Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನ್ಯಾ.ಲೋಯಾ ಪ್ರಕರಣಕ್ಕೆ ಸಂಬಂಧಿಸಿ ಅರ್ಜಿ...

ನ್ಯಾ.ಲೋಯಾ ಪ್ರಕರಣಕ್ಕೆ ಸಂಬಂಧಿಸಿ ಅರ್ಜಿ ಸಲ್ಲಿಸಿದ್ದ ವಕೀಲ 17 ವರ್ಷಗಳ ಹಿಂದಿನ ಪ್ರಕರಣದಲ್ಲಿ ಬಂಧನ

ವಾರ್ತಾಭಾರತಿವಾರ್ತಾಭಾರತಿ4 Aug 2018 10:35 PM IST
share
ನ್ಯಾ.ಲೋಯಾ ಪ್ರಕರಣಕ್ಕೆ ಸಂಬಂಧಿಸಿ ಅರ್ಜಿ ಸಲ್ಲಿಸಿದ್ದ ವಕೀಲ 17 ವರ್ಷಗಳ ಹಿಂದಿನ ಪ್ರಕರಣದಲ್ಲಿ ಬಂಧನ

ಮುಂಬೈ,ಆ.4: ಸೊಹ್ರಾಬುದ್ದೀನ್ ನಕಲಿ ಎನ್ ಕೌಂಟರ್ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಸಿಬಿಐ ನ್ಯಾಯಾಧೀಶ ಬಿ.ಎಚ್. ಲೋಯಾ ಅವರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಬಾಂಬೆ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದ ವಕೀಲ ಹಾಗು ಸಾಮಾಜಿಕ ಕಾರ್ಯಕರ್ತರೊಬ್ಬರನ್ನು 17 ವರ್ಷಗಳ ಹಿಂದಿನ ಪ್ರಕರಣದ ಹೆಸರಿನಲ್ಲಿ ಬಂಧಿಸಲಾಗಿದೆ.

ಕೋ ಆಪರೇಟಿವ್ ಹೌಸಿಂಗ್ ಸೊಸೈಟಿಯಿಂದ ಭೂಮಿ ಖರೀದಿಸಲು ವಕೀಲ, ಸಾಮಾಜಿಕ ಕಾರ್ಯಕರ್ತ ಸತೀಶ್ ಉಕೆ ನಕಲಿ ದಾಖಲೆಗಳನ್ನು ಸಲ್ಲಿಸಿದ್ದರು ಎಂದು ಆರೋಪಿಸಲಾಗಿದೆ. ಆದರೆ ನ್ಯಾ. ಲೋಯಾ ಪ್ರಕರಣಕ್ಕೆ ಸಂಬಂಧಿಸಿ ಹೋರಾಟ ನಡೆಸುತ್ತಿದ್ದುದಕ್ಕಾಗಿ ವಂಚನೆ ಪ್ರಕರಣ ಬಳಸಿ ಅವರನ್ನು ಬಂಧಿಸಲಾಗಿದೆ ಎಂದು ಉಕೆಯವರ ಸಹೋದರ ಪ್ರದೀಪ್ ಹೇಳಿದ್ದಾರೆ. ಲೋಯಾ ಪ್ರಕರಣಕ್ಕೆ ಸಂಬಂಧಿಸಿ ಸತೀಶ್ ಉಕೆ ವಿಶೇಷ ಮುತುವರ್ಜಿ ವಹಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು ಹಾಗು ಮಾಹಿತಿಗಳನ್ನು ಅವರು ಕಲೆ ಹಾಕುತ್ತಿದ್ದರು.

ಕಪಿಲ್ ಸಿಬಲ್ ನೇತೃತ್ವದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲೂ ಉಕೆ ಭಾಗವಹಿಸಿದ್ದರು. ಸಾವನ್ನಪ್ಪುವ 2 ತಿಂಗಳ ಮೊದಲು ಅಂದರೆ 2014ರ ಅಕ್ಟೋಬರ್ ನಲ್ಲಿ ಸತೀಶ್ ಉಕೆ ಜೊತೆ ಮಾತನಾಡಿದ್ದ ನ್ಯಾ.ಲೋಯಾ ಸೊಹ್ರಾಬುದ್ದೀನ್ ಪ್ರಕರಣಕ್ಕೆ ಸಂಬಂಧಿಸಿ ತನಗೆ ತೀವ್ರ ಒತ್ತಡವಿದೆ ಎಂದು ಹೇಳಿದ್ದರು ಎಂದು ಸಿಬಲ್ ವಿವರಿಸಿದ್ದರು.

ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ 2009ರ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಸಂದರ್ಭ ಕೆಲವು ಮಾಹಿತಿಗಳನ್ನು ಬಚ್ಚಿಟ್ಟಿದ್ದರು. ಆದ್ದರಿಂದ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಬೇಕು ಎಂದೂ ಸತೀಶ್ ಉಕೆ ಅರ್ಜಿ ಸಲ್ಲಿಸಿದ್ದರು.

ಸತೀಶ್  ಸೇರಿದಂತೆ ಅವರ ಹಿರಿಯ ಸಹೋದರ ಪ್ರದೀಪ್ ಹಾಗೂ ಮತ್ತೊಬ್ಬ ವ್ಯಕ್ತಿ ಚಂದ್ರಶೇಖರ್ ಮಾತೆ ವಿರುದ್ಧ ನಕಲಿ ಪತ್ರ ತಯಾರಿಕೆ, ಮೋಸ ಹಾಗೂ ಕ್ರಿಮಿನಲ್ ಒಳಸಂಚು ಆರೋಪದಡಿ ಐಪಿಸಿಯ ಜಾಮೀನು ದೊರಕದ ಸೆಕ್ಷನ್‌ನಡಿ ಇದೀಗ ಪ್ರಕರಣ  ದಾಖಲಿಸಲಾಗಿದೆ.

ಸತೀಶ್ ಕಳೆದ ಎರಡು ದಶಕಗಳಿಂದ ನಾಗಪುರದಲ್ಲಿ ವಕೀಲ ವೃತ್ತಿ ನಡೆಸುತ್ತಿದ್ದರೆ ಅವರ ಸಹೋದರ ಪ್ರದೀಪ್ ಪೊಲೀಸ್ ಇಲಾಖೆಯಿಂದ ಅಮಾನತುಗೊಂಡಿದ್ದರು. ಸಿವಿಲ್ ವ್ಯಾಜ್ಯದ ಪ್ರಕರಣಕ್ಕೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿರುವುದು ಹಾಗೂ ಸ್ಥಳೀಯ ಪೊಲೀಸರ ಬದಲು ಆರ್ಥಿಕ ಅಪರಾಧ ಪತ್ತೆದಳಕ್ಕೆ ಪ್ರಕರಣದ ತನಿಖೆಯನ್ನು ವಹಿಸಿ ಕೊಟ್ಟಿರುವುದು ಪ್ರಶ್ನಾರ್ಹವಾಗಿದೆ ಎಂಬ ಟೀಕೆ ವ್ಯಕ್ತವಾಗಿದೆ. ಆದರೆ ಈ ಪ್ರಕರಣದಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಫಡ್ನವೀಸ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿಯನ್ನು ಮ್ಯಾಜಿಸ್ಟ್ರೇಟ್ 2014ರಲ್ಲಿ ತಿರಸ್ಕರಿಸಿದಾಗ ಸತೀಶ್ ಮೇಲಿನ ಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಫಡ್ನವೀಸ್‌ಗೆ ನೋಟಿಸ್ ಜಾರಿಗೊಳಿಸಿದೆ. ಆದರೆ ನೋಟಿಸ್ ತಲುಪುವ ಮುನ್ನವೇ ಸತೀಶ್‌ರನ್ನು ಬಂಧಿಸಲಾಗಿದೆ. ಐಶ್ವರ್ಯ ಸಹಕಾರಿ ಗೃಹ ನಿರ್ಮಾಣ ಸಂಸ್ಥೆಗೆ ಸೇರಿದ ಜಮೀನಿನ ನಕಲಿ ದಾಖಲೆ ಪತ್ರವನ್ನು ಸತೀಶ್ ಹಾಗೂ ಅವರ ಸಹೋದರ ಸಿದ್ಧಪಡಿಸಿದ್ದಾರೆ. ಸುಮಾರು 5 ಕೋಟಿ ರೂ. ವೌಲ್ಯದ 1.5 ಎಕರೆ ಜಮೀನನ್ನು ಮೂವರು ಆರೋಪಿಗಳು ಅಕ್ರಮವಾಗಿ ಸ್ವಾಧೀನ ಪಡೆದುಕೊಂಡಿದ್ದಾರೆ ಎಂದು ಆರೋಪಿಸಿ ಸಲ್ಲಿಸಲಾಗಿರುವ ದೂರಿನ ಹಿನ್ನೆಲೆಯಲ್ಲಿ ಈ ಬಂಧನವಾಗಿದೆ ಎಂದು ಪೊಲೀಸ್ ಅಧಿಕಾರಿ ಲಲಿತ್ ವಾರ್ತಿಕರ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X