Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸ್ವಚ್ಛತೆಗಾಗಿ ದೇಶದ 13 ಪ್ರಮುಖ ಬಂದರುಗಳ...

ಸ್ವಚ್ಛತೆಗಾಗಿ ದೇಶದ 13 ಪ್ರಮುಖ ಬಂದರುಗಳ ಪೈಕಿ ಎನ್‌ಎಂಪಿಟಿಗೆ ಪ್ರಥಮ ಸ್ಥಾನ

'2017-18ನೆ ಸಾಲಿಗೆ 190.55ಕೋಟಿ ನಿವ್ವಳ ಲಾಭಗಳಿಕೆ'

ವಾರ್ತಾಭಾರತಿವಾರ್ತಾಭಾರತಿ31 July 2018 8:34 PM IST
share
ಸ್ವಚ್ಛತೆಗಾಗಿ ದೇಶದ 13 ಪ್ರಮುಖ ಬಂದರುಗಳ ಪೈಕಿ ಎನ್‌ಎಂಪಿಟಿಗೆ ಪ್ರಥಮ ಸ್ಥಾನ

ಮಂಗಳೂರು, ಜು. 31: ನವಮಂಗಳೂರು ಬಂದರು ಮಂಡಳಿಯಿಂದ 2017-18ನೆ ಸಾಲಿನಲ್ಲಿ 124 .81 ಕೋಟಿ ರೂ ತೆರಿಗೆ ಪಾವತಿಸಿ, 190 .55 ಕೋಟಿ ರೂ. ನಿವ್ವಳ ಲಾಭಗಳಿಸಿದೆ ಎಂದು ಅಧ್ಯಕ್ಷ ಎಂ.ಟಿ. ಕೃಷ್ಣ ಬಾಬು ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ನವ ಮಂಗಳೂರು ಬಂದರು ಮಂಡಳಿಯಿಂದ 2017-18ನೆ ಸಾಲಿನಲ್ಲಿ 42.06 ಮಿಲಿಯನ್ ಮೆಟ್ರಿಕ್ ಟನ್ ಸರಕು ನಿರ್ವಹಣೆ ಮಾಡಲಾಗಿದ್ದು, 2016-17ನೆ ಸಾಲಿಗಿಂತ 5.28 ಶೇಕಡಾ ಹೆಚ್ಚುವರಿ ಸರಕು ನಿರ್ವಹಣೆ ಮಾಡಲಾಗಿದೆ ಎಂ.ಟಿ. ಕೃಷ್ಣ ಬಾಬು ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಸ್ವಚ್ಛತೆಯಲ್ಲಿ ಪ್ರಥಮ ಸ್ಥಾನ:-

ನವಮಂಗಳೂರು ಬಂದರು ಮಂಡಳಿಗೆ ಸ್ವಚ್ಛ ಭಾರತದ ಅಭಿಯಾನದಡಿ ದೇಶದ 13 ಪ್ರಮುಖ ಬಂದರುಗಳಲ್ಲಿ ಪ್ರಥಮ ಸ್ಥಾನ ದೊರೆತಿದೆ. ಬಂದರು ಮಂಡಳಿಯ ವ್ಯಾಪ್ತಿಯಲ್ಲಿ ಅಳವಡಿಸಲಾದ ಸೋಲಾರ್ ವಿದ್ಯುತ್ ಉತ್ಪಾದನೆಯ ಯೋಜನೆಯಿಂದ 840 ಕಿ.ವ್ಯಾ ವಿದ್ಯುತ್ ಉತ್ಫಾದನೆಯಾಗುತ್ತಿದ್ದು, ಇದರೊಂದಿಗೆ ಮಂಡಳಿಯ ವಿದ್ಯುತ್ ಬೇಡಿಕೆಯ ಶೇ. 95 ಭಾಗ ಸೋಲಾರ್ ವಿದ್ಯುತ್‌ನಿಂದ ಪೂರೈಕೆಯಾಗುತ್ತಿದೆ. ಸ್ವಚ್ಛ ಭಾರತ ಅಭಿಯಾನದ ಯೋಜನೆಯಡಿ ಈ ಯೋಜನೆಯನ್ನು ಪರಿಗಣಿಸಲಾಗಿದೆ ಎಂದು ಕೃಷ್ಣ ಬಾಬು ತಿಳಿಸಿದರು.

2017-18ನೆ ಸಾಲಿನಲ್ಲಿ 22 ಹಡುಗುಗಳ ಮೂಲಕ 24,258 ಪ್ರಯಾಣಿಕರು ಭೇಟಿ ನೀಡಿದ್ದಾರೆ. 2016-17 ನೆ ಸಾಲಿನಲ್ಲಿ 28 ಹಡಗುಗಳ ಮೂಲಕ 30,246 ಪ್ರಯಾಣಿಕರು ಭೇಟಿ ನೀಡಿದ್ದರು. ಈ ವರ್ಷಕ್ಕೆ ಹೋಲಿಸಿದಾಗ ಹಿಂದಿನ ವರ್ಷ ಹೆಚ್ಚು ಹಡಗುಗಳು ಮತ್ತು ಪ್ರಯಾಣಿಕರು ಭೇಟಿ ನೀಡಿದ್ದರು ಎಂದು ಎಂ.ಟಿ.ಕೃಷ್ಣ ಬಾಬು ತಿಳಿಸಿದ್ದಾರೆ.

ನವ ಮಂಗಳೂರು ಬಂದರು ಮಂಡಳಿಯಿಂದ 2017-18ನೆ ಸಾಲಿನಲ್ಲಿ 23.719 ಲಕ್ಷ ಟನ್ ಕಬ್ಬಿಣದ ಉಂಡೆಗಳನ್ನು, 23.999 ಲಕ್ಷ ಟನ್ ಸಂಸ್ಕರಿಸಿದ ಕಬ್ಬಿಣದ ಅದಿರು, 41.717 ಲಕ್ಷ ಟನ್ ಇದ್ದಿಲು ಸರಕುಗಳನ್ನು, ಕಂಟೈನರ್ ಮೂಲಕ 17.434 ಲಕ್ಷ ಟನ್ 22.09 ಲಕ್ಷ ಟನ್ ಎಲ್‌ಪಿಜಿ ನಿರ್ವಹಣೆ ಮಾಡಲಾಗಿದೆ. ಉಡುಪಿ ಪವರ್ ಪ್ಲಾಂಟ್ ಮೂಲಕ ಮಾಡಲಾಗುತ್ತಿದ್ದ ಕಲ್ಲಿದ್ದಲು, ಎಂಆರ್‌ಪಿಎಲ್ ಗೆ ಸರಬರಾಜಾಗುತ್ತಿದ್ದ ಕಚ್ಚಾ ತೈಲ ಪೂರೈಕೆಯಲ್ಲಿ 2016-17ನೆ ಸಾಲಿಗೆ ಹೋಲಿಸಿದಾಗ 2017-18ನೆ ಸಾಲಿನಲ್ಲಿ ಇಳಿಕೆಯಾಗಿದೆ. ಸಮಗ್ರವಾಗಿ ಸರಕು ಸಾಗಾಟದಲ್ಲಿ ಪ್ರಗತಿ ಸಾಧಿಸಲಾಗಿದೆ ಎಂದು ಎಂ.ಟಿ.ಕೃಷ್ಣ ಬಾಬು ಹೇಳಿದರು.

ಮಲೇಶ್ಯಾದಿಂದ ಮರಳು:-

ಜಿಲ್ಲೆಯಲ್ಲಿ ಮರಳುಗಾರಿಕೆಯನ್ನು ಕಡಿತಗೊಳಿಸುವ ನಿಟ್ಟಿನಲ್ಲಿ ವಿದೇಶದಿಂದ ಮರಳು ಆಮದು ಮಾಡಲು ಕೈಗೊಂಡ ತೀರ್ಮಾನದಂತೆ ನವ ಮಂಗಳೂರು ಬಂದರಿನ ಮೂಲಕ ಮಲೇಶ್ಯಾದಿಂದ 2017-18ನೆ ಸಾಲಿನಲ್ಲಿ 1 ಲಕ್ಷ 50 ಸಾವಿರ ಟನ್ ಮರಳು ಆಮದು ಮಾಡಿಕೊಳ್ಳಲಾಗಿದೆ ಎಂದು ಕೃಷ್ಣ ಬಾಬು ತಿಳಿಸಿದ್ದಾರೆ.

ಎರಡು ಯಾಂತ್ರೀಕೃತ ಭರ್ತ್ ನಿರ್ಮಾಣ ಯೋಜನೆ 2019ರಲ್ಲಿ ಪೂರ್ಣ:-

ಎರಡು ಯಾಂತ್ರೀಕೃತ ಭರ್ತ್ ನಿರ್ಮಾಣ ಯೋಜನೆ 2019ರಲ್ಲಿ ಪೂರ್ಣಗೊಳ್ಳಲಿದೆ. ಹಾಲಿ ಭರ್ತ್ ಸಂಖ್ಯೆ 16 ಸಾರ್ವಜನಿಕ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಯೋಜನೆ ಪ್ರಗತಿಯಲ್ಲಿದೆ ಎಂದು ಅವರು ಹೇಳಿದರು.

ಬಂದರು ಸರಕು ಸಾಗಾಟದ ವೆಚ್ಚ ಕಡಿತಗೊಳಿಸಲು ಕ್ರಮ:-

ಬಂದರು ಮಂಡಳಿಯ ಸರಕು ನಿರ್ವಹಣೆಯ ವೆಚ್ಚ ಕಡಿತಗೊಳಿಸಲು ಬಂದರಿನಲ್ಲಿ ಕಾರ್ಮಿಕರಿಗೆ ತಮ್ಮ ವೇತನದ ಹೊರತಾಗಿ ಹೆಚ್ಚುವರಿಯಾಗಿ ವೆಚ್ಚವನ್ನು ಪಡೆಯುವುದನ್ನು ತಡೆಯಲಾಗುವುದು ಇದರಿಂದ ಮಂಡಳಿಯ ಗ್ರಾಹಕರ ಮೇಲೆ ಹೆಚ್ಚಿನ ಹೊರೆ ಕಡಿಮೆಯಾಗಲಿದೆ ಈ ಬಗ್ಗೆ ಕ್ರಮ ಕೈ ಗೊಳ್ಳಲಾಗುವುದು. ಬಂದರಿನ ಕಾರ್ಮಿಕರಿಗೆ ಸಂಸ್ಥೆಯಿಂದ ವೇತನ ಮಾತ್ರ ಪಡೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಕೃಷ್ಣ ಬಾಬು ತಿಳಿಸಿದ್ದಾರೆ.

ಬಂದರಿಗೆ ಸಮರ್ಪಕ ರಸ್ತೆ, ರೈಲು ಮಾರ್ಗದ ಸಂಪರ್ಕದ ಯೋಜನೆ:-

ನವ ಮಂಗಳೂರು ಬಂದರು ಮಂಡಳಿಗೆ ಒಳಗೆ ಸಮರ್ಪಕವಾಗಿ ಸರಕು ಸಾಗಾಟದ ಹಿನ್ನೆಲೆಯಲ್ಲಿ ಉತ್ತಮ ಮೂಲ ಸೌಕರ್ಯ ಅಭಿವೃದ್ಧಿಪಡಿಸಲು ರಸ್ತೆ, ರೈಲು ಮಾರ್ಗದ ಸಂಪರ್ಕ ವ್ಯವಸ್ಥೆಯನ್ನು ಉತ್ತಮ ಪಡಿಸುವ ಬಗ್ಗೆ ಯೋಜನೆ ಸಿದ್ಧವಾಗಿದೆ ಎಂದು ಕೃಷ್ಣ ಬಾಬು ತಿಳಿಸಿದ್ದಾರೆ.

2017-18ನೆ ಸಾಲಿನಲ್ಲಿ ನವ ಮಂಗಳೂರು ಮಂಡಳಿಯಿಂದ 2,60,66,000.00 ರೂ. ಮೊತ್ತವನ್ನು ಸಿಎಸ್ ಆರ್ ವೆಚ್ಚವಾಗಿ ಸಮುದಾಯ ಹಾಗೂ ಸಾರ್ವಜನಿಕ ಸೇವಾ ಕಾರ್ಯ ಯೋಜನೆಗಳಿಗೆ ವೆಚ್ಚ ಮಾಡಲಾಗಿದೆ ಎಂದು ಎಂ.ಟಿ.ಕೃಷ್ಣ ಬಾಬು ತಿಳಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X