Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಬಿಪಿ ಪತ್ರಕರ್ತರ ನಿರ್ಗಮನ ಕುರಿತು...

ಎಬಿಪಿ ಪತ್ರಕರ್ತರ ನಿರ್ಗಮನ ಕುರಿತು ಸಂಸತ್ತಿನಲ್ಲಿ ಸರಕಾರ-ಪ್ರತಿಪಕ್ಷ ಜಟಾಪಟಿ

ವಾರ್ತಾಭಾರತಿವಾರ್ತಾಭಾರತಿ3 Aug 2018 10:55 PM IST
share
ಎಬಿಪಿ ಪತ್ರಕರ್ತರ ನಿರ್ಗಮನ ಕುರಿತು ಸಂಸತ್ತಿನಲ್ಲಿ ಸರಕಾರ-ಪ್ರತಿಪಕ್ಷ ಜಟಾಪಟಿ

ಹೊಸದಿಲ್ಲಿ,ಆ.3: ಎಬಿಪಿ ನ್ಯೂಸ್ ಹಿಂದಿ ಸುದ್ದಿವಾಹಿನಿಯಿಂದ ಪ್ರತಿಷ್ಠಿತ ಪತ್ರಕರ್ತರಿಬ್ಬರ ನಿರ್ಗಮನವು ಶುಕ್ರವಾರ ಸಂಸತ್ತಿನಲ್ಲಿ ಸರಕಾರ ಮತ್ತು ಪ್ರತಿಪಕ್ಷಗಳ ನಡುವೆ ಜಟಾಪಟಿಗೆ ಕಾರಣವಾಗಿತ್ತು. ಪ್ರಧಾನಿ ನರೇಂದ್ರ ಮೋದಿಯವರ ಸರಕಾರವನ್ನು ಟೀಕಿಸಿದ್ದ ವರದಿಗಾಗಿ ಎಬಿಪಿ ನ್ಯೂಸ್ ಅನ್ನು ಗುರಿಯಾಗಿಸಿಕೊಳ್ಳಲಾಗಿದೆ ಎಂದು ಪ್ರತಿಪಕ್ಷ ನಾಯಕರು ಆರೋಪಿಸಿದರು.

ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು,ಸರಕಾರವು ಪತ್ರಿಕಾ ಸ್ವಾತಂತ್ರವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

ಸರಕಾರವು ಕಳೆದ ಕೆಲವು ವರ್ಷಗಳಲ್ಲಿ ಮಾಧ್ಯಮಗಳ ಧ್ವನಿಯುಡುಗಿಸಲು ಪ್ರಯತ್ನಿಸಿದ ಹಲವಾರು ನಿದರ್ಶನಗಳಿವೆ. ವಿಶೇಷವಾಗಿ ಮಾಧ್ಯಮಗಳು ಸರಕಾರದ ಅಭಿಪ್ರಾಯಗಳ ವಾಸ್ತವ ತನಿಖೆಗೆ ಮಂದಾದಾಗ ಈ ಪ್ರಯತ್ನ ನಡೆಯುತ್ತಿದೆ. ಅಂತಹ ಸಂದರ್ಭಗಳಲ್ಲಿ ಮಾಧ್ಯಮಗಳಿಗೆ ಬೆದರಿಕೆಗಳನ್ನು ಒಡ್ಡಲಾಗುತ್ತದೆ, ಹೆದರಿಸಲಾಗುತ್ತದೆ. ವಾಕ್ ಸ್ವಾತಂತ್ರವಿಲ್ಲದಿದ್ದರೆ ನಾವು ಮಾತನಾಡುವುದಾದರೂ ಹೇಗೆ ಎಂದು ಅವರು ಪ್ರಶ್ನಿಸಿದರು.

ಆರೋಪವನ್ನು ಬಲವಾಗಿ ವಿರೋಧಿಸಿದ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ರಾಜ್ಯವರ್ಧನ ಸಿಂಗ್ ರಾಥೋಡ್ ಅವರು,ಎಬಿಪಿ ತಪ್ಪು ವರದಿಗಳನ್ನು ನೀಡುತ್ತಿದೆ,ಆದರೆ ಸರಕಾರವು ಅದರ ವಿರುದ್ಧ ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಸರಕಾರವು ಹಸ್ತಕ್ಷೇಪ ಮಾಡಲು ಬಯಸಿದ್ದರೆ ಉಚಿತ ಡಿಷ್(ಸರಕಾರಿ ಉಪಗ್ರಹ ಟಿವಿ ಸೇವೆ) ಸರಕಾರದ್ದಾಗಿರುವುದು ಅದಕ್ಕೆ ಕಾರಣವಾಗುತ್ತದೆ ಎಂದರು.

ಪತ್ರಕರ್ತರ ನಿರ್ಗಮನಕ್ಕೂ ಸರಕಾರಕ್ಕೂ ಯಾವುದೇ ಸಂಬಂಧವಿಲ್ಲ. ಜನರು ಎಬಿಪಿ ನ್ಯೂಸ್ ವಾಹಿನಿಯನ್ನು ವೀಕ್ಷಿಸಲು ಬಯಸುತ್ತಿಲ್ಲ,ಹೀಗಾಗಿ ಅದರ ಟಿಆರ್‌ಪಿ ಭರದಿಂದ ಕುಸಿಯುತ್ತಿದೆ. ಆದರೆ ಅವರು ಸರಕಾರವನ್ನು ದೂರುತ್ತಿದ್ದಾರೆ ಎಂದರು.

ಗುರುವಾರ ರಾಜ್ಯಸಭೆಯಲ್ಲಿ ತೃಣಮೂಲ ಕಾಂಗ್ರೆಸ್ ನಾಯಕ ಡೆರೆಕ್ ಒ’ಬ್ರಿಯಾನ್ ಅವರೂ ಈ ವಿಷಯವನ್ನು ಎತ್ತಿದ್ದರು. ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರೂ ಸರಕಾರದ ವಿರುದ್ಧ ಟ್ವಿಟರ್ ದಾಳಿ ನಡೆಸಿದ್ದಾರೆ. ಮುಕ್ತ ಮಾಧ್ಯಮವು ಪ್ರಜಾಪ್ರಭುತ್ವದ ಜೀವನಾಡಿಯಾಗಿದೆ. ಆದರೆ ಸ್ವತಂತ್ರ ಪತ್ರಿಕೋದ್ಯಮವನ್ನು ಮುಗಿಸಲು ಮೋದಿ ಸರಕಾರವು ಪಟ್ಟು ಹಿಡಿದಿದೆ ಎಂದು ಅವರು ಟೀಕಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X