Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವ್ಯಕ್ತಿ ಸಮಾಜಕ್ಕೆ ಮಾಡಿದ ಸೇವೆಯ ಆಧಾರದ...

ವ್ಯಕ್ತಿ ಸಮಾಜಕ್ಕೆ ಮಾಡಿದ ಸೇವೆಯ ಆಧಾರದ ಮೇಲೆ ಪ್ರಶಸ್ತಿ ಸಿಗಬೇಕು: ಮಾಜಿ ಸಚಿವೆ ಡಾ. ಲೀಲಾದೇವಿ

ವಾರ್ತಾಭಾರತಿವಾರ್ತಾಭಾರತಿ4 Aug 2018 11:13 PM IST
share
ವ್ಯಕ್ತಿ ಸಮಾಜಕ್ಕೆ ಮಾಡಿದ ಸೇವೆಯ ಆಧಾರದ ಮೇಲೆ ಪ್ರಶಸ್ತಿ ಸಿಗಬೇಕು: ಮಾಜಿ ಸಚಿವೆ ಡಾ. ಲೀಲಾದೇವಿ

ದಾವಣಗೆರೆ,ಆ.04: ವ್ಯಕ್ತಿ ಸಮಾಜಕ್ಕೆ ಮಾಡಿದ ಸೇವೆ ಆಧಾರದ ಮೇಲೆ ಪ್ರಶಸ್ತಿ ಸಿಗಬೇಕು ಎಂದು ಮಾಜಿ ಸಚಿವೆ ಡಾ. ಲೀಲಾದೇವಿ ಆರ್. ಪ್ರಸಾದ್ ಹೇಳಿದರು. 

ಕುವೆಂಪು ಕನ್ನಡ ಭವನದಲ್ಲಿ ಶನಿವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಶರಣ ಮಾಗನೂರು ಬಸಪ್ಪ ಪ್ರತಿಷ್ಠಾನ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಆರೂಢ ದಾಸೋಹಿ ಶರಣ ಮಾಗನೂರು ಬಸಪ್ಪ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು. 

ಇಂದು ಪ್ರಶಸ್ತಿಯನ್ನು ಹಣ ಕೊಟ್ಟು ಖರೀದಿಸುವಂತ ಸ್ಥಿತಿಗೆ ಬಂದುನಿಂತಿದೆ. ಆದರೆ, ಪ್ರಶಸ್ತಿ ನೀಡಬೇಕಾದ್ದು ವ್ಯಕ್ತಿಗಲ್ಲ. ಅವರ ಮಾಡಿದ ಸೇವೆಯ ಮೇಲೆ.  ಈವರೆಗೆ ನೀಡಿದ ಪ್ರಶಸ್ತಿಯ ಯಾವ ಹಣವನ್ನು ನನ್ನ ಸ್ವಂತಕ್ಕೆ ಬಳಸಿಕೊಂಡಿಲ್ಲ. ಅದರಂತೆ, ಇಂದಿನ ಪ್ರಶಸ್ತಿ ಮೊತ್ತವನ್ನು ಸಹ ನಾನು ಅಕ್ಕಮಹಾದೇವಿ ಪ್ರತಿಷ್ಠಾನಕ್ಕೆ ನೀಡುತ್ತಿದ್ದೇನೆ ಎಂದು, ಸ್ಥಳದಲ್ಲಿಯೇ ಶ್ರೀಗಳ ಮೂಲಕ 25 ಸಾವಿರ ರೂ. ಮೊತ್ತದ ಪ್ರಶಸ್ತಿ ಚೆಕ್ ಅನ್ನು ಅಕ್ಕಮಹಾದೇವಿ ಪ್ರತಿಷ್ಠಾನ ಸಿಬ್ಬಂದಿಗೆ ವಿತರಿಸಿದರು.  

ಯಾರೂ ಮತ್ತೊಬ್ಬ ಬಸವಣ್ಣ, ಮತ್ತೊಬ್ಬ ಅಕ್ಕಮಹಾದೇವಿ, ಮಾಗನೂರು ಬಸಪ್ಪರಾಗಲು ಸಾಧ್ಯವಿಲ್ಲ. ಅವರಿಗೆ ಅವರೇ ಸಾಟಿ. ಆದ್ದರಿಂದ ನಾನು ನಿಮ್ಮ ಮನೆಮಗಳಷ್ಟೇ. ನನ್ನನ್ನು ಹೊಗಳಿ ಹೊಗಳಿ ಹೊನ್ನ ಶೂಲಕ್ಕೇರಿಸಬೇಡಿ ಎಂದು ಮನವಿ ಮಾಡಿದ ಅವರು, ನನಗೆ ವಯಸ್ಸು 85. ಆದರೆ, ಇಂದಿಗೂ ನಿತ್ಯ 18 ತಾಸು ಕೆಲಸ ಮಾಡುತ್ತೇನೆ. ನಾನೇ ನನ್ನ ಬಟ್ಟೆ ತೊಳೆಯುತ್ತೇನೆ, ಅಡುಗೆ ಮಾಡಿಕೊಳ್ಳುತ್ತೇನೆ. ಮನೆ ಸ್ವಚ್ಛಗೊಳಿಸುತ್ತೇನೆ. ನಾನು ಯಾರನ್ನೂ ಆಶ್ರಯಿಸಿಲ್ಲ ಎಂದು ವಿವರಿಸಿದರು.

ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಎಮೆರಿಟಸ್ ಪ್ರಾಧ್ಯಾಪಕಿ ಡಾ. ವಿಜಯದೇವಿ ಅಭಿನಂದನಾ ನುಡಿಗಳನ್ನಾಡಿ, ಲೀಲಾದೇವಿ ಅವರು ರಾಜ್ಯದ ಮಹಿಳಾ ಸಚಿವರಲ್ಲಿ ಅತ್ಯಂತ ಪ್ರಮುಖರಾದವರು. ಕುಟುಂಬ, ರಾಜಕೀಯ, ಸಮಾಜಕ್ಕೆ ಅವರ ಕಾಣಿಕೆ ಅಪಾರ. ವರ್ಷ 85 ಆಗಿದ್ದರೂ ಅವರ ಕಾರ್ಯಚಟುವಟಿಕೆಗೆ ಇನ್ನೂ 18ರ ಪ್ರಾಯ. ತಮ್ಮ 23ನೇ ವಯಸ್ಸಿನಿಂದ ಇಂದಿಗೂ ರಾಜಕಾರಣದಲ್ಲಿ ಸಕ್ರೀಯರಾಗಿದ್ದಾರೆ ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಚ್.ಎಸ್. ಮಂಜುನಾಥ್ ಕುರ್ಕಿ ಪ್ರಾಸ್ತಾವಿಕ ಮಾತನಾಡಿದರು. ಬೆಂಗಳೂರು ಬೇಲಿಮಠ ಮಹಾಸಂಸ್ಥಾನದ ಶ್ರೀ ಶಿವರುದ್ರ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿ, ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಶರಣ ಮಾಗನೂರು ಬಸಪ್ಪ ಪ್ರತಿಷ್ಠಾನದ ಅಧ್ಯಕ್ಷ ಎಂ.ಬಿ. ಸಂಗಮೇಶ್ವರಗೌಡರು ಅಧ್ಯಕ್ಷತೆ ವಹಿಸಿದ್ದರು.

ಬೆಂಗಳೂರು ಕಸಪಾ ಜಿಲ್ಲಾಧ್ಯಕ್ಷ ಮಾಯಣ್ಣ, ಹಾಸನ ಕಸಪಾ ಜಿಲ್ಲಾಧ್ಯಕ್ಷ ನಾಯಕರಹಳ್ಳಿ ಮಂಜೇಗೌಡ, ಕೊಡಗು ಕಸಪಾ ಜಿಲ್ಲಾಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್, ಮೈಸೂರು ಕಸಪಾ ಜಿಲ್ಲಾಧ್ಯಕ್ಷ ವೈ.ಡಿ. ರಾಜಣ್ಣ, ಮಂಡ್ಯ ಕಸಪಾ ಜಿಲ್ಲಾಧ್ಯಕ್ಷ ಸಿ.ಕೆ. ರವಿಕುಮಾರ್ ಚಾಮಲಾಪುರ ಮತ್ತಿತರರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಕತ್ತಿಮಲ್ಲೆನಹಳ್ಳಿ ಪರಮೇಶ್ವರ್, ಕಲ್ಲಳ್ಳಿ ಹರೀಶ್ ಸುನಂದಾದೇವಿ ಮತ್ತಿತರರಿದ್ದರು. ದಿಳ್ಯಪ್ಪ ಸ್ವಾಗತಿಸಿದರು. ಮಾಗನೂರು ಬಸಪ್ಪ ಶಾಲೆ ಮಕ್ಕಳು ಪ್ರಾರ್ಥಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X