Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಪ್ಪ: ನಾಪತ್ತೆಯಾಗಿದ್ದ ವಿದ್ಯಾರ್ಥಿ...

ಕೊಪ್ಪ: ನಾಪತ್ತೆಯಾಗಿದ್ದ ವಿದ್ಯಾರ್ಥಿ ಪ್ರೀತಂ ಶವ ಪತ್ತೆ

ವಾರ್ತಾಭಾರತಿವಾರ್ತಾಭಾರತಿ26 July 2018 8:06 PM IST
share
ಕೊಪ್ಪ: ನಾಪತ್ತೆಯಾಗಿದ್ದ ವಿದ್ಯಾರ್ಥಿ ಪ್ರೀತಂ ಶವ ಪತ್ತೆ

ಕೊಪ್ಪ,ಜು.26: ಸೋಮವಾರ ಶಾಲೆಯಿಂದ ಮನೆಗೆ ಹೋಗುವಾಗ ನಾಪತ್ತೆಯಾಗಿದ್ದ ಹರಿಹರಪುರ ಪ್ರೌಢಶಾಲಾ ಹತ್ತನೇ ತರಗತಿ ವಿದ್ಯಾರ್ಥಿ ಭಂಡಿಗಡಿ ಅರೇಕಲ್ ನಿವಾಸಿ ಎ.ಎಲ್.ಪ್ರೀತಂ(15) ಶವ ಗುರುವಾರ ಬೆಳಿಗ್ಗೆ ಅಂಬಳಿಕೆ ಹಳ್ಳದಲ್ಲಿ ಪತ್ತೆಯಾಗಿದೆ. ಆದರೆ ನಾಗಲಾರಪುರ ತುಂಗಾನದಿ ಸೇತುವೆ ಬಳಿ ಸ್ಕೂಟಿ ಇಟ್ಟು ನಾಪತ್ತೆಯಾಗಿದ್ದ ಕಿರಣ್ ಕುಮಾರ್ ಕುರಿತು ಈವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ.

ಬೆಳಿಗ್ಗೆ 8:30 ರ ಹೊತ್ತಿಗೆ ಸ್ಥಳೀಯ ವ್ಯಕ್ತಿಯೊಬ್ಬರಿಗೆ ಅಂಬಳಿಕೆ ಹಳ್ಳದಲ್ಲಿ ಮರವೊಂದರ ಮುರಿದ ಕೊಂಬೆಯಡಿ ಶವ ಕಾಣಿಸಿಕೊಂಡಿದ್ದು, ಕೂಡಲೇ ಹರಿಹರಪುರ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪಿಎಸ್‍ಐ ಸೋಮಶೇಖರ್ ನೇತೃತ್ವದ ಪೊಲೀಸ್ ತಂಡ ಹಾಗೂ ಕುಟುಂಬ ಸದಸ್ಯರು ಶವದ ಮೇಲಿದ್ದ ಬಟ್ಟೆಯ ಆಧಾರದಲ್ಲಿ ಮೃತದೇಹವನ್ನು ಪ್ರೀತಂ ಶವವೆಂದು ಗುರುತಿಸಿದ್ದಾರೆ.

ಹಳ್ಳದ ಪಕ್ಕದಲ್ಲಿ ಶಾಲಾ ಬ್ಯಾಗ್ ಮತ್ತು ಚಪ್ಪಲಿ ಕಂಡು ಬಂದ ಹಿನ್ನೆಲೆಯಲ್ಲಿ ಸೋಮವಾರ ಸಂಜೆ, ಮಂಗಳವಾರ ಮತ್ತು ಬುಧವಾರ ಇಡೀ ದಿನ ಅಂಬಳಿಕೆ ಹಳ್ಳ ಹಾಗೂ ತುಂಗಾ ನದಿಯಲ್ಲಿ ಪ್ರೀತಂಗಾಗಿ ಹುಡುಕಾಟ ನಡೆಸಲಾಗಿತ್ತು. ಬಾಳೆಹೊಳೆಯ ಮುಳುಗುತಜ್ಞ ಭಾಸ್ಕರ್, ನರಸಿಂಹರಾಜಪುರದ ರಮೇಶ್ ಮತ್ತು ತಂಡದವರು 2 ಉಕ್ಕಡದ ಮೂಲಕ ಶೋಧಕಾರ್ಯ ನಡೆಸಲಾಗಿತ್ತು. ಹರಿಹರಪುರ ಪೊಲೀಸ್, ಗೃಹರಕ್ಷದಳ, ಕೊಪ್ಪ ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಸಹಕಾರ ನೀಡಿದ್ದರು. 

ಗುರುವಾರ ಹರಿಹರಪುರ ಸರ್ಕಾರಿ ಆಸ್ಪತ್ರೆಯಲ್ಲಿ ಶವಪರೀಕ್ಷೆ ನಡೆಸಿ ಕುಟುಂಬದವರಿಗೆ ಬಿಟ್ಟುಕೊಡಲಾಯಿತು. ಮಧ್ಯಾಹ್ನ ಭಂಡಿಗಡಿಯ ಅರೆಕಲ್‍ನಲ್ಲಿರುವ ಹಿಂದೂರುದ್ರಭೂಮಿಯಲ್ಲಿ ಮೃತ ಪ್ರೀತಂನ ಶವ ಸಂಸ್ಕಾರ ನಡೆಸಲಾಯಿತು. ಮೃತನ ಗೌರವಾರ್ಥ ಗುರುವಾರ ಪ್ರೀತಂ ವ್ಯಾಸಂಗ ಮಾಡುತ್ತಿದ್ದ ಹರಿಹರಪುರದ ಸಚ್ಚಿದಾನಂದ ಸರಸ್ವತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ರಜೆ ಘೋಷಿಸಲಾಗಿತ್ತು.

ಕೊಪ್ಪ ಕಾಚಗಲ್‍ನ ನಾರಾಯಣ ಪೂಜಾರಿ ಎಂಬವರ ಮಗ ಕಿರಣ್‍ಕುಮಾರ್(22) ಸೋಮವಾರ ಬೆಳಿಗ್ಗೆಯಿಂದ ನಾಪತ್ತೆಯಾಗಿದ್ದು, 'ತಾನು ಸ್ಕೂಟಿಯಲ್ಲಿ ಹೋಗುತ್ತಿದ್ದು ನಾಗಲಾರಪುರ ತುಂಗಾನದಿ ಸೇತುವೆ ಬಳಿ ಸ್ಕೂಟಿ ನಿಲ್ಲಿಸಿರುತ್ತೇನೆ. ವಾಪಸ್ಸು ತಗೊಂಡು ಬನ್ನಿ, ತನ್ನನ್ನು ಹುಡುಕಬೇಡಿ. ವಾಪಸ್ಸು ಬರುವುದಿಲ್ಲ' ಎಂದು ಮನೆಯಲ್ಲಿ ಚೀಟಿ ಬರೆದಿಟ್ಟಿದ್ದ. ಮದ್ಯಾಹ್ನದ ಹೊತ್ತಿಗೆ ಚೀಟಿಯನ್ನು ಗಮನಿಸಿದ ಮನೆಮಂದಿ ಕೂಡಲೇ ತುಂಗಾನದಿ ಸೇತುವೆ ಬಳಿ ಬಂದು ನೋಡಿದಾಗ ಸ್ಕೂಟಿ ಕಂಡು ಬಂದಿದೆ. ನರಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಕಿರಣ್‍ಕುಮಾರ್ ಜೀವನದಲ್ಲಿ ಜಿಗುಪ್ಸೆಗೊಂಡು ನದಿಗೆ ಹಾರಿರಬಹುದು ಎಂಬ ಅನುಮಾನದ ಮೇಲೆ ಸೋಮವಾರದಿದಂದಲೂ ಹುಡುಕಾಟ ನಡೆದಿದೆ. ತುಂಗಾನದಿಯಲ್ಲಿ ಐದಾರು ಕಿ.ಮೀ. ವರೆಗೆ ಉಕ್ಕಡ ಬಳಸಿ ಹುಡುಕಾಟ ನಡೆಸಿದರೂ ಪ್ರಯೋಜನವಾಗಿಲ್ಲ. ಗುರುವಾರ ಸಂಜೆವರೆಗೆ ಯಾವುದೇ ಸುಳಿವು ಸಿಗದ ಹಿನ್ನೆಲೆಯಲ್ಲಿ ಶೋಧಕಾರ್ಯವನ್ನು ಶುಕ್ರವಾರಕ್ಕೆ ಮುಂದೂಡಲಾಯಿತು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X