Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಿದ್ದಯ್ಯ ಪುರಾಣಿಕ ಜನ್ಮ ಶತಮಾನೋತ್ಸವ...

ಸಿದ್ದಯ್ಯ ಪುರಾಣಿಕ ಜನ್ಮ ಶತಮಾನೋತ್ಸವ ಆಚರಣೆಗೆ ಚಿಂತನೆ: ಕವಿ ಡಾ.ಸಿದ್ದಲಿಂಗಯ್ಯ

ವಾರ್ತಾಭಾರತಿವಾರ್ತಾಭಾರತಿ5 Aug 2018 6:00 PM IST
share
ಸಿದ್ದಯ್ಯ ಪುರಾಣಿಕ ಜನ್ಮ ಶತಮಾನೋತ್ಸವ ಆಚರಣೆಗೆ ಚಿಂತನೆ: ಕವಿ ಡಾ.ಸಿದ್ದಲಿಂಗಯ್ಯ

ಬೆಂಗಳೂರು, ಆ.5: ಇತ್ತೀಚಿಗೆ ನಡೆದ ಕೇಂದ್ರ ಸಾಹಿತ್ಯ ಅಕಾಡೆಮಿ ಸಭೆಯಲ್ಲಿ ಮಕ್ಕಳ ಸಾಹಿತಿ ಸಿದ್ದಯ್ಯ ಪುರಾಣಿಕ ಅವರ ಜನ್ಮ ಶತಮಾನೋತ್ಸವ ಆಚರಿಸಲು ತೀರ್ಮಾನಿಸಲಾಗಿದ್ದು, ಪೂರ್ವ ತಯಾರಿ ನಡೆಸಲಾಗುತ್ತಿದೆ ಎಂದು ಕವಿ ಡಾ.ಸಿದ್ದಲಿಂಗಯ್ಯ ಅವರು ತಿಳಿಸಿದ್ದಾರೆ.

ರವಿವಾರ ನಗರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಹೊಂಬಾಳೆ ಪ್ರತಿಭಾರಂಗ ಸಹಯೋಗದಲ್ಲಿ ಕನ್ನಡ ಭವನದಲ್ಲಿ ನಡೆದ ಮಕ್ಕಳ ಸಾಹಿತಿ ಡಾ.ಸಿದ್ದಯ್ಯ ಪುರಾಣಿಕ ಅವರ ಜನ್ಮ ಶತಮಾನೋತ್ಸವ ಹಾಗೂ ಎಚ್.ಪಾಲ್ಗುಣಿ ಅವರ ಸಂಗೀತ ನಿರ್ದೇಶನದ ‘ನನ್ನ ಕುದುರೆ’ ಧ್ವನಿ ಸುರುಳಿ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪುರಾಣಿಕರು ಕರ್ನಾಟಕ ಕಂಡ ಶ್ರೇಷ್ಠ ವ್ಯಕ್ತಿ ಎಂದು ತಿಳಿಸಿದರು. ಸಿದ್ದಯ್ಯ ಪುರಾಣಿಕ ಕವಿ , ಮಾನವತಾವಾದಿ ಹಾಗೂ ತತ್ವಶಾಲಿ ರಚನಾಕಾರ. ಅವರನ್ನು ಯಾರೂ ಮರೆಯಲು ಸಾಧ್ಯವಿಲ್ಲ. ಉನ್ನತ ಅಧಿಕಾರಿಯಾಗಿ ಕನ್ನಡದ ಪರ ಸಾಕಷ್ಟು ಶ್ರಮಿಸಿದ್ದಾರೆ. ಕನ್ನಡದ ಬಗ್ಗೆ ಸಾಕಷ್ಟು ಒಲವು ಹೊಂದಿದ್ದರು. ಸಜ್ಜನ ಅಧಿಕಾರಿಯಾಗಿ ಕನ್ನಡ್ಕಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಸಾಹಿತ್ಯ ಮತ್ತು ಕನ್ನಡಕ್ಕೆ ನ್ಯಾಯ ತಂದ ಕೀರ್ತಿ ಅವರಿಗೆ ಸಲ್ಲುತ್ತದೆ. ಇಂತಹ ವ್ಯಕ್ತಿಗಳ ಅಚರಣೆ ಮಾಡುವುದು ಅವರಿಗೆ ಸಲ್ಲಿಸುವ ಗೌರವ ಎಂದು ಹೇಳಿದರು.

ಇಂದು ಪ್ರತ್ಯೇಕ ಕರ್ನಾಟಕಕ್ಕಾಗಿ ಕೂಗು ಕೇಳಿ ಬಂದಿದೆ. ಆದರೆ, ಅಂದಿನ ಸಂದರ್ಭದಲ್ಲಿಯೇ ಹೈದರಾಬಾದ್ ಕರ್ನಾಟಕ ಉಳಿಯಲು ಪುರಾಣಿಕ ಸಾಕಷ್ಟು ಶ್ರಮಿಸಿದ್ದಾರೆ. ಸಾತ್ವಿಕ ವ್ಯಕ್ತಿಯಾಗಿದ್ದ ಅವರು, ಅಸಮಾನತೆ, ಭ್ರಷ್ಟಾಚಾರ ಕಂಡಾಗ ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದರು. ಅವರು ಕನ್ನಡಿಗರಿಗೆ , ಕನ್ನಡಕ್ಕೆ ಮಾಡಿದ ಸೇವೆ ಎಂದೂ ಮರೆಯುವಂತಿಲ್ಲ ಎಂದು ಅವರು ತಿಳಿಸಿದರು.

ನಗರದಲ್ಲಿ ಸಾಂಸ್ಕೃತಿಕ ಕಲಾ ಕೇಂದ್ರವಾದ ರವೀಂದ್ರ ಕಲಾಕ್ಷೇತ್ರ ರೂಪುಗೊಳ್ಳಲು ಇವರ ಪಾತ್ರ ಮಹತ್ವದ್ದು. ಏಕೀಕರಣದ ನಂತರ ಹೈದ್ರಾಬಾದ್‌ನಲ್ಲಿದ್ದ ಕಸಾಪ ರಾಜ್ಯಕ್ಕೆ ತಂದರು. ಅಲ್ಲದೆ, ಕಾವೇರಿ ಮತ್ತು ಕೃಷ್ಣ ಮೇಲ್ದಂಡೆ ಯೋಜನೆಯಲ್ಲಿ ಇವರ ಪಾತ್ರ ಅತಿ ಮುಖ್ಯವಾದುದು ಎಂದ ಸಿದ್ದಲಿಂಗಯ್ಯ ತಿಳಿಸಿದರು.

ಹಾಲಿಗಿಂತ ಹೆಂಡದಂಗಡಿ ಹೆಚ್ಚು ಹೆಸರು ವಾಸಿಯಾಗಿದೆ. ಮಧ್ಯಪಾನದಿಂದ ದೇಶ ಹಾಳಾಗುತ್ತಿದೆ ಎಂದು ಅಂದು ಪುರಾಣಿಕ್ ಹೇಳಿದ್ದರು. ಗಾಂಧೀಜಿ, ಪ್ರಭಾವ ಅವರ ಮೇಲೆ ಇತ್ತು ಎಂದ ಅವರು, ಕೈವಾರ ತಾತಯ್ಯ ಅವರು ಸಹ ಹೆಂಡ ಕುಡಿಯುವ ಕಾಲ ಹೋಗುತ್ತದೆ, ಬೆಣ್ಣೆ, ತುಪ್ಪ, ಮಜ್ಜಿಗೆ ಕುಡಿದು, ಹಣ್ಣು ತಿನ್ನುವ ಕಾಲ ಬರುತ್ತದೆ ಅಂದಿದ್ದರು. ಅದಕ್ಕಾಗಿ ನಾವು ಎದುರು ನೋಡುತ್ತಿದ್ದೇವೆ ನುಡಿದರು.

ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ ಬಿ.ವಿ.ಶ್ರೀನಿವಾಸ್, ಪುರಾಣಿಕ ಪುತ್ರ ಪ್ರಸನ್ನ ಕುಮಾರ್ ಪುರಾಣಿಕ್, ಸಂಗೀತ ನಿರ್ದೇಶಕ ಎಚ್.ಪಾಲ್ಗುಣಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X