Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಲಯನ್ಸ್ ಕ್ಲಬ್‌ನ ನೂತನ ಘಟಕ ‘ಬೆಂಗಳೂರು...

ಲಯನ್ಸ್ ಕ್ಲಬ್‌ನ ನೂತನ ಘಟಕ ‘ಬೆಂಗಳೂರು ಅರ್ಪಣ’ಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ30 July 2018 6:33 PM IST
share
ಲಯನ್ಸ್ ಕ್ಲಬ್‌ನ ನೂತನ ಘಟಕ ‘ಬೆಂಗಳೂರು ಅರ್ಪಣ’ಕ್ಕೆ ಚಾಲನೆ

ಬೆಂಗಳೂರು, ಜು.30: ಇಂಟರ್ ನ್ಯಾಷನಲ್ ಲಯನ್ಸ್ ಕ್ಲಬ್‌ನ ರಾಜಾಜಿನಗರ ವಲಯದ ‘ಬೆಂಗಳೂರು ಅರ್ಪಣ’ ಹೆಸರಿನ ನೂತನ ಶಾಖೆಯನ್ನು ಶಾಸಕ ಡಾ.ಅಶ್ವಥ್ ನಾರಾಯಣ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಾಮಾಜಿಕ ಮೌಲ್ಯಗಳನ್ನು ಬಿತ್ತುವ ಮೂಲಕ ಭವ್ಯವಾದ ಸಮಾಜ ನಿರ್ಮಾಣ ಮಾಡಬೇಕು. ಪ್ರತಿಯೊಬ್ಬರಲ್ಲಿಯೂ ಮಾನವೀಯತೆ ರೂಪಗೊಳ್ಳಬೇಕು. ಇಂದು ಲಯನ್ಸ್ ಕ್ಲಬ್ ಎಂದ ತಕ್ಷಣ ಎಲ್ಲರೂ ಗುರುತಿಸುತ್ತಾರೆ. ಬಡವರು, ನಿರ್ಗತಿಕರು, ಅಂಗವಿಕಲರಿಗೆ ಸಹಾಯ ಹಸ್ತ ನೀಡುತ್ತಿದೆ. ಅಲ್ಲದೆ, ಈ ಸಂಸ್ಥೆಯೊಂದಿಗಿನ ಒಡನಾಟ ವ್ಯಕ್ತಿತ್ವ ವಿಕಸನದ ಜೊತೆಗೆ ನಾಯಕತ್ವದ ಗುಣ ನೀಡುತ್ತದೆ ಎಂದು ಹೇಳಿದರು.

ಗ್ರಾಮೀಣ ಪ್ರದೇಶಗಳಲ್ಲಿ ಸ್ಥಳೀಯ ಸಮಸ್ಯೆಗಳನ್ನು ಪರಿಹರಿಸಿ ಪ್ರಗತಿಗೆ ನೆರವು ಮಾರ್ಗದರ್ಶನ ಮತ್ತು ಪ್ರೋತ್ಸಾಹ ನೀಡುತ್ತಿದೆ. ಯುವಜನತೆ ಅಧಿಕ ಸಂಖ್ಯೆಯಲ್ಲಿ ಲಯನ್ಸ್ ಕ್ಲಬ್ ಸದಸ್ಯರಾಗಿ ಸಮಾಜ ಸೇವೆ ಮಾಡಬೇಕು. ಎಲ್ಲರೂ ತಮ್ಮ ಆದಾಯ ಮತ್ತು ಸಮಯದ ಸ್ವಲ್ಪಭಾಗವನ್ನು ಸಮಾಜ ಸೇವೆಗಾಗಿ ಮೀಸಲಿಡಬೇಕು ಎಂದು ಅವರು ಸಲಹೆ ನೀಡಿದರು.

ಲಯನ್ಸ್ ಕ್ಲಬ್‌ನ ಜಿಲ್ಲಾ ಗವರ್ನರ್ ಡಾ.ಪಿ.ಆರ್.ಎಸ್.ಚೇತನ್ ಮಾತನಾಡಿ, ಪರಸ್ಪರ ಪ್ರೀತಿ-ವಿಶ್ವಾಸದೊಂದಿಗೆ ಸ್ನೇಹ ಮತ್ತು ಸೇವೆಯೊಂದಿಗೆ ಉತ್ತಮ ಪ್ರಗತಿ ಸಾಧಿಸುವುದೇ ಲಯನ್ಸ್ ಕ್ಲಬ್ ಧ್ಯೇಯವಾಗಿದೆ. ವಿಶ್ವದ 210 ದೇಶಗಳಲ್ಲಿ 46 ಸಾವಿರ ಲಯನ್ಸ್ ಕ್ಲಬ್‌ಗಳ 14 ಲಕ್ಷ ಸದಸ್ಯರು ಸೇವಾ ದೀಕ್ಷೆಯೊಂದಿಗೆ ಉತ್ತಮ ಸೇವೆ ಮಾಡುತ್ತಿದ್ದಾರೆ ಎಂದು ಹೇಳಿದರು. ವೈಯಕ್ತಿಕವಾಗಿ ಮಾಡುವ ದಾನ-ಧರ್ಮ ಹಾಗೂ ಸಮಾಜ ಸೇವೆಗಿಂತ ಲಯನ್ಸ್ ಕ್ಲಬ್‌ನಂತಹ ಸೇವಾ ಸಂಸ್ಥೆಯ ಮೂಲಕ ಮಾಡುವ ಸಾಮೂಹಿಕ ಸೇವೆ ಹೆಚ್ಚು ಮಹತ್ವ ಪೂರ್ಣವಾಗಿದೆ ಎಂದು ತಿಳಿಸಿದರು.

ಕ್ಲಬ್‌ನ ನೂತನ ಅಧ್ಯಕ್ಷ ಆರ್.ವೆಂಕಟೇಶ್ ಮಾತನಾಡಿ, ನಾವು ದುಡಿದ ಹಣದಲ್ಲಿ ಅಲ್ಪ ಭಾಗವನ್ನು ಆರ್ಥಿಕವಾಗಿ ದುರ್ಬಲರಿಗೆ ವಿದ್ಯಾಭ್ಯಾಸ ಮುಂದುವರಿಸಲು ವಿದ್ಯಾರ್ಥಿಗಳಿಗೆ ಹಾಗೂ ಅನಾರೋಗ್ಯಪೀಡಿತರಿಗೆ ನೆರವು ನೀಡುವುದರಿಂದ ತೃಪ್ತಿ ದೊರಕಲಿದೆ. ಇದರಿಂದ ಸಮಾಜದಲ್ಲಿ ಮಾನವೀಯ ಮೌಲ್ಯ ಬಿತ್ತಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟರು. ನೂತನವಾಗಿ ಆರಂಭಗೊಂಡಿರುವ ಲಯನ್ಸ್ ಕ್ಲಬ್ ವತಿಯಿಂದ ಮುಂಬರುವ ದಿನಗಳಲ್ಲಿ ಉಚಿತ ಆ್ಯಂಬುಲೆನ್ಸ್ ಸೇವೆ, ರಕ್ತದಾನ ಶಿಬಿರ ನಡೆಸಲು ಉದ್ದೇಶಿಸಿದ್ದೇವೆ ಎಂದು ಹೇಳಿದರು. 

ಕಾರ್ಯಕ್ರಮದಲ್ಲಿ ಸುಬ್ರಮಣ್ಯನಗರ ವಾರ್ಡ್‌ನ ಬಿಬಿಎಂಪಿ ಸದಸ್ಯ ಎಚ್.ಮಂಜುನಾಥ, ಲಯನ್ಸ್ ಕ್ಲಬ್‌ನ ಜಿಲ್ಲಾ ಗವರ್ನರ್ ರೇಣುಕುಮಾರ್, ಉದಯಶಂಕರ್, ಬಾಲಕೃಷ್ಣ, ಅನಿಲ್‌ರೆಡ್ಡಿ, ಕೃಷ್ಣಮೂರ್ತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಇದೇ ವೇಳೆ ರೋಗಿಯೊಬ್ಬರಿಗೆ ವೀಲ್ ಚೇರ್ ಹಾಗೂ ಅಂಧರಿಗೆ ಪರಿಕರಗಳನ್ನು ವಿತರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X