Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿಂಸಾಚಾರದ ‘ಶ್ರೇಯ’ ಬಿಜೆಪಿ ಪಡೆಯಬೇಕು:...

ಹಿಂಸಾಚಾರದ ‘ಶ್ರೇಯ’ ಬಿಜೆಪಿ ಪಡೆಯಬೇಕು: ಶಿವಸೇನೆ

ಮರಾಠ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ26 July 2018 9:53 PM IST
share
ಹಿಂಸಾಚಾರದ ‘ಶ್ರೇಯ’ ಬಿಜೆಪಿ ಪಡೆಯಬೇಕು: ಶಿವಸೇನೆ

ಮುಂಬೈ, ಜು.26: ತನ್ನ ವಿವಿಧ ಯೋಜನೆಗಳ ಶ್ರೇಯ(ಗೌರವ)ವನ್ನು ಪಡೆಯಲು ಯಾವಾಗಲೂ ತುದಿಗಾಲಲ್ಲಿ ನಿಲ್ಲುವ ಬಿಜೆಪಿ, ಮರಾಠರ ಪ್ರತಿಭಟನೆ ಸಂದರ್ಭ ನಡೆದ ಹಿಂಸಾಚಾರದ ಗೌರವವನ್ನೂ ಪಡೆಯಬೇಕು ಎಂದು ಶಿವಸೇನೆ ಹೇಳಿದೆ.

ಸಮಸ್ಯೆ ಎದುರಾದಾಗ ಅದನ್ನು ಮರೆಮಾಚಿಸಲು ಮುಂದಾಗುವ ರಾಜ್ಯ ಸರಕಾರದ ನೀತಿಯಿಂದಾಗಿ ಹಿಂಸಾಚಾರ ಭುಗಿಲೆದ್ದಿದೆ ಎಂದಿರುವ ಶಿವಸೇನೆ, ಗಲಭೆ ಸ್ಪೋಟಿಸಿದಾಗ ಮುಖ್ಯಮಂತ್ರಿ ಸ್ಥಳದಿಂದ ನಾಪತ್ತೆಯಾದರು ಎಂದು ಟೀಕಿಸಿದೆ.

ಬೀಡ್ ಜಿಲ್ಲೆಯ ಪಾರ್ಲಿ ಎಂಬಲ್ಲಿ ಕೆಲವು ಮಂದಿ ಪ್ರತಿಭಟನೆ ಆರಂಭಿಸಿದಾಗಲೇ ಮುಖ್ಯಮಂತ್ರಿ ಅವರೊಂದಿಗೆ ಮಾತುಕತೆಗೆ ಮುಂದಾಗಿದ್ದರೆ ಬಳಿಕದ ಘಟನೆಗಳು ನಡೆಯುತ್ತಿರಲಿಲ್ಲ. ಆದರೆ ಸರಕಾರದ ನಿಲುವಿಗೆ ರಾಜ್ಯದ ಜನತೆ ಬೆಲೆ ತೆತ್ತಿದ್ದಾರೆ ಎಂದು ಪಕ್ಷದ ಮುಖವಾಣಿ ‘ಸಾಮ್ನ’ದ ಸಂಪಾದಕೀಯ ಬರಹದಲ್ಲಿ ತಿಳಿಸಲಾಗಿದೆ.

 ಮರಾಠ ಪ್ರತಿಭಟನೆ ಹಿಂಸೆಯ ರೂಪಕ್ಕೆ ತಿರುಗುತ್ತಿದ್ದಂತೆ ರಾಜ್ಯದಲ್ಲಿ ಅರಾಜಕತೆಯ ಪರಿಸ್ಥಿತಿ ನೆಲೆಸಿತ್ತು. ಇದೇ ವೇಳೆಗೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಎಲ್ಲಿದ್ದಾರೆ ಎಂಬುದೇ ಪತ್ತೆಯಾಗಿರಲಿಲ್ಲ. ಮರಾಠರ ಬೇಡಿಕೆ ಭಾವನಾತ್ಮಕವಾಗಿದ್ದ ಹಾಗೂ ಇದೊಂದು ಪ್ರತಿಷ್ಠೆಯ ವಿಷಯವಾಗಿದ್ದರಿಂದ, ಅಂತಿಮ 24 ಗಂಟೆಯಲ್ಲಿ ಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸರಿಗೆ ಸಾಧ್ಯವಾಗಲಿಲ್ಲ. ಪ್ರತಿಭಟನಾಕಾರರು ವಾಹನಗಳಿಗೆ ಬೆಂಕಿ ಹಚ್ಚುತ್ತಿದ್ದಾಗ ಸರಕಾರ ಓಡಿ ಹೋಗಿದ್ದೇಕೆ ಎಂಬುದನ್ನು ಮಹಾರಾಷ್ಟ್ರ ತಿಳಿದುಕೊಳ್ಳಬೇಕಿದೆ ಎಂದು ‘ಸಾಮ್ನ’ದ ಲೇಖನದಲ್ಲಿ ತಿಳಿಸಲಾಗಿದೆ.

 70,000 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಸರಕಾರದ ನಿರ್ಧಾರವೂ ಹಿಂಸಾಚಾರಕ್ಕೆ ಕಾರಣವಾಗಿದೆ. ಮೀಸಲಾತಿ ಇಲ್ಲದ ಕಾರಣ ತಮಗೆ ಉದ್ಯೋಗ ನಷ್ಟವಾಗುತ್ತದೆ ಎಂಬ ಭೀತಿಯಿಂದ ಸಹಜವಾಗಿಯೇ ಪ್ರತಿಭಟನೆ, ಹಿಂಸಾಚಾರ ನಡೆಯುತ್ತದೆ. ಮರಾಠ ಸಮುದಾಯದವರಿಗಾಗಿ ಫಡ್ನವೀಸ್ ಮತ್ತವರ ಸಹೋದ್ಯೋಗಿಗಳು ರೂಪಿಸಿರುವ ಕಾರ್ಯನೀತಿಗಳನ್ನು ಕಾತರದಿಂದ ಎದುರು ನೋಡುತ್ತಿರುವುದಾಗಿ ಶಿವಸೇನೆ ತಿಳಿಸಿದೆ. ಕಳೆದ ವಾರ ರಾಜ್ಯದ ವಿಧಾನಸಭೆಯಲ್ಲಿ ಹೇಳಿಕೆ ನೀಡಿದ್ದ ಫಡ್ನವೀಸ್, ಬಾಂಬೆ ಹೈಕೋರ್ಟ್ ಮರಾಠ ಸಮುದಾಯದವರಿಗೆ ಮೀಸಲಾತಿಗೆ ಅವಕಾಶ ನೀಡಿದರೆ, 72,000 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಸಂದರ್ಭ ಶೇ.16ರಷ್ಟು ಮೀಸಲಾತಿಯಡಿ ಮರಾಠಿ ಅಭ್ಯರ್ಥಿಗಳನ್ನು ಸರಕಾರ ನೇಮಕ ಮಾಡಿಕೊಳ್ಳಲಿದೆ ಎಂದು ತಿಳಿಸಿದ್ದರು.

ಒಂದು ವೇಳೆ ಮೀಸಲಾತಿಯ ಕುರಿತು ಹೈಕೋರ್ಟ್‌ನ ತೀರ್ಪಿನ ಮೊದಲೇ 72,000 ಹುದ್ದೆಗಳನ್ನು ಭರ್ತಿ ಮಾಡಿಕೊಂಡರೂ, ಮರಾಠಿ ಅಭ್ಯರ್ಥಿಗಳನ್ನು ಹಿಂಬಾಕಿ(ಬ್ಯಾಕ್‌ಲಾಗ್) ಕೋಟಾದಡಿ ನೇಮಕಾತಿ ಮಾಡಿಕೊಳ್ಳಲಾಗುವುದು. ಆದ್ದರಿಂದ ಸಮುದಾಯಕ್ಕೆ ಖಂಡಿತಾ ಅನ್ಯಾಯವಾಗದು. ಆದರೆ ಕೆಲವು ವ್ಯಕ್ತಿಗಳು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಫಡ್ನವೀಸ್ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಶಿವಸೇನೆ, ಮರಾಠರಿಗೆ ಮೀಸಲಾತಿ ನೀಡುವ ಘೋಷಣೆಯ ಎಲ್ಲಾ ಶ್ರೇಯವನ್ನು ಬಿಜೆಪಿ ಪಡೆಯಲಿ. ಆದರೆ ಇದರ ಜೊತೆಗೆ, ಹಿಂಸಾಚಾರದ ಶ್ರೇಯವನ್ನೂ ಅವರು ಪಡೆಯಲು ಸಿದ್ಧರಾಗಬೇಕು ಎಂದು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X