Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತಾಯಿ ಎದೆ ಹಾಲಿನ ಮಹತ್ವದ ಬಗ್ಗೆ ಹೆಚ್ಚಿನ...

ತಾಯಿ ಎದೆ ಹಾಲಿನ ಮಹತ್ವದ ಬಗ್ಗೆ ಹೆಚ್ಚಿನ ಅರಿವು ಅಗತ್ಯ: ಶಾಸಕ ಡಿ.ಸಿ.ಗೌರಿಶಂಕರ್

ವಾರ್ತಾಭಾರತಿವಾರ್ತಾಭಾರತಿ1 Aug 2018 9:48 PM IST
share
ತಾಯಿ ಎದೆ ಹಾಲಿನ ಮಹತ್ವದ ಬಗ್ಗೆ ಹೆಚ್ಚಿನ ಅರಿವು ಅಗತ್ಯ: ಶಾಸಕ ಡಿ.ಸಿ.ಗೌರಿಶಂಕರ್

ತುಮಕೂರು,ಆ.1: ತಾಯಿ ಹಾಗೂ ತಾಯಿ ಎದೆ ಹಾಲಿನ ಮಹತ್ವದ ಬಗ್ಗೆ ಹೆಚ್ಚಿನ ಪ್ರಮಾಣದಲ್ಲಿ ಅರಿವು ಮೂಡಿಸಬೇಕಾದ ಅಗತ್ಯವಿದೆ ಎಂದು ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ಕರೆ ನೀಡಿದ್ದಾರೆ. 

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಬಾಲಭವನ ಹಾಗೂ ಕೃಷಿ ವಿಜ್ಞಾನ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ನಗರದ ಬಾಲಭವನದಲ್ಲಿಂದು ಆಯೋಜಿಸಿದ್ದ 'ತಾಯಿಯ ಎದೆ ಹಾಲಿನ ಮಹತ್ವ'ದ ಅರಿವು ಹಾಗೂ 'ಸಾಮೂಹಿಕ ಸೀಮಂತ' ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಾಯಿಯ ಎದೆ ಹಾಲಿಗೆ ಪ್ರಪಂಚದಲ್ಲಿ ಬೆಲೆ ಕಟ್ಟಲು ಸಾಧ್ಯವಿಲ್ಲ. ತಾಯಿಯ ಎದೆ ಹಾಲಿಗೆ ಜಾತಿ ಧರ್ಮದ ಬೆಲೆ ಇಲ್ಲ. ಪ್ರತಿಯೊಬ್ಬ ತಾಯಿಯು ತನ್ನ ಮಗುವಿಗೆ ಎದೆ ಹಾಲನ್ನು ಉಣಿಸುವ ಮೂಲಕ ಆರೋಗ್ಯವಂತ ಪ್ರಜೆಯನ್ನಾಗಿ ರೂಪಿಸಬೇಕು ಎಂದರು. 

ಎದೆಹಾಲಿನ ಮಹತ್ವದ ಅರಿವು ನೀಡುವ ಜೊತೆಗೆ ಸಾಮೂಹಿಕ ಸೀಮಂತ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ನಿಜಕ್ಕೂ ಅರ್ಥಪೂರ್ಣವಾಗಿದೆ. ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇಂತಹ ಕಾರ್ಯಕ್ರಮಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಹಮ್ಮಿಕೊಳ್ಳುವಂತೆ ಸೂಚಿಸಿದ ಅವರು, ಕಷ್ಟ ಮತ್ತು ಸುಖದ ಸಂದರ್ಭದಲ್ಲಿಯೂ ತಾಯಿ ಎಲ್ಲರಿಗೂ ನೆನಪಾಗಬೇಕು. ಆದರೆ ಮಕ್ಕಳು ತಮ್ಮ ತಂದೆ-ತಾಯಿಯರನ್ನೇ ಕೊಲ್ಲುತ್ತಿರುವ ದುರ್ದೈವದ ದಿನಗಳು ಬಂದಿವೆ ಎಂದು ವಿಷಾದ ವ್ಯಕ್ತಪಡಿಸಿದರು. 

ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಶಾಸಕ ಜ್ಯೋತಿ ಗಣೇಶ್, ತಾಯಂದಿರು ಮಗುವಿಗೆ ಎದೆ ಹಾಲು ನೀಡುವುದನ್ನು ನಿರ್ಲಕ್ಷಿಸಬಾರದು. ಗರ್ಭಿಣಿ, ಬಾಣಂತಿಯರು ಹಾಗೂ ಮಕ್ಕಳ ಆರೋಗ್ಯ ಸುಧಾರಣೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳ ಪ್ರಯೋಜನವನ್ನು ಎಲ್ಲರೂ ಪಡೆದುಕೊಳ್ಳಬೇಕು. ಪ್ರತಿ ವರ್ಷ ಅಂಗನವಾಡಿ ಕೇಂದ್ರಗಳಲ್ಲಿ ಆಚರಿಸಲಾಗುತ್ತಿದ್ದು, ಈ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಸಿಇಓ ಅವರು ಜಿಲ್ಲಾ ಮಟ್ಟದಲ್ಲಿ ಸಂಘಟಿಸಿರುವುದು ನಿಜಕ್ಕೂ ಶ್ಲಾಘನೀಯ ಎಂದರು.

ಜಿಲ್ಲಾ ಪಂಚಾಯತ್ ಸಿಇಓ ಅನೀಸ್ ಕಣ್ಮಣಿ ಜಾಯ್ ಮಾತನಾಡಿ, ಮಗುವಿಗೆ ಎದೆ ಹಾಲು ಅಮೃತವಿದ್ದಂತೆ. ಉತ್ತಮ ಪೌಷ್ಠಿಕ ಆಹಾರವನ್ನು ತಾಯಂದಿರು ಸೇವಿಸಬೇಕು. ಯಾವುದಕ್ಕೂ ಮಗುವಿಗೆ ಎದೆ ಹಾಲನ್ನು ನೀಡುವುದನ್ನು ತಪ್ಪಿಸಬಾರದು ಎಂದು ತಿಳಿಸಿದರು. 

ಸಮಾರಂಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ರವಿಕುಮಾರ್, ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಂಗಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ (ಪ್ರಭಾರ) ಎಸ್. ನಟರಾಜ್, ನಿವೃತ್ತ ಜಂಟಿ ನಿರ್ದೇಶಕ ಪರಮೇಶ್ವರಪ್ಪ, ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ. ಮಂಜುನಾಥ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ವೀರಭದ್ರಯ್ಯ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಭಾಗವಹಿಸಿದ್ದರು. 

ಇದೇ ಕಾರ್ಯಕ್ರಮದಲ್ಲಿ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ ನಡೆಸಿ ಕೊಡಲಾಯಿತು. ಎದೆ ಹಾಲಿನ ಮಹತ್ವ ಹಾಗೂ ತಾಯಂದಿರು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಕ್ಕಳ ತಜ್ಞೆ ಡಾ.ರಜನಿ ಅವರು ಉಪನ್ಯಾಸ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X