Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಗರಿಷ್ಟ ವೆಯಕ್ತಿಕ ಸ್ಕೋರ್ ಗಳಿಸಿದ ಪವನ್...

ಗರಿಷ್ಟ ವೆಯಕ್ತಿಕ ಸ್ಕೋರ್ ಗಳಿಸಿದ ಪವನ್ ಶಾ

ಅಂಡರ್-19: ಎರಡನೇ ಯೂತ್ ಟೆಸ್ಟ್

ವಾರ್ತಾಭಾರತಿವಾರ್ತಾಭಾರತಿ25 July 2018 11:38 PM IST
share
ಗರಿಷ್ಟ ವೆಯಕ್ತಿಕ ಸ್ಕೋರ್ ಗಳಿಸಿದ ಪವನ್ ಶಾ

ಹಂಬನ್‌ಟೋಟ, ಜು.25: ಮಹಾರಾಷ್ಟ್ರದ ಯುವ ಬ್ಯಾಟ್ಸ್‌ಮನ್ ಪವನ್ ಶಾ ಶ್ರೀಲಂಕಾ ವಿರುದ್ಧದ ಎರಡನೇ ಹಾಗೂ ಅಂತಿಮ ಅಂಡರ್-19 ಯೂತ್ ಟೆಸ್ಟ್ ಪಂದ್ಯದಲ್ಲಿ 282 ರನ್ ಗಳಿಸಿದ್ದಾರೆ. ಅಂಡರ್-19 ಟೆಸ್ಟ್ ಪಂದ್ಯದಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್ ಗಳಿಸಿದ ಭಾರತದ ಮೊದಲ ಹಾಗೂ ವಿಶ್ವದ ಎರಡನೇ ಆಟಗಾರನೆಂಬ ಕೀರ್ತಿಗೆ ಭಾಜನರಾಗಿರುವ ಶಾ ಒಂದೇ ಓವರ್‌ನಲ್ಲಿ ಸತತ ಆರು ಬೌಂಡರಿಗಳನ್ನು ಸಿಡಿಸಿ ಗಮನ ಸೆಳೆದರು. ಪುಣೆಯ 18ರ ಹರೆಯದ ಬಲಗೈ ದಾಂಡಿಗನ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಭಾರತ ತಂಡ ಶ್ರೀಲಂಕಾ ವಿರುದ್ಧ ಮೊದಲ ಇನಿಂಗ್ಸ್‌ನಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 613 ರನ್ ಗಳಿಸಿ ಇನಿಂಗ್ಸ್ ಡಿಕ್ಲೇರ್ ಮಾಡಿದೆ. ಕೇವಲ 18 ರನ್‌ನಿಂದ ತ್ರಿಶತಕ ವಂಚಿತರಾದ ಶಾ 332 ಎಸೆತಗಳನ್ನು ಎದುರಿಸಿ 33 ಬೌಂಡರಿ ಹಾಗೂ ಒಂದು ಸಿಕ್ಸರ್ ಸಿಡಿಸಿದರು. ಏಳು ಗಂಟೆಗಳ ಕಾಲ ಕ್ರೀಸ್‌ನಲ್ಲಿದ್ದ ಶಾ ಆಸ್ಟ್ರೇಲಿಯದ ಕ್ಲಿಂಟನ್ ಪೀಕ್ಸ್ ದಾಖಲೆ ಮುರಿಯಲು ವಿಫಲರಾದರು. ಕ್ಲಿಂಟನ್ 1995ರಲ್ಲಿ ಅಂಡರ್-19 ಪಂದ್ಯದಲ್ಲಿ ಔಟಾಗದೆ 304 ರನ್ ಗಳಿಸಿದ್ದಾರೆ. ಈ ದಾಖಲೆಯನ್ನು ಈವರೆಗೆ ಯಾರಿಗೂ ಮುರಿಯಲು ಸಾಧ್ಯವಾಗಿಲ್ಲ.

ಶಾ ಇನಿಂಗ್ಸ್‌ನ 108ನೇ ಓವರ್‌ನಲ್ಲಿ ಶ್ರೀಲಂಕಾದ ಎಡಗೈ ವೇಗದ ಬೌಲರ್ ವಿಚಿತ್ರ ಪೆರೇರ ವಿರುದ್ಧ ಸತತ ಆರು ಬೌಂಡರಿಗಳನ್ನು ಸಿಡಿಸಿದರು. ಇದು ಶಾ ಅವರ ಇನಿಂಗ್ಸ್‌ನ ಮುಖ್ಯ ಹೈಲೈಟ್ಸ್ ಎನಿಸಿಕೊಂಡಿದೆ. 1982ರಲ್ಲಿ ಸಂದೀಪ್ ಪಾಟೀಲ್ ಮ್ಯಾಂಚೆಸ್ಟರ್‌ನಲ್ಲಿ ಬಾಬ್ ವಿಲ್ಲಿಸ್ ವಿರುದ್ಧ ಒಂದೇ ಓವರ್‌ನಲ್ಲಿ ಸತತ 6 ಬೌಂಡರಿಗಳನ್ನು ಬಾರಿಸಿದ್ದರು. ವಿಲ್ಲಿಸ್ ಒಂದು ನೋ-ಬಾಲ್ ಸಹಿತ ಓವರ್‌ವೊಂದರಲ್ಲಿ ಏಳು ಎಸೆತಗಳನ್ನು ಎಸೆದಿದ್ದರು.

ದ್ವಿಶತಕ ಸಿಡಿಸಿದ ಪವನ್ ಶಾ ಆರಂಭಿಕ ಆಟಗಾರ ಅಥರ್ವ(177) ಅವರೊಂದಿಗೆ ಎರಡನೇ ವಿಕೆಟ್‌ಗೆ 263 ರನ್ ಹಾಗೂ ನಿಖಿಲ್ ವಡೇರ(64) ಅವರೊಂದಿಗೆ 167 ರನ್ ಜೊತೆಯಾಟ ನಡೆಸಿದ್ದರು.

ಭಾರತದ ಬೃಹತ್ ಮೊತ್ತಕ್ಕೆ ಉತ್ತರವಾಗಿ ಶ್ರೀಲಂಕಾ ಎರಡನೇ ದಿನದಾಟದಂತ್ಯಕ್ಕೆ 4 ವಿಕೆಟ್‌ಗಳ ನಷ್ಟಕ್ಕೆ 140 ರನ್ ಗಳಿಸಿದೆ. ಭಾರತದ ಎಡಗೈ ವೇಗದ ಬೌಲರ್ ಮೋಹಿತ್ ಜಾಂಗ್ರಾ(3-43) ಯಶಸ್ವಿ ಬೌಲರ್ ಎನಿಸಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X