Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನೀಲಾವರ ವಿಶೇಷ ಮಕ್ಕಳ ಶಾಲೆಗೆ ಸವಲತ್ತುಗಳ...

ನೀಲಾವರ ವಿಶೇಷ ಮಕ್ಕಳ ಶಾಲೆಗೆ ಸವಲತ್ತುಗಳ ಕೊಡುಗೆ

ವಾರ್ತಾಭಾರತಿವಾರ್ತಾಭಾರತಿ31 July 2018 6:38 PM IST
share
ನೀಲಾವರ ವಿಶೇಷ ಮಕ್ಕಳ ಶಾಲೆಗೆ ಸವಲತ್ತುಗಳ ಕೊಡುಗೆ

ಉಡುಪಿ, ಜು.31: ನಾವು ಬದುಕಿ ಇನ್ನೊಬ್ಬರನ್ನು ಬದುಕಿಸುವ ಮೂಲಕ ಸಮಾಜದಲ್ಲಿ ದುಖಿಃತರ ಕಷ್ಟಗಳಿಗೆ ಸ್ಪಂದಿಸುವುದು ನಿಜವಾದ ಬದುಕು ಎಂದು ಪೇಜಾವರ ಮಠದ ಕಿರಿಯ ಯತಿ ಶ್ರೀಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ರೋಟರಿ ಉಡುಪಿ ವತಿಯಿಂದ ಗ್ಲೋಬಲ್ ಗ್ರ್ಯಾಂಟ್ ಮೂಲಕ ಸೋಮ ವಾರ ನಡೆದ ನೀಲಾವರದ ಸುಮೇಧ ವಿಶೇಷ ಮಕ್ಕಳ ಶಾಲೆಗೆ ಸೌಲಭ್ಯಗಳ ವಿತರಣಾ ಸಮಾರಂದಲ್ಲಿ ಅವರು ಮಾತನಾಡುತಿದ್ದರು.

ಶಾಲೆಗೆ ಸುಮಾರು 28.23ಲಕ್ಷ ರೂ.ಮೌಲ್ಯದ ಎರಡು ತರಗತಿ ಕೋಣೆಗಳು ಹಾಗೂ ಕಛೇರಿಯ ಪೀಠೋಪಕರಣಗಳು, ನಾಲ್ಕು ಕಂಪ್ಯೂಟರ್‌ಗಳು, ಶುದ್ಧ ಕುಡಿಯುವ ನೀರಿನ ಘಟಕ, ಫಿಸಿಯೋಥೆರಪಿ ಉಪಕರಣಗಳು, ದೃಶ್ಯ ಮತ್ತು ಶ್ರಾವ್ಯ ಉಪಕರಣಗಳು, ಎರಡು ಶಾಲಾ ವಾಹನಗಳನ್ನು ರೋಟರಿ ಗ್ಲೋಬಲ್ ಗ್ರ್ಯಾಂಟ್ ಯೋಜನೆ ಯಡಿಯಲ್ಲಿ ಅಮೇರಿಕಾದ ರೋಟರಿ ಕ್ಲಬ್ ಸೆಂಟ್ರಲ್ ಚೆಸ್ಟರ್ ಕೌಂಟಿ, ರೋಟರಿ ಜಿಲ್ಲೆ 7450, ದಿ ರೋಟರಿ ಫೌಂಡೇಶನ್ ಹಾಗೂ ರೋಟರಿ ಜಿಲ್ಲೆ 3182 ಜೊತೆ ಸೇರಿ ನೀಡಲಾಯಿತು.

ಒಟ್ಟು ಯೋಜನೆಯ ಶಿಲಾಫಲಕವನ್ನು ಅಮೆರಿಕದ ರೋಟರಿ ಚೆಸ್ಟರ್ ಕಂಟ್ರಿಯ ವಸಂತ ಪ್ರಭು ಅನಾವರಣೆಗೊಳಿಸಿದರು. ಈ ಸಂದರ್ಭದಲ್ಲಿ ವಾಹನಗಳ ಕೀಲಿ ಕೈ, ದೃಶ್ಯ ಶ್ರವಣ ವಿಭಾಗ ಉದ್ಘಾಟನೆ ಹಾಗೂ ಫಿಸಿಯೋ ಥೆರೆಪಿ ವಿಭಾಗದ ಉದ್ಘಾಟನೆಯನ್ನು ಜಿಲ್ಲಾ ಗವರ್ನರ್ ಅಭಿನಂದನ ಶೆಟ್ಟಿ, ನಿಕಟಪೂರ್ವ ಜಿಲ್ಲಾ ಗವರ್ನರ್ ಜಿ.ಎನ್.ಪ್ರಕಾಶ್ ಹಾಗೂ ತರಗತಿ ಕೋಣೆ, ಕಛೇರಿಯ ಪೀಠೋಪಕರಣಗಳ ವಿಭಾಗದ ಉದ್ಘಾಟನೆಯನ್ನು ರೋಟರಿ ಫೌಂಡೇಶನ್ ಜಿಲ್ಲಾ ಸಭಾಪತಿ ಸದಾನಂದ ಛಾತ್ರ ನೆರವೇರಿಸಿದರು. ಜಿಲ್ಲಾ ಗ್ರ್ಯಾಂಟ್ ಉಪಸಮಿತಿ ಸಭಾಪತಿ ಎಚ್.ಎನ್.ಎಸ್.ರಾವ್, ಸಹಾಯಕ ಗವರ್ನರ್ ಡಾ.ಗಣೇಶ್, ರಾಜಾರಾಮ ಭಟ್ ಉಪಸ್ಥಿತರಿದ್ದರು.

ರೋಟರಿ ಉಡುಪಿ ಅಧ್ಯಕ್ಷ ಚಂದ್ರಶೇಖರ ಅಡಿಗ ಸ್ವಾಗತಿಸಿದರು. ಅಧ್ಯಕ್ಷ ರಾಮಚಂದ್ರ ಉಪಾಧ್ಯಾಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಜಿ ಸಹಾಯಕ ಗವರ್ನರ್ ಸುಬ್ರಹ್ಮಣ್ಯ ಬಾಸ್ರಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಜನಾರ್ದನ ಭಟ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X