Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ: ಮಾನಸಿಕ ಅಸ್ವಸ್ಥರ ಮುಕ್ತ ಸಮಾಜ...

ಮಡಿಕೇರಿ: ಮಾನಸಿಕ ಅಸ್ವಸ್ಥರ ಮುಕ್ತ ಸಮಾಜ ಅಭಿಯಾನ; ವಿಕಾಸ ಜನಸೇವಾ ಟ್ರಸ್ಟ್ ನಿಂದ ಮತ್ತಿಬ್ಬರ ರಕ್ಷಣೆ

ವಾರ್ತಾಭಾರತಿವಾರ್ತಾಭಾರತಿ4 Aug 2018 11:47 PM IST
share
ಮಡಿಕೇರಿ: ಮಾನಸಿಕ ಅಸ್ವಸ್ಥರ ಮುಕ್ತ ಸಮಾಜ ಅಭಿಯಾನ; ವಿಕಾಸ ಜನಸೇವಾ ಟ್ರಸ್ಟ್ ನಿಂದ ಮತ್ತಿಬ್ಬರ ರಕ್ಷಣೆ

ಮಡಿಕೇರಿ, ಆ.4: ಕಂಬಿಬಾಣೆ ಗ್ರಾ.ಪಂ ವ್ಯಾಪ್ತಿಯಲ್ಲಿ ಮಾನಸಿಕ ಅಸ್ವಸ್ಥನಂತೆ ತಿರುಗಾಡುತ್ತಿದ್ದ ಅವರಾನ್ (ಅಬ್ರಾಹಂ) ಎಂಬಾತನನ್ನು ವಿವಿಧ ಸ್ವಯಂ ಸೇವಾ ಸಂಘ ಸಂಸ್ಥೆಗಳು ರಕ್ಷಿಸಿ ಬೆಂಗಳೂರಿನ ಪುನರ್ವಸತಿ ಕೇಂದ್ರಕ್ಕೆ ಸೇರಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿಕಾಸ್ ಜನಸೇವಾ ಟ್ರಸ್ಟ್ ವತಿಯಿಂದ ಜಿಲ್ಲೆಯಲ್ಲಿ ನಡೆಯುತ್ತಿರುವ ಅಸ್ವಸ್ಥರ ಮುಕ್ತ ಜಿಲ್ಲೆ ಅಭಿಯಾನ ಮುಂದುವರೆದಿದ್ದು, ಕಂಬಿಬಾಣೆಯಲ್ಲಿ ಒಬ್ಬಾತನನ್ನು ರಕ್ಷಿಸಿ ಚಿಕಿತ್ಸಗೆ ಒಪ್ಪಿಸಿದ್ದಾರೆ.

ಸ್ಥಳೀಯ ಗ್ರಾ.ಪಂ, ಟಾಟಾ ಕಾಫಿ, ಕೂರ್ಗ್ ಫೌಂಡೇಷನ್‍ನ ಅಂಗ ಸಂಸ್ಥೆಯಾದ ಸ್ವಸ್ಥ ಸಂಸ್ಥೆ ಹಾಗೂ ಪ್ರಜಾಸತ್ಯ ದಿನಪತ್ರಿಕೆಯ ಸಹಕಾರದಿಂದ ಮಡಿಕೇರಿಯ ವಿಕಾಸ ಜನಸೇವಾ ಟ್ರಸ್ಟ್ ಅಲೆದಾಡುತ್ತಿದ್ದ ಅಬ್ರಾಹಂ ಎಂಬಾತನನ್ನು ಪೊಲೀಸರ ಸಮ್ಮುಖದಲ್ಲಿ ವಶಕ್ಕೆ ಪಡೆಯುವ ಕಾರ್ಯ ನಡೆಯಿತು. ನಂತರ ಮಡಿಕೇರಿಯ ನ್ಯಾಯಾಲಯದ ಅನುಮತಿಯೊಂದಿಗೆ ಬೆಂಗಳೂರಿನ ಆರ್.ವಿ.ಎಂ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ. ಅಲ್ಲದೆ ಪುನರ್ವಸತಿ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ರಮೇಶ್ ತಿಳಿಸಿದ್ದಾರೆ.

ಟ್ರಸ್ಟ್ ಪ್ರಮುಖ ಪುಟ್ಟಪ್ಪ, ಸಿಬ್ಬಂದಿ ಕೀರ್ತನಾ, ಸ್ವಸ್ಥ ಸಂಸ್ಥೆಯ ಸಿ.ಬಿ.ಆರ್ ಸಂಯೋಜಕ ಮುರುಗೇಶ್, ಸುಂಟಿಕೊಪ್ಪ ಪೊಲೀಸ್ ಸಬ್‍ಇನ್ಸ್ ಪೆಕ್ಟರ್ ಜಯರಾಮ್, ಸಿಬ್ಬಂದಿ ವಿಜಯ ಕುಮಾರ್, ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ಚೇತನ್, ಗ್ರಾ.ಪಂ ಅಧ್ಯಕ್ಷರುಗಳಾದ ಕೃಷ್ಣ, ಅಬ್ಬಾಸ್, ಪಿ.ಡಿ.ಓ ಗಳಾದ ನಂದೀಶ್, ಗಿರೀಶ್ ಹಾಗೂ ಪತ್ರಕರ್ತರು ಕಾರ್ಯಾಚರಣೆಗೆ ಸಹಕಾರ ನೀಡಿದ್ದಾರೆ ಎಂದು ರಮೇಶ್ ಮಾಹಿತಿ ನೀಡಿದರು. 

ಮತ್ತೊಂದು ಪ್ರಕರಣದಲ್ಲಿ ಸೋಮವಾರಪೇಟೆಯಲ್ಲಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಕಿರಣ್ (27) ಎಂಬಾತನನ್ನು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ಸಹಕಾರದಿಂದ ವಿಕಾಸ ಜನಸೇವಾ ಟ್ರಸ್ಟ್ ಆಸ್ಪತ್ರೆಗೆ ದಾಖಲಿಸಿತು. ಇತ್ತೀಚಿಗೆ ನಗರದಲ್ಲಿ ಸಾರ್ವಜನಿಕವಾಗಿ ದೊಣ್ಣೆಯನ್ನು ಹಿಡಿದು ವಾಹನಗಳಿಗೆ ಅಡ್ಡಲಾಗಿ ನಿಲ್ಲುವುದು, ಅಸಭ್ಯವಾಗಿ ವರ್ತಿಸಿ ಭಯದ ವಾತಾವರಣ ಮೂಡಿಸುತ್ತಿದ್ದ ಕಿರಣ್ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ದೀಪಕ್ ಅವರ ನೇತೃತ್ವದಲ್ಲಿ ಟ್ರಸ್ಟ್ ಕಾರ್ಯಾಚರಣೆ ನಡೆಸಿತು ಎಂದು ರಮೇಶ್ ಹೇಳಿದ್ದಾರೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X