Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಎಸ್ಸಿ, ಎಸ್ಟಿ ಮೀಸಲಾತಿ ಪರಿಪೂರ್ಣವಾಗಿ...

ಎಸ್ಸಿ, ಎಸ್ಟಿ ಮೀಸಲಾತಿ ಪರಿಪೂರ್ಣವಾಗಿ ಜಾರಿಯಾಗಿಲ್ಲ: ಬಂಜಗೆರೆ ಜಯಪ್ರಕಾಶ್

ವಾರ್ತಾಭಾರತಿವಾರ್ತಾಭಾರತಿ26 July 2018 9:44 PM IST
share
ಎಸ್ಸಿ, ಎಸ್ಟಿ ಮೀಸಲಾತಿ ಪರಿಪೂರ್ಣವಾಗಿ ಜಾರಿಯಾಗಿಲ್ಲ: ಬಂಜಗೆರೆ ಜಯಪ್ರಕಾಶ್

ಬೆಂಗಳೂರು, ಜು.26: ದೇಶದಲ್ಲಿ ನ್ಯಾಯಾಂಗ ವ್ಯವಸ್ಥೆ ಸೇರಿದಂತೆ ಹಲವು ಕ್ಷೇತ್ರದಲ್ಲಿ ಉನ್ನತ ಸ್ಥಾನದಲ್ಲಿರುವ ವ್ಯಕ್ತಿಗಳು ಮೀಸಲಾತಿ ವಿರುದ್ಧವಾಗಿದ್ದಾರೆ. ಹೀಗಾಗಿ ಎಸ್ಸಿ, ಎಸ್ಟಿ ಸಮುದಾಯಕ್ಕೆ ಇಂದಿಗೂ ಮೀಸಲಾತಿ ಪರಿಪೂರ್ಣವಾಗಿ ಜಾರಿಯಾಗಿಲ್ಲವೆಂದು ಸಂಸ್ಕೃತಿ ಚಿಂತಕ ಬಂಜಗೆರೆ ಜಯಪ್ರಕಾಶ್ ಆತಂಕ ವ್ಯಕ್ತಪಡಿಸಿದ್ದಾರೆ.

ಗುರುವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ನಗರದ ಎನ್‌ಜಿಒ ಸಭಾಂಗಣದಲ್ಲಿ ಮೀಸಲಾತಿ ಜನಕ ಛತ್ರಪತಿ ಶಾಹುಮಹಾರಾಜ್ ಜಯಂತಿ ಅಂಗವಾಗಿ ಆಯೋಜಿಸಿದ್ದ ‘ಸಮ್ಮಿಶ್ರ ಸರಕಾರದಲ್ಲಿ ಶೋಷಿತ ಸಮುದಾಯಗಳು ಮತ್ತು ಸಾಮಾಜಿಕ ನ್ಯಾಯ’ ಕುರಿತ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಭಡ್ತಿ ಮೀಸಲಾತಿ ರದ್ದು ಪಡಿಸಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರೆ ತೀರ್ಪು ನೀಡುತ್ತಾರೆ. ಉನ್ನತ ಸ್ಥಾನದಲ್ಲಿರುವವರು ದೇಶದ ಸಾಮಾಜಿಕ ಪರಿಸ್ಥಿತಿ ಸರಿಯಾಗಿ ಗ್ರಹಿಸದೆ, ಸಾಮಾಜಿಕ ನ್ಯಾಯದ ವಿರುದ್ಧವಾಗಿದ್ದರೆ, ಕೆಳ ಹಂತದ ಅಧಿಕಾರಿಗಳು ಇದನ್ನು ದುರುಪಯೋಗ ಪಡಿಸಿಕೊಳ್ಳುವುದರಲ್ಲಿ ಯಾವುದೆ ಅನುಮಾನವಿಲ್ಲ. ಹೀಗಾಗಿ ನ್ಯಾಯಾಲಯ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಉನ್ನತ ಸ್ಥಾನದಲ್ಲಿರುವವರು ಎಚ್ಚರಿಕೆಯಿಂದ ತೀರ್ಮಾನಗಳನ್ನು ತೆಗೆದುಕೊಳ್ಳಬೇಕೆಂದು ಅವರು ಮನವಿ ಮಾಡಿದರು.

ಎಸ್ಸಿ, ಎಸ್ಟಿ ಸಮುದಾಯಕ್ಕೆ ಸಾವಿರಾರು ವರ್ಷಗಳಿಂದಲೂ ಅನ್ಯಾಯವಾಗಿದೆ. ಇದಕ್ಕೆ ಪ್ರತಿಕಾರವಾಗಿ ಅವರೆಂದಿಗೂ ಹಿಂಸಾಚಾರಕ್ಕೆ ಇಳಿದಿಲ್ಲ. ಸುಪ್ರೀಂ ಕೋರ್ಟ್ ಭಡ್ತಿ ಮೀಸಲಾತಿ ರದ್ದು ಪಡಿಸಿ ತೀರ್ಪು ನೀಡಿದ್ದರೂ ಶಾಂತಿಯುತವಾಗಿ ಒತ್ತಾಯಿಸಿದ್ದಾರೆ. ಆದರೆ, ಭ್ರಷ್ಟಾಚಾರ, ಅನೀತಿ ನಡೆಸಿದ ಸ್ವಾಮೀಜಿಗಳ ವಿರುದ್ಧ ನ್ಯಾಯಾಲಯಗಳು ತೀರ್ಪು ನೀಡಿದರೆ ವ್ಯಾಪಕ ಹಿಂಸಾಚಾರ ನಡೆಯುತ್ತದೆ. ದೇಶದಲ್ಲಿ ಇಂತಹ ವಿಷಮಯ ಪರಿಸ್ಥಿತಿಯಿರುವಾಗ ಗೌರವಯುಕ್ತ ಸ್ಥಾನದಲ್ಲಿರುವವರು ಸಾಮಾಜಿಕ ನ್ಯಾಯದ ಪರವಾಗಿರಬೇಕು ಎಂದು ಅವರು ಆಶಿಸಿದರು.

ಕೆಲ ಬ್ಯಾಂಕ್‌ಗಳಲ್ಲಿ ದಲಿತ ಸಮುದಾಯದ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ಶೋಷಣೆ, ದಬ್ಬಾಳಿಕೆ ನಡೆಯುತ್ತಿದೆ. ಅಪಾರ ಶ್ರಮ, ಶ್ರದ್ಧೆಯಿಂದ ಉನ್ನತ ಸ್ಥಾನಕ್ಕೇರುವ ದಲಿತ ಸಮುದಾಯದ ಅಧಿಕಾರಿಗಳು, ನೌಕರರನ್ನು ಸಮಾನತೆಯಿಂದ ಕಾಣುವಂತಹ ವಾತಾವರಣ ನಿರ್ಮಾಣವಾಗಬೇಕು ಎಂದು ಅವರು ಅಭಿಪ್ರಾಯಿಸಿದರು.

ದಸಂಸ ರಾಜ್ಯ ಸಂಚಾಲಕ ಮೋಹನ್‌ರಾಜ್ ಮಾತನಾಡಿ, ಈ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಶೋಷಿತ ಸಮುದಾಯಗಳ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿತು. ಆದರೆ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರ ಈ ಯೋಜನೆಗಳನ್ನು ಮುಂದುವರೆಸುವಂತಹ ಲಕ್ಷಣಗಳು ಕಾಣುತ್ತಿಲ್ಲ ಎಂದರು.

ಕಾರ್ಯಕ್ರಮದಲ್ಲಿ ದಸಂಸ ಸಂಚಾಲಕ ಎಂ.ಸಿ.ನಾರಾಯಣ್, ಪೆರಿಯಾರ್ ವಿಚಾರವಾದಿ ಕಲೈಸೆಲ್ವಿ, ಪ್ರಾಧ್ಯಾಪಕ ಡಾ.ಲಿಂಗಣ್ಣ ಜಂಗಮರಹಳ್ಳಿ, ಬಸವರಾಜ್ ಕೌತಾಳ್ ಸೇರಿ ಪ್ರಮುಖರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X