Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಡುಬಿದಿರೆ: ನಾಪತ್ತೆಯಾಗಿದ್ದ ಕಾರಂತ್...

ಮೂಡುಬಿದಿರೆ: ನಾಪತ್ತೆಯಾಗಿದ್ದ ಕಾರಂತ್ ಚೆನ್ನೈಯಲ್ಲಿ ಪತ್ತೆ

ಸಾಮಾಜಿಕ ಕಾರ್ಯಕರ್ತರ ಸಕಾಲಿಕ ಸ್ಪಂದನೆ

ವಾರ್ತಾಭಾರತಿವಾರ್ತಾಭಾರತಿ26 July 2018 11:05 PM IST
share
ಮೂಡುಬಿದಿರೆ: ನಾಪತ್ತೆಯಾಗಿದ್ದ ಕಾರಂತ್ ಚೆನ್ನೈಯಲ್ಲಿ ಪತ್ತೆ

ಮೂಡುಬಿದಿರೆ, ಜು. 26: ವಯೋವೃದ್ಧರೋರ್ವರು ರೈಲಿನಿಂದ ಇಳಿದು ನಾಪತ್ತೆಯಾಗಿದ್ದ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತರ ಸಕಾಲಿಕ ಸ್ಪಂದನೆ ಮತ್ತು ವಾಟ್ಸಾಪ್ ಬಳಗದ ಸಹಕಾರದಿಂದ ಮರಳಿ ಮನೆ ಸೇರಿದ ಪ್ರಕರಣ ಎಡಪದವಿನಲ್ಲಿ ನಡೆದಿದೆ.

ಎಡಪದವಿನ ಶಿಬ್ರಿಕೆರೆ ನಿವಾಸಿ ವಿಶ್ರಾಂತ ಎಲೆಕ್ಟ್ರಿಕಲ್ ಎಕ್ಸಿಕ್ಯೂಟಿವ್ ಎಂಜಿನಿಯರ್ ಸುಬ್ರಾಯ ಕಾರಂತ್ (78)  ಜುಲೈ 15ರಂದು ತಿರುಪತಿಯಲ್ಲಿ ನಾಪತ್ತೆಯಾಗಿ ಬಳಿಕ ಜು. 20 ರಂದು ಚೆನ್ನೈನಲ್ಲಿ ಮನೆಮಂದಿಗೆ ಮರಳಿ ಸಿಕ್ಕಿದ್ದಾರೆ.

ನಡೆದಿದ್ದೇನು ?

 ಜು.14ರ ರಾತ್ರಿ ಆಂಧ್ರದ ಶ್ರೀಕಾಕುಳಂನಲ್ಲಿನ ತನ್ನ ಮಗಳ ಮನೆಗೆ ಪತ್ನಿ ಸಮೇತ ಸುಬ್ರಾಯ ಕಾರಂತ್ ಮಂಗಳೂರಿನಿಂದ ರೈಲಿನಲ್ಲಿ ಹೊರಟಿದ್ದರು. ಮರೆವಿನ ಸಮಸ್ಯೆ, ಅನಾರೋಗ್ಯ ಪೀಡಿತರಾಗಿದ್ದ ಅವರು ಈ ಮಧ್ಯೆ ಜು.15ರಂದು ತಿರುಪತಿ ನಿಲ್ದಾಣದಲ್ಲಿ ಗೊಂದಲದಿಂದ ಇಳಿದಿದ್ದಾರೆ. ಇದು ಪತ್ನಿಯ ಗಮನಕ್ಕೆ ಬಂದಿಲ್ಲ. ಬಳಿಕ ಇನ್ನೊಂದು ರೈಲು ಹತ್ತಿದ್ದ ಕಾರಂತ್ ಚೆನ್ನೈ ತಲುಪಿದ್ದರು.

ಕಾರಂತ್ ನಾಪತ್ತೆಯಾಗಿದ್ದು ತಿಳಿಯುತ್ತಿದ್ದಂತೆ ಮನೆಮಂದಿ ತಿರುಪತಿಗೆ ಧಾವಿಸಿ ನಾಲ್ಕು ದಿನಗಳ ಕಾಲ ಅಲ್ಲಿನ ಹಲವು ಸ್ಥಳಗಳಲ್ಲಿ ಜಾಲಾಡಿ ಸಿಸಿಟಿವಿ  ಪರಿಶೀಲಿಸಿದಾಗ ಕಾರಂತ್ ಚೆನ್ನೈ ರೈಲು ಹತ್ತಿರುವ ಅಸ್ಪಷ್ಟ ಸೂಚನೆ ಸಿಕ್ಕಿದೆ.

ಈ ನಡುವೆ ಚೈನ್ನೈನಲ್ಲಿ ಇಳಿದು ಅಲೆದಾಡಿದ ಕಾರಂತ್ ತೀವ್ರ ಅಸ್ವಸ್ಥರಾಗಿ ಕುಸಿದಿದ್ದಾರೆ. ಅಲ್ಲಿನ ಸಾಮಾಜಿಕ ಕಾರ್ಯಕರ್ತ ವೆಂಕಟೇಶ್ ಕೂಡಲೇ ಕಾರಂತರ ಆರೈಕೆಗೆ ಧಾವಿಸಿದ್ದು ಕಾರಂತರ ಕಿಸೆಯಲ್ಲಿ ಮೂಡುಬಿದಿರೆ 'ಸಿಎಚ್' ಮೆಡಿಕಲ್ ಮದ್ದಿನ ಚೀಟಿ ಗಮನಿಸಿದ್ದಾರೆ. ಸಂಪರ್ಕಿಸಿದಾಗ ತಕ್ಷಣ ಚುರುಕಾದ ಸಾಮಾಜಿಕ ಕಾರ್ಯಕರ್ತರೂ ಆಗಿರುವ ಸಿ.ಎಚ್ ಅಬ್ದುಲ್ ಗಫೂರ್ ಕಾರಂತರ ಚಿತ್ರವನ್ನು ಮೊಬೈಲ್‌ನಲ್ಲಿ ಪಡೆದುಕೊಂಡು ತನ್ನ ಬ್ಲಡ್‌ಗ್ರೂಫ್ ವಾಟ್ಸಾಪ್ ಬಳಗಕ್ಕೆ ಸ್ಪಂದನೆಗಾಗಿ ರವಾನಿಸಿದ್ದಾರೆ. ಈ ಗ್ರೂಪ್‌ನ ಅಡ್ಮಿನ್ ರಿಝ್ವಾನ್ ಸಹಕಾರದಿಂದ ಕಾರಂತ್ ಬಗ್ಗೆ ಸ್ಪಷ್ಟ ಮಾಹಿತಿ ಕಲೆ ಹಾಕಿದಸಿ ಅಬ್ದುಲ್ ಗಫೂರ್ ಅವರು ಕಾರಂತ್ ಮನೆಮಂದಿಯನ್ನು ಸಂಪರ್ಕಿಸಿ, ಚೆನ್ನೈನಿಂದ ಮನೆಮಂದಿ ಕಳೆದ ಶನಿವಾರ ಕಾರಂತರನ್ನು ಮರಳಿ ಮನೆಗೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ.

ಸಾಮಾಜಿಕ ಕಾರ್ಯಕರ್ತರ ಬೆಲೆಕಟ್ಟಲಾಗದ ಶ್ರಮ, ಕಾಳಜಿ ಮತ್ತು ವಾಟ್ಸಾಪ್ ಬಳಗದ ಸ್ಪಂದನಕ್ಕೆ ಕಾರಂತರ ಮನೆ ಮಂದಿ ಕೃತಜ್ಞತೆ ಸಲ್ಲಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X