Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪಾಕ್ ಅಧಿಕೃತ ಚುನಾವಣಾ ಫಲಿತಾಂಶ ಪ್ರಕಟ:...

ಪಾಕ್ ಅಧಿಕೃತ ಚುನಾವಣಾ ಫಲಿತಾಂಶ ಪ್ರಕಟ: ಪಿಟಿಐಗೆ 115 ಸ್ಥಾನ

ಸರಕಾರ ರಚಿಸಲು 21 ಸ್ಥಾನಗಳ ಕೊರತೆ

ವಾರ್ತಾಭಾರತಿವಾರ್ತಾಭಾರತಿ28 July 2018 8:26 PM IST
share
ಪಾಕ್ ಅಧಿಕೃತ ಚುನಾವಣಾ ಫಲಿತಾಂಶ ಪ್ರಕಟ: ಪಿಟಿಐಗೆ 115 ಸ್ಥಾನ

ಇಸ್ಲಾಮಾಬಾದ್, ಜು. 28: 270 ಸದಸ್ಯ ಬಲದ ಪಾಕಿಸ್ತಾನದ ಸಂಸತ್ತು ನ್ಯಾಶನಲ್ ಅಸೆಂಬ್ಲಿಯಲ್ಲಿ 115 ಸ್ಥಾನಗಳನ್ನು ಗೆಲ್ಲುವುದರೊಂದಿಗೆ ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್‌ರ ಪಾಕಿಸ್ತಾನ್ ತೆಹ್ರೀಕೆ ಇನ್ಸಾಫ್ (ಪಿಟಿಐ) ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಚುನಾವಣಾ ಆಯೋಗದ ಅಂತಿಮ ಫಲಿತಾಂಶ ತಿಳಿಸಿದೆ.

ಸರಳ ಬಹುಮತಕ್ಕೆ 137 ಸ್ಥಾನಗಳ ಅಗತ್ಯವಿದ್ದು, ಸರಕಾರ ರಚಿಸಲು ಪಿಟಿಐಗೆ 21 ಸ್ಥಾನಗಳ ಕೊರತೆ ಎದುರಾಗಿದೆ.

ಬುಧವಾರ ನಡೆದ ಚುನಾವಣೆಯ ಫಲಿತಾಂಶಗಳು ಭಾರೀ ನಿಧಾನಗತಿಯಲ್ಲಿ ಹೊರಬಂದಿದ್ದು, ಸೋತ ರಾಜಕೀಯ ಪಕ್ಷಗಳು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿವೆ.

ಜೈಲಿನಲ್ಲಿರುವ ಮಾಜಿ ಪ್ರಧಾನಿ ನವಾಝ್ ಶರೀಫ್‌ರ ಪಾಕಿಸ್ತಾನ್ ಮುಸ್ಲಿಮ್ ಲೀಗ್-ನವಾಝ್ (ಪಿಎಂಎಲ್-ಎನ್) 64 ಸ್ಥಾನಗಳನ್ನು ಗೆದ್ದರೆ, ಮಾಜಿ ಅಧ್ಯಕ್ಷ ಅಸಿಫ್ ಅಲಿ ಝರ್ದಾರಿಯ ಪಾಕಿಸ್ತಾನ ಪೀಪಲ್ಸ್ ಪಾರ್ಟಿ (ಪಿಪಿಪಿ) 43 ಸ್ಥಾನಗಳನ್ನು ಗಳಿಸಿ ತೃತೀಯ ಸ್ಥಾನದಲ್ಲಿದೆ ಎಂದು ಆಯೋಗ ಪ್ರಕಟಿಸಿದೆ.

ಮುತ್ತಾಹಿದಾ ಮಜ್ಲಿಸೆ ಅಮಲ್ ಪಾಕಿಸ್ತಾನ್ (ಎಂಎಂಎಪಿ) 13 ಸ್ಥಾನಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.

13 ಪಕ್ಷೇತರರು ಜಯಿಸಿದ್ದು ಸರಕಾರ ರಚನೆಯಲ್ಲಿ ಮಹತ್ವದ ಪಾತ್ರವಹಿಸುವ ನಿರೀಕ್ಷೆಯಿದೆ. ಸರಕಾರ ರಚಿಸಲು ಪಿಟಿಐ ಪಕ್ಷವು ಅವರ ಬೆಂಬಲವನ್ನು ಕೋರಬಹುದಾಗಿದೆ.

ಭಯೋತ್ಪಾದಕರನ್ನು ತಿರಸ್ಕರಿಸಿದ ಪಾಕ್ ಜನತೆ

ಮುಂಬೈ ಭಯೋತ್ಪಾದಕ ದಾಳಿಯ ಸೂತ್ರಧಾರ ಹಫೀಝ್ ಸಯೀದ್ ಬೆಂಬಲಿತ ಅಲ್ಲಾಹೋ ಅಕ್ಬರ್ ತೆಹ್ರೀಕ್ ಸೇರಿದಂತೆ ಭಯೋತ್ಪಾದಕ ಮತ್ತು ನಿಷೇಧಿತ ಗುಂಪುಗಳನ್ನು ಈ ಬಾರಿಯ ಚುನಾವಣೆಯಲ್ಲಿ ಪಾಕಿಸ್ತಾನಿ ಮತದಾರರು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ.

ಸಯೀದ್ ಬೆಂಬಲಿತ ಪಕ್ಷಕ್ಕೆ ಒಂದು ಸ್ಥಾನವನ್ನೂ ಗೆಲ್ಲಲು ಸಾಧ್ಯವಾಗಿಲ್ಲ.

ಆ ಪಕ್ಷ ಒಟ್ಟು 1,71,441 ಮತಗಳನ್ನು ಪಡೆದಿದೆ. ಚಲಾವಣೆಯಾದ ಸುಮಾರು 5 ಕೋಟಿ ಮತಗಳಿಗೆ ಹೋಲಿಸಿದರೆ ಇದು ನಗಣ್ಯವಾಗಿದೆ.

ಸಮ್ಮಿಶ್ರ ಸರಕಾರ ರಚನೆಗೆ ಮಾತುಕತೆ ಆರಂಭ

ಸಮ್ಮಿಶ್ರ ಸರಕಾರ ರಚಿಸುವುದಕ್ಕಾಗಿ ಇಮ್ರಾನ್ ಖಾನ್‌ರ ಪಕ್ಷ ಪಾಕಿಸ್ತಾನ್ ತೆಹ್ರೀಕೆ ಇನ್ಸಾಫ್ (ಪಿಟಿಐ) ಶನಿವಾರ ಪಕ್ಷೇತರರು ಮತ್ತು ಸಣ್ಣ ಪಕ್ಷಗಳೊಂದಿಗೆ ಮಾತುಕತೆ ಆರಂಭಿಸಿದೆ.

‘‘ನಾವು ಸಣ್ಣ ಪಕ್ಷಗಳು ಮತ್ತು ಪಕ್ಷೇತರ ಸದಸ್ಯರನ್ನು ಸಂಪರ್ಕಿಸುತ್ತಿದ್ದೇವೆ. ಅವರು ಶೀಘ್ರದಲ್ಲೇ ಇಸ್ಲಾಮಾಬಾದ್‌ನಲ್ಲಿ ಪಕ್ಷದ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ’’ ಎಂದು ಪಕ್ಷದ ವಕ್ತಾರ ಫಾವದ್ ಚೌಧರಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X