Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜ್ಯ ಪ್ರಶಸ್ತಿ ಸಂಭಾವ್ಯರ...

ರಾಜ್ಯ ಪ್ರಶಸ್ತಿ ಸಂಭಾವ್ಯರ ಪಟ್ಟಿಯಲ್ಲಿದ್ದ ಪ್ರಮುಖ ಆರೋಪಿ!

ಆಶ್ರಮದಲ್ಲಿ ಬಾಲಕಿಯರಿಗೆ ಲೈಂಗಿಕ ಶೋಷಣೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ4 Aug 2018 7:47 PM IST
share
ರಾಜ್ಯ ಪ್ರಶಸ್ತಿ ಸಂಭಾವ್ಯರ ಪಟ್ಟಿಯಲ್ಲಿದ್ದ ಪ್ರಮುಖ ಆರೋಪಿ!

 ಪಾಟ್ನಾ,ಆ.4: ಮುಝಫ್ಫರಪುರ ಆಶ್ರಯಧಾಮದಲ್ಲಿ ಬಾಲಕಿಯರಿಗೆ ಲೈಂಗಿಕ ಶೋಷಣೆ ಕರ್ಮಕಾಂಡದ ಪ್ರಮುಖ ಆರೋಪಿಗಳಲ್ಲೋರ್ವಳಾಗಿರುವ ಮಧು ಕುಮಾರಿಯ ಹೆಸರು ‘ಜಿಲ್ಲಾ ಮಹಿಳಾ ಸಮ್ಮಾನ್’ ಪ್ರಶಸ್ತಿಗಾಗಿ ಜಿಲ್ಲಾಡಳಿತವು ಸರಕಾರಕ್ಕೆ ಶಿಫಾರಸು ಮಾಡಿದ್ದ ಮೂವರು ‘ಅತಿ ವಿಶಿಷ್ಟ’ಮಹಿಳೆಯರ ಪಟ್ಟಿಯಲ್ಲಿತ್ತು!.

 ಸಾಮಾಜಿಕ ಕಾರ್ಯಕರ್ತೆ ಎಂದು ಹೇಳಿಕೊಳ್ಳುತ್ತಿದ್ದ ಆಕೆ ಮುಖ್ಯ ಆರೋಪಿ ಬೃಜೇಶ್ ಠಾಕೂರ್‌ನ ಎನ್‌ಜಿಒದಲ್ಲಿ ಪ್ರಮುಖ ಅಧಿಕಾರಿಯಾಗಿದ್ದಳು. ಮೇ 31ರಂದು 11 ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಾಗಿನಿಂದ ಮಧು ಕುಮಾರಿ ತಲೆಮರೆಸಿಕೊಂಡಿದ್ದಾಳೆ.

ಫೆ.22ರಂದು ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿಗಳಿಗೆ ಬರೆದಿರುವ ಪತ್ರದಲ್ಲಿ ಮುಝಫ್ಫರಪುರ ಜಿಲ್ಲಾಧಿಕಾರಿಗಳು,ಜಿಲ್ಲಾಮಟ್ಟದ ಸಮಿತಿಯ ನಿರ್ಧಾರದ ಹಿನ್ನೆಲೆಯಲ್ಲಿ ಜಿಲ್ಲಾ ಮಹಿಳಾ ಸಮ್ಮಾನ್‌ಗಾಗಿ ರಾಜಕುಮಾರಿ ದೇವಿ(ಕಿಸಾನ್ ಚಾಚಿ),ಮಧು ಕುಮಾರಿ ಮತ್ತು ಮಾಲತಿ ಸಿಂಗ್ ಈ ಮೂವರು ಹೆಸರುಗಳನ್ನು ಸಲ್ಲಿಸುತ್ತಿದ್ದೇನೆ ಎಂದು ತಿಳಿಸಿದ್ದರು.

ಸಾಮಾಜಿಕ ಸೇವೆಯಲ್ಲಿ ಅಸಾಧಾರಣ ಕೊಡುಗೆಗಾಗಿ ಪ್ರತಿ ಜಿಲ್ಲೆಯಿಂದ ಓರ್ವ ಮಹಿಳೆಗೆ ಜಿಲ್ಲಾ ಮಹಿಳಾ ಸಮ್ಮಾನ್ ಪುರಸ್ಕಾರವನ್ನು ನೀಡಲಾಗುತ್ತದೆ. ಈ ವರ್ಷದ ಪ್ರಶಸ್ತಿ ಅಂತಿಮವಾಗಿ ಕೃಷಿಕ್ಷೇತ್ರದಲ್ಲಿ ತನ್ನ ವಿನೂತನ ಪರಿಕಲ್ಪನೆಗಳಿಗಾಗಿ ಗ್ರಾಮೀಣ ಉದ್ಯಮಿ ರಾಜಕುಮಾರಿ ದೇವಿ ಅವರ ಪಾಲಾಗಿತ್ತು.

 ಮುಝಫ್ಫರಪುರದ ಆಶ್ರಯಧಾಮದಲ್ಲಿದ್ದ 44 ಬಾಲಕಿಯರನ್ನು ವೈದ್ಯಕೀಯ ತಪಾಸಣೆಗೊಳಪಡಿಸಿದಾಗ 29 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ದೃಢಪಟ್ಟಿತ್ತು. ಠಾಕೂರ್ ಮತ್ತು ಮಧು ಕುಮಾರಿ ಸೇರಿದಂತೆ 11 ಜನರ ವಿರುದ್ಧ ಮೇ 31ರಂದು ಪೊಲೀಸರು ಪ್ರಕರಣ ದಾಖಲಿಸಿದ್ದರು. ಎಲ್ಲ 44 ಬಾಲಕಿಯರನ್ನು ಈಗ ಮಧುಬನಿ,ಪಾಟ್ನಾ ಮತ್ತು ಮೊಕಾಮಾಗಳಲ್ಲಿಯ ಅಲ್ಪಾವಧಿ ವಸತಿ ಗೃಹಗಳಲ್ಲಿರಿಸಲಾಗಿದೆ.

 ಮೊದಲು ವೇಶ್ಯಾದಂಧೆಯನ್ನು ನಡೆಸುತ್ತಿದ್ದ ಮಧು ಕುಮಾರಿ ಠಾಕೂರ್ ಅಧೀನದಲ್ಲಿ ಪ್ರಮುಖ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಳು. ಸಮಾಜದಲ್ಲಿ ಸಭ್ಯವ್ಯಕ್ತಿಯೆಂದು ಬಿಂಬಿಸಿಕೊಳ್ಳಲು ಆಕೆ ಠಾಕೂರ್‌ಗೆ ಸೇರಿದ ಎನ್‌ಜಿಒದಲ್ಲಿ ಸಾಮಾಜಿಕ ಕಾರ್ಯಕರ್ತೆಯಾಗಿದ್ದಳು. ಕೆಂಪು ಪ್ರದೇಶವಾಗಿರುವ ಚತುರ್ಭುಜ ಸ್ಥಾನದಲ್ಲಿ ತನ್ನ ಪ್ರಭಾವವನ್ನು ವಿಸ್ತರಿಸಿಕೊಳ್ಳಲು ಠಾಕೂರ್ ಮಧು ಕುಮಾರಿಯನ್ನು ಬಳಸಿಕೊಂಡಿದ್ದು ಸ್ಪಷ್ಟವಾಗಿದೆ. ಆಕೆಯನ್ನು ಠಾಕೂರ್‌ಗೆ ಸೇರಿದ ಇನ್ನೊಂದು ಸ್ವಯಂಸೇವಾ ಸಂಸ್ಥೆ ವಾಮ ಶಕ್ತಿ ವಾಹಿನಿಯಲ್ಲಿ ಅಧಿಕೃತ ಉದ್ಯೋಗಿಯನ್ನಾಗಿ ನೇಮಿಸಲಾಗಿತ್ತು ಮತ್ತು ಬೆಟಿಯಾ ಹಾಗೂ ಮುಝಫ್ಫರಪುರಗಳಲ್ಲಿ ಏಡ್ಸ್ ಜಾಗ್ರತಿ ಯೋಜನೆಗಳನ್ನು ಆಕೆಗೆ ಒಪ್ಪಿಸಲಾಗಿತ್ತು ಎಂದು ಡಿವೈಎಸ್‌ಪಿ ಮುಕುಲ ಕುಮಾರ ರಂಜನ್ ತನ್ನ ವರದಿಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X