Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚೀನಾ: ಎತ್ತರ ಪ್ರದೇಶಗಳಲ್ಲಿ ಬಳಕೆಗೆ...

ಚೀನಾ: ಎತ್ತರ ಪ್ರದೇಶಗಳಲ್ಲಿ ಬಳಕೆಗೆ ಅತ್ಯಾಧುನಿಕ ರಾಕೆಟ್ ನಿರ್ಮಾಣ

ಭಾರತದ ವಿರುದ್ಧ ನಿಯೋಜನೆ?

ವಾರ್ತಾಭಾರತಿವಾರ್ತಾಭಾರತಿ4 Aug 2018 8:01 PM IST
share
ಚೀನಾ: ಎತ್ತರ ಪ್ರದೇಶಗಳಲ್ಲಿ ಬಳಕೆಗೆ ಅತ್ಯಾಧುನಿಕ ರಾಕೆಟ್ ನಿರ್ಮಾಣ

ಬೀಜಿಂಗ್, ಆ. 4: ಚೀನಾವು ತನ್ನ ಫಿರಂಗಿ ಘಟಕಗಳಿಗಾಗಿ ‘ಇಲೆಕ್ಟ್ರೋಮ್ಯಾಗ್ನೆಟಿಕ್ ಕ್ಯಾಟಪಲ್ಟ್’ ತಂತ್ರಜ್ಞಾನದ ರಾಕೆಟ್‌ಗಳನ್ನು ನಿರ್ಮಿಸುತ್ತಿದೆ ಹಾಗೂ ಅವುಗಳನ್ನು ಟಿಬೆಟ್ ಸ್ವಾಯತ್ತ ವಲಯ (ಟಿಎಆರ್)ದಲ್ಲಿರುವ ಎತ್ತರದ ಪ್ರದೇಶಗಳಲ್ಲಿ ನಿಯೋಜಿಸಬಹುದಾಗಿದೆ ಎಂದು ಸರಕಾರಿ ಮಾಧ್ಯಮ ವರದಿ ಮಾಡಿದೆ.

ಈ ರಾಕೆಟ್‌ಗಳನ್ನು ಭಾರತದ ವಿರುದ್ಧ ನಿಯೋಜಿಸಬಹುದಾಗಿದೆ ಎಂಬ ಸೂಚನೆಯನ್ನು ಅದು ನೀಡಿದೆ.

ನೂತನ ತಂತ್ರಜ್ಞಾನವನ್ನು ‘ಅಭೂತಪೂರ್ವ’ ಎಂಬುದಾಗಿ ಬಣ್ಣಿಸಿರುವ ವರದಿಯು, ಇಲೆಕ್ಟ್ರೋಮ್ಯಾಗ್ನೆಟಿಕ್ ಕ್ಯಾಟಪಲ್ಟ್ ಚಾಲಿತ ರಾಕೆಟ್‌ಗಳು 200 ಕಿ.ಮೀ.ಗೂ ಅಧಿಕ ದೂರದ ಗುರಿಗಳನ್ನು ನಾಶಪಡಿಸಬಲ್ಲದು ಹಾಗೂ ಅವುಗಳು ಸಾಂಪ್ರದಾಯಿಕ ಫಿರಂಗಿ ಬಂದೂಕುಗಳಿಗಿಂತ ಹೆಚ್ಚು ಶಕ್ತಿಶಾಲಿ ಮತ್ತು ಪರಿಣಾಮಕಾರಿಯಾಗಿವೆ ಎಂದಿದೆ.

ಈ ರಾಕೆಟ್‌ಗಳನ್ನು ಭಾರತದ ವಿರುದ್ಧ ನಿಯೋಜಿಸಲಾಗುತ್ತದೆ ಎಂಬುದನ್ನು ವರದಿ ನಿರ್ದಿಷ್ಟವಾಗಿ ಹೇಳಿಲ್ಲವಾದರೂ, ಈ ರಾಕೆಟನ್ನು ಅಭಿವೃದ್ಧಿಪಡಿಸುತ್ತಿರುವ ಸೇನಾ ವಿಜ್ಞಾನಿಯೊಬ್ಬರ ಮಾತುಗಳು ಈ ಸಾಧ್ಯತೆಯತ್ತ ಬೆಟ್ಟು ಮಾಡುತ್ತಿವೆ. ನೈರುತ್ಯ ಚೀನಾದ ಗಡಿ ವಲಯದಲ್ಲಿರುವ ಪ್ರಸ್ಥಭೂಮಿಯಲ್ಲಿ ಸೇನಾ ಕಾರ್ಯಾಚರಣೆಯ ಸಂದರ್ಭದಲ್ಲಿ ಈ ರಾಕೆಟ್‌ಗಳನ್ನು ಬಳಸಬಹುದಾಗಿದೆ ಎಂದು ಆ ವಿಜ್ಞಾನಿ ಹೇಳಿರುವುದನ್ನು ವರದಿ ಉಲ್ಲೇಖಿಸಿದೆ.

ಒಳಗೆ ಬಾಕ್ಸ್

ಡೋಕಾ ಲಾ ಮುಖಾಮುಖಿಯ ನೆನಪು

ಚೀನಾ ತನ್ನ ಅತ್ಯಾಧುನಿಕ ರಾಕೆಟ್‌ಗಳನ್ನು ಎಲ್ಲಿ ನಿಯೋಜಿಸಬಹುದು ಎಂಬ ಬಗ್ಗೆ ಹೆಚ್ಚಿನ ಅನುಮಾನ ಪಡುವ ಅಗತ್ಯವಿಲ್ಲ. ಕಳೆದ ವರ್ಷ ಸಿಕ್ಕಿಂ ಗಡಿ ಸಮೀಪದ ಡೋಕಾ ಲಾದಲ್ಲಿ ಭಾರತ ಮತ್ತು ಚೀನಾದ ಸೇನೆಗಳು 73 ದಿನಗಳ ಕಾಲ ಮುಖಾಮುಖಿಯಾಗಿ ನಿಂತಿದ್ದನ್ನು ಸ್ಮರಿಸಬಹುದಾಗಿದೆ.

ಭೂತಾನ್ ತನ್ನದೆಂದು ಹೇಳುತ್ತಿರುವ, ಆದರೆ ಚೀನಾದ ನಿಯಂತ್ರಣದಲ್ಲಿರುವ ಡೋಕಾ ಲಾ ಪ್ರದೇಶದಲ್ಲಿ ಚೀನಾ ಪಡೆಗಳು ಆಯಕಟ್ಟಿನ ರಸ್ತೆ ನಿರ್ಮಿಸಲು ಮುಂದಾದಾಗ ಭಾರತೀಯ ಪಡೆಗಳು ಅದನ್ನು ತಡೆದಿದ್ದವು.

73 ದಿನಗಳ ಬಳಿಕ ಉಭಯ ಸೇನೆಗಳು ಹಿಂದಕ್ಕೆ ಸರಿದು ತಾತ್ಕಾಲಿಕವಾಗಿ ಆ ಬಿಕ್ಕಟ್ಟು ನಿವಾರಣೆಯಾಗಿದ್ದರೂ, ಚೀನಾ ತನ್ನ ಪ್ರಯತ್ನಗಳನ್ನು ಮುಂದುವರಿಸುತ್ತಲೇ ಇದೆ.

ಹಾಗಾಗಿ, ಈ ವಲಯದಲ್ಲಿ ಚೀನಾ ತನ್ನ ಶಕ್ತಿಶಾಲಿ ರಾಕೆಟ್‌ಗಳನ್ನು ನಿಯೋಜಿಸುವ ಸಾಧ್ಯತೆ ಹೆಚ್ಚಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X