Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉದ್ಯಾವರ ಪಿತ್ರೋಡಿಯಲ್ಲಿ ಅಪರೂಪದ...

ಉದ್ಯಾವರ ಪಿತ್ರೋಡಿಯಲ್ಲಿ ಅಪರೂಪದ ಜ್ವರಕ್ಕೆ ಬಾಲಕ ಬಲಿ

ದೆಹಲಿ ಎನ್‌ಸಿಡಿಸಿ ತಂಡದಿಂದ ಅಧ್ಯಯನ, ಬ್ಯಾಕ್ಟೀರಿಯಾ ಪತ್ತೆ

ವಾರ್ತಾಭಾರತಿವಾರ್ತಾಭಾರತಿ4 Aug 2018 9:34 PM IST
share
ಉದ್ಯಾವರ ಪಿತ್ರೋಡಿಯಲ್ಲಿ ಅಪರೂಪದ ಜ್ವರಕ್ಕೆ ಬಾಲಕ ಬಲಿ

ಉಡುಪಿ, ಆ.4: ಉದ್ಯಾವರ ಗ್ರಾಪಂ ವ್ಯಾಪ್ತಿಯ ಪಿತ್ರೋಡಿಯ ಕಲಾಯಿ ಬೈಲುವಿನ ವಿದ್ಯಾರ್ಥಿ ದೀಕ್ಷಿತ್ (18) ಎಂಬಾತನನ್ನು ಬಲಿ ತೆಗೆದುಕೊಂಡ ಮೆಲಿಯೊಯಿಡೊಸಿಸ್ ಎಂಬ ಅಪರೂಪದ ಜ್ವರದ ಬಗ್ಗೆ ಅಧ್ಯಯನ ನಡೆಸಲು ದೆಹಲಿಯ ರಾಷ್ಟ್ರೀಯ ರೋಗ ನಿಯಂತ್ರಣ ಮಂಡಳಿಯ ತಂಡ ಉಡುಪಿಗೆ ಆಗಮಿಸಿದ್ದು, ಈ ಜ್ವರಕ್ಕೆ ಕಾರಣವಾದ ಬ್ಯಾಕ್ಟೀರಿಯವನ್ನು ತಂಡ ಪತ್ತೆ ಮಾಡಿದೆ.

ತೀವ್ರ ಜ್ವರದಿಂದ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದ ದೀಕ್ಷಿತ್ ಜು. 28 ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದನು. ದೆಹಲಿಯ ಎನ್‌ಸಿಡಿಸಿಯ ವೈದ್ಯ ಡಾ.ಅಖಿಲೇಶ್ ನೇತೃತ್ವದಲ್ಲಿ ಇಬ್ಬರು ಮೈಕ್ರೋ ಬಯೋಲಜಿಸ್ಟ್, ಇಬ್ಬರು ವೈದರ ತಂಡ ಅಧ್ಯಯನ ನಡೆಸಿ ದೀಕ್ಷಿತ್ ದೇಹದೊಳಗೆ ಸೇರಿಕೊಂಡು ಈ ಅಪರೂಪದ ಜ್ವರಕ್ಕೆ ಕಾರಣವಾಗುವ ಬ್ಯಾಕ್ಟೀರಿಯಾ ‘ಬರ್ಕಲ್‌ಡ್ಲೇರಿಯಾ ಸೆಡೋಮೊನಸ್’ವನ್ನು ಪತ್ತೆ ಹಚ್ಚಿದ್ದಾರೆ.

ಈ ಬ್ಯಾಕ್ಟೀರಿಯ ದೀಕ್ಷಿತ್ ದೇಹದೊಳಗೆ ಸೇರಿಕೊಂಡು ಮೆದುಳಿಗೆ ತೀವ್ರ ಹಾನಿ ಮಾಡಿರುವುದರಿಂದ ಮತ್ತು ರೋಗ ಪತ್ತೆಯಾಗುವಲ್ಲಿ ವಿಳಂಬ ಹಾಗೂ ಸರಿಯಾದ ಸಮಯದಲ್ಲಿ ರೋಗ ನಿರೋಧಕ ಸಿಗದಿರುವುದರಿಂದ ಈತ ಮೃತ ಪಟ್ಟಿರುವುದಾಗಿ ಹೇಳಲಾಗಿದೆ.

ಗೋವಿಂದ ನಗರದ ಜಯ ಕುಂದರ್ ಮತ್ತು ಪ್ರತಿಮಾ ದಂಪತಿಯ ಏಕೈಕ ಪುತ್ರ ದೀಕ್ಷಿತ್ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದು, ಕಿದಿಯೂರು ಶ್ಯಾಮಿಲಿ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿಯಲ್ಲಿ ಶೇ.95 ಮತ್ತು ಎಸೆಸೆಲ್ಸಿಯಲ್ಲಿ ಶೇ.97 ಅಂಕ ಪಡೆದಿದ್ದನು. ಮುಂದೆ ಇಂಜಿನಿಯರ್ ಕಲಿಯಲು ಮಣಿಪಾಲ ಎಂಐಟಿಯಲ್ಲಿ ಸೀಟು ಕೂಡ ಪಡೆದಿದ್ದನು.

ವಿದ್ಯಾರ್ಥಿ ಸಾವಿನ ಬಳಿಕ ಎಚ್ಚೆತ್ತುಕೊಂಡಿರುವ ಆರೋಗ್ಯ ಇಲಾಖೆ, ಗ್ರಾಪಂ ಮಟ್ಟದಲ್ಲಿ ಸಭೆ ನಡೆಸಿ ಗ್ರಾಮಸ್ಥರಲ್ಲಿ ಈ ರೋಗದ ಬಗ್ಗೆ ಜಾಗೃತಿ ಮೂಡಿಸು ತ್ತಿದೆ. ವೈದ್ಯರ ತಂಡವು ಕ್ಷೇತ್ರಕಾರ್ಯ ನಡೆಸಿದ್ದು ಕಳೆದ ಎರಡು ದಿನಗಳಿಂದ ಮನೆ ಪರಿಸರ ಮತ್ತು ಗ್ರಾಮದ ವಿವಿಧ ಭಾಗಗಳಲ್ಲಿ ಮಣ್ಣು ಮತ್ತು ನೀರಿನ ಮಾದರಿ ಸಂಗ್ರಹಿಸಿ, ಬ್ಯಾಕ್ಟೀರಿಯಾ ಮೂಲಗಳನ್ನು ಪತ್ತೆ ಹಚ್ಚುವ ಕಾರ್ಯ ವನ್ನು ನಡೆಸುತ್ತಿದೆ. ಅಲ್ಲದೆ ರೋಗ ಲಕ್ಷ್ಮಣ, ಪರಿಸರದ ಅವಲೋಕನ, ಜ್ವರ ಹೇಗೆ ಬಂತು ಸೇರಿದಂತೆ ಎಲ್ಲ ಆಯಾಮಗಳನ್ನು ತಂಡ ಅಧ್ಯಯನ ನಡೆಸು ತ್ತಿದೆ.

ಇಲಿ ಜ್ವರ ಮಾದರಿಯ ಈ ಖಾಯಿಲೆ ಮಣ್ಣಿನಲ್ಲಿರುವ ಬ್ಯಾಕ್ಟೀರಿಯಾಗಳ ಮೂಲಕ ಹರಡುತ್ತದೆ. ಒದ್ದೆ ಮಣ್ಣು ಮತ್ತು ಭತ್ತದ ಗದ್ದೆ ಮತ್ತು ಜೌಗು ಪ್ರದೇಶದಲ್ಲಿ ಈ ಬ್ಯಾಕ್ಷೀರಿಯಾಗಳು ಕಂಡು ಬರುತ್ತವೆ. ಇದು ಸಾಂಕ್ರಾಮಿಕ ರೋಗವಲ್ಲ. ಬ್ಯಾಕ್ಟೀರಿಯಾವು ದೇಹದಲ್ಲಿರುವ ಗಾಯ, ದೂಳು ಅಥವಾ ನೀರಿನ ಮೂಲಕ ಮನುಷ್ಯ ದೇಹವನ್ನು ಪ್ರವೇಶಿಸಿ ಖಾಯಿಲೆಗೆ ಕಾರಣವಾಗು ತ್ತದೆ. ಈ ಹಿಂದೆ ಕೂಡ ಈ ಕಾಯಿಲೆ ಈ ಪರಿಸರದಲ್ಲಿ ಮತ್ತು ಜಿಲ್ಲೆಯ ವಿವಿಧ ಕಡೆಗಳಲ್ಲಿಯೂ ಕಂಡುಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಅಪರೂಪದ ಈ ಕಾಯಿಲೆ ಬಗ್ಗೆ ಅಧ್ಯಯನ ನಡೆಸಲು ದೆಹಲಿಯ ಎನ್‌ಸಿ ಡಿಸಿಯ ತಂಡ ಆಗಮಿಸಿದೆ. ಈ ಕಾಯಿಲೆಯ ಬಗ್ಗೆ ಯಾರು ಕೂಡ ಗಾಬರಿ ಪಡಬೇಕಾಗಿಲ್ಲ. ರೋಗ ಲಕ್ಷಣಗಳು ಕಂಡುಬಂದಾಗ ಸೂಕ್ತ ಕಾಲದಲ್ಲಿ ಚಿಕಿತ್ಸೆ ಪಡೆದರೆ ಗುಣಪಡಿಸಬಹುದು. ಈ ಕಾಯಿಲೆಯ ಬಗ್ಗೆ ಉದ್ಯಾವರ ಪರಿಸರ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ.
-ಡಾ.ರೋಹಿಣಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಉಡುಪಿ ಜಿಲ್ಲೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X