Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜಿ.ಎಸ್.ಟಿ ಯಿಂದ ಕೈಮಗ್ಗ ಉತ್ಪನ್ನಗಳಿಗೆ...

ಜಿ.ಎಸ್.ಟಿ ಯಿಂದ ಕೈಮಗ್ಗ ಉತ್ಪನ್ನಗಳಿಗೆ ವಿನಾಯಿತಿಗೆ ರಂಗಕರ್ಮಿ ಪ್ರಸನ್ನ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ28 July 2018 9:31 PM IST
share
ಜಿ.ಎಸ್.ಟಿ ಯಿಂದ ಕೈಮಗ್ಗ ಉತ್ಪನ್ನಗಳಿಗೆ ವಿನಾಯಿತಿಗೆ ರಂಗಕರ್ಮಿ ಪ್ರಸನ್ನ ಆಗ್ರಹ

ಬೆಂಗಳೂರು, ಜು.28: ಕೈ ಮಗ್ಗ ಉತ್ಪನ್ನಗಳಿಗೆ ಜಿಎಸ್ಟಿಯಿಂದ ವಿನಾಯಿತಿ ನೀಡಬೇಕು ಹಾಗೂ ರಾಜ್ಯ ಸರಕಾರ ನೇಕಾರರ ಸಹಾಯಕ್ಕೆ ಧಾವಿಸಬೇಕು ಎಂದು ಆಗ್ರಹಿಸಿ ಗ್ರಾಮಸೇವಾ ಸಂಘದ ವತಿಯಿಂದ ಕೈ-ಮಗ್ಗ ಹಾಗೂ ಖಾದಿಯಿಂದ ತಯಾರಿಸಿದ ವಸ್ತುಗಳನ್ನು ಮಾರಾಟ ಮಾಡುವ ಚಳವಳಿಗೆ ಆ.7 ರಂದು ನಗರದ ಎಂ.ಜಿ.ರಸ್ತೆಯಲ್ಲಿ ಚಾಲನೆ ನೀಡಲಾಗುತ್ತದೆ ಎಂದು ಹಿರಿಯ ರಂಗಕರ್ಮಿ ಪ್ರಸನ್ನ ತಿಳಿಸಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಲಕ್ಷಾಂತರ ಕೈ ಮಗ್ಗ ನೇಕಾರರು ಸಂಕಷ್ಟದ ಸ್ಥಿತಿಯಲ್ಲಿದ್ದು, ಉತ್ತರ ಕರ್ನಾಟಕದ ಹಾಗೂ ಹೈದರಾಬಾದ್ ಕರ್ನಾಟಕದ ಅತಿ ದೊಡ್ಡ ಉದ್ದಿಮೆಯಾಗಿದೆ. ಮಧ್ಯಮ ವರ್ಗ ಹಾಗೂ ಹಿಂದುಳಿದ ವರ್ಗದವರು ನಡೆಸುವ ಕೈ ಮಗ್ಗ ಹಾಗೂ ಕೈಯಿಂದ ತಯಾರಿಸುವ ಉತ್ಪನ್ನಗಳ ಮೇಲೆ ಸರಕು ಮತ್ತು ಸೇವಾ ತೆರಿಗೆ ವಿಧಿಸುವ ಮೂಲಕ ಮತ್ತಷ್ಟು ಸಂಕಷ್ಟವನ್ನು ತಂದಿಟ್ಟಿದ್ದಾರೆ ಎಂದರು.

ರಾಜ್ಯದಲ್ಲಿ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ಮುಚ್ಚುವ ಸ್ಥಿತಿಗೆ ತಲುಪಿದೆ. ಕೈಮಗ್ಗವನ್ನು ನಂಬಿಕೊಂಡು ಜೀವನ ನಡೆಸುತ್ತಿರುವ ಸಾವಿರಾರು ಕುಟುಂಬಗಳು ಇದರಿಂದಾಗಿ ಬೀದಿ ಪಾಲಾಗುತ್ತವೆ. ನಿಗಮದ ವ್ಯಾಪ್ತಿಯಿಂದ ಹೊರಗುಳಿದಿರುವ ನೇಕಾರರ ಸ್ಥಿತಿ ಹೀನಾಯವಾಗಿದೆ. ಅಭಿವೃದ್ಧಿ ನಿಗಮವನ್ನು ರಾಜ್ಯ ಸರಕಾರ ನಡೆಸಲು ಅಸಮರ್ಥವಾಗಿದೆ. ಹೀಗಾಗಿ, ನಿಗಮವನ್ನು ನೇಕಾರರಿಗೆ ವಹಿಸಿಕೊಡಬೇಕು ಎಂದು ಅವರು ಒತ್ತಾಯಿಸಿದರು.

ಅಮುಲ್ ಸಂಸ್ಥೆ ಹೇಗೆ ಲಕ್ಷಾಂತರ ಗೌಳಿಗ ಗ್ರಾಮೀಣ ಮಹಿಳೆಯರ ಬದುಕಿಗೆ ಭದ್ರತೆ ನೀಡಲಾಗಿದೆಯೋ, ಅದೇ ಮಾದರಿಯಲ್ಲಿ ನೇಕಾರರಿಗೆ ತಮ್ಮ ಉದ್ದಿಮೆಯನ್ನು ತಾವೇ ನಡೆಸಿಕೊಳ್ಳಲು ಸಮರ್ಥರಿದ್ದಾರೆ. ಸರಕಾರ ನೇಕಾರರ ಕುಟುಂಬಗಳಿಗೆ ಭದ್ರತೆ ನೀಡಬೇಕು. ಇಲ್ಲದಿದ್ದರೆ, ರಾಷ್ಟ್ರೀಯ ನೇಕಾರರ ದಿನಾಚರಣೆಯ ಅಂಗವಾಗಿ ಆ.7 ರಿಂದ ಎಲ್ಲ ನೇಕಾರ ಸಂಘಟನೆಗಳೊಂದಿಗೆ ಸೇರಿ ಕೈ ಮಗ್ಗ ಸತ್ಯಾಗ್ರಹವನ್ನು ಆರಂಭಿಸಲಾಗುತ್ತದೆ. ಆ.9 ರಂದು ಹುಬ್ಬಳ್ಳಿಯಲ್ಲಿರುವ ಕೆಎಸ್‌ಡಿಸಿ ಕೇಂದ್ರ ಕಚೇರಿ ಎದುರು ಅನಿರ್ದಿಷ್ಟಾವಧಿ ಉಪವಾಸ ಧರಣಿ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಅಂಬಾನಿ ಮತ್ತು ಅದಾನಿಯವರ ಕಂಪೆನಿಗಳನ್ನು ಉಳಿಸಿ ಬೆಳೆಸಲು ಸರಕಾರಗಳು ಶ್ರಮಿಸುತ್ತಿವೆ. ರೈತರ ಸಾಲ ಮನ್ನಾಗಾಗಿ ಸಾವಿರಾರು ಕೋಟಿ ರೂ.ಗಳನ್ನು ವೆಚ್ಚ ಮಾಡುತ್ತಿದೆ. ಆದರೆ, ಉತ್ತರ ಕರ್ನಾಟಕ ಭಾಗದ 45 ಲಕ್ಷಕ್ಕೂ ಹೆಚ್ಚು ಜನ ಜೀವನ ಮಾಡುತ್ತಿರುವ ಕೈ ಮಗ್ಗ ಕ್ಷೇತ್ರ ಉಳಿಸಲು ಸರಕಾರ ಮುಂದಾಗುತ್ತಿಲ್ಲ. ಇದು ಅತ್ಯಂತ ದುಃಖಕರ ಸಂಗತಿ ಎಂದು ಅವರು ಬೇಸರದಿಂದ ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X