Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಾಹಿತಿ ನಿರಂಜನರ ಚಿಂತನೆ ಯುವ...

ಸಾಹಿತಿ ನಿರಂಜನರ ಚಿಂತನೆ ಯುವ ಸಮುದಾಯಕ್ಕೆ ತಲುಪಲಿ: ಲೇಖಕಿ ಟಿ.ಸಿ.ಪೂರ್ಣಿಮಾ

ವಾರ್ತಾಭಾರತಿವಾರ್ತಾಭಾರತಿ1 Aug 2018 8:26 PM IST
share
ಸಾಹಿತಿ ನಿರಂಜನರ ಚಿಂತನೆ ಯುವ ಸಮುದಾಯಕ್ಕೆ ತಲುಪಲಿ: ಲೇಖಕಿ ಟಿ.ಸಿ.ಪೂರ್ಣಿಮಾ

ಬೆಂಗಳೂರು, ಆ.1: ನಾಡಿನ ಪ್ರಗತಿಪರ ಚಿಂತನೆಯ ಹರಿಕಾರ ಹಾಗೂ ಹಿರಿಯ ಸಾಹಿತಿ ನಿರಂಜನರವರ ಸಾಹಿತ್ಯ-ಚಿಂತನೆಯನ್ನು ಯುವ ಸಮುದಾಯಕ್ಕೆ ತಲುಪಿಸುವ ಅಗತ್ಯವಿದೆ ಎಂದು ಲೇಖಕಿ ಟಿ.ಸಿ.ಪೂರ್ಣಿಮಾ ಆಶಿಸಿದರು.

ಬುಧವಾರ ದೆಹಲಿ ಕರ್ನಾಟಕ ಸಂಘ ನಗರದ ನಯನ ಸಭಾಂಗಣದಲ್ಲಿ ಆಯೋಜಿಸಿದ್ದ ವಸಂತ ಶೆಟ್ಟಿ ಬೆಳ್ಳಾರೆ ಸಂಪಾಧಿತ ‘ನಿರಂಜನ ಕೃತಿ ಸ್ಮತಿ’ ಕೃತಿಯ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಿರಂಜನರವರ ಸಾಹಿತ್ಯ ಕೃತಿಗಳು ಯುವ ತಲೆಮಾರಿಗೆ ಪರಿಚಯವಿಲ್ಲ. ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಅವರ ಕೃತಿಗಳ ಹಾಗೂ ಚಿಂತನೆಗಳ ಕುರಿತು ಚರ್ಚೆಗಳು ನಡೆಯುತ್ತಿಲ್ಲ ಎಂದು ವಿಷಾದಿಸಿದರು. ದೆಹಲಿ ಕರ್ನಾಟಕ ಸಂಘ ಒಂದು ವರ್ಷದ ಹಿಂದೆ ಸಾಹಿತಿ ನಿರಂಜನರವರ ಬದುಕು ಬರಹಗಳ ಕುರಿತು ವಿಚಾರ ಸಂಕಿರಣವನ್ನು ಆಯೋಜಿಸಿತ್ತು. ಆ ವಿಚಾರ ಸಂಕಿರಣದಲ್ಲಿ ಭಾಗವಹಿಸುವ ಮೂಲಕ ನನ್ನೊಳಗೆ ಪ್ರಗತಿಪರ ಚಿಂತನೆಗಳು ಮೂಡಲು ನಿರಂಜನ ಸಾಹಿತ್ಯ ಕಾರಣವಾಯಿತು ಎಂದು ಅವರು ಸಂತಸ ವ್ಯಕ್ತಪಡಿಸಿದರು.

ದೆಹಲಿ ಕನ್ನಡ ಸಂಘದ ಅಧ್ಯಕ್ಷ ವಸಂತ ಶೆಟ್ಟಿ ಬೆಳ್ಳಾರೆ ಮಾತನಾಡಿ, ಕನ್ನಡ ನಾಡಿನಲ್ಲಿ ಹಲವು ಮಂದಿ ಪ್ರತಿಭಾವಂತ ಸಾಹಿತಿ ಹಾಗೂ ಕಲಾವಿದರಿದ್ದಾರೆ. ಅವರನ್ನು ಪ್ರೊತ್ಸಾಹಿಸುವ ನಿಟ್ಟಿನಲ್ಲಿ ದೆಹಲಿ ಕನ್ನಡ ಸಂಘ ವಿಶೇಷ ಆದ್ಯತೆ ಮೇರೆಗೆ ಕಾರ್ಯನಿರ್ವಹಿಸುತ್ತಿದೆ. ಇದರ ಸಲುವಾಗಿ ಯುವ ಸಾಹಿತಿಗಳ ಪುಸ್ತಕ ಪ್ರಕಟನೆ ಹಾಗೂ ಶಿವರಾಮ ಕಾರಂತ ಪ್ರಶಸ್ತಿ, ಸರೋಜಿ ಮಹಿಷಿ ಪ್ರಶಸ್ತಿ ಹಾಗೂ ಕನ್ನಡ ಭಾರತಿ ರಂಗ ಪ್ರಶಸ್ತಿ ನೀಡುತ್ತಾ ಬರಲಾಗುತ್ತಿದೆ ಎಂದು ಅವರು ಹೇಳಿದರು.

ದೆಹಲಿಯಲ್ಲಿರುವ ಜೆಎನ್‌ಯು ವಿಶ್ವವಿದ್ಯಾಲಯದಲ್ಲಿ ಕನ್ನಡ ಅಧ್ಯಯನ ಕೇಂದ್ರ ಸ್ಥಾಪಿಸಬೇಕೆಂದು ದೆಹಲಿ ಕನ್ನಡ ಸಂಘ ನಿರಂತರವಾಗಿ ಹೋರಾಟ ಮಾಡಿತ್ತು. ಹಾಗೂ ಜನಪದ ತಜ್ಞ ಪುರುಷೋತ್ತಮ ಬಿಳಿಮಲೆ ಸಂಘಕ್ಕೆ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ನೀಡುವ ಸಲುವಾಗಿ ಕೇಂದ್ರ ಸರಕಾರದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿತ್ತು ಎಂದು ಅವರು ಹೇಳಿದರು.

ನಾಡಿನಲ್ಲಿ ಕುವೆಂಪು, ಶಿವರಾಮಕಾರಂತ, ದಾ.ರಾ.ಬೇಂದ್ರೆ, ಮಾಸ್ತಿ ವೆಂಕಟೇಶ ಅಯ್ಯಂಗಾರ್ ಸಾಲಿನಲ್ಲಿ ನಿಲ್ಲುವಂತಹ ಹಲವು ಸಾಹಿತಿಗಳು ನಾಡಿನಲ್ಲಿ ಇದ್ದಾರೆ. ಆದರೆ, ಅಂತಹ ಸಾಹಿತಿಗಳ ಸಾಹಿತ್ಯದ ಕುರಿತು ಚರ್ಚೆಗಳು ನಡೆಯುತ್ತಿಲ್ಲ. ಹೀಗಾಗಿ ನಿರಂಜನರ ಸಾಹಿತ್ಯದ ಕುರಿತು ಕಳೆದ ಒಂದು ವರ್ಷದ ವಿಚಾರ ಸಂಕಿರಣವನ್ನು ಆಯೋಜಿಸಿದ್ದೆವು. ಈಗ ಅದನ್ನು ಪುಸ್ತಕ ರೂಪಕ್ಕೆ ತರುತ್ತಿದ್ದೇವೆಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ನಾಡೋಜ ಹಂಪ ನಾಗರಾಜಯ್ಯ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಎಸ್.ಜಿ.ಸಿದ್ದರಾಮಯ್ಯ, ವಿಮರ್ಶಕ ವಿಜಯಶಂಕರ್, ದೆಹಲಿ ಕನ್ನಡ ಸಂಘದ ಕಾರ್ಯದರ್ಶಿ ಸಿ.ಎಂ.ನಾಗರಾಜ ಮತ್ತಿತರರಿದ್ದರು.

ದೇಶದ ಮೊದಲ ಸ್ವಾತಂತ್ರ ಹೋರಾಟಗಾರ್ತಿ ರಾಣಿ ಅಬ್ಬಕ್ಕ ಹೆಸರಿನಲ್ಲಿ ಶೌರ್ಯ ಪ್ರಶಸ್ತಿ ಸ್ಥಾಪಿಸಬೇಕೆಂದು ಕೇಂದ್ರ ಸರಕಾರಕ್ಕೆ ಒತ್ತಾಯ ಮಾಡಲು ದೆಹಲಿ ಕರ್ನಾಟಕ ಸಂಘ ತಿರ್ಮಾನಿಸಿದೆ. ಇದಕ್ಕೆ ನಾಡಿನ ಹಿರಿಯ ಸಾಹಿತಿಗಳು, ಜನಪ್ರತಿನಿಧಿಗಳು ಸಹಕರಿಸಬೇಕು.
-ವಸಂತ ಶೆಟ್ಟಿ ಬೆಳ್ಳಾರೆ ಅಧ್ಯಕ್ಷ, ದೆಹಲಿ ಕರ್ನಾಟಕ ಸಂಘ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X