Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕರಡು ಎನ್‌ಸಿಆರ್‌ನಲ್ಲಿ ಒಂದೇ ಕುಟುಂಬದ...

ಕರಡು ಎನ್‌ಸಿಆರ್‌ನಲ್ಲಿ ಒಂದೇ ಕುಟುಂಬದ ಇತರ ಸದಸ್ಯರ ಹೆಸರುಗಳು ಮಾಯ...!

ವಾರ್ತಾಭಾರತಿವಾರ್ತಾಭಾರತಿ31 July 2018 11:18 PM IST
share

ಗುವಾಹಟಿ,ಜು.31: ಸೋಮವಾರ ಅಸ್ಸಾಮಿನಲ್ಲಿ ಬಿಡುಗಡೆಗೊಳಿಸಲಾದ ರಾಷ್ಟ್ರೀಯ ಪೌರತ್ವ ರಿಜಿಸ್ಟರ್‌ನ ಅಂತಿಮ ಕರಡಿನಲ್ಲಿ ಒಂದೇ ಕುಟುಂಬದ ಕೆಲವರ ಹೆಸರುಗಳು ಸೇರ್ಪಡೆಗೊಂಡಿರುವುದು ಮತ್ತು ಇತರರ ಹೆಸರುಗಳು ಇಲ್ಲದಿರುವುದು ಅತಂತ್ರಗೊಳ್ಳುವ ಭೀತಿಯಲ್ಲಿರುವ ಸುಮಾರು 40 ಲಕ್ಷಕ್ಕೂ ಅಧಿಕ ಅರ್ಜಿದಾರರ ಪೈಕಿ ಹಲವರ ಕಳವಳಗಳನ್ನು ಇನ್ನಷ್ಟು ಹೆಚ್ಚಿಸಿದೆ.

ಪೌರತ್ವದ ಪುರಾವೆಯಾಗಿ ತಮ್ಮ ಕುಟುಂಬದ ಇತರ ಸದಸ್ಯರು ಸಲ್ಲಿಸಿದ್ದ ದಾಖಲೆಗಳನ್ನೇ ತಾವೂ ಸಲ್ಲಿಸಿದ್ದೆವು,ಆದರೂ ತಮ್ಮನ್ನು ಪಟ್ಟಿಯಿಂದ ಹೊರಗಿರಿಸಲಾಗಿದೆ ಎಂದು ಹಲವರು ಬೆಟ್ಟು ಮಾಡಿದ್ದಾರೆ.

ಕರಡು ಪಟ್ಟಿಯಲ್ಲಿ ಹೆಸರುಗಳಿಲ್ಲದ ಬರಾಕ್ ವ್ಯಾಲಿ ಪ್ರದೇಶದ ಗಣ್ಯರಲ್ಲಿ ಬಿಜೆಪಿ ಶಾಸಕ ದಿಲೀಪ ಪಾಲ್ ಅವರ ಪತ್ನಿ ಅರ್ಚನಾ ಪಾಲ್,ಮಾಜಿ ಕಾಂಗ್ರೆಸ್ ಶಾಸಕ ಅತಾವುರ್ ರಹಮಾನ್ ಮಝರ್ಭುಹಿಯಾ ಮತ್ತು ಎಐಯುಡಿಎಫ್ ಕಾಚಾರ್ ಘಟಕಾಧ್ಯಕ್ಷ ಸಮೀಯುಲ್ ಇಸ್ಲಾಂ ಮತ್ತವರ ಕುಟುಂಬ ಸೇರಿದ್ದಾರೆ.

ಇದು ಅಂತಿಮ ಪಟ್ಟಿಯಲ್ಲ,ಹೀಗಾಗಿ ಆತಂಕ ಪಡುವ ಅಗತ್ಯವಿಲ್ಲ. ನನ್ನ ಪತ್ನಿಯ ಹೆಸರೂ ಪಟ್ಟಿಯಲ್ಲಿಲ್ಲ ಮತ್ತು ಅವರು ತನ್ನ ಹಕ್ಕನ್ನು ಸಲ್ಲಿಸಲಿದ್ದಾರೆ. ಅಂತಿಮ ಎನ್‌ಆರ್‌ಸಿಗಾಗಿ ನಾವು ಕಾಯಲೇಬೇಕು ಎಂದು ಪಾಲ್ ಹೇಳಿದರು.

ಹಕ್ಕುಗಳು ಮತ್ತು ಆಕ್ಷೇಪಗಳನ್ನು ಸಲ್ಲಿಸಿ ಪಟ್ಟಿಯಲ್ಲಿನ ತಪ್ಪುಗಳನ್ನು ಸರಿಪಡಿಸಲು ಸಾಧ್ಯ ಎನ್ನುವುದು ನಿಜವಿದ್ದರೂ ಕುಟುಂಬದ ಕೆಲವು ಸದಸ್ಯರ ಹೆಸರುಗಳನ್ನು ಪಟ್ಟಿಯಿಂದ ಹೊರಗಿಟ್ಟಿದ್ದು ಅತ್ಯಂತ ಅನ್ಯಾಯವಾಗಿದೆ ಮತ್ತು ಈ ಎನ್‌ಆರ್‌ಸಿ ಪ್ರಕ್ರಿಯೆಯು ಬಡವರಿಗೆ ತೀವ್ರ ಕಿರುಕುಳಕ್ಕೆ ಕಾರಣವಾಗಿದೆ ಎಂದು ಕಾಂಗ್ರೆಸ್ ಶಾಸಕ(ಕರೀಮ್‌ಗಂಜ್-ಉ) ಕಮಲಾಖ್ಯ ಡೇ ಪುರಕಾಯಸ್ಥ ಹೇಳಿದರು.

ಬಿಲಾಸಪುರ ಮೂಲದ ಸೈರಾ ಬೇಗಂ ಗುವಾಹಟಿಯಲ್ಲಿ ಮನೆಗೆಲಸದಾಳು ಆಗಿ ದುಡಿಯುತ್ತಿದ್ದು,ಆಕೆಯ ಮತ್ತು ಪುತ್ರಿಯ ಹೆಸರು ಪಟ್ಟಿಯಲ್ಲಿವೆ. ಆದರೆ ಅರ್ಜಿಯಲ್ಲಿ ಕುಟುಂಬದ ಮುಖ್ಯಸ್ಥನೆಂದು ಘೋಷಿಸಲಾಗಿದ್ದ ಆಕೆಯ ಪತಿ ಮತ್ತು ಇಬ್ಬರು ಮಕ್ಕಳ ಹೆಸರುಗಳು ಮಾಯವಾಗಿವೆ.

ನಾವೆಲ್ಲರೂ ಒಂದೇ ರೀತಿಯ ದಾಖಲೆಗಳನ್ನು ಸಲ್ಲಿಸಿದ್ದೆವು. ವಾಸ್ತವದಲ್ಲಿ ನಾನು ನನ್ನ ಪತಿಯನ್ನು ಮದುವೆಯಾಗಿದ್ದನ್ನೂ ರುಜುವಾತುಗೊಳಿಸಬೇಕಿತ್ತು ಎಂದು ಬೇಗಂ ಹೇಳಿದರು.

ಕನಿಷ್ಠ ಪಕ್ಷ,ಯಾವುದೇ ಶಂಕೆಗಳಿಲ್ಲದ ಹೆಸರುಗಳನ್ನು ಪಟ್ಟಿಯಿಂದ ಬಿಡಬಾರದಿತ್ತು ಎಂದು ಕಾಂಗ್ರೆಸ್ ನಾಯಕಿ ಬಬಿತಾ ಶರ್ಮಾ ಹೇಳಿದರು.

ಅಂತಿಮ ಪಟ್ಟಿಯಲ್ಲಿ ತನ್ನಿಬ್ಬರು ಹಿರಿಯ ಸಹೋದರರ ಹೆಸರುಗಳನ್ನು ಸೇರಿಸಲಾಗಿದೆ,ಆದರೆ ಅವರ ಪತ್ನಿಯರು ಮತ್ತು ಪುತ್ರರ ಹೆಸರುಗಳು ನಾಪತ್ತೆಯಾಗಿವೆ ಎಂದು ಕಾಟನ್ ಸ್ಟೇಟ್ ವಿವಿಯ ಬಂಗಾಳಿ ವಿಭಾಗದ ಮುಖ್ಯಸ್ಥ ಪ್ರಶಾಂತ ಚಕ್ರವರ್ತಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X