share
ಜಯಲಲಿತಾ ಎಂದೂ ಗರ್ಭಿಣಿಯಾಗಿರಲಿಲ್ಲ: ಹೈಕೋರ್ಟ್‌ನಲ್ಲಿ ತಮಿಳು ನಾಡು ಸರಕಾರದ ನಿವೇದನೆ

ಚೆನ್ನೈ,ಜು.25: ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಅವರು ಎಂದೂ ಗರ್ಭಿಣಿಯಾಗಿರಲಿಲ್ಲ ಎಂದು ಮದ್ರಾಸ್ ಉಚ್ಚ ನ್ಯಾಯಾಲಯಕ್ಕೆ ತಿಳಿಸಿರುವ ತಮಿಳುನಾಡು ಸರಕಾರವು ತನ್ನ ಹೇಳಿಕೆಗೆ ಸಮರ್ಥನೆಯಾಗಿ ವೀಡಿಯೊ ತುಣುಕೊಂದನ್ನು ಸಲ್ಲಿಸಿದೆ. ತಾನು ಜಯಲಲಿತಾರ ಪುತ್ರಿ ಎಂಬ ಬೆಂಗಳೂರು ನಿವಾಸಿ ಅಮೃತಾರ ಪ್ರತಿಪಾದನೆಯನ್ನು ಈ ವೀಡಿಯೋ ಅಲ್ಲಗಳೆದಿದೆ ಎಂದು ಅದು ಹೇಳಿದೆ.

 ರಾಜ್ಯದ ಅಡ್ವೊಕೇಟ್ ಜನರಲ್ ವಿಜಯ ನಾರಾಯಣನ್ ಅವರು ನ್ಯಾ.ಎಸ್.ವೈದ್ಯನಾಥನ್ ಅವರಿಗೆ ಈ ವೀಡಿಯೊ ತುಣುಕನ್ನು ಸಲ್ಲಿಸಿದರು.

 1980,ಆ.14ರಂದು ತಾನು ಜಯಲಲಿತಾರಿಗೆ ಜನಿಸಿದ್ದಾಗಿ ಅರ್ಜಿದಾರ ಮಹಿಳೆ ಹೇಳಿಕೊಂಡಿದ್ದಾರಾದರೂ,ಅದಕ್ಕೆ ಕೇವಲ ಒಂದು ತಿಂಗಳು ಮೊದಲು ಜಯಲಲಿತಾ 27ನೇ ಫಿಲ್ಮಫೇರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ್ದ ಈ ವೀಡಿಯೊ ಅವರು ಗರ್ಭಿಣಿಯಾಗಿದ್ದರು ಎಂಬ ಯಾವುದೇ ಕುರುಹನ್ನು ತೋರಿಸುತ್ತಿಲ್ಲ ಎಂದು ನಾರಾಯಣನ್ ಹೇಳಿದರು.

ತಾನು ಜನಿಸಿದ ತಕ್ಷಣ ತನ್ನನ್ನು ದತ್ತಕ ನೀಡಲಾಗಿತ್ತು ಮತ್ತು ಬೆಂಗಳೂರಿನಲ್ಲಿರುವ ಜಯಲಲಿತಾರ ಸೋದರಿ ಶೈಲಜಾ ತನ್ನನ್ನು ಬೆಳೆಸಿದ್ದರು ಎಂದು ತನ್ನ ಅರ್ಜಿಯಲ್ಲಿ ತಿಳಿಸಿರುವ ಅಮೃತಾ,ಜಯಲಲಿತಾ ತನ್ನ ತಾಯಿ ಎನ್ನುವುದನ್ನು ಸಿದ್ಧಪಡಿಸಲು ಡಿಎನ್‌ಎ ಪರೀಕ್ಷೆಗಾಗಿ ಕೋರಿಕೊಂಡಿದ್ದಾರೆ. 2016,ಡಿಸೆಂಬರ್‌ನಲ್ಲಿ ಜಯಯಲಿತಾರ ನಿಧನದ ತಿಂಗಳುಗಳ ಬಳಿಕ ಈ ಅರ್ಜಿಯನ್ನು ದಾಖಲಿಸಿರುವ ಅಮೃತಾ ತನ್ನ ಸಾಕುತಂದೆಯು ಸಾಯುವ ಕೆಲವೇ ಕ್ಷಣಗಳ ಮುನ್ನ ತನ್ನ ಜನ್ಮರಹಸ್ಯವನ್ನು ಬಹಿರಂಗಗೊಳಿಸಿದ್ದರು ಎಂದು ತಿಳಿಸಿದ್ದಾರೆ.

  ಜಯಲಲಿತಾರ ಅವಶೇಷಗಳನ್ನು ಹೊರಕ್ಕೆ ತೆಗೆಯಲು ಮತ್ತು ಅವರು ಸೇರಿದ್ದ ಅಯ್ಯಂಗಾರ್ ಸಮುದಾಯದ ಸಂಪ್ರದಾಯಗಳ ಪ್ರಕಾರ ಅಂತ್ಯಸಂಸ್ಕಾರ ನಡೆಸಲು ನಿರ್ದೇಶ ಕೋರಿ ಅಮೃತಾ ನ್ಯಾಯಾಲಯದ ಮೆಟ್ಟಿಲನ್ನೇರಿದ್ದಾರೆ.

ಅಮೃತಾರ ಹೇಳಿಕೆಯನ್ನು ತಿರಸ್ಕರಿಸಿದ ನಾರಾಯಣನ್,ಆಕೆ ಕಪೋಲಕಲ್ಪಿತ ಕಥೆಯನ್ನು ಹೇಳುತ್ತಿದ್ದಾರೆ ಮತ್ತು ದಿವಂಗತ ನಾಯಕಿಗೆ ಅಗೌರವವನ್ನುಂಟು ಮಾಡುತ್ತಿದ್ದಾರೆ ಎಂದು ಹೇಳಿದರು.

 ಜಯಲಲಿತಾರ ತಂದೆ ಜಯರಾಮ ಅವರ ನಿಧನದ ಬಳಿಕ ಶೈಲಜಾ ಜನಿಸಿದ್ದರಿಂದ ಜಯಲಲಿತಾ ಕುಟುಂಬವು ಆಕೆಯನ್ನು ತ್ಯಜಿಸಿತ್ತು ಎಂಬ ಅಮೃತಾರ ಹೇಳಿಕೆಯನ್ನು ನಿರಾಕರಿಸಿದ ನಾರಾಯಣನ್,ತಾನು ಜಯಲಲಿತಾರ ಪುತ್ರಿ ಎನ್ನುವುದನ್ನು ರುಜುವಾತುಗೊಳಿಸುವ ಯಾವುದೇ ದಾಖಲೆಗಳನ್ನು ಅರ್ಜಿದಾರರು ಈವರೆಗೆ ಸಲ್ಲಿಸಿಲ್ಲ ಎಂದು ವಾದಿಸಿದರು.

ತನ್ನ ತಂಗಿಯೆಂದು ಹೇಳಿಕೊಳ್ಳುತ್ತಿರುವುದಕ್ಕಾಗಿ ಜಯಲಲಿತಾ ಅವರು ಶೈಲಜಾ ವಿರುದ್ಧ 2014ರಲ್ಲಿ ಮಾನನಷ್ಟ ಪ್ರಕರಣವನ್ನೂ ದಾಖಲಿಸಿದ್ದರು ಎಂದು ಅವರು ತಿಳಿಸಿದರು.

 ಅರ್ಜಿದಾರರ ಹೇಳಿಕೆ ಸೇರಿದಂತೆ ಜಯಲಲಿತಾರ ಬದುಕು ಮತ್ತು ಸಾವಿನ ಸುತ್ತಲಿನ ಪ್ರತಿಯೊಂದೂ ಪ್ರಶ್ನಾರ್ಥಕ ಚಿಹ್ನೆಯಾಗಿಯೇ ಉಳಿದುಕೊಂಡಿದೆ ಎಂದು ನ್ಯಾಯಾಧೀಶರು ಅಭಿಪ್ರಾಯ ವ್ಯಕ್ತಪಡಿಸಿದರು.

ನ್ಯಾಯಾಲಯವು ವಿಚಾರಣೆಯನ್ನು ಒಂದು ವಾರ ಮುಂದೂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X