Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಾಭೋಳ್ಕರ್, ಪನ್ಸಾರೆ ಹತ್ಯೆ ಪ್ರಕರಣ...

ದಾಭೋಳ್ಕರ್, ಪನ್ಸಾರೆ ಹತ್ಯೆ ಪ್ರಕರಣ ತನಿಖೆ ವಿಳಂಬ: ಸಿಬಿಐ, ಮಹಾರಾಷ್ಟ್ರ ಸಿಐಡಿಗೆ ಹೈಕೋರ್ಟ್ ತರಾಟೆ

ವಾರ್ತಾಭಾರತಿವಾರ್ತಾಭಾರತಿ2 Aug 2018 10:35 PM IST
share
ದಾಭೋಳ್ಕರ್, ಪನ್ಸಾರೆ ಹತ್ಯೆ ಪ್ರಕರಣ ತನಿಖೆ ವಿಳಂಬ: ಸಿಬಿಐ, ಮಹಾರಾಷ್ಟ್ರ ಸಿಐಡಿಗೆ ಹೈಕೋರ್ಟ್ ತರಾಟೆ

ಮುಂಬೈ, ಆ.2: ವಿಚಾರವಾದಿಗಳಾದ ನರೇಂದ್ರ ಧಾಬೋಳ್ಕರ್ ಹಾಗೂ ಗೋವಿಂದ ಪನ್ಸಾರೆ ಹತ್ಯೆ ಪ್ರಕರಣದ ತನಿಖೆಯಲ್ಲಿ ವಿಳಂಬ ಧೋರಣೆ ತೋರಲಾಗುತ್ತಿದೆ ಎಂದು ಬಾಂಬೆ ಹೈಕೋರ್ಟ್ ಕೇಂದ್ರ ಮತ್ತು ಮಹಾರಾಷ್ಟ್ರ ಸರಕಾರಗಳ ತನಿಖಾ ಸಂಸ್ಥೆಗಳನ್ನು ತೀವ್ರವಾಗಿ ತರಾಟೆಗೆತ್ತಿಕೊಂಡಿದೆ. ಕೇಂದ್ರ ತನಿಖಾ ತಂಡವಾದ ಸಿಬಿಐ ಮತ್ತು ಮಹಾರಾಷ್ಟ್ರದ ಸಿಐಡಿ ತಂಡ ನಡೆಸಿರುವ ತನಿಖೆಯ ಕುರಿತು ತನಗೆ ತೃಪ್ತಿಯಿಲ್ಲ ಎಂದು ತಿಳಿಸಿದ ನ್ಯಾಯಾಧೀಶರಾದ ಎಸ್.ಸಿ.ಧರ್ಮಾಧಿಕಾರಿ ಮತ್ತು ಭಾರತಿ ಡಾಂಗ್ರೆ ಅವರಿದ್ದ ನ್ಯಾಯಪೀಠವು, ಈ ಎರಡೂ ತನಿಖಾ ಸಂಸ್ಥೆಗಳು ಸಲ್ಲಿಸಿರುವ ರಹಸ್ಯ ವರದಿಯ ಫೈಲನ್ನು ವಾಪಸು ನೀಡಿತಲ್ಲದೆ, ಈ ವರದಿಯಲ್ಲಿ ಯಾವುದೇ ರಹಸ್ಯಗಳಿಲ್ಲ ಎಂದು ತಿಳಿಸಿತು.

ಜನರು ದೇಶದಲ್ಲಿ ಮುಕ್ತವಾಗಿ ಮಾತನಾಡಲು ಅಥವಾ ಸಂಚರಿಸಲು ಅಸಾಧ್ಯವಾಗಿರುವಂತಹ ಪರಿಸ್ಥಿತಿ ಇದೆ. ಆದರೂ ಈ ಮೇಲಿನ ಪ್ರಕರಣಗಳ ತನಿಖೆಯನ್ನು ತುರ್ತಾಗಿ ನಡೆಸಲು ತನಿಖಾ ಸಂಸ್ಥೆಗಳ ಅಧಿಕಾರಿಗಳು ಮುಂದಾಗುತ್ತಿಲ್ಲ ಹಾಗೂ ತನಿಖಾ ಕಾರ್ಯದಲ್ಲಿ ಯಾವುದೇ ವಾಸ್ತವಿಕ ಪ್ರಗತಿಯಾಗಿಲ್ಲ ಎಂದು ಹೈಕೋರ್ಟ್ ಪೀಠ ಅಸಮಾಧಾನ ವ್ಯಕ್ತಪಡಿಸಿತು. ಇಂತಹ ಸೂಕ್ಷ್ಮ ಪ್ರಕರಣಗಳ ನಿರ್ವಹಣೆಯಲ್ಲಿ ತನಿಖಾ ತಂಡಗಳ ಅಧಿಕಾರಿಗಳು ಸಂಪೂರ್ಣ ಅಸಂಗತರಾಗಿದ್ದು ಸೂಕ್ಷ್ಮಗ್ರಾಹಿಗಳಾಗಿಲ್ಲ. ದೇಶವು ಈಗ ದುರಂತಮಯ ಹಂತಕ್ಕೆ ಸಾಕ್ಷಿಯಾಗುತ್ತಿದೆ. ಯಾವುದೇ ಭೀತಿಯಿಲ್ಲದೆ ಅಭಿಪ್ರಾಯ ವ್ಯಕ್ತಪಡಿಸಲು ಸಾಧ್ಯವಾಗದ ಪರಿಸ್ಥಿತಿಯಿದೆ ಎಂದು ಜನರು ಭಾವಿಸಿದ್ದಾರೆ.

ಪ್ರತಿಯೊಬ್ಬರೂ ಪ್ರಯಾಣದ ವೇಳೆ ಅಥವಾ ಮುಕ್ತವಾಗಿ ಮಾತಾಡಲು ಪೊಲೀಸ್ ರಕ್ಷಣೆ ಕೋರಬೇಕಾದ ಪರಿಸ್ಥಿತಿಯತ್ತ ನಾವು ಸಾಗುತ್ತಿದ್ದೇವೆಯೇ ಎಂದು ನ್ಯಾಯಪೀಠ ಪ್ರಶ್ನಿಸಿದೆ. ಈಗ ರಾಜ್ಯದಲ್ಲಿ ನಡೆಯುತ್ತಿರುವುದೇನು. ಜನತೆ ಬಸ್ಸುಗಳತ್ತ ಕಲ್ಲೆಸೆಯುತ್ತಾ ಬಸ್ಸುಗಳಿಗೆ ಬೆಂಕಿ ಹಚ್ಚುತ್ತಿದ್ದಾರೆ. ಇದನ್ನು ಯಾರು ಬೇಕಾದರೂ ಮಾಡಬಹುದು ಎಂದಾಗಿದೆ. ಸರಕಾರ ನಾಳೆ ಬದಲಾಗಬಹುದು. ಆದರೆ ರಾಜ್ಯವು ಮಿಲಿಯಾಂತರ ಜನರಿಗೆ ಆಶ್ರಯತಾಣವಾಗಿದೆ. ನಾಳೆ ಮುಕ್ತವಾಗಿ ಅಭಿಪ್ರಾಯ ಹಂಚಿಕೊಳ್ಳಬಯಸುವ ಪ್ರತಿಯೊಬ್ಬರೂ ಪೊಲೀಸ್ ರಕ್ಷಣೆ ಪಡೆಯಬೇಕೇ ಎಂದು ನ್ಯಾಯಪೀಠ ಆಕ್ರೋಶ ವ್ಯಕ್ತಪಡಿಸಿದೆ. ಸಿಬಿಐ ಮತ್ತು ಸಿಐಡಿಯ ಹಿರಿಯ ಅಧಿಕಾರಿಗಳು ಸಲ್ಲಿಸಿರುವ ವರದಿಯಲ್ಲಿ ರಹಸ್ಯ ಅಂಶಗಳಿವೆ ಎಂದು ಹೇಳಲಾಗಿದೆ. ಆದರೆ ಇದರಲ್ಲಿ ಅಂತಹ ರಹಸ್ಯವೇನಿಲ್ಲ. ಈವರೆಗೆ ನಡೆಸಿರುವ ತನಿಖಾ ಕಾರ್ಯದ ಬಗ್ಗೆ ವಿವರವಿದೆ ಅಷ್ಟೇ . ಸಿಬಿಐ ಮತ್ತು ಸಿಐಡಿಯ ವಿಶೇಷ ತನಿಖಾ ತಂಡದ ಮುಖ್ಯಸ್ಥರಿಗೆ ಕೋರ್ಟ್ ಸಮನ್ಸ್ ನೀಡಿದೆ. ಆದರೂ ಇನ್ನೂ ಇವರು ಪ್ರಾಥಮಿಕ ವರದಿಯನ್ನಷ್ಟೇ ಸಲ್ಲಿಸುವುದು ಆಶ್ಚರ್ಯಕರವಾಗಿದೆ ಎಂದು ನ್ಯಾಯಪೀಠ ಅಸಮಾಧಾನ ಸೂಚಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X