Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಲ್ ಸೆಂಟರ್‌ನ ಯುವತಿಯ ಪ್ರೀತಿಗಾಗಿ ಹಳೆ...

ಕಾಲ್ ಸೆಂಟರ್‌ನ ಯುವತಿಯ ಪ್ರೀತಿಗಾಗಿ ಹಳೆ ಪ್ರೇಮಿಯ ಕೊಲೆ: ಅಪರಾಧ ಸಾಬೀತು

ವಾರ್ತಾಭಾರತಿವಾರ್ತಾಭಾರತಿ2 Aug 2018 8:55 PM IST
share

ಮಂಗಳೂರು, ಆ.2: ಕಾಲ್ ಸೆಂಟರ್‌ನ ಯುವತಿಯ ಪ್ರೀತಿಗಾಗಿ ಆಕೆಯ ದುಷ್ಪ್ರೇರಣೆಯಿಂದ ಹಳೇ ಪ್ರೇಮಿಯನ್ನು ಕೊಲೆಗೈದ ಅಪರಾಧವು 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಶುಕ್ರವಾರ ಶಿಕ್ಷೆ ಪ್ರಕಟಗೊಳ್ಳುವ ಸಾಧ್ಯತೆ ಇದೆ.

ತುಮಕೂರಿನ ತಿಪಟೂರು ಅಂಧನಕೆರೆ ಗ್ರಾಮದ ರಂಗ ಯಾನೆ ಗವಿ ರಂಗ ಯಾನೆ ಹರೀಶ್ (28) ಹಾಗೂ ಮುಲ್ಕಿ ಕಾರ್ನಾಡು ಪಡುಬೈಲು ನಿವಾಸಿ ಸುಷ್ಮಾ ಪ್ರಸಿಲ್ಲಾ (28) ಅಪರಾಧಿಗಳು.

ಇವರು ಕಾರ್ಕಳ ಬೋಳ ಗ್ರಾಮದ ಕೆಂದೊಟ್ಟು ಪದವು ನಿವಾಸಿ ಅವಿನಾಶ್ ಸುವರ್ಣ (21) ಎಂಬವರನ್ನು 2014 ಎ.1ರಂದು ಬೆಳಗ್ಗಿನ ಜಾವ 4:45 ಗಂಟೆಗೆ ಟಾಟಾ ಸುಮೊ ಢಿಕ್ಕಿ ಹೊಡೆಸಿ ಕೊಲೆ ಮಾಡಿದ ಆರೋಪ ಹೊಂದಿದ್ದರು.

ಗವಿ ರಂಗ ಯಾನೆ ಹರೀಶ್ ಪ್ರಕರಣದ ಮೊದಲ ಹಾಗೂ ಕೃತ್ಯದಲ್ಲಿ ನೇರವಾಗಿ ಪಾಲ್ಗೊಂಡಿದ್ದ. ಸುಷ್ಮಾ ಪ್ರಸಿಲ್ಲಾ ಕೊಲೆಗೆ ದುಷ್ಪ್ರೇರಣೆ ನೀಡಿದ ಆರೋಪ ನ್ಯಾಯಾಲಯದಲ್ಲಿ ಸಾಬೀತಾಗಿದೆ. ಇತ್ತಂಡಗಳ ವಾದವನ್ನು ಆಲಿಸಿದ ನ್ಯಾಯಾಧೀಶ ಡಿ.ಟಿ.ಪುಟ್ಟರಂಗ ಸ್ವಾಮಿ ಅವರು ಗುರುವಾರ ತೀರ್ಪು ಪ್ರಕಟಿಸಿದ್ದಾರೆ.

ಪ್ರಕರಣದ ಹಿನ್ನೆಲೆ: ಆರಂಭದಲ್ಲಿ ಅವಿನಾಶ್ ಹಾಗೂ ಸುಷ್ಮಾ ಪ್ರಸಿಲ್ಲಾ ಪ್ರೇಮಿಗಳಾಗಿದ್ದರು. ಸುಷ್ಮಾ ಕಸ್ಟಮರ್ ಸಪೋರ್ಟ್ ಆಫಿಸರ್ ಹುದ್ದೆಯಲ್ಲಿದ್ದಳು. ಸ್ವಲ್ಪ ಸಮಯದ ಬಳಿಕ ತನ್ನ ಸಂಸ್ಥೆಗೆ ಉದ್ಯೋಗಿಗಳನ್ನು ಕರೆದೊಯ್ಯುತ್ತಿದ್ದ ವಾಹನದ ಚಾಲಕ ಹರೀಶ್ ಜತೆ ಈಕೆಗೆ ಪ್ರೇಮಾಂಕುರವಾಗಿತ್ತು. ಹಾಗಾಗಿ ಹಳೇ ಪ್ರೇಮಿ ಅವಿನಾಶ್‌ನನ್ನು ದೂರ ಮಾಡಲು ಯತ್ನಿಸಿದ್ದಳು. ಇದರಿಂದ ಬೇಸತ್ತ ಹರೀಶ್ 2014 ಮಾ.31ರಂದು ಸಾಯಂಕಾಲ 6:15ರ ವೇಳೆಗೆ ಅವಿನಾಶ್ ಸೆಕ್ಯೂರಿಟಿ ಅವರನ್ನು ಲೆಕ್ಕಿಸದೆ ಕಚೇರಿಯ ಆವರಣದೊಳಗೆ ನುಗ್ಗಿದ್ದ. ವಿಷಯ ತಿಳಿದು ಎಚ್.ಆರ್. ಮ್ಯಾನೇಜರ್ ಆಗಮಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪಾಂಡೇಶ್ವರ ಪೊಲೀಸರು ಅವಿನಾಶ್‌ನನ್ನು ಠಾಣೆಗೆ ಕರೆದೊಯ್ದು ಎಚ್ಚರಿಕೆ ನೀಡಿ ಬಿಟ್ಟಿದ್ದರು. ಎಚ್.ಆರ್.ಮ್ಯಾನೇಜರ್ ಸುಷ್ಮಾಳಿಗೂ ಬುದ್ದಿವಾದ ಹೇಳಿದ್ದರು. ಇದರಿಂದ ಬೇಸತ್ತ ಸುಷ್ಮಾ ತಕ್ಷಣ ಕೆಲಸಕ್ಕೆ ರಾಜೀನಾಮೆ ನೀಡಿ ತೆರಳಿದ್ದಳು.

ಅಂದು ರಾತ್ರಿ ಹರೀಶ್‌ಗೆ ಕರೆ ಮಾಡಿದ ಸುಷ್ಮಾ, ಅವಿನಾಶ್‌ನಿಂದ ಕಂಪೆನಿಯಲ್ಲಿ ಅವಮಾನವಾಗಿದೆ. ಆತನಿಂದಾಗಿ ಕೆಲಸ ಕಳೆದುಕೊಳ್ಳುವಂತಾಯಿತು ಎಂದು ಬೇಸರ ವ್ಯಕ್ತಪಡಿಸಿದ್ದಳು. ಅದಕ್ಕಾಗಿ ಅವಿನಾಶ್‌ನನ್ನು ಕೊಲೆ ಮಾಡಲು ಇಬ್ಬರೂ ನಿರ್ಧರಿಸಿದ್ದರು. ಆಕೆ ಅವಿನಾಶ್‌ಗೆ ಕರೆ ಮಾಡಿ ಮುಕ್ಕ ಚೆಕ್‌ಪೋಸ್ಟ್ ಬಳಿ ಬರಲು ಹೇಳಿದ್ದಳು. ಅದರಂತೆ ಬೆಳಗ್ಗಿನ ಜಾವ ಅವಿನಾಶ್ ತನ್ನ ಬೈಕ್‌ನಲ್ಲಿ ಬೆಳಗ್ಗೆ 4:45ಕ್ಕೆ ಆಕೆ ತಿಳಿಸಿದಲ್ಲಿಗೆ ಹೋಗಿದ್ದ. ಪಾವಂಜೆ ಸೇತುವೆ ಬಳಿ ಬೈಕ್‌ನಲ್ಲಿ ಹೋಗುತ್ತಿದ್ದ ಅವಿನಾಶ್‌ಗೆ ಕೊಲೆ ಮಾಡುವ ಉದ್ದೇಶದಿಂದ ಹರೀಶ್ ಟಾಟಾ ಸುಮೊ ಢಿಕ್ಕಿ ಹೊಡೆದಿದ್ದಾನೆ. ತಲೆಗೆ ಗಂಭೀರ ಗಾಯಗೊಂಡು ರಸ್ತೆ ಬದಿ ಬಿದ್ದಿದ್ದ. ಮೀನು ಮಾರಾಟಗಾರರೊಬ್ಬರು ಗಮನಿಸಿ ಆಂಬ್ಯುಲೆನ್ಸ್‌ಗೆ ಕರೆ ಮಾಡಿ ಗಾಯಾಳುವನ್ನು ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದರು. ಈ ಸಂದರ್ಭ ಗಾಯಾಳು ಹರೀಶ್ ವಾಹನ ಢಿಕ್ಕಿ ಹೊಡೆದ ವಿಚಾರನ್ನು ನರ್ಸ್ ಹಾಗೂ ಆಂಬ್ಯುಲೆನ್ಸ್ ಚಾಲಕನಲ್ಲಿ ಹೇಳಿದ್ದ. ಪೊಲೀಸರು ಹೇಳಿಕೆ ಪಡೆಯಲು ಬರುವಷ್ಟರಲ್ಲಿ ಬೆಳಗ್ಗೆ 7 ಗಂಟೆಯ ವೇಳೆಗೆ ಮೃತಪಟ್ಟಿದ್ದ. ಈ ಬಗ್ಗೆ ಆತನ ತಂದೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಿದ್ದರು.

ಮುಲ್ಕಿ ಠಾಣಾಧಿಕಾರಿ ರಾಮಚಂದ್ರ ನಾಯಕ್ ಅವರು ತನಿಖೆ ನಡೆಸಿ, ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. 28 ಸಾಕ್ಷಿ ವಿಚಾರಣೆ ನಡೆಸಲಾಗಿದೆ. 40 ದಾಖಲೆಗಳನ್ನು ಕಲೆ ಹಾಕಲಾಗಿದೆ. ಸರಕಾರಿ ಅಭಿಯೋಜಕಿ ಜುಡಿತ್ ಒ.ಎಂ. ಕ್ರಾಸ್ತಾ ಸರಕಾರದ ಪರವಾಗಿ ವಾದಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X