Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪೊಲೀಸರ ತನಿಖೆಗೆ ಕೇಂದ್ರಬಿಂದುವಾಗಿರುವ...

ಪೊಲೀಸರ ತನಿಖೆಗೆ ಕೇಂದ್ರಬಿಂದುವಾಗಿರುವ ಶಿರೂರು ಸ್ವಾಮೀಜಿ ದೇಹದಲ್ಲಿ ಪತ್ತೆಯಾದ ವಿಷ !

ವಾರ್ತಾಭಾರತಿವಾರ್ತಾಭಾರತಿ28 July 2018 9:45 PM IST
share
ಪೊಲೀಸರ ತನಿಖೆಗೆ ಕೇಂದ್ರಬಿಂದುವಾಗಿರುವ ಶಿರೂರು ಸ್ವಾಮೀಜಿ ದೇಹದಲ್ಲಿ ಪತ್ತೆಯಾದ ವಿಷ !

ಉಡುಪಿ, ಜು.28: ಶಿರೂರು ಶ್ರೀಲಕ್ಷ್ಮೀವರ ತೀರ್ಥ ಸ್ವಾಮೀಜಿಯ ಸಾವಿಗೆ ಮುಖ್ಯ ಅಂಶವಾಗಿರುವುದು ಅವರ ದೇಹದೊಳಗೆ ಪತ್ತೆಯಾಗಿರುವ ವಿಷ. ಆದುದರಿಂದ ಪೊಲೀಸರು ಈ ಬಗ್ಗೆ ಗಮನ ಕೇಂದ್ರೀಕರಿಸಿ, ಅವರ ದೇಹ ದೊಳಗೆ ವಿಷ ಹೇಗೆ ಪ್ರವೇಶಿಸಿತೆಂಬ ದಿಕ್ಕಿನಲ್ಲಿ ತನಿಖೆಯನ್ನು ಚುರುಕುಗೊಳಿಸಿ ದ್ದಾರೆ.

ಈ ಪ್ರಕರಣ ಹಲವು ಆಯಾಮಗಳನ್ನು ಹೊಂದಿದ್ದರೂ ಪೊಲೀಸರಿಗೆ ಅವರ ಸಾವಿಗೆ ಮೂಲ ಕಾರಣವಾಗಿರುವ ವಿಷದ ಅಂಶವೇ ಮುಖ್ಯವಾಗಿದೆ. ಆದುದರಿಂದ ಪೊಲೀಸರು ಇದರತ್ತ ತಮ್ಮ ಗಮನವನ್ನು ಕೇಂದ್ರೀಕರಿಸಿ ತನಿಖೆ ನಡೆಸುತ್ತಿದ್ದಾರೆ. ವೈದ್ಯರು ಆರಂಭದಲ್ಲಿ ನೀಡಿರುವ ವರದಿಯಂತೆ ಸ್ವಾಮೀಜಿ ದೇಹದಲ್ಲಿ ಪತ್ತೆಯಾಗಿರುವುದು ಬಾಹ್ಯ ಅಥವಾ ಆಂತರಿಕ ವಿಷವೇ ಎಂಬುದು ಇನ್ನೂ ಕಗ್ಗಂಟಾಗಿದೆ. ಇದಕ್ಕಾಗಿ ಪೊಲೀಸ್ ತಂಡವು ತಜ್ಞ ವೈದ್ಯರ ತಂಡದೊಂದಿಗೆ ಸಮಾಲೋಚನೆ ಕೂಡ ನಡೆಸುತ್ತಿದೆ ಎನ್ನಲಾಗಿದೆ.

ಅಂತಿಮ ಘಟ್ಟದಲ್ಲಿರುವ ಮರಣೋತ್ತರ ಪರೀಕ್ಷೆ ವರದಿಯು ಜು.30ರಂದು ಪೊಲೀಸರ ಕೈಸೇರುವ ಸಾಧ್ಯತೆ ಇದೆ. ವಿಷದ ಅಂಶವು ಸ್ವಾಮೀಜಿಯ ದೇಹ ದೊಳಗೆ ವಿವಿಧ ಮೂಲಗಳಿಗೆ ಪ್ರವೇಶಿಸಿರುವ ಸಾಧ್ಯತೆ ಇರುವುದರಿಂದ ಅವರ ಪ್ರತಿಯೊಂದು ಅಂಗಾಂಗಗಳನ್ನು ಪ್ರತ್ಯೇಕ ತಜ್ಞ ವೈದ್ಯರಿಂದ ಪರೀಕ್ಷೆಗೆ ಒಳಪಡಿಸಿ ವರದಿ ಪಡೆದುಕೊಳ್ಳಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮದ್ಯ ಸೇರಿದಂತೆ ವಿವಿಧ ಮಾದಕ ವಸ್ತುಗಳ ಸೇವನೆಯ ಚಟ ಹೊಂದಿದ್ದ ಸ್ವಾಮೀಜಿಯ ಲೀವರ್(ಯಕೃತ್) ಸಂಪೂರ್ಣ ಹದಗೆಟ್ಟಿದ್ದು, ಇದರಿಂದಲೇ ಹೊಟ್ಟೆಯೊಳಗೆ ರಕ್ತಸ್ರಾವ ಉಂಟಾಗಿದೆ ಎಂದು ವೈದ್ಯರು ತಿಳಿಸಿರುವುದಾಗಿ ಮೂಲಗಳು ಹೇಳಿವೆ. ಆದರೆ ಇವರ ದೇಹದೊಳಗೆ ವಿಷ ಹೇಗೆ ಪ್ರವೇಶಿಸಿದೆ ಎಂಬುದೇ ಇನ್ನೂ ಕೂಡ ಪೊಲೀಸರಿಗೆ ದೊಡ್ಡ ಯಕ್ಷ ಪ್ರಶ್ನೆಯಾಗಿದೆ.

ಇದೇ ಕಾರಣಕ್ಕೆ ಮೂಲಮಠದಲ್ಲಿರುವ ಸ್ವಾಮೀಜಿಯ ಕೋಣೆಯೊಳಗಿನ ಕೆಲವೊಂದು ಮಾದರಿಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯ ತಜ್ಞರು ಎರಡನೆ ಬಾರಿ ಬಂದು ಸಂಗ್ರಹಿಸಿಕೊಂಡು ಹೋಗಿದ್ದಾರೆ. ಆದುದರಿಂದ ಈಗ ಪೊಲೀಸರ ತನಿಖೆಗೆ ಶಿರೂರು ಸ್ವಾಮೀಜಿಯ ಆಪ್ತ ಮಹಿಳೆ ಹಾಗೂ ಡಿವಿಆರ್‌ಗಳು ಮುಖ್ಯವಾಗುತ್ತಿಲ್ಲ; ಸ್ವಾಮೀಜಿಯ ದೇಹದೊಳಗೆ ವಿಷ ಹೇಗೆ ಪ್ರವೇಶಿಸಿತೆಂಬುದನ್ನು ಪತ್ತೆ ಹಚ್ಚಲು ಪೊಲೀಸರಿಗೆ ಇವು ಸಹಕಾರಿಯಾಗಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X