Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಮೀನುಗಾರರ ಸಂಘದ ಮುಖಂಡರೊಂದಿಗೆ...

ಮಂಗಳೂರು: ಮೀನುಗಾರರ ಸಂಘದ ಮುಖಂಡರೊಂದಿಗೆ ಇಲಾಖಾಧಿಕಾರಿಗಳ ಸಭೆ

ವಾರ್ತಾಭಾರತಿವಾರ್ತಾಭಾರತಿ2 Aug 2018 8:15 PM IST
share

ಮಂಗಳೂರು, ಆ.2: ಪ್ರಸಕ್ತ ಸಾಲಿನ ಮೀನುಗಾರಿಕೆ ಬುಧವಾರದಿಂದ ಆರಂಭವಾಗಿದ್ದು, ಮೀನುಗಾರರು ಎದುರಿಸುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಸಲುವಾಗಿ ಮೀನುಗಾರಿಕಾ ಇಲಾಖಾಧಿಕಾರಿಗಳು ಬಂದರು ದಕ್ಕೆಯಲ್ಲಿ ಗುರುವಾರ ಮೀನುಗಾರರ ಸಂಘದ ಮುಖಂಡರೊಂದಿಗೆ ಸಭೆ ನಡೆಸಿ ಚರ್ಚಿಸಿದರು.

ಇಲಾಖೆಯ ಪ್ರಭಾರ ಉಪನಿರ್ದೇಶಕ ಮಹೇಶ್ ಕುಮಾರ್‌ರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಿವಿಧ ಮೀನುಗಾರರ ಸಂಘದ ಮುಖಂಡರು ಹಲವು ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದರು. ಸಮುದ್ರವನ್ನು ತ್ಯಾಜ್ಯಮುಕ್ತಗೊಳಿಸಿ ಮೀನು ಸಂತತಿಯ ಸಂರಕ್ಷಣೆಯ ನಿಟ್ಟಿನಲ್ಲಿ ಯಾಂತ್ರೀಕೃತ ದೋಣಿಗಳಲ್ಲಿ ಕಸದ ತೊಟ್ಟಿ ಅಳವಡಿಸಲು ಅಧಿಕಾರಿಗಳು ಸೂಚಿಸಿದರಲ್ಲದೆ, ಸರಕಾರದ ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಮನವಿ ಮಾಡಿದರು.

ಮೀನುಗಾರರು ಪ್ಲಾಸ್ಟಿಕ್ ತ್ಯಾಜ್ಯವನ್ನು ಸಮುದ್ರದಲ್ಲಿ ಎಸೆಯದೆ ಕಸದ ತೊಟ್ಟಿಯಲ್ಲಿ ಸಂಗ್ರಹಿಸಿ ತೀರಕ್ಕೆ ಬಂದ ನಂತರ ಸೂಕ್ತವಾಗಿ ವಿಲೇಗೊಳಿಸುವ ಬಗ್ಗೆ ಎಲ್ಲಾ ದೋಣಿಗಳ ಮಾಲಕರು ಸಹಕರಿಸಬೇಕು ಎಂದು ಮಹೇಶ್ ಕುಮಾರ್ ಸೂಚಿಸಿದರು. ಮತ್ಸ್ಯ ಸಂಪನ್ಮೂಲದ ರಕ್ಷಣೆಗಾಗಿ ಹಾಗೂ ಸಾಂಪ್ರದಾಯಿಕ ಮೀನುಗಾರರ ಹಿತರಕ್ಷಣೆಗಾಗಿ ಎಲ್ಲಾ ಟ್ರಾಲ್ ಬಲೆಗಳಲ್ಲಿ 35 ಎಂಎಂ ಅಳತೆಯ ಸ್ಕ್ವೇರ್ ಮೆಶ್ ಕಾಡ್ ಎಂಡ್ ಉಪಯೋಗಿಸುವುದನ್ನು ಕಡ್ಡಾಯಗೊಳಿಸಲಾಗಿದೆ. 10 ಸಾವಿರ ರೂ. ವೌಲ್ಯದ ಈ ಬಲೆಯನ್ನು ಉಚಿತವಾಗಿ ವಿತರಣೆ ಮಾಡಲಾಗುವುದು. ಇದರಿಂದ ಮೀನುಗಳ ಸಂತತಿಯ ರಕ್ಷಣೆಯೂ ಇರುವುದರಿಂದ ಮೀನುಗಾರರು ಈ ಆದೇಶವನ್ನು ಪಾಲಿಸಬೇಕು ಎಂದು ಮಹೇಶ್ ಕುಮಾರ್ ತಿಳಿಸಿದರು.

ಪಾರ್ಕಿಂಗ್ ಕಟ್ಟುನಿಟ್ಟು: ಹೊರರಾಜ್ಯದಿಂದ ಮೀನುಗಳನ್ನು ಹೇರಿಕೊಂಡು ಬರುವ ಲಾರಿಗಳು ಮೀನುಗಳನ್ನು ಖಾಲಿ ಮಾಡಿದ ಬಳಿಕವೂ ದಕ್ಕೆಯಲ್ಲಿ ಠಿಕ್ಕಾಣಿ ಹೂಡುತ್ತದೆ. ಇದು ಸಂಚಾರಕ್ಕೆ ತೊಂದರೆಯಾಗಲಿದೆ. ಹಾಗಾಗಿ ಪಾರ್ಕಿಂಗ್ ಸಮಸ್ಯೆಯನ್ನು ನೀಗಿಸಲು ಮೀನುಗಾರರು ಸಹಕರಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದರು.

ಆರ್‌ಸಿ ಇಲ್ಲದ ಕೆಲವು ಬೋಟ್‌ಗಳಿಗೆ ಟ್ಯಾಂಕರ್‌ಗಳಲ್ಲಿ ಡೀಸೆಲ್ ತುಂಬಿಸಿ ತಂದು ಸರಬರಾಜು ಮಾಡಲಾಗುತ್ತದೆ. ಈ ಅನಧಿಕೃತ ಬೋಟ್ ಯಾನಕ್ಕೆ ತಡೆಯೊಡ್ಡಬೇಕು ಮೀನುಗಾರರ ಸಂಘದ ಮುಖಂಡರು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಜರುಗಿಸುವು ದಾಗಿ ತಿಳಿಸಿದರು.

ಮೀನುಗಾರಿಕೆಗೆ ತೆರಳುವ ಮೀನುಗಾರರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ಎಲ್ಲಾ ಮಾಲಕರು ನೀಡಬೇಕು. ಅಲ್ಲದೆ ಜೀವರಕ್ಷಕ ಕವಚ ಧರಿಸಬೇಕು ಎಂದು ಅಧಿಕಾರಿಗಳು ಸೂಚಿಸಿದರು. ಸಭೆಯಲ್ಲಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಜುಳಾ, ಪೊಲೀಸ್ ಇನ್‌ಸ್ಪೆಕ್ಟರ್‌ಗಳಾದ ಅಮಾನುಲ್ಲಾ, ಗಂಗಿರೆಡ್ಡಿ, ವಿವಿಧ ಮೀನುಗಾರರ ಸಂಘದ ಮುಖಂಡರು ನಿತಿನ್ ಕುಮಾರ್, ಮೋಹನ್ ಬೆಂಗರೆ, ಅಲಿ ಹಸನ್, ಸುಭಾಷ್ ಕಾಂಚನ್, ಸುನೀಲ್, ಅಶ್ರಫ್ ಮತ್ತಿತರರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X