Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಬೀಡಿ ಉದ್ಯಮ ಉಳಿಸಿಕೊಡಿ: ಎಚ್‌ಎಂಎಸ್...

​ಬೀಡಿ ಉದ್ಯಮ ಉಳಿಸಿಕೊಡಿ: ಎಚ್‌ಎಂಎಸ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ27 July 2018 6:56 PM IST
share
​ಬೀಡಿ ಉದ್ಯಮ ಉಳಿಸಿಕೊಡಿ: ಎಚ್‌ಎಂಎಸ್ ಆಗ್ರಹ

ಮಂಗಳೂರು, ಜು.27: ಕಳೆದ ಐದು ವರ್ಷದಿಂದ ಬೀಡಿ ಉದ್ಯಮವು ದೇಶಾದ್ಯಂತ ನಶಿಸುತ್ತಿದ್ದು, ಬೀಡಿ ಉದ್ಯಮವನ್ನೇ ನಂಬಿ ಬದುಕು ಸಾಗಿಸುವ ಕೋಟ್ಯಂತರ ಕಾರ್ಮಿಕರು ಸಂಕಷ್ಟಕ್ಕೀಡಾಗಿದ್ದಾರೆ.ಹಾಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರವು ಬೀಡಿ ಉದ್ಯಮವನ್ನು ಉಳಿಸಿಕೊಡುವ ಮೂಲಕ ಬೀಡಿ ಕಾರ್ಮಿಕರನ್ನು ರಕ್ಷಿಸುವಂತೆ ಸೌತ್ ಕೆನರಾ-ಉಡುಪಿ ಜಿಲ್ಲಾ ಬೀಡಿ ಗುತ್ತಿಗೆದಾರರ ಯೂನಿಯನ್ ಆಗ್ರಹಿಸಿದೆ.

ನಗರದ ಖಾಸಗಿ ಹೊಟೇಲ್‌ನಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಯೂನಿಯನ್‌ನ ಕಾರ್ಯಾಧ್ಯಕ್ಷ ಮುಹಮ್ಮದ್ ರಫಿ ಭಾರತವು ತಂಬಾಕು ಬೆಳೆಯಲ್ಲಿ 2ನೆ ಸ್ಥಾನದಲ್ಲಿದೆ. ಸುಮಾರು 2 ಕೋಟಿ ಜನರು ತಂಬಾಕು ಉತ್ಪಾದನೆ ಆಧಾರಿತ ಕೈಗಾರಿಕೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. 75 ಲಕ್ಷ ಆದಿವಾಸಿ ಬುಡಕಟ್ಟು ಜನರು ಬೀಡಿಗೆ ಬೇಕಾದ ಎಲೆ ಸಂಗ್ರಹದಲ್ಲಿ ತೊಡಗಿಸಿಕೊಂಡಿದ್ದಾರೆ. ಗೃಹ ಉದ್ಯಮವನ್ನಾಗಿಸಿಕೊಂಡ ಬೀಡಿಯಲ್ಲಿ ಶೇ.80ರಷ್ಟು ಮಹಿಳೆಯರು ತೊಡಗಿಸಿಕೊಂಡಿದ್ದಾರೆ. ಆದರೆ ಬೀಡಿ ಉದ್ಯಮ ನಶಿಸುವುದರಿಂದ ಎಲ್ಲರ ಬದುಕು ಶೋಚನೀಯವಾಗಿದೆ ಎಂದರು.

ಕರ್ನಾಟಕದಲ್ಲೂ ಬೀಡಿ ಉದ್ಯಮದ ಸ್ಥಿತಿಯೂ ಚಿಂತಾಜನಕವಾಗಿದೆ. ರಾಜ್ಯದಲ್ಲಿ ಸುಮಾರು 7 ಲಕ್ಷ ಬೀಡಿ ಕಾರ್ಮಿಕರಿದ್ದಾರೆ. ಅದರಲ್ಲೂ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ 3 ಲಕ್ಷ ಬೀಡಿ ಕಾರ್ಮಿಕರು ಇಂದಿಗೂ ದುಡಿಯುತ್ತಿದ್ದಾರೆ. ಅಲ್ಲದೆ ಸುಮಾರು 2 ಸಾವಿರಕ್ಕೂ ಅಧಿಕ ಬೀಡಿ ಗುತ್ತಿಗೆದಾರರು ಇದರಲ್ಲಿ ತೊಡಗಿಸಿಕೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕೇಂದ್ರ ಸರಕಾರವು ಬೀಡಿ ಉದ್ಯಮದ ಮೇಲೆ ವಿಧಿಸಿದ ಕಾನೂನು ಹತಾಶೆ ಹುಟ್ಟಿಸಿವೆ. ಈ ನೀತಿಯಿಂದ ದೇಶಾದ್ಯಂತ ಬೀಡಿ ಉದ್ಯಮದಲ್ಲಿ ದುಡಿಯುವ 3 ಕೋಟಿಗೂ ಅಧಿಕ ಕಾರ್ಮಿಕ ವರ್ಗವನ್ನು ಬೀದಿಪಾಲು ಮಾಡಿದಂತಾಗಿದೆ. ಭವಿಷ್ಯದ ದಿನಗಳಲ್ಲಿ ಇವರಿಗೆ ನಿರುದ್ಯೋಗ ಭೀತಿ ಕಾಡುತ್ತಿದೆ ಎಂದು ಮುಹಮ್ಮದ್ ರಫಿ ಹೇಳಿದರು.

ತೆರಿಗೆ ಅಧಿಕಾರಿಗಳಿಂದ ಕಿರುಕುಳ: ಬೀಡಿ ಗುತ್ತಿಗೆದಾರರು ಆಯಾಯ ಬೀಡಿ ಕಂಪೆನಿಯಿಂದ ಎಲೆ ಮತ್ತು ತಂಬಾಕು ಸರಬರಾಜು ಮಾಡುವಾಗ ಅದಕ್ಕೆ ತಕ್ಕ ದಾಖಲೆಯನ್ನು ನೀಡುತ್ತಾರೆ. ಅದರಲ್ಲಿ ಜಿಎಸ್‌ಟಿ ಮತ್ತು ಇ-ವೇ ಬಿಲ್ ನೀಡುತ್ತಾರೆ. ಅದಾಗ್ಯೂ ಎಲೆ ಮತ್ತು ತಂಬಾಕು ಸಾಗಿಸುವಾಗ ತೆರಿಗೆ ಅಧಿಕಾರಿಗಳು ತಪಾಸಣೆ ನೆಪದಲ್ಲಿ ದಂಡ ತೆರುವಂತೆ ಒತ್ತಾಯಿಸುತ್ತಾರೆ. ದಂಡ ತೆತ್ತರೂ ರಶೀದಿ ನೀಡದೆ ವಂಚಿಸುತ್ತಾರೆ. ಈ ಬಗ್ಗೆ ತೆರಿಗೆ ಇಲಾಖೆಯ ಆಯುಕ್ತರ ಗಮನ ಸೆಳೆಯಲಾಗಿದೆ ಎಂದು ಮುಹಮ್ಮದ್ ರಫಿ ಆಪಾದಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಗೌರವಾಧ್ಯಕ್ಷ ಎಂ. ಸುರೇಶ್ಚಂದ್ರ ಶೆಟ್ಟಿ, ಅಧ್ಯಕ್ಷ ಹರೀಶ್ ಕೆ.ಎಸ್., ಪ್ರಧಾನ ಕಾರ್ಯದರ್ಶಿ ಕಿರಣ್ ಸುವರ್ಣ, ಕೋಶಾಧಿಕಾರಿ ಇಸ್ಮಾಯೀಲ್ ಡಿ.ಎಸ್., ಸದಸ್ಯರಾದ ಮುಹಮ್ಮದ್, ಉಮರಬ್ಬ, ಅಬ್ದುಲ್ ಅಝೀಝ್, ಸಿದ್ದೀಕ್ ಅರ್ಕಾಣ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X