Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಳಸಮುದ್ರ ಮೀನುಗಾರಿಕೆ ಆರಂಭ: 70 ಬೋಟುಗಳ...

ಆಳಸಮುದ್ರ ಮೀನುಗಾರಿಕೆ ಆರಂಭ: 70 ಬೋಟುಗಳ ಶುಭಾರಂಭ

ವಾರ್ತಾಭಾರತಿವಾರ್ತಾಭಾರತಿ1 Aug 2018 8:02 PM IST
share

ಮಂಗಳೂರು, ಆ.1: ಕಳೆದ ಎರಡು ತಿಂಗಳಿನಿಂದ ಆಳ ಸಮುದ್ರ ಮೀನುಗಾರಿಕೆಗೆ ಜು.31ಕ್ಕೆ ನಿಷೇಧ ಹೊರಡಿಸಿದ್ದ ಆದೇಶ ಹಿಂದಕ್ಕೆ ಪಡೆಯಲಾಗಿದ್ದು, ಬುಧವಾರ ಮೀನುಗಾರಿಕೆ ಆರಂಭಗೊಂಡಿದೆ. ಸುಮಾರು 70ಕ್ಕೂ ಹೆಚ್ಚು ಟ್ರಾಲ್ ಬೋಟ್‌ಗಳು ಆಳಸಮುದ್ರ ಮೀನುಗಾರಿಕೆಗೆ ತೆರಳಿವೆ.

ಮಂಜುಗಡ್ಡೆ ತುಂಬಲು ಜಾಗವಿಲ್ಲ: ಬೋಟುಗಳಲ್ಲಿ ಸಾಕಷ್ಟು ಡೀಸೆಲ್, ಮಂಜುಗಡ್ಡೆ, ನೀರು, ಆಹಾರ ಸಾಮಗ್ರಿಯನ್ನು ತುಂಬಿಕೊಂಡು ಹೋಗುವ ಅಗತ್ಯವಿದೆ. ಆದರೆ ದಕ್ಕೆಯಲ್ಲಿ ಬೋಟುಗಳ ನಿಲುಗಡೆಗೆ ಸ್ಥಳಾವಕಾಶ ಕೊರತೆಯಿದೆ. ಮೊದಲ ದಿನ ಕಡಿಮೆ ಪ್ರಮಾಣದಲ್ಲಿ ಬೋಟುಗಳು ಸಮುದ್ರಕ್ಕೆ ತೆರಳಿವೆ. ಸ್ಥಳಾವಕಾಶದ ಕೊರತೆಯಿಂದ ಮೀನುಗಾರರು ಪರದಾಟ ಹೇಳ ತೀರದಾಗಿದೆ.

ಒಂದೇ ಸಮಯದಲ್ಲಿ ದಕ್ಕೆಯಲ್ಲಿ ಎಲ್ಲ ಬೋಟುಗಳನ್ನು ನಿಲ್ಲಿಸಿ ಮಂಜುಗಡ್ಡೆ, ಡೀಸೆಲ್‌ನ್ನು ತುಂಬಲು ಅವಕಾಶವಿಲ್ಲ. ದಕ್ಕೆಯಲ್ಲಿ ಕೇವಲ ನಾಲ್ಕು ಡೀಸೆಲ್ ಪಂಪ್‌ಗಳಿವೆ. ಸರದಿ ಸಾಲಿನಲ್ಲಿ ಎಲ್ಲ ಬೋಟುಗಳು ಡೀಸೆಲ್‌ನ್ನು ತುಂಬಬೇಕಾಗಿದೆ. ಜೊತೆಗೆ ಮಂಜುಗಡ್ಡೆ, ಆಹಾರ, ಸಾಮಗ್ರಿಯನ್ನು ಲೋಡ್ ಮಾಡಬೇಕು.

ಎದುರಿನ ಬೋಟುಗಳು ಸಾಮಗ್ರಿ ತುಂಬಿಕೊಂಡು ಹಿಂದೆ ಹೋಗಲು ಅವಕಾಶ ಇಲ್ಲದಂತಾಗಿದೆ. ಜೊತೆಗೆ ಹಿಂದೆ ಇರುವ ಬೋಟುಗಳು ಎದುರು ಬರಲು ಹರಸಾಹಸ ಪಡುವಂತಾಗಿದೆ. ರಸ್ತೆಯಲ್ಲಿರುವ ಟ್ರಾಫಿಕ್‌ಗಿಂತ ದಕ್ಕೆಯಲ್ಲಿರುವ ಬೋಟುಗಳ ಟ್ರಾಫಿಕ್ ಹೆಚ್ಚಾಗಿದೆ. ಸುಮಾರು ಎಂಟರಿಂದ ಒಂಬತ್ತು ಸಾಲುಗಳಲ್ಲಿ ಬೋಟುಗಳು ನಿಂತಿವೆ.

ದಕ್ಕೆಯಲ್ಲಿ ಬೋಟುಗಳನ್ನು ನಿಲ್ಲಿಸಲು ಸ್ಥಳಾವಕಾಶದ ಕೊರತೆಯಿದೆ. ಒಂದೇ ಸಮಯದಲ್ಲಿ ಎಲ್ಲ ಬೋಟುಗಳಿಗೆ ಡೀಸೆಲ್, ಮಂಜುಗಡ್ಡೆ, ಆಹಾರ ಸಾಮಗ್ರಿ ತುಂಬಲಾಗಲ್ಲ. ದಕ್ಕೆಯಲ್ಲಿರುವ ಬೋಟುಗಳು ತೆರಳಿದ ನಂತರ ಉಳಿದ ಬೋಟುಗಳು ಮೀನುಗಾರಿಕೆಗೆ ಹೊರಡಲಿವೆ.

- ಮೋಹನ್ ಬೆಂಗ್ರೆ, ಪರ್ಸಿನ್ ಮೀನುಗಾರರ ಸಂಘದ ಅಧ್ಯಕ್ಷ

ಆಳಸಮುದ್ರ ಮೀನುಗಾರಿಕೆಗೆ ಇದ್ದ ನಿಷೇಧವನ್ನು ಮಂಗಳವಾರ ಹಿಂದಕ್ಕೆ ಪಡೆಯಲಾಗಿದೆ. ಬುಧವಾರ ಮೀನುಗಾರಿಕೆ ಆರಂಭವಾಗಿದ್ದು, ಸುಮಾರು 70ಕ್ಕೂ ಹೆಚ್ಚು ಟ್ರಾಲ್ ಬೋಟುಗಳು ಮೀನುಗಾರಿಕೆಗೆ ತೆರಳಿವೆ.

- ಮಹೇಶ್‌ಕುಮಾರ್, ಉಪನಿರ್ದೇಶಕ, ಮೀನುಗಾರಿಕೆ ಇಲಾಖೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X