Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬೆಳಗ್ಗೆ ನಗ್ನರಾಗಿ, ನೋವಿನಿಂದ...

ಬೆಳಗ್ಗೆ ನಗ್ನರಾಗಿ, ನೋವಿನಿಂದ ಏಳುತ್ತಿದ್ದೆವು

ನಿರಾಶ್ರಿತರ ಶಿಬಿರದ ನರಕ ಯಾತನೆ ಬಿಚ್ಚಿಟ್ಟ ಬಾಲಕಿಯರು

ವಾರ್ತಾಭಾರತಿವಾರ್ತಾಭಾರತಿ29 July 2018 11:12 PM IST
share
ಬೆಳಗ್ಗೆ ನಗ್ನರಾಗಿ, ನೋವಿನಿಂದ ಏಳುತ್ತಿದ್ದೆವು

ಮುಝಾಪ್ಫರ್‌ಪುರ್, ಜು. 29: ‘‘ನಮಗೆ ಮಾದದ ದ್ರವ್ಯವನ್ನು ಆಹಾರದಲ್ಲಿ ನೀಡಲಾಗುತ್ತಿತ್ತು. ಅತ್ಯಾಚಾರ ಎಸಗಲಾಗುತ್ತಿತ್ತು ಹಾಗೂ ಬೆದರಿಕೆ ಒಡ್ಡಲಾಗುತ್ತಿತ್ತು. ಇದು ಪ್ರತಿ ರಾತ್ರಿ ನಡೆಯುತ್ತಿತ್ತು’’ ಎಂದು ಬಿಹಾರದ ಮುಝಾಫ್ಫರ್‌ಪುರ್‌ನ ನಿರಾಶ್ರಿತರ ಶಿಬಿರದಲ್ಲಿ ನರಕಯಾತನೆ ಅನುಭವಿಸಿದ ಬಾಲಕಿಯರು ಹೇಳಿದ್ದಾರೆ.

 ಎಲ್ಲ ಬಾಲಕಿಯರ ವೈದ್ಯಕೀಯ ವರದಿಗಳಲ್ಲಿ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ. ಉಪ ವಿಭಾಗೀಯ ದಂಡಾಧಿಕಾರಿ ಮುಂದೆ ಬಾಲಕಿಯರು ನೀಡಿದ ಹೇಳಿಕೆಯಲ್ಲಿ ಮುಝಾಫ್ಫರ್‌ಪುರ್ ಮಕ್ಕಳ ರಕ್ಷಣಾ ಅಧಿಕಾರಿ ರವಿ ಕುಮಾರ್ ರೋಷನ್ ಹಾಗೂ ಬ್ರಿಜೇಶ್ ಠಾಕೂರ್ ಅವರನ್ನು ಉಲ್ಲೇಖಿಸಿದ್ದಾರೆ. ಸರಕಾರೇತರ ಸಂಸ್ಥೆ ನಡೆಸುತ್ತಿದ್ದ ಈ ನಿರಾಶ್ರಿತರ ಶಿಬಿರವನ್ನು ಕಪ್ಪು ಪಟ್ಟಿಗೆ ಸೇರಿಸಲಾಗಿದೆ ಹಾಗೂ ಎಲ್ಲ ಬಾಲಕಿಯರನ್ನು ಸಮೀಪ ಶಿಬಿರಕ್ಕೆ ವರ್ಗಾಯಿಸಲಾಗಿದೆ. ಸರಕಾರೇತರ ಸಂಸ್ಥೆಯನ್ನು ನಡೆಸುತ್ತಿದ್ದ ಬ್ರಿಜೇಶ್ ಠಾಕೂರ್ ಹಾಗೂ ರೋಷನ್‌ರನ್ನು ಬಂಧಿಸಲಾಗಿದೆ. ರವಿ ಕುಮಾರ್ ರೋಷನ್ ನನ್ನು ನಿರಂತರ ನಮ್ಮ ಶಿಬಿರಕ್ಕೆ ಆಗಮಿಸುತ್ತಿದ್ದರು ಎಂದು ಬಾಲಕಿಯರು ಹೇಳಿದ್ದಾರೆ. ‘‘ಚಂದಾ ಆಂಟಿ ನನ್ನನ್ನು ಅವರಲ್ಲಿಗೆ ಕೊಂಡೊಯ್ದರು. ಆಂಟಿ ನನಗೆ ಮಾತ್ರೆ ನೀಡಿದ್ದರು. ಮಾತ್ರೆ ಕುಡಿದ ಕೂಡಲೇ ನಾನು ಪ್ರಜ್ಞೆ ಕಳೆದುಕೊಂಡೆ. ಬೆಳಗ್ಗೆ ಏಳುವಾಗ ನಾನು ನಗ್ನಳಾಗಿದ್ದೆ. ದೇಹವೆಲ್ಲ ನೋವಿನಿಂದ ಕೂಡಿತ್ತು. ರೋಷನ್ ನನ್ನ ಮೇಲೆ ಅತ್ಯಾಚಾರ ಎಸಗಿದ್ದ ಹಾಗೂ ಯಾರಿಗೂ ಹೇಳದಂತೆ ಬೆದರಿಕೆ ಒಡ್ಡಿದ್ದ’’ ಎಂದು ಬಾಲಕಿಯೊಬ್ಬಳು ಹೇಳಿದ್ದಾಳೆ. ನಿರಾಶ್ರಿತರ ಶಿಬಿರದಲ್ಲಿರುವ ಒಂದು ಕೊಠಡಿಯಲ್ಲಿ ರೋಷನ್ ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ‘‘ಆಕೆಯ ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ ಎಸಗಿದ್ದಾನೆ.’’ ಎಂದು ಇನ್ನೊಂದು ಕೊಠಡಿಯ ಕಿಟಕಿಯಿಂದ ಘಟನೆಯನ್ನು ವೀಕ್ಷಿಸಿದ್ದ ಬಾಲಕಿಯೋರ್ವಳು ತಿಳಿಸಿದ್ದಾಳೆ. ಇನ್ನೊಂದು ಘಟನೆಯಲ್ಲಿ ಲೈಂಗಿಕ ಸಂಪರ್ಕಕ್ಕೆ ನಿರಾಕರಿಸಿದ ಬಾಲಕಿಯೊಬ್ಬಳು ಮೇಲೆ ರೋಷನ್ ಹಲ್ಲೆಗೈದಿದ್ದಾನೆ. ‘‘ಆತ ನನಗೆ ಪರಚಿದ.’’ ಎಂದು ಹೇಳಿರುವ ಬಾಲಕಿ, ರೋಷನ್ ಆಗಾಗ ಸಾರಾಯಿ ತರುತ್ತಿದ್ದ ಹಾಗೂ ಕುಡಿಯುವಂತೆ ನಮಗೆ ಒತ್ತಾಯಿಸುತ್ತಿದ್ದ ಎಂದಿದ್ದಾಳೆ.

ಲೈಂಗಿಕ ದೌರ್ಜನ್ಯದ ಬಗ್ಗೆ ಪ್ರಶ್ನಿಸಿದಾಗ ಮೂಕಿ ಬಾಲಕಿಯೋರ್ವಳು ರೋಷನ್ ಫೋಟೊದತ್ತ ಕೈತೋರಿಸಿದ್ದಾಳೆ. ಇನ್ನೋರ್ವ ಬಾಲಕಿಯನ್ನು ರೋಷನ್ ಅಡುಗೆ ಕೋಣೆಯಲ್ಲಿ ಅತ್ಯಾಚಾರ ಎಸಗಿದ್ದಾನೆ. ಚಾಕು ವಿನೊಂದಿಗೆ ಆಗಮಿಸಿದ್ದ ಆತ ಬಾಲಕಿಯ ಕೈಗೆ ಗಾಯಗೊಳಿಸಿದ್ದಾನೆ. ‘‘ರೋಷನ್ ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಒಡ್ಡಿದ್ದ.’’ ಎಂದು ಆ ಬಾಲಕಿ ಹೇಳಿದ್ದಾಳೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X