Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮೊದಲ ಟ್ವೆಂಟಿ-20: ವೆಸ್ಟ್ಇಂಡೀಸ್...

ಮೊದಲ ಟ್ವೆಂಟಿ-20: ವೆಸ್ಟ್ಇಂಡೀಸ್ ಗೆಲುವಿನಾರಂಭ

ಬಾಂಗ್ಲಾದೇಶ ವಿರುದ್ಧ ಏಳು ವಿಕೆಟ್‌ಗಳ ಜಯ

ವಾರ್ತಾಭಾರತಿವಾರ್ತಾಭಾರತಿ1 Aug 2018 11:55 PM IST
share
ಮೊದಲ ಟ್ವೆಂಟಿ-20: ವೆಸ್ಟ್ಇಂಡೀಸ್ ಗೆಲುವಿನಾರಂಭ

ಸೈಂಟ್‌ಕಿಟ್ಸ್, ಆ.1: ಕೆಸ್ರಿಕ್ ವಿಲಿಯಮ್ಸ್ ಜೀವನಶ್ರೇಷ್ಠ ಬೌಲಿಂಗ್(28ಕ್ಕೆ4) ಹಾಗೂ ಆ್ಯಂಡ್ರೆ ರಸೆಲ್ ಬ್ಯಾಟಿಂಗ್ ಸಾಹಸ(ಔಟಾಗದೆ 35,21 ಎಸೆತ)ನೆರವಿನಿಂದ ವಿಶ್ವ ಚಾಂಪಿಯನ್ ವೆಸ್ಟ್‌ಇಂಡೀಸ್ ತಂಡ ಬಾಂಗ್ಲಾದೇಶ ವಿರುದ್ಧದ ಮಳೆಬಾಧಿತ ಮೊದಲ ಟ್ವೆಂಟಿ-20 ಅಂತರ್‌ರಾಷ್ಟ್ರೀಯ ಪಂದ್ಯವನ್ನು 7 ವಿಕೆಟ್‌ಗಳ ಅಂತರದಿಂದ ಗೆದ್ದುಕೊಂಡಿದೆ.

ಇಲ್ಲಿನ ವಾರ್ನರ್ ಪಾರ್ಕ್‌ನಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿರುವ ಆತಿಥೇಯ ವಿಂಡೀಸ್ 3 ಪಂದ್ಯಗಳ ಟ್ವೆಂಟಿ-20 ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

  ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಲ್ಪಟ್ಟ ಬಾಂಗ್ಲಾದೇಶ 20 ಓವರ್‌ಗಳಲ್ಲಿ 9 ವಿಕೆಟ್‌ಗಳ ನಷ್ಟಕ್ಕೆ 143 ರನ್ ಗಳಿಸಿತು. ಬಾಂಗ್ಲಾ ಬ್ಯಾಟಿಂಗ್ ಬೆನ್ನಿಗೆ ಪಂದ್ಯಕ್ಕೆ 90 ನಿಮಿಷಕ್ಕೂ ಅಧಿಕ ಸಮಯ ಮಳೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಡಕ್‌ವರ್ತ್ -ಲೂಯಿಸ್ ನಿಯಮದ ಪ್ರಕಾರ ವಿಂಡೀಸ್ ಗೆಲುವಿಗೆ 11 ಓವರ್‌ಗಳಲ್ಲಿ 91 ರನ್ ಪರಿಷ್ಕೃತ ಗುರಿ ನೀಡಲಾಯಿತು.

 21 ಎಸೆತಗಳಲ್ಲಿ ತಲಾ ಮೂರು ಸಿಕ್ಸರ್ ಹಾಗೂ ಬೌಂಡರಿಗಳಿದ್ದ 35 ರನ್ ಕಲೆ ಹಾಕಿದ ರಸೆಲ್ ವಿಂಡೀಸ್‌ಗೆ ಇನ್ನೂ 11 ಎಸೆತಗಳು ಬಾಕಿ ಇರುವಾಗಲೇ ಗೆಲುವು ತಂದುಕೊಟ್ಟರು.

ಆರಂಭಿಕ ದಾಂಡಿಗರಾದ ಎವಿನ್ ಲೂಯಿಸ್(2) ಹಾಗೂ ಆ್ಯಂಡ್ರೆ ಫ್ಲೆಚರ್(7) ಇನಿಂಗ್ಸ್‌ನ ಮೊದಲ ಓವರ್‌ನಲ್ಲಿ ಬಾಂಗ್ಲಾದ ವೇಗದ ಬೌಲರ್ ಮುಸ್ತಫಿಝುರ್ರಹ್ಮಾನ್‌ಗೆ ವಿಕೆಟ್ ಒಪ್ಪಿಸಿದರು. ಆಗ 10 ರನ್‌ಗೆ 2 ವಿಕೆಟ್ ಕಳೆದುಕೊಂಡಿದ್ದ ವಿಂಡೀಸ್ ಸಂಕಷ್ಟಕ್ಕೆ ಸಿಲುಕಿತ್ತು. 3ನೇ ವಿಕೆಟ್‌ಗೆ 42 ರನ್ ಜೊತೆಯಾಟ ನಡೆಸಿದ ರಸೆಲ್ ಹಾಗೂ ಮರ್ಲಾನ್ ಸ್ಯಾಮುಯೆಲ್ಸ್(25) ತಂಡವನ್ನು ಆಧರಿಸಿದರು. ರೊವ್‌ಮನ್ ಪೊವೆಲ್(ಔಟಾಗದೆ 15)ಅವರೊಂದಿಗೆ ಕೈಜೋಡಿಸಿದ ರಸೆಲ್ 3 ವಿಕೆಟ್‌ಗೆ 93 ರನ್ ಗಳಿಸಿ ತಂಡಕ್ಕೆ 7 ವಿಕೆಟ್ ಜಯ ತಂದರು.

  ಇದಕ್ಕೆ ಮೊದಲು ಬ್ಯಾಟಿಂಗ್ ಮಾಡಿದ್ದ ಬಾಂಗ್ಲಾದೇಶ ಅತ್ಯಂತ ಕಳಪೆ ಆರಂಭ ಪಡೆದಿತ್ತು. ಏಕದಿನ ಸರಣಿಯಲ್ಲಿ 2 ಶತಕ ಹಾಗೂ ಒಂದು ಅರ್ಧಶತಕ ಸಿಡಿಸಿ ಸರಣಿಶ್ರೇಷ್ಠ ಪ್ರಶಸ್ತಿ ಪಡೆದಿದ್ದ ಆರಂಭಿಕ ಆಟಗಾರ ತಮೀಮ್ ಇಕ್ಬಾಲ್ ಹಾಗೂ ಸೌಮ್ಯ ಸರ್ಕಾರ್ ಖಾತೆ ತೆರೆಯುವ ಮೊದಲೇ ಪೆವಿಲಿಯನ್ ಸೇರಿದರು. ಇನಿಂಗ್ಸ್‌ನ ಮೊದಲ ಓವರ್ ಎಸೆದಿದ್ದ ಆ್ಯಂಡ್ರೆ ನರ್ಸ್ (6ಕ್ಕೆ2) ಬಾಂಗ್ಲಾದ ಇಬ್ಬರೂ ದಾಂಡಿಗರನ್ನು ಬೇಗನೇ ಔಟ್ ಮಾಡಿ ಫೀಲ್ಡಿಂಗ್ ಆಯ್ದುಕೊಂಡ ನಾಯಕ ಕಾರ್ಲೊಸ್ ಬ್ರಾತ್‌ವೇಟ್ ನಿರ್ಧಾರವನ್ನು ಸಮರ್ಥಿಸಿಕೊಂಡರು.

ಲಿಟನ್ ದಾಸ್(24) ಹಾಗೂ ನಾಯಕ ಶಾಕಿಬ್ ಅಲ್ ಹಸನ್(19) ಇನಿಂಗ್ಸ್ ರಿಪೇರಿಗೆ ಯತ್ನಿಸಿದರು. ದಾಸ್-ಹಸನ್ ವಿಕೆಟ್ ಕಬಳಿಸಿದ ಕೀಮೊ ಪೌಲ್(24ಕ್ಕೆ2) ವಿಂಡೀಸ್‌ಗೆ ಮೇಲುಗೈ ಒದಗಿಸಿದರು. ಬಾಂಗ್ಲಾದ ಪರ ಮಹ್ಮೂದುಲ್ಲಾ(35) ಸರ್ವಾಧಿಕ ಸ್ಕೋರ್ ಗಳಿಸಿದರು.

ಮುಶ್ಫಿಕುರ್ರಹೀಂ(15)ಆರಿಫುಲ್ ಹಕ್(15)ಮೆಹಿದಿ ಹಸನ್(11) ಎರಡಂಕೆಯ ಸ್ಕೋರ್ ದಾಖಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X