Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಾಕಿಸ್ತಾನದಲ್ಲಿ ಇಮ್ರಾನ್ ಖಾನ್...

ಪಾಕಿಸ್ತಾನದಲ್ಲಿ ಇಮ್ರಾನ್ ಖಾನ್ ಗೆಲುವಿಗೆ ಪ್ರತಿಕ್ರಿಯಿಸಿದ ಭಾರತ

ವಾರ್ತಾಭಾರತಿವಾರ್ತಾಭಾರತಿ28 July 2018 10:54 PM IST
share
ಪಾಕಿಸ್ತಾನದಲ್ಲಿ ಇಮ್ರಾನ್ ಖಾನ್ ಗೆಲುವಿಗೆ ಪ್ರತಿಕ್ರಿಯಿಸಿದ ಭಾರತ

ಹೊಸದಿಲ್ಲಿ, ಜು.28: ಪಾಕಿಸ್ತಾನದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಇಮ್ರಾನ್ ಖಾನ್ ನೇತೃತ್ವದ ತೆಹ್ರಿಕೆ ಇನ್ಸಾಫ್ ಅತ್ಯಂತ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಈ ಬಗ್ಗೆ ಇದೇ ಮೊದಲ ಬಾರಿ ನೀಡಿರುವ ಪ್ರತಿಕ್ರಿಯೆಲ್ಲಿ ಭಾರತ, ಪಾಕಿಸ್ತಾನದ ನೂತನ ಸರಕಾರ ಭಯೋತ್ಪಾದನೆ ಮತ್ತು ಹಿಂಸೆಯಿಂದ ಮುಕ್ತವಾಗಿರುವ ಸುರಕ್ಷಿತ, ಸ್ಥಿರ, ಭದ್ರ ಹಾಗೂ ಅಭಿವೃದ್ಧಿ ಹೊಂದಿದ ದಕ್ಷಿಣ ಏಶ್ಯಾವನ್ನು ನಿರ್ಮಿಸಲು ಕೈಜೋಡಿಸಲಿದೆ ಎಂದು ನಂಬಿರುವುದಾಗಿ ತಿಳಿಸಿದೆ. ಪಾಕಿಸ್ತಾನ ಚುನಾವಣೆಯ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ವಿದೇಶಾಂಗ ಸಚಿವಾಲಯದ ವಕ್ತಾರ, ಪಾಕಿಸ್ತಾನದ ಜನರು ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿರಿಸಿದ್ದಾರೆ ಎಂಬುದನ್ನು ಸಾರ್ವತ್ರಿಕ ಚುನಾವಣೆಯ ಮೂಲಕ ತೋರಿಸಿಕೊಟ್ಟಿದ್ದಾರೆ. ಅದನ್ನು ನಾವು ಸ್ವಾಗತಿಸುತ್ತೇವೆ ಎಂದು ತಿಳಿಸಿದ್ದಾರೆ.

ಚುನಾವಣೆಯ ಎಲ್ಲ ಫಲಿತಾಂಶಗಳು ಘೋಷಣೆಯಾಗುವುದಕ್ಕೂ ಮುನ್ನ ಗೆಲುವಿನ ಭಾಷಣ ಮಾಡಿದ್ದ ಇಮ್ರಾನ್ ಖಾನ್ ಭಾರತದ ಜೊತೆ ಸಂಬಂಧ ಸುಧಾರಿಸುವ ಬಗ್ಗೆ ಮಾತನಾಡಿದ್ದರು. “ನಮ್ಮ ಸಂಬಂಧವನ್ನು ಸರಿಪಡಿಸಲು ನಾನು ಬಯಸುತ್ತೇನೆ. ಅವರು ಒಂದು ಹೆಜ್ಜೆ ನಮ್ಮತ್ತ ಇಟ್ಟರೆ, ನಾವು ಅವರತ್ತ ಎರಡು ಹೆಜ್ಜೆಗಳನ್ನು ಇಡುತ್ತೇವೆ. ಆದರೆ ಕನಿಷ್ಟ ನಮಗೆ ಆರಂಭವೊಂದು ಸಿಗಬೇಕು” ಎಂದು ಖಾನ್ ತಿಳಿಸಿದ್ದರು. ಗಡಿಯಾಚೆಗಿನ ಭಯೋತ್ಪಾದನೆಯಿಂದಾಗಿ ಇತ್ತೀಚಿನ ವರ್ಷಗಳಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧ ಕಳೆಗುಂದುತ್ತಾ ಸಾಗಿದೆ. ಪಾಕಿಸ್ತಾನಿ ಮೂಲದ ಉಗ್ರರು ಭಾರತದ ಸೇನಾನೆಲೆಗಳ ಮೇಲೆ ದಾಳಿ ನಡೆಸುವ ಮೂಲಕ ಈ ಸಂಬಂಧ ಮತ್ತಷ್ಟು ಹಳಸಿದೆ. ಎರಡು ದೇಶಗಳ ಮಧ್ಯೆ ಯಾವುದೇ ಅರ್ಥಪೂರ್ಣ ಮಾತುಕತೆಗೂ ಮೊದಲು ಪಾಕಿಸ್ತಾನ ತನ್ನ ನೆಲದಿಂದ ನಡೆಸಲಾಗುತ್ತಿರುವ ಭಯೋತ್ಪಾದನೆಯನ್ನು ನಿಲ್ಲಿಸಬೇಕೆಂದು ಭಾರತ ಹೇಳುತ್ತಲೇ ಬಂದಿದೆ.

ಪಾಕಿಸ್ತಾನದಲ್ಲಿ ಅಧಿಕಾರಕ್ಕೆ ಬರುವ ಪಕ್ಷವು ಉಗ್ರವಾದಕ್ಕೆ ಬೆಂಬಲ ನೀಡುವಂತಿದ್ದರೆ ಜಮ್ಮು ಮತ್ತು ಕಾಶ್ಮೀರದ ಮತ್ತು ಇಡೀ ದೇಶದ ಜನರ ಭದ್ರತೆಯ ಮೇಲೆ ಪರಿಣಾಮ ಬೀರಲಿದೆ ಎಂಬ ಕಾರಣದಿಂದ ಭಾರತ ಪಾಕಿಸ್ತಾನದ ಚುನಾವಣೆಯ ಫಲಿತಾಂಶವನ್ನು ಗಮನಿಸುತ್ತಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X