Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಎಬಿಪಿ ನ್ಯೂಸ್ ನಲ್ಲಿ ಉರುಳುತ್ತಿವೆ ಒಂದರ...

ಎಬಿಪಿ ನ್ಯೂಸ್ ನಲ್ಲಿ ಉರುಳುತ್ತಿವೆ ಒಂದರ ನಂತರ ಒಂದು ತಲೆಗಳು !

ಪ್ರಮುಖ ಪತ್ರಕರ್ತರ ಹಠಾತ್ ನಿರ್ಗಮನದ ಹಿಂದೆ ಇರುವವರು ಯಾರು ?

ವಾರ್ತಾಭಾರತಿವಾರ್ತಾಭಾರತಿ2 Aug 2018 12:31 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಎಬಿಪಿ ನ್ಯೂಸ್ ನಲ್ಲಿ ಉರುಳುತ್ತಿವೆ ಒಂದರ ನಂತರ ಒಂದು ತಲೆಗಳು !

ದೇಶದ ಪ್ರಮುಖ ಹಿಂದಿ ಸುದ್ದಿ ಚಾನಲ್ ಗಳಲ್ಲಿ ಒಂದಾದ ಎಬಿಪಿ ನ್ಯೂಸ್ ರೂಮ್ ನಲ್ಲಿ ದೊಡ್ಡ ಬೆಳವಣಿಗೆಗಳಾಗಿವೆ. ಇದ್ದಕ್ಕಿದ್ದಂತೆ ಚಾನಲ್ ನ ಖ್ಯಾತ ಮುಖಗಳು ಒಂದೊಂದಾಗಿ ರಾಜೀನಾಮೆ ನೀಡುತ್ತಿದ್ದಾರೆ ಅಥವಾ ಅವರನ್ನು ಕಡ್ಡಾಯ ರಜೆಯ ಮೇಲೆ ಕಳಿಸಲಾಗುತ್ತಿದೆ . 

ಎಬಿಪಿ ನ್ಯೂಸ್ ನ ಪ್ರಖ್ಯಾತ ಕಾರ್ಯಕ್ರಮ ಮಾಸ್ಟರ್ ಸ್ಟ್ರೋಕ್ ನ ನಿರೂಪಕ, ಹಿರಿಯ ಪತ್ರಕರ್ತ ಪುಣ್ಯ ಪ್ರಸೂನ್ ಬಾಜಪೇಯಿ ಗುರುವಾರ ಇದ್ದಕ್ಕಿದ್ದಂತೆ ಚಾನಲ್ ಗೆ ರಾಜೀನಾಮೆ ನೀಡಿದ್ದಾರೆ. ಚಾನಲ್ ನ ತನ್ನ ಎಲ್ಲ ಸಹೋದ್ಯೋಗಿಗಳಿಗೆ ತನ್ನ ವಿದಾಯದ ನಿರ್ಧಾರವನ್ನು ತಿಳಿಸಿ ಎಲ್ಲರಿಗೂ ಶುಭ ಕೋರಿ ಅವರು ನಿರ್ಗಮಿಸಿದ್ದಾರೆ ಎಂದು ಜನತಾಕ ರಿಪೋರ್ಟರ್ ವೆಬ್ ಸೈಟ್ ವರದಿ ಮಾಡಿದೆ. 

ತನ್ನ ಹಠಾತ್ ನಿರ್ಗಮನದ ಕುರಿತು ಯಾವುದೇ ಪ್ರತಿಕ್ರಿಯೆ ನೀಡಲು ಬಾಜಪೇಯಿ ನಿರಾಕರಿಸಿದ್ದಾರೆ. 

ಬುಧವಾರವಷ್ಟೇ ಚಾನಲ್ ನ ವ್ಯವಸ್ಥಾಪಕ ಸಂಪಾದಕ ಹಾಗು ಸಂಪಾದಕೀಯ ಮುಖ್ಯಸ್ಥ ಮಿಲಿಂದ್ ಖಂಡೇಕರ್ ರಾಜೀನಾಮೆ ಪ್ರಕಟಿಸಿದ್ದರು. 14 ವರ್ಷಗಳಿಂದ ನಾನು ಸೇವೆ ಸಲ್ಲಿಸಿದ್ದ ಚಾನಲ್ ನಿಂದ ಹೊರಡುವ ಸಮಯ ಬಂದಿದೆ ಎಂಬರ್ಥದಲ್ಲಿ ಅವರು ಟ್ವೀಟ್ ಮಾಡಿದ್ದರು. 

ಈ ನಡುವೆ ಚಾನಲ್ ನ ಇನ್ನೋರ್ವ ಖ್ಯಾತ ಆಂಕರ್ ಅಭಿಸಾರ ಶರ್ಮ ಅವರನ್ನು ಎರಡು ವಾರಗಳ ಕಡ್ಡಾಯ ರಜೆಯ ಮೇಲೆ ಕಳಿಸಲಾಗಿದೆ ಎಂದು ಹೇಳಲಾಗಿದೆ. ಶರ್ಮ ಇತ್ತೀಚಿಗೆ ಟಿವಿಯಲ್ಲಿ ಮತ್ತು ಸೋಷಿಯಲ್ ಮೀಡಿಯಾದಲ್ಲಿ ನರೇಂದ್ರ ಮೋದಿ ಸರ್ಕಾರವನ್ನು ಅತ್ಯಂತ ಕಟುವಾಗಿ ಟೀಕಿಸಿ, ವಿಶ್ಲೇಷಣೆ ನಡೆಸುತ್ತಿದ್ದರು. ಈ ಬೆಳವಣಿಗೆಗಳಿಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ಮನೀಶ್ ತಿವಾರಿ "ಇದು ಸರ್ಕಾರದ ಒತ್ತಡದಿಂದ ಆಗಿದ್ದರೆ ಅತ್ಯಂತ ದುರದೃಷ್ಟಕರ. ಈ ಬಗ್ಗೆ ಚಾನಲ್ ಮಾಲಕರು ಸ್ಪಷ್ಟನೆ ನೀಡಬೇಕು " ಎಂದು ಹೇಳಿದ್ದಾರೆ. 

ಚಾನಲ್ ನ ಇನ್ನೋರ್ವ ಪತ್ರಕರ್ತ ರಾಜನ್ ಸಿಂಗ್ ಅವರಿಗೂ ಕೆಲಸ ಬಿಡಲು ಸೂಚಿಸಲಾಗಿದೆ ಎಂದು ಹೇಳಲಾಗಿದೆ. ಈವರೆಗೆ ಖಂಡೇಕರ್ ಜೊತೆ ಇನ್ಪುಟ್ ವ್ಯವಸ್ಥಾಪಕ ಸಂಪಾದಕರಾಗಿದ್ದ ರಜನೀಶ್ ಅಹುಜಾ ಅವರಿಗೆ ಚಾನಲ್ ಉಸ್ತುವಾರಿಯನ್ನು ಈಗ ವಹಿಸಲಾಗಿದೆ. 

ಎಬಿಪಿ ನ್ಯೂಸ್ ಇತ್ತೀಚಿಗೆ ಕೇಂದ್ರ ಸರ್ಕಾರದ ವಿರುದ್ಧ ವಿಶ್ಲೇಷಣಾತ್ಮಕ ಸುದ್ದಿಗಳನ್ನು, ಕಾರ್ಯಕ್ರಮಗಳನ್ನು ಪ್ರಸಾರ ಮಾಡಿ ಸುದ್ದಿಯಲ್ಲಿತ್ತು. ಹೆಚ್ಚಿನ ಹಿಂದಿ ಚಾನಲ್ ಗಳು ಕೇಂದ್ರ ಸರ್ಕಾರದ ವಕ್ತಾರರಂತೆ ವರ್ತಿಸುತ್ತಿರುವಾಗ ಎಬಿಪಿ ನ್ಯೂಸ್ ಮಾತ್ರ ಅದಕ್ಕೆ ವ್ಯತಿರಿಕ್ತವಾಗಿದ್ದು ಚರ್ಚೆಯಲ್ಲಿತ್ತು. 

ಇತ್ತೀಚಿಗೆ ಛತ್ತೀಸ್ ಗಢದಲ್ಲಿ ಪ್ರಧಾನಿ ಮೋದಿ ಜೊತೆ ಮಹಿಳೆಯರು ಸಂವಾದ ನಡೆಸಿದ ಕಾರ್ಯಕ್ರಮ ಫಿಕ್ಸ್ ಆಗಿತ್ತು ಎಂದು ಎಬಿಪಿ ಸುದ್ದಿ ಮಾಡಿತ್ತು. ಅಲ್ಲಿ ಚಂದ್ರಮಣಿ ಎಂಬ ಮಹಿಳೆ ತನ್ನ ಕೃಷಿ ಆದಾಯ ದುಪ್ಪಟ್ಟಾಗಿದೆ ಎಂದು ಹೇಳಿದ್ದರು. ಆದರೆ ಆಕೆಗೆ ಹಾಗೆ ಹೇಳುವಂತೆ ತರಬೇತಿ ನೀಡಲಾಗಿತ್ತು ಎಂದು ಎಬಿಪಿ ಸುದ್ದಿ ಮಾಡಿತ್ತು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X