Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವೈವಿಧ್ಯ
  3. ಹೆಪಟೈಟಿಸ್ ಮುಂಜಾಗೃತೆ ಹೇಗೆ?

ಹೆಪಟೈಟಿಸ್ ಮುಂಜಾಗೃತೆ ಹೇಗೆ?

ಇಂದು ವಿಶ್ವ ಹೆಪಟೈಟಿಸ್ ದಿನ

ಡಾ. ಮುರಲೀ ಮೋಹನ್, ಚೂಂತಾರುಡಾ. ಮುರಲೀ ಮೋಹನ್, ಚೂಂತಾರು27 July 2018 6:34 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಹೆಪಟೈಟಿಸ್ ಮುಂಜಾಗೃತೆ ಹೇಗೆ?

ಹೆಪಟೈಟಿಸ್ ರೋಗ ಹೆಚ್ಚಾಗಿ ಲಿವರ್ (ಯಕೃತ್)ನ್ನು ಕಾಡುವ ಕಾಯಿಲೆಯಾಗಿದ್ದು ಹೆಪಟೈಟಿಸ್ ಎ.ಬಿ.ಸಿ.ಡಿ ಮತ್ತು ಇ ಎಂಬ ವೈರಸ್‌ನಿಂದ ಹರಡುತ್ತದೆ. ಜಾಗತಿಕವಾಗಿ ಕೋಟಿಗಟ್ಟಲೆ ಮಂದಿ ಈ ರೋಗದಿಂದ ಬಳಲುತ್ತಿದ್ದು ಸುಮಾರು 240 ಮಿಲಿಯನ್ ಮಂದಿ ಹೆಪಟೈಟಿಸ್ ಬಿ ವೈರಸ್ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಅಂಕಿ ಅಂಶಗಳು ಸಾರಿಹೇಳುತ್ತವೆ. ಸಾಮಾನ್ಯವಾಗಿ ಹೆಪಟೈಟಿಸ್ ಎ, ಡಿ, ಇ ಹೆಚ್ಚು ತೊಂದರೆ ನೀಡದಿದ್ದರೂ ಹೆಪಟೈಟಿಸ್ ಬಿ ಮತ್ತು ಸಿ ಹೆಚ್ಚು ಮಾರಣಾಂತಿಕವಾಗುವ ಸಾಧ್ಯತೆ ಇರುತ್ತದೆ.

ಜಾಗತಿಕವಾಗಿ ವಿಶ್ವದಾದ್ಯಂತ ಜುಲೈ 28ರಂದು ವಿಶ್ವ ಹೆಪಟೈಟಿಸ್ ದಿನ ಎಂದು ಆಚರಿಸಲಾಗುತ್ತದೆ. ಹೆಚ್ಚುತ್ತಿರುವ ಹೆಪಟೈಟಿಸ್ ರೋಗದ ಬಗ್ಗೆ ವಿಶೇಷವಾದ ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಆಚರಣೆಯನ್ನು ವಿಶ್ವ ಸಂಸ್ಥೆ ಜಾರಿಗೆ ತಂದಿದೆ. ಜಗತ್ತಿನಾದ್ಯಂತ ಸುಮಾರು 240 ಮಿಲಿಯನ್ ಮಂದಿ ಹೆಪಟೈಟಿಸ್ ಬಿ ರೋಗದಿಂದ ಬಳಲುತ್ತಿದ್ದು ಏನಿಲ್ಲವೆಂದರೂ 1.5 ಮಿಲಿಯನ್ ಮಂದಿ ವರ್ಷವೊಂದರಲ್ಲಿ ಹೆಪಟೈಟಿಸ್ ರೋಗದಿಂದಾಗಿ ಜೀವ ಕಳೆದುಕೊಳ್ಳುತ್ತಿರುವುದು ಬಹಳ ಕಳವಳಕಾರಿ ಬೆಳವಣಿಗೆಯಾಗಿದೆ. ಭಾರತ ದೇಶವೊಂದರಲ್ಲೇ 40 ಮಿಲಿಯನ್ ಮಂದಿ ಹೆಪಟೈಟಿಸ್ ಬಿ ರೋಗದಿಂದ ಬಳಲುತ್ತಿದ್ದಾರೆಂದು ವಿಶ್ವ ಸಂಸ್ಥೆಯ ವರದಿಗಳಿಂದ ತಿಳಿದು ಬಂದಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಸಾಕಷ್ಟು ಸಂಶೋಧನೆಗಳು ಆವಿಷ್ಕಾರಗಳು ಮತ್ತು ಕ್ರಾಂತಿಗಳು ನಡೆಯುತ್ತಿದ್ದರೂ ತಡೆಗಟ್ಟಬಹುದಾದ ರೋಗಗಳಲ್ಲಿ ಒಂದಾದ ಈ ಹೆಪಟೈಟಿಸ್ ದಿನೇ ದಿನೇ ಮನುಕುಲದ ಮೇಲೆ ಸವಾರಿ ಮಾಡುತ್ತಿರುವುದೇ ಸೋಜಿಗದ ವಿಚಾರವಾಗಿದೆ. ಏಡ್ಸ್‌ನಷ್ಟೇ ಮಾರಕ ರೋಗವಾದ ಹೆಪಟೈಟಿಸ್‌ನ್ನು ಸೂಕ್ತವಾದ ವೈದ್ಯಕೀಯ ಮಾರ್ಗದರ್ಶನ ಮತ್ತು ಸಾಕಷ್ಟು ಮುಂಜಾಗರೂಕತೆಗಳಿಂದ ಖಂಡಿತವಾಗಿಯೂ ಪರಿಣಾಮಕಾರಿಯಾಗಿ ನಿಯಂತ್ರಿಸಬಹುದಾಗಿದೆ. ವಿಶ್ವದಾದ್ಯಂತ 2 ಮಿಲಿಯನ್ ಮಂದಿ ವರ್ಷವೊಂದರಲ್ಲಿ ಅಜಾಗರೂಕತೆ ಅಸಡ್ಡೆ ಮತ್ತು ರೋಗಪೂರಿತ ಇಂಜೆಕ್ಷನ್‌ಗಳಿಂದಲೇ ಹೆಪಟೈಟಿಸ್ ಬಿ ಮತ್ತು ಸಿ ರೋಗಕ್ಕೆ ತುತ್ತಾಗುತ್ತಾರೆ ಎಂದು ಅಂಕಿ ಅಂಶಗಳಿಂದ ತಿಳಿದು ಬಂದಿದೆ. ಹಾಗೆಯೇ ಶೇ. 81 ಮಂದಿ ಮಕ್ಕಳಿಗೆ ಲಸಿಕೆ ಮುಖಾಂತರ ಹೆಪಟೈಟಿಸ್ ರೋಗವನ್ನು ತಡೆಗಟ್ಟಲಾಗಿದೆ ಎಂದೂ ತಿಳಿದು ಬಂದಿದೆ. ಒಟ್ಟಿನಲ್ಲಿ ಹೆಪಟೈಟಿಸ್ ರೋಗವನ್ನು ಖಂಡಿತವಾಗಿಯೂ ತಡೆಗಟ್ಟಬಹುದಾಗಿದ್ದು ವೈದ್ಯಕೀಯ, ಅರೆ ವೈದ್ಯಕೀಯ ಮತ್ತು ಜನಸಾಮಾನ್ಯರು ವಿಶೇಷ ಕಾಳಜಿ ವಹಿಸುವ ತುರ್ತು ಅನಿವಾರ್ಯತೆ ಇದೆ. ಜುಲೈ 28ರಂದು ಹೆಪಟೈಟಿಸ್ ವೈರಸ್‌ನ್ನು ಕಂಡು ಹಿಡಿದ ಮತ್ತು ಹೆಪಟೈಟಿಸ್ ರೋಗಕ್ಕೆ ಲಸಿಕೆ ಕಂಡುಹಿಡಿದ ನೊಬೆಲ್ ಪ್ರಶಸ್ತಿ ವಿಜೇತ ಪ್ರೊ. ಬರೂಚ ಸಾಮ್ಯುಯೆಲ್ ಬ್ಲೂಮ್‌ಬರ್ಗ್‌ ಇವರ ಜನ್ಮದಿನವಾಗಿದ್ದು ಅವರ ಸ್ಮರಣಾರ್ಥ ಈ ದಿನವನ್ನು ವಿಶ್ವ ಹೆಪಟೈಟಿಸ್ ದಿನ ಎಂದು ಆಚರಿಸಲಾಗುತ್ತದೆ.

ಏನಿದು ಹೆಪಟೈಟಿಸ್ ?
 ಹೆಪಟೈಟಿಸ್ ರೋಗ ಹೆಚ್ಚಾಗಿ ಲಿವರ್ (ಯಕೃತ್)ನ್ನು ಕಾಡುವ ಕಾಯಿಲೆಯಾಗಿದ್ದು ಹೆಪಟೈಟಿಸ್ ಎ.ಬಿ.ಸಿ.ಡಿ ಮತ್ತು ಇ ಎಂಬ ವೈರಸ್‌ನಿಂದ ಹರಡುತ್ತದೆ. ಜಾಗತಿಕವಾಗಿ ಕೋಟಿಗಟ್ಟಲೆ ಮಂದಿ ಈ ರೋಗದಿಂದ ಬಳಲುತ್ತಿದ್ದು ಸುಮಾರು 240 ಮಿಲಿಯನ್ ಮಂದಿ ಹೆಪಟೈಟಿಸ್ ಬಿ ವೈರಸ್ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಅಂಕಿ ಅಂಶಗಳು ಸಾರಿಹೇಳುತ್ತವೆ. ಸಾಮಾನ್ಯವಾಗಿ ಹೆಪಟೈಟಿಸ್ ಎ, ಡಿ, ಇ ಹೆಚ್ಚು ತೊಂದರೆ ನೀಡದಿದ್ದರೂ ಹೆಪಟೈಟಿಸ್ ಬಿ ಮತ್ತು ಸಿ ಹೆಚ್ಚು ಮಾರಣಾಂತಿಕವಾಗುವ ಸಾಧ್ಯತೆ ಇರುತ್ತದೆ. ವರ್ಷವೊಂದರಲ್ಲಿ 1.5 ಮಿಲಿಯನ್ ಸಾವಿಗೆ ಕಾರಣವಾಗುವ ಈ ರೋಗಕ್ಕೆ ಹೆಪಟೈಟಿಸ್ ಬಿ ಮತ್ತು ಸಿ ಹೆಚ್ಚಿನ ಕಾಣಿಕೆ ನೀಡುತ್ತದೆ ಎಂದರೂ ತಪ್ಪಲ್ಲ. ಹೆಪಟೈಟಿಸ್ ರೋಗದಲ್ಲಿ ಅಲ್ಪಕಾಲದ ತೀವ್ರವಾದ (Acute ) ಮತ್ತು ದೀರ್ಘಕಾಲದ (Chronic    ) ಎಂಬುದಾಗಿ ಎರಡು ವಿಧಗಳಿದ್ದು, ಅಲ್ಪಕಾಲದ ತೀವ್ರವಾದ ಹೆಪಟೈಟಿಸ್‌ನಿಂದಲೇ ಹೆಚ್ಚಿನ ಸಾವು ನೋವು ಸಂಭವಿಸುತ್ತದೆ. ಹೆಪಟೈಟಿಸ್ ಬಿ ಒಂದರಿಂದಲೇ ವರ್ಷವೊಂದಲ್ಲಿ 7,80,000 ಮಂದಿ ಜೀವ ಕಳೆದುಕೊಳ್ಳುತ್ತಾರೆ ಎಂಬುದು ಆತಂಕಕಾರಿ ವಿಚಾರವಾಗಿದೆ. ಹೆಪಟೈಟಿಸ್ ಬಿ ಮತ್ತು ಸಿ ರೋಗಕ್ಕೆ ಪರಿಣಾಮಕಾರಿ ಲಸಿಕೆಗಳು ಲಭ್ಯವಿದ್ದು ಖಂಡಿತವಾಗಿಯೂ ರೋಗವನ್ನು ತಡೆಗಟ್ಟಬಹುದಾಗಿದೆ. ಅದೇ ರೀತಿ ಹೆಪಟೈಟಿಸ್ ಸಿ ರೋಗಕ್ಕೆ ಪರಿಣಾಮಕಾರಿ ಚಿಕಿತ್ಸೆಯು ಲಭ್ಯವಿರುತ್ತದೆ. ಹೆಪಟೈಟಿಸ್ ಬಿ ರೋಗ ಸಾಮಾನ್ಯವಾಗಿ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗೆ ಬರುವ ಸಾಧ್ಯತೆ ಹೆಚ್ಚಾಗಿರುವುದರಿಂದ, ಇವರು ಹೆಚ್ಚಿನ ಜಾಗ್ರತೆ ವಹಿಸುವ ಅವಶ್ಯಕತೆ ಇರುತ್ತದೆ. ಹೆಪಟೈಟಿಸ್ ಎ ಮತ್ತು ಇ ಕಲುಷಿತ ನೀರು ಮತ್ತು ಆಹಾರಗಳಿಂದ ಹೆಚ್ಚಾಗಿ ಹರಡುತ್ತದೆ ಮತ್ತು ಹೆಚ್ಚು ಮಾರಣಾಂತಿಕವಾಗುವ ಸಾಧ್ಯತೆ ಬಹಳ ಕಡಿಮೆಯಾಗಿರುತ್ತದೆ. ಆದರೆ ಹೆಪಟೈಟಿಸ್ ಬಿ, ಸಿ, ಡಿ ಹೆಚ್ಚಾಗಿ ಪದೇ ಪದೇ ಉಪಯೋಗಿಸುವ ಇಂಜೆಕ್ಷನ್‌ಗಳ ಮುಖಾಂತರ, ರಕ್ತಪೂರಣದ ಮುಖಾಂತರ, ಅಸುರಕ್ಷಿತ ದೈಹಿಕ ಸಂಪರ್ಕ, ತಾಯಿಯಿಂದ ಮಗುವಿಗೆ ಮತ್ತು ಅಸುರಕ್ಷಿತ ವೈದ್ಯಕೀಯ ಚಿಕಿತ್ಸೆ, ರೋಗಪೂರಿತ ವೈದ್ಯಕೀಯ ಉಪಕರಣಗಳ ಮುಖಾಂತರ ಹರಡುವ ಸಾಧ್ಯತೆ ಇರುತ್ತದೆ. ಈ ಎಲ್ಲಾ ವೈರಸ್‌ಗಳು ನಮ್ಮ ದೇಹದ ಯಕೃತ್‌ನ ಮೇಲೆ ದಾಳಿ ಮಾಡಿ ಅದರ ಕಾರ್ಯಕ್ಷಮತೆಯನ್ನು ಮತ್ತು ಕಾರ್ಯದಕ್ಷತೆಯನ್ನು ಕ್ಷೀಣಿಸುವಂತೆ ಮಾಡುತ್ತದೆ. ಯಕೃತ್ ನಮ್ಮ ದೇಹದ ಅತೀ ಮುಖ್ಯ ಅಂಗವಾಗಿದ್ದು ದೇಹದ ಎಲ್ಲಾ ಜೀರ್ಣಾಂಗ ಪ್ರಕ್ರಿಯೆ ಮತ್ತು ರಕ್ಷಣಾ ಪ್ರಕ್ರಿಯೆಯ ನೇತೃತ್ವ ವಹಿಸುತ್ತದೆ. ವೈರಸ್‌ಗಳ ದಾಳಿಗೆ ತುತ್ತಾದ ಯಕೃತ್ ತನ್ನ ರಕ್ಷಣಾ ಪ್ರಕ್ರಿಯೆ ಮತ್ತು ಜೀರ್ಣಾಂಗ ಪ್ರಕ್ರಿಯೆಯನ್ನು ಸರಿಯಾಗಿ ನಿಭಾಯಿಸಲಾಗದೆ ದೇಹದ ಆರೋಗ್ಯ ಹದಗೆಟ್ಟು ವ್ಯಕ್ತಿ ಜಾಂಡೀಸ್ (ದೇಹದ ಚರ್ಮ, ಕಣ್ಣಿನ ಮೇಲ್ಪದರ ಹಳದಿ ಬಣ್ಣಕ್ಕೆ ತಿರುಗುವುದು) ವಾಂತಿ, ಭೇದಿ, ಹಸಿವಿಲ್ಲ್ಲದಿರುವುದು ವಿಪರೀತ ಹೊಟ್ಟೆನೋವು, ಜ್ವರ, ಮೈಕೈ ನೋವು, ವಿಪರೀತ ಸುಸ್ತು, ದೇಹದ ತೂಕ ಕಡಿಮೆಯಾಗುವುದು, ಅಜೀರ್ಣ ಮುಂತಾದ ಲಕ್ಷಣಗಳು ಕಾಣಿಸಿಕೊಳ್ಳ ಬಹುದು. ಸಕಾಲದಲ್ಲಿ ಸೂಕ್ತ ಚಿಕಿತ್ಸೆ ದೊರಕದಿದ್ದಲ್ಲಿ ಯಕೃತ್ ವೈಫಲ್ಯ ಮತ್ತು ಯಕೃತ್‌ನ ಕ್ಯಾನ್ಸರ್‌ನಿಂದಾಗಿ ಜೀವ ಹಾನಿ ಕೂಡಾ ಸಂಭವಿಸುತ್ತದೆ.

ಕೊನೆಮಾತು
 ಹೆಪಟೈಟಿಸ್ ಮತ್ತು ಏಡ್ಸ್ ಎಂಬುದು ಈ ಶತಮಾನದ ಬಹುದೊಡ್ಡ ರೋಗ. ಮನುಕುಲವನ್ನು ಕಾಡಿಸಿ ವ್ಯಕ್ತಿಯನ್ನು ಜೀವಂತವಾಗಿ ಕ್ಷಣ ಕ್ಷಣಕ್ಕೂ ಸಾಯಿಸುವ ಈ ರೋಗದ ಬಗ್ಗೆ ಹೆಚ್ಚಿನ ಮಾರ್ಗದರ್ಶನ ಮತ್ತು ಜಾಗೃತಿ ಮೂಡಿಸುವುದು ಅತೀ ಅಗತ್ಯ. ಹೆಪಟೈಟಿಸ್ ಮಾರಣಾಂತಿಕ ಕಾಯಿಲೆಯಾದರೂ ತಡೆಗಟ್ಟಬಹುದಾದ ರೋಗವಾಗಿದ್ದು ಸಾಕಷ್ಟು ಮುಂಜಾಗರೂಕತೆ ಮತ್ತು ಮೂಲ ಸೌಕರ್ಯಗಳ ಸೌಲಭ್ಯಗಳಾದ ಶುದ್ಧನೀರು ಮತ್ತು ಪರಿಶುದ್ಧ ಪೋಷಕಾಂಶಯುಕ್ತ ಆಹಾರ ದೊರಕುವಂತೆ ಮಾಡಿದಲ್ಲಿ ಖಂಡಿತವಾಗಿಯೂ ಹೆಪಟೈಟಿಸ್ ರೋಗವನ್ನು ಹತೋಟಿಯಲ್ಲಿಡಬಹುದು ಎಂಬುದು ಸಮಾಧಾನಕರ ಅಂಶ. ಅನಕ್ಷರತೆ, ಬಡತನ, ಮೂಡನಂಬಿಕೆಗಳ ಆಗರ ಮತ್ತು ಮೂಲಸೌಕರ್ಯಗಳ ಕೊರತೆ ಇರುವ ಮುಂದುವರಿಯುತ್ತಿರುವ ನಮ್ಮ ಭಾರತ ದೇಶದಲ್ಲಿ ಹೆಪಟೈಟಿಸ್‌ನ ಬಗ್ಗೆ ಹೆಚ್ಚಿನ ಅರಿವು ಮೂಡಿಸುವುದು ಪ್ರತಿಯೊಬ್ಬ ವೈದ್ಯರ ಮತ್ತು ಪ್ರಜೆಯ ಸಾಮಾಜಿಕ ಹೊಣೆಗಾರಿಕೆ ಆಗಿರುತ್ತದೆ. ಈ ನಿಟ್ಟನಲ್ಲಿ ಪ್ರತಿಯೊಬ್ಬ ವೈದ್ಯ ಮತ್ತು ನಾಗರಿಕರು ತಮ್ಮ ಹೊಣೆ ಅರಿತು ಜವಾಬ್ದಾರಿಯಿಂದ ವರ್ತಿಸಿದಲ್ಲಿ ಹೆಪಟೈಟಿಸ್ ರೋಗಕ್ಕೆ ಮೂಗುದಾರ ಹಾಕುವುದು ಖಂಡಿತವಾಗಿಯೂ ಸಾಧ್ಯವಾಗಬಹುದು.
111111111111111111111
ತಡೆಗಟ್ಟುವುದು ಹೇಗೆ?

* ಸುರಕ್ಷಿತವಾದ ನೀರು ಮತ್ತು ಆಹಾರವನ್ನು ಸೇವಿಸಬೇಕು. ಎಲ್ಲಾ ವರ್ಗದ ಜನರಿಗೆ ಸುರಕ್ಷಿತ ನೀರು, ಆಹಾರ ದೊರಕುವಂತೆ ಮಾಡಬೇಕು.
 * ದೇಹಬಾಧೆ ತೀರಿಸಿದ ಬಳಿಕ ಕಡ್ಡಾಯವಾಗಿ ಕೈಯನ್ನು ಸೋಪ್ ದ್ರಾವಣ ಬಳಸಿ ತೊಳೆಯಬೇಕು. ಹೆಚ್ಚಿನ ಹೆಪಟೈಟಿಸ್ ಕೊಳೆಯಿಂದ ಕೂಡಿದ ಕೈಗಳಿಂದ ಬಾಯಿಯ ಮುಖಾಂತರ ದೇಹಕ್ಕೆ ಹರಡುತ್ತದೆ ಎಂದು ತಿಳಿದು ಬಂದಿದೆ.
* ರಕ್ತಪೂರಣ ಮಾಡುವಾಗ ಮತ್ತು ರಕ್ತದ ಕಣಗಳನ್ನು ಪಡೆದುಕೊಳ್ಳುವಾಗ ಸಾಕಷ್ಟು ಮುಂಜಾಗರೂಕತೆ ವಹಿಸಬೇಕು.
  * ಹೆಪಟೈಟಿಸ್ ರೋಗದಿಂದ ಬಳಲುತ್ತಿರುವ ವ್ಯಕ್ತಿಯ ಜೊತೆ ದೈಹಿಕ ಸಂಪರ್ಕವನ್ನು ಮಾಡಬಾರದು. ಅದೇ ರೀತಿ ರೋಗದಿಂದ ಬಳಲುತ್ತಿರುವ ವ್ಯಕ್ತಿಯ ದೈಹಿಕ ದ್ರವ್ಯಗಳ ಸಂಪರ್ಕ ಬಾರದಂತೆ ಎಚ್ಚರ ವಹಿಸಬೇು. (ವೀರ್ಯ, ರಕ್ತ, ಎಂಜಲು ಇತ್ಯಾದಿ)
* ಒಮ್ಮೆ ಬಳಸಿದ ಸೂಜಿಯನ್ನು ಮತ್ತೊಮ್ಮೆ ಬಳಸಲೇಬಾರದು. ಹೆಚ್ಚಿನ ಹೆಪಟೈಟಿಸ್ ಸೂಜಿಗಳ ಮುಖಾಂತರವೇ ಹರಡುತ್ತದೆ ಎಂದು ತಿಳಿದು ಬಂದಿದೆ. ಅದೇ ರೀತಿ ಮಾದಕ ದ್ರವ್ಯ ವ್ಯಸನಿಗಳು ಒಂದೇ ಸೂಜಿಯನ್ನು ಪದೇ ಪದೇ ಬಳಸಿದ ಬಳಿಕ ಬೇರೆ ವ್ಯಕ್ತಿಗಳು ಅದೇ ಸೂಜಿಯನ್ನು ಬಳಸುವುದರಿಂದ ರೋಗ ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ವಿಶ್ವದಾದ್ಯಂತ 2 ಮಿಲಿಯನ್ ಮಂದಿ ಅಸುರಕ್ಷಿತ ಇಂಜೆಕ್ಷನ್‌ಗಳಿಂದಲೇ ಹೆಪಟೈಟಿಸ್ ಬಿ ಮತ್ತು ಸಿ ರೋಗಕ್ಕೆ ತುತ್ತಾಗುತ್ತಿರುವುದೇ ಈ 21ನೇ ಶತವಾನದ ದುರಂತವೆಂದರೂ ತಪ್ಪಲ್ಲ.
* ಹೆಪಟೈಟಿಸ್ ರೋಗವನ್ನು ತಡೆಯಲು ಪರಿಣಾಮಕಾರಿ ಲಸಿಕೆ ಲಭ್ಯವಿದೆ. ಪರಿಣಿತ ವೈದ್ಯರ ಸೂಕ್ತ ಮಾರ್ಗದರ್ಶನದಿಂದ ಈ ಲಸಿಕೆಗಳನ್ನು ಸೂಕ್ತ ಕಾಲದಲ್ಲಿ ತೆಗೆದುಕೊಂಡಲ್ಲಿ ಹೆಪಟೈಟಿಸ್ ರೋಗವನ್ನು ಖಂಡಿತವಾಗಿಯೂ ತಡೆಗಟ್ಟಬಹುದು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ಡಾ. ಮುರಲೀ ಮೋಹನ್, ಚೂಂತಾರು
ಡಾ. ಮುರಲೀ ಮೋಹನ್, ಚೂಂತಾರು
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X