Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಿಮ್ಮ ಪರಿವರ್ತನೆಯ ಮೂಲ ಈ ಜೈಲಿನಿಂದಲೇ...

ನಿಮ್ಮ ಪರಿವರ್ತನೆಯ ಮೂಲ ಈ ಜೈಲಿನಿಂದಲೇ ಆರಂಭವಾಗಲಿ: ಕೈದಿಗಳಿಗೆ ದಾವಣಗೆರೆ ಡಿ.ಸಿ ಕಿವಿಮಾತು

ವಾರ್ತಾಭಾರತಿವಾರ್ತಾಭಾರತಿ25 July 2018 11:02 PM IST
share
ನಿಮ್ಮ ಪರಿವರ್ತನೆಯ ಮೂಲ ಈ ಜೈಲಿನಿಂದಲೇ ಆರಂಭವಾಗಲಿ: ಕೈದಿಗಳಿಗೆ ದಾವಣಗೆರೆ ಡಿ.ಸಿ ಕಿವಿಮಾತು

ದಾವಣಗೆರೆ,ಜು.25: ಹಲವು ಕಾರಣಗಳಿಂದ ಬಂಧಿಯಾಗಿರುವ ನಿಮಗೆ ಪರಿವರ್ತನೆಯ ಗಾಳಿ ಇಲ್ಲಿಂದಲೇ ಬೀಸಬೇಕು. ನೀವು ಇಲ್ಲಿಂದ ಹೊರಹೋದ ನಂತರ ನಿಮ್ಮಲ್ಲಾಗಿರುವ ಬದಲಾವಣೆ ಎಲ್ಲರೂ ನೋಡುವಂತಾಗಬೇಕು. ನಿಮ್ಮ ಪರಿವರ್ತನೆಯ ಮೂಲ ಈ ಜೈಲಿನಿಂದಲೇ ಆರಂಭವಾಗಲಿ ಎಂದು ಜಿಲ್ಲಾಧಿಕಾರಿ ಡಿ.ಎಸ್ ರಮೇಶ್ ಕೈದಿಗಳಿಗೆ ಕಿವಿಮಾತು ಹೇಳಿದರು.

ಜಿಲ್ಲಾ ಕಾರಾಗೃಹದಲ್ಲಿ ಏರ್ಪಡಿಸಲಾಗಿದ್ದ ಗುಣೇಶ ಭಾರತೀಯ ಪ್ರತಿಷ್ಠಾನ ಹಾಗೂ ಜಿಲ್ಲಾ ಕಾರಾಗೃಹ ಇಲಾಖೆ ಆಶ್ರಯದಲ್ಲಿ ನಡೆದ ‘ನನ್ನ ಕಥೆ ನಿಮ್ಮ ಜೊತೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 'ಜೈಲಿನಿಂದ ಹೊರಗಿರುವ ನಾವು ಜೀವನದ ಒಂದು ಮುಖ ಮಾತ್ರ ನೋಡಿದ್ದೇವೆ. ಆದರೆ ನೀವು ಎರಡೂ ಮುಖ ನೋಡಿದ್ದೀರಿ. ಅನುಭವಿಸದ್ದೀರಿ. ಒಳ್ಳೆಯ ಹಾಗೂ ಕೆಟ್ಟದರ ನಿರ್ಧಾರ ನಮಗಿಂತ ನೀವು ಚೆನ್ನಾಗಿ ಮಾಡಬಲ್ಲಿರಿ. ಹಾಗಾಗಿ, ನೀವು ಮುಂದಿನ ದಿನಗಳಲ್ಲಿ ಒಳ್ಳೆಯವರಾಗಿ ಬಾಳುವ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡಿ. ನಾವು ಬದಲಾದರೆ ಸಮಾಜ ಬದಲಾಗುತ್ತದೆ. ನಾವೇ ಬದಲಾಗದೆ ಸಮಾಜ ಬದಲಿಸಲು ಸಾಧ್ಯವಿಲ್ಲ. ನಿಮ್ಮ ಪರಿವರ್ತನೆಯ ಮೂಲ ಜೈಲಿನಿಂದಲೇ ಆಗಲಿ ಎಂದರು.

ಶ್ರೀ ಸಾಣೆಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀ ಮಾತನಾಡಿ, ಎಲ್ಲರೂ ಒಂದಿಲ್ಲೊಂದು ಸಂದರ್ಭ ಮಾಡಿದ ತಪ್ಪನ್ನು ಸರಿಪಡಿಸಿಕೊಂಡು ಮುನ್ನಡೆದರೆ ಮಹಾತ್ಮನಾಗುತ್ತಾನೆ. ಇದಕ್ಕೆ ಸ್ಪಷ್ಟ ನಿದರ್ಶನ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಎಂದು ಹೇಳಿದರು. ಮಹಾತ್ಮ ಗಾಂಧೀಜಿ ಬಾಲ್ಯದಲ್ಲಿ ಮಾಡಿದ ತಪ್ಪು ತಿದ್ದಿಕೊಂಡು ಮುಂದೆಂದೂ ಅಂತಹ ತಪ್ಪಗಳನ್ನು ಮಾಡದಂತೆ ಸಕಾರಾತ್ಮಕ ಚಿಂತನೆ ಮಾಡುತ್ತಲೇ ಅವರು ಮಹಾತ್ಮರಾದರು ಎಂದರು. 

ಹಿರಿಯ ಸಿವಿಲ್ ನ್ಯಾಯಾಧೀಶ ಕೆಂಗಬಾಲಯ್ಯ ಮಾತನಾಡಿ, ಹಿಂದಿನಂತೆ ಈಗ ಒಟ್ಟು ಕುಟುಂಬಗಳಿಲ್ಲ. ಹೀಗಾಗಿ, ಮಕ್ಕಳಿಗೆ ಕಥೆ ಹೇಳುವ ಅಜ್ಜಿಯರೂ ಸಿಗುತ್ತಿಲ್ಲ. ಅಜ್ಜಿ ಹೇಳುವ ಕಥೆಗಳು ಮಕ್ಕಳನ್ನು ಸನ್ಮಾರ್ಗದತ್ತ ಕೊಂಡೊಯ್ಯುತ್ತಿದ್ದವು. ಸ್ವರ್ಗ ನರಕ ಪಾಪ ಪುಣ್ಯದ ಅರಿವು ನಮಗಿದೆ. ನಮಗೆ ಸ್ವರ್ಗ ಸಿಗಬೇಕು ಅಂದರೆ ಪುಣ್ಯದ ಕೆಲಸ ಮಾಡಬೇಕು. ಅಂದರೆ ನಮ್ಮ ಆತ್ಮ ಹೇಳಿದಂತೆ ನಾವು ನಡೆದುಕೊಳ್ಳಬೇಕು ಎಂದರು. 

ಇದಕ್ಕೂ ಮೊದಲು ಪಿ.ವಿ ಗುಣೇಶ್ ಭಾರತೀಯ ಹಲವು ಕಥೆಗಳನ್ನು ಮತ್ತು ತತ್ವಪದ ಹೇಳುವ ಮೂಲಕ ಕೈದಿಗಳಲ್ಲಿ ಆತ್ಮವಿಶ್ವಾಸ ತುಂಬಿದರು. ಜಿಲ್ಲಾ ಕಾರಾಗೃಹದ ಅಧೀಕ್ಷಕ ಕರಣ ಬಿ. ಕ್ಷತ್ರಿ ಅಧ್ಯಕ್ಷತೆ ವಹಿಸಿದ್ದರು. ಎಂ. ಬಿ ಸಂಗಮೇಶಗೌಡರು, ಬಿಇಓ ಪುಷ್ಪಲತ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X