ದಾವಣಗೆರೆ: ಆಕಸ್ಮಿಕ ಬೆಂಕಿ ತಗುಲಿ ಕಾರ್ಖಾನೆ ಭಸ್ಮ
ದಾವಣಗೆರೆ,ಆ.01: ನಗರದ ಜಿಎಂಐಟಿ ಬಳಿಯ ಬಿಕೆ ಅಗರಬತ್ತಿ ಕಾರ್ಖಾನೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಭಸ್ಮಗೊಂಡಿರುವ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.
ಸುಮಾರು 4 ಲಕ್ಷ ರೂ. ಮೌಲ್ಯದ ಸಾಮಾಗ್ರಿ ಸುಟ್ಟುಕರಕಲಾಗಿದೆ. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಅಗರಬತ್ತಿ ಕಾರ್ಖಾನೆ ಮಂಜುನಾಥ್ ಎಂಬುವವರಿಗೆ ಸೇರಿದ್ದಾಗಿದೆ.
Next Story





