Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋಮಾಂಸ ತಿನ್ನುವ ದೇಶಗಳಲ್ಲಿ ಹಸುಗಳನ್ನು...

ಗೋಮಾಂಸ ತಿನ್ನುವ ದೇಶಗಳಲ್ಲಿ ಹಸುಗಳನ್ನು ಭಾರತಕ್ಕಿಂತ ಚೆನ್ನಾಗಿ ನೋಡಿಕೊಳ್ಳುತ್ತಾರೆ: ಪ್ರತಾಪ್‌ಸಿಂಗ್ ರಾಣೆ

ವಾರ್ತಾಭಾರತಿವಾರ್ತಾಭಾರತಿ26 July 2018 9:46 PM IST
share
ಗೋಮಾಂಸ ತಿನ್ನುವ ದೇಶಗಳಲ್ಲಿ ಹಸುಗಳನ್ನು ಭಾರತಕ್ಕಿಂತ ಚೆನ್ನಾಗಿ ನೋಡಿಕೊಳ್ಳುತ್ತಾರೆ: ಪ್ರತಾಪ್‌ಸಿಂಗ್ ರಾಣೆ

ಪಣಜಿ, ಜು.26: ಗೋಮಾಂಸ ತಿನ್ನುವ ರಾಷ್ಟ್ರಗಳಲ್ಲಿ ದನಗಳನ್ನು ಭಾರತಕ್ಕಿಂತ ಉತ್ತಮವಾಗಿ ನೋಡಿಕೊಳ್ಳುತ್ತಾರೆ ಎಂದು ಗೋವಾದ ಮಾಜಿ ಮುಖ್ಯಮಂತ್ರಿ ಪ್ರತಾಪ್‌ಸಿಂಗ್ ರಾಣೆ ತಿಳಿಸಿದ್ದಾರೆ. ನಾವು ಹಸುಗಳನ್ನು ಪ್ರೀತಿಸಬಹುದು, ಆದರೂ ಭಾರತವು ಇಂದಿಗೂ ಹಸುಗಳನ್ನು ಅತ್ಯಂತ ಕೆಟ್ಟದಾಗಿ ನೋಡಿಕೊಳ್ಳುವ ರಾಷ್ಟ್ರವಾಗಿಯೇ ಪರಿಗಣಿಸಲ್ಪಟ್ಟಿದೆ. ಗೋಮಾಂಸ ತಿನ್ನುವ ರಾಷ್ಟ್ರಗಳಲ್ಲಿ ಹಸುಗಳನ್ನು ಉತ್ತಮವಾಗಿ ಸಾಕಲಾಗುತ್ತಿದೆ. ಆದರೆ ನಮ್ಮಲ್ಲಿ ದನಗಳನ್ನು ಬೀದಿ ಬೀದಿ ಅಲೆಯಲು ಬಿಡಲಾಗುತ್ತದೆ. ಹಸುಗಳು ಕಸ ಕಡ್ಡಿಗಳನ್ನು, ಪ್ಲಾಸ್ಟಿಕ್ ವಸ್ತುಗಳನ್ನು ತಿನ್ನುತ್ತಾ ರಸ್ತೆ ಅಪಘಾತಕ್ಕೆ ಬಲಿಯಾಗುತ್ತಿವೆ ಎಂದು ರಾಜ್ಯ ವಿಧಾನಸಭೆಯಲ್ಲಿ ಬುಧವಾರ ಮಾತನಾಡುತ್ತಿದ್ದ ಕಾಂಗ್ರೆಸ್ ಶಾಸಕ ರಾಣೆ ಹೇಳಿದರು. ಅಲ್ಲದೆ ಉಪಯೋಗವಿಲ್ಲದ ಹಸುಗಳಿಂದ ಲಾಭ ಪಡೆಯುವ ಆಯ್ಕೆಯನ್ನು ರೈತರಿಗೆ ನೀಡಬೇಕು ಎಂದವರು ತಿಳಿಸಿದರು. ಹಾಲು ಕರೆಯದ ಹಸುಗಳನ್ನು ಏನು ಮಾಡುವುದು ಎಂಬುದೇ ಹೈನುಗಾರರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಯಾಗಿದೆ. ಅವುಗಳನ್ನು ಮಾರುವಂತಿಲ್ಲ ಎಂದಾದರೆ ಬೀದಿಯಲ್ಲಿ ಬಿಡಬೇಕಾಗುತ್ತದೆ. ಹೆಚ್ಚಿನ ರೈತರು ಮಾಡುತ್ತಿರುವುದೂ ಇದನ್ನೇ.ಹೀಗೆ ಬೀದಿಯಲ್ಲಿ ತಿರುಗುವ ದನಗಳು ಅಪಘಾತಕ್ಕೆ ಬಲಿಯಾಗುತ್ತಿವೆ ಎಂದು ರಾಣೆ ಹೇಳಿದರು.

   ರಾಣೆ ಹೇಳಿಕೆಗೆ ಬಿಜೆಪಿ ಶಾಸಕ ಮೈಕೆಲ್ ಲೋಬೊರವರ ಅಚ್ಚರಿಯ ಬೆಂಬಲ ದೊರಕಿತು. ಕಾನೂನುಬ್ಧವಾಗಿ ನಡೆಯುವ ಗೋಮಾಂಸದ ವ್ಯವಹಾರಕ್ಕೆ ರಕ್ಷಣೆ ಒದಗಿಸಲು ವಿಫಲವಾದ ತಮ್ಮದೇ ಸರಕಾರವನ್ನು ಲೋಬೋ ಪ್ರಶ್ನಿಸಿದರು. ಕರ್ನಾಟಕದ ಗಡಿಭಾಗದಲ್ಲಿ ನಿಂತಿರುವ ಗೋ ರಕ್ಷಕರು ನಮ್ಮ ರಾಜ್ಯಕ್ಕೆ ಗೋಮಾಂಸ ತರುವುದಕ್ಕೆ ಅಡ್ಡಿ ಪಡಿಸುತ್ತಿದ್ದಾರೆ. ಇವರಲ್ಲಿ ಕೆಲವರು ಗೋಮಾಂಸಕ್ಕೆ ಫಿನಾಯಿಲ್ ಕೂಡಾ ಬೆರೆಸುತ್ತಿದ್ದಾರೆ ಎಂದವರು ಆಕ್ರೋಶ ವ್ಯಕ್ತಪಡಿಸಿದರು. ಸರಕಾರದ ಅಧಿಕೃತ ಕಸಾಯಿಖಾನೆ ಗೋವಾ ಮಾಂಸ ಸಂಕೀರ್ಣ ಬಾಗಿಲು ಮುಚ್ಚಿದೆ. ಗೋವಾದಲ್ಲಿ ಮಾಂಸ ತಿನ್ನುವವರು ಹಲವರಿದ್ದಾರೆ. ನಮ್ಮ ಹಬ್ಬದ ಸಂದರ್ಭದಲ್ಲಿ ಇಲ್ಲಿ ಮಾಂಸದ ಕೊರತೆಯಿರುತ್ತದೆ. ಕರ್ನಾಟಕ ಮತ್ತು ಮಹಾರಾಷ್ಟ್ರದಿಂದ ಗೋಮಾಂಸ ತರುವುದು ನಮಗೆ ಬೇಡವಾದರೆ ನಮ್ಮಲ್ಲಿರುವ ಅಧಿಕೃತ ಕಸಾಯಿಖಾನೆ ಕಾರ್ಯಾರಂಭ ಮಾಡಲು ಕ್ರಮ ತೆಗೆದುಕೊಳ್ಳಬೇಕು. ಗೋವಾದಲ್ಲಿ ಗೋಮಾಂಸ ತಿನ್ನುವವರು ಹಲವರಿದ್ದಾರೆ. ಅವರನ್ನು ನೀವು ತಡೆಯಲಾಗದು ಎಂದು ಲೋಬೋ ಹೇಳಿದರು.

 ಗೋವಾದಲ್ಲಿ ಪ್ರತೀ ದಿನ ಸುಮಾರು 20 ಟನ್‌ಗಳಷ್ಟು ಗೋಮಾಂಸವನ್ನು ಸೇವಿಸಲಾಗುತ್ತಿದೆ. ಗೋಮಾಂಸ ತಿನ್ನುವವರಲ್ಲಿ ಶೇ.26ರಷ್ಟು ಕ್ಯಾಥೊಲಿಕ್, ಶೇ.11ರಷ್ಟು ಮುಸ್ಲಿಮರು ಹಾಗೂ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಸೇರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X