Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಾರ್ಖಂಡ್‌ನಲ್ಲಿ ಅಪೌಷ್ಠಿಕತೆಯಿಂದ...

ಜಾರ್ಖಂಡ್‌ನಲ್ಲಿ ಅಪೌಷ್ಠಿಕತೆಯಿಂದ ವ್ಯಕ್ತಿ ಸಾವು

ಆಧಾರ್ ಇಲ್ಲದೆ ರೇಶನ್ ಇಲ್ಲ !

ವಾರ್ತಾಭಾರತಿವಾರ್ತಾಭಾರತಿ28 July 2018 9:53 PM IST
share
ಜಾರ್ಖಂಡ್‌ನಲ್ಲಿ ಅಪೌಷ್ಠಿಕತೆಯಿಂದ ವ್ಯಕ್ತಿ ಸಾವು

ಹೊಸದಿಲ್ಲಿ, ಜು.28: ಅಪೌಷ್ಠಿಕತೆ ಮತ್ತು ಅನಾರೋಗ್ಯದಿಂದ ಜುಲೈ 24ರಂದು 39ರ ಹರೆಯದ ವ್ಯಕ್ತಿಯೊಬ್ಬರು ಮೃತಪಡ್ಡಿದ್ದು, ಜಾರ್ಖಂಡ್‌ನಲ್ಲಿ ಆಧಾರ್ ಜೋಡಣೆ ಮಾಡಿಲ್ಲ ಎಂಬ ಕಾರಣಕ್ಕೆ ರೇಶನ್ ನೀಡದ ಪರಿಣಾಮ ಕಳೆದ ಒಂಬತ್ತು ತಿಂಗಳಲ್ಲಿ ಹಸಿವು ಅಥವಾ ಅಪೌಷ್ಠಿಕತೆಯಿಂದ ಮೃತಪಟ್ಟವರ ಸಂಖ್ಯೆ 13ಕ್ಕೇರಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಮೃತಪಟ್ಟ ವ್ಯಕ್ತಿಯನ್ನು ಜಾರ್ಖಂಡ್‌ನ ರಾಮಗಡ ಜಿಲ್ಲೆಯ ಮಂಡು ಬ್ಲಾಕ್‌ನ ಚೈನ್‌ಪುರ ನಿವಾಸಿ ರಾಜೇಂದ್ರ ಬಿರೋರ್ ಎಂದು ಗುರುತಿಸಲಾಗಿದೆ. ಇವರು ಸೂಕ್ಷ್ಮ ಬುಡಕಟ್ಟು ಸಮುದಾಯಕ್ಕೆ (ಪಿವಿಟಿ) ಸೇರಿದವರಾಗಿದ್ದರು. ರಾಜೇಂದ್ರ ಅವರ ಕುಟುಂಬ ಆಧಾರ್ ಕಾರ್ಡ್ ಹೊಂದಿಲ್ಲ ಎಂಬ ಕಾರಣಕ್ಕೆ ಅವರನ್ನು ಸಾರ್ವಜನಿಕ ಹಂಚಿಕಾ ವ್ಯವಸ್ಥೆಯಿಂದ ಹೊರಗಿಡಲಾಗಿತ್ತು ಎಂದು ವರದಿಗಳು ತಿಳಿಸಿವೆ. ಜನರ ಚಳವಳಿಗಳ ರಾಷ್ಟ್ರೀಯ ಮೈತ್ರಿಯ ಆಹಾರದ ಹಕ್ಕು ಅಭಿಯಾನದ ಸದಸ್ಯರು ಪರಿಶೀಲನೆ ನಡೆಸಿದಾಗ ರಾಜೇಂದ್ರ ಅವರ ಕುಟುಂಬವನ್ನು 2013ರ ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆಯಿಂದ ಹೊರಗಿಡಲಾಗಿರುವುದು ಪತ್ತೆಯಾಗಿದೆ.

ಈ ಕುಟುಂಬದ ಬಳಿ ಆಧಾರ್ ಕಾರ್ಡ್ ಇಲ್ಲದಿರುವುದೇ ಅವರನ್ನು ಕಾಯ್ದೆಯಿಂದ ಹೊರಗಿಡಲು ಕಾರಣ ಎಂದು ಬ್ಲಾಕ್ ಅಭಿವೃದ್ಧಿ ಅಧಿಕಾರಿ ತಿಳಿಸಿರುವುದಾಗಿ ಅಭಿಯಾನದ ಸದಸ್ಯರು ಆರೋಪಿಸಿದ್ದಾರೆ. ಅಂತ್ಯೋದಯ ಕಾರ್ಡ್‌ಗಳನ್ನು ಹೊಂದಿರುವ ಸೂಕ್ಷ್ಮ ಬುಡಕಟ್ಟು ಸಮುದಾಯಗಳಿಗೆ ಮಾಸಿಕ 35 ಕೆ.ಜಿ ಆಹಾರಧಾನ್ಯ ಉಚಿತವಾಗಿ ವರ ಮನೆಯ ಬಾಗಿಲಿಗೆ ತಲುಪಿಸಬೇಕೆಂದು ಸರ್ವೋಚ್ಚ ನ್ಯಾಯಾಲಯದ ಆದೇಶ ಹೇಳುತ್ತದೆ. ಆದರೆ ಅಧಿಕಾರಿಗಳನ್ನು ಇದನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ ಮತ್ತು ಆಹಾರಧಾನ್ಯ ಪಡೆಯಲು ಆಧಾರ್ ಕಡ್ಡಾಯಗೊಳಿಸಿದ್ದಾರೆ ಎಂದು ಸದಸ್ಯರು ಆರೋಪಿಸಿದ್ದಾರೆ.

ಬಲಹೀನತೆಯಿಂದಾಗಿ ರಾಜೇಂದ್ರ ಅವರು ಒಂದು ವರ್ಷದ ಹಿಂದೆ ಕೆಲಸ ಮಾಡುವುದನ್ನು ನಿಲ್ಲಿಸಿದ್ದರು. ಅವರ ಪತ್ನಿ ವಾರದಲ್ಲಿ ಎರಡು, ಮೂರು ದಿನ ದುಡಿದ ಹಣದಲ್ಲಿ ಪತಿ, ಪತ್ನಿ ಮತ್ತು ಆರು ಮಕ್ಕಳ ಜೀವನ ಸಾಗಬೇಕಿತ್ತು. ಕಳೆದ ಒಂದು ವರ್ಷದಿಂದ ಇಡೀ ಕುಟುಂಬ ಅರೆಹೊಟ್ಟೆಯಲ್ಲೇ ಬದುಕುತ್ತಿದೆ ಎಂದು ಅವರು ತಿಳಿಸಿದ್ದಾರೆ. ತೀವ್ರ ಅಸ್ವಸ್ಥಗೊಂಡ ರಾಜೇಂದ್ರ ಅವರನ್ನು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರ ದಾಖಲಿಸಲಾಗಿತ್ತು. ಆದರೆ ಅಲ್ಲಿನ ವೈದ್ಯರು ರಾಂಚಿಯಲ್ಲಿರುವ ಆಸ್ಪತ್ರೆಗೆ ಕೊಂಡೊಯ್ಯುವಂತೆ ಸೂಚಿಸಿದ್ದಾರೆ. ಆಮೂಲಕ ರಾಜೇಂದ್ರಗೆ ಪ್ರಾಥಮಿಕ ಚಿಕಿತ್ಸೆಯನ್ನೂ ನೀಡದೆ ನಿರ್ಲಕ್ಷವಹಿಸಿದ್ದಾರೆ ಎಂದು ಹಕ್ಕುಗಳ ಹೋರಾಟಗಾರರು ಆರೋಪಿಸಿದ್ದಾರೆ.

 ಕಳೆದ ಒಂಬತ್ತು ತಿಂಗಳಲ್ಲಿ ಜಾರ್ಖಂಡ್‌ನಲ್ಲಿ ಹದಿಮೂರು ಮಂದಿ ಅಪೌಷ್ಠಿಕತೆಯಿಂದ ಸಾವನ್ನಪ್ಪಿದ್ದಾರೆ. ಈ ಪೈಕಿ ಕನಿಷ್ಟ ಏಳು ಮಂದಿ ಆಧಾರ್ ಸಂಬಂಧಿ ವೈಫಲ್ಯಗಳ ಕಾರಣದಿಂದ ಆಹಾರಧಾನು ಪಡೆಯದ ಪರಿಣಾಮ ಹಸಿವಿನಿಂದ ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X