Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. "ಯಾಗಗಳು ಶಕ್ತಿಶಾಲಿಯೆಂದಾದರೆ ದೇಶದ...

"ಯಾಗಗಳು ಶಕ್ತಿಶಾಲಿಯೆಂದಾದರೆ ದೇಶದ ಗಡಿಭಾಗಗಳಲ್ಲಿ ಮಾಡಲಿ"

ಯಡಿಯೂರಪ್ಪ ವಿರುದ್ಧ ಪ್ರೊ. ಕೆ.ಎಸ್ ಭಗವಾನ್ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ26 July 2018 10:03 PM IST
share
ಯಾಗಗಳು ಶಕ್ತಿಶಾಲಿಯೆಂದಾದರೆ ದೇಶದ ಗಡಿಭಾಗಗಳಲ್ಲಿ ಮಾಡಲಿ

ಮೈಸೂರು,ಜು.26: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಉಡುಪಿಯಲ್ಲಿ ಮಾಡಿದ ಶತ ಚಂಡಿಕಾ ಯಾಗದಿಂದ ಯಾವುದೇ ಪ್ರಯೋಜನವಿಲ್ಲ. ಹೋಮ, ಯಜ್ಞೆಗಳೆಲ್ಲ ಸುಳ್ಳೆಂದು 12ನೇ ಶತಮಾನದಲ್ಲಿಯೇ ಕ್ರಾಂತಿಯೋಗಿ ಬಸವಣ್ಣನವರು ಹೇಳಿದ್ದಾರೆ ಎಂದು ಪ್ರಗತಿಪರ ಚಿಂತಕ ಪ್ರೊ.ಕೆ.ಎಸ್. ಭಗವಾನ್ ವಾಗ್ದಾಳಿ ನಡೆಸಿದರು.

ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಯಜ್ಞ, ಹೋಮ, ಯಾಗಗಳು ಶಕ್ತಿಶಾಲಿಯೆಂದಾದರೆ ಒಮ್ಮೆ ಪಾಕ್, ಚೀನಾ ಸೈನಿಕರಿಂದ ಕಿರುಕುಳ ಉಂಟಾಗುವ ನಮ್ಮ ದೇಶದ ಆ ಎರಡೂ ಗಡಿ ಭಾಗದಲ್ಲಿ ಮಾಡಲಿ. ಒಂದು ವೇಳೆ ಶತ್ರು ದೇಶದ ಸೈನಿಕರೆಲ್ಲ ಅದರಿಂದಾಗಿ ಓಡಿ ಹೋದಲ್ಲಿ ನಿಜಕ್ಕೂ ಯಜ್ಞ, ಯಾಗಗಳಲ್ಲಿ ಶಕ್ತಿಯಿದೆ ಎಂಬುದನ್ನು ತಾವು ಒಪ್ಪುವುದಾಗಿ ತಿಳಿಸಿದರು.

ಕೈಗೆ ದಾರ ಕಟ್ಟಿಕೊಂಡು ಓಡಾಡುವ ಪ್ರತಿಯೊಬ್ಬರೂ ಒಮ್ಮೆಯಾದರೂ ನಿಜಕ್ಕೂ ಆ ದಾರಕ್ಕೆ ಶಕ್ತಿ ಇದೆಯೋ ಇಲ್ಲವೋ ಎಂಬುದನ್ನು ಇದೇ ರೀತಿ ಗಡಿಯಲ್ಲಿ ಅದರ ಶಕ್ತಿ ಪ್ರದರ್ಶಿಸಿ, ಪರೀಕ್ಷಿಸಿಕೊಳ್ಳಲಿ ಎಂದರು. ಈಗಲೂ ದೇಶವನ್ನು ಪಂಚಾಂಗವೇ ಆಳುತ್ತಿದ್ದು, ಅದರ ಬದಲು ಜನರು ಸಮಾನತೆ ಸಾರುವ, ಮೌಢ್ಯ ನಿರಾಕರಿಸುವ ಸಂವಿಧಾನ ಪಾಲಿಸಲಿ ಎಂದ ಅವರು, ಇಂತಹ ರಾಜಕಾರಣಿಗಳಿಂದಲೇ ಜನ ಮೌಢ್ಯ, ಕಂದಾಚಾರದಿಂದ ಹೊರಬರಲು ಸಾಧ್ಯವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನು ಮೈತ್ರಿ ಸರಕಾರದ ಸಚಿವರಾದ ಜಿ.ಟಿ. ದೇವೇಗೌಡ ಹಾಗೂ ಎನ್. ಮಹೇಶ್ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದು, ಅದನ್ನೇ ಮುಂದುವರಿಸಿಕೊಂಡು ಹೋಗಬೇಕೆಂದು ಹೇಳಿದರು.

ಆರಂಭದಲ್ಲಿ ಜಿ.ಟಿ. ದೇವೇಗೌಡರು ತಮಗೆ ದೊರೆತ ಖಾತೆ ನಿಭಾಯಿಸಲು ತಮಗೆ ಸಾಕಷ್ಟು ವಿದ್ಯಾಭ್ಯಾಸವಿಲ್ಲ ಎಂದು ಸಂಕೋಚ ಪಟ್ಟಿದ್ದರು. ಆದರೆ ಆ ಖಾತೆ ನಿಭಾಯಿಸಲು ಸ್ನಾತಕೋತ್ತರ ಪದವಿಯೇನೂ ಬೇಕಾಗಿಲ್ಲ. ಕೇವಲ ಸಮಸ್ಯೆ ಅರಿತು ಬಗೆಹರಿಸುವ ಬುದ್ಧಿವಂತಿಕೆ ಇದ್ದರೆ ಸಾಕು ಎಂದ ಅವರು, ಈಗ ಜಿ.ಟಿ.ದೇವೇಗೌಡರವರು ಶಿಕ್ಷಣ ಕ್ಷೇತ್ರದಲ್ಲಿ  ಬದಲಾವಣೆ ತರಲು ಮುಂದಾಗಿದ್ದಾರೆ. ಅದೇ ರೀತಿ ವಿವಿಧ ಕಾಲೇಜುಗಳಿಗೂ ಭೇಟಿ ನೀಡಿ ಸಮಸ್ಯೆ ಬಗೆ ಹರಿಸುತ್ತಿರುವುದು ಸಂತಸದ ಸಂಗತಿ ಎಂದರು.

ಈಗಿನ ಬಹುತೇಕ ವಿದ್ಯಾರ್ಥಿಗಳು ಕೇವಲ ಗೈಡ್ ಮೊದಲಾದವನ್ನಷ್ಟೇ ಓದುತ್ತಿದ್ದು, ಪಠ್ಯ ಪುಸ್ತಕಗಳನ್ನೇ ಮುಟ್ಟುವುದಿಲ್ಲ. ಒಮ್ಮೆ ಸಚಿವ ಎನ್.ಮಹೇಶ್ ತಿಳಿಸಿದ ಪದ್ಧತಿ ಜಾರಿಗೆ ಬಂದರೆ, ಎಲ್ಲರೂ ಕಡ್ಡಾಯವಾಗಿ ಪಠ್ಯ ಪುಸ್ತಕ ಓದುತ್ತಾರೆ. ಇದರಿಂದ ಭಾಷಾ ಜ್ಞಾನ, ವಿಷಯ ಜ್ಞಾನವೂ ಹೆಚ್ಚುವುದರ ಜೊತೆಗೆ, ಯಾವ ಪುಟದಲ್ಲಿ ಯಾವ ಉತ್ತರ ಇದೆ ಎಂಬ ತಿಳಿವಳಿಕೆ ದೊರೆಯುವ ಕಾರಣ ಎಲ್ಲರೂ ಪಠ್ಯ ಓದಿಯೇ ಓದುತ್ತಾರೆ ಎಂದರು.

ಜೆಡಿಎಸ್ ಮುಖಂಡರಾದ ನಾಗೇಶ್, ಶ್ರೀನಿವಾಸ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X